Homeಅಂತರಾಷ್ಟ್ರೀಯಭಾರತಕ್ಕೆ ಸೆಡ್ಡು ಹೊಡೆಯಲು ವಿದೇಶಕ್ಕೆ ರಾಜತಾಂತ್ರಿಕ ನಿಯೋಗ ಕಳುಹಿಸಲು ಮುಂದಾದ ಪಾಕಿಸ್ತಾನ

ಭಾರತಕ್ಕೆ ಸೆಡ್ಡು ಹೊಡೆಯಲು ವಿದೇಶಕ್ಕೆ ರಾಜತಾಂತ್ರಿಕ ನಿಯೋಗ ಕಳುಹಿಸಲು ಮುಂದಾದ ಪಾಕಿಸ್ತಾನ

- Advertisement -
- Advertisement -

ಆಪರೇಷನ್ ಸಿಂಧೂರ ಮತ್ತು ಗಡಿಯಾಚೆಗಿನ ಭಯೋತ್ಪಾದನೆಯ ವಿರುದ್ಧದ ಭಾರತದ ನಿಲುವನ್ನು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಸದಸ್ಯರು ಮತ್ತು ವಿವಿಧ ರಾಷ್ಟ್ರಗಳಿಗೆ ತಿಳಿಸಲು ನಿಯೋಗವೊಂದನ್ನು ಭಾರತ ಸರ್ಕಾರ ರಚಿಸಿದ ಬೆನ್ನಲ್ಲೆ ಪಾಕಿಸ್ತಾನ ಕೂಡಾ ವಿಶ್ವದ ಪ್ರಮುಖ ರಾಷ್ಟ್ರಗಳಿಗೆ ರಾಜತಾಂತ್ರಿಕ ತಂಡವನ್ನು ಕಳುಹಿಸುವುದಾಗಿ ಘೋಷಿಸಿದೆ. ಭಾರತಕ್ಕೆ ಸೆಡ್ಡು ಹೊಡೆಯಲು

ಭಾರತದ ಪ್ರಮುಖ ಪಕ್ಷಗಳ 7 ಸಂಸದರ ನಿಯೋಗ ಈ ತಿಂಗಳ ಕೊನೆಯಲ್ಲಿ ವಿಶ್ವದ ಪ್ರಮುಖ ದೇಶಗಳಿಗೆ ಪ್ರವಾಸ ಕೈಗೊಳ್ಳಲಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವಾಲಯ ಮೇ 17ರಂದು ಪ್ರಕಟಣೆಯಲ್ಲಿ ತಿಳಿಸಿತ್ತು. ಇದರ ಬೆನ್ನಲ್ಲೆ ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ದೇಶದ ನಿಲುವನ್ನು ಮಂಡಿಸಲು ಪ್ರಮುಖ ರಾಷ್ಟ್ರಗಳಿಗೆ ರಾಜತಾಂತ್ರಿಕ ತಂಡವನ್ನು ಕಳುಹಿಸುವುದಾಗಿ ಘೋಷಿಸಿದ್ದಾರೆ.

ಮಾಜಿ ವಿದೇಶಾಂಗ ಸಚಿವ ಮತ್ತು ಪಾಕಿಸ್ತಾನ ಪೀಪಲ್ಸ್ ಪಾರ್ಟಿ (ಪಿಪಿಪಿ) ಮುಖ್ಯಸ್ಥ ಬಿಲಾವಲ್ ಭುಟ್ಟೋ ಜರ್ದಾರಿ ಅವರೊಂದಿಗೆ ದೂರವಾಣಿ ಸಂಭಾಷಣೆಯ ನಂತರ ಶನಿವಾರ ಪ್ರಧಾನಿ ಶೆಹಬಾಜ್ ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಪ್ರಧಾನಿ ಕಚೇರಿ ತಿಳಿಸಿದೆ.

“ಭಾರತದ ಪ್ರೊಪಗಾಂಡವನ್ನು ಬಹಿರಂಗಪಡಿಸಲು ವಿಶ್ವದ ಪ್ರಮುಖ ರಾಜಧಾನಿಗಳಿಗೆ ಉನ್ನತ ಮಟ್ಟದ ರಾಜತಾಂತ್ರಿಕ ನಿಯೋಗವನ್ನು ಕಳುಹಿಸಲು ಪ್ರಧಾನಿ ಶೆಹಬಾಜ್ ನಿರ್ಧರಿಸಿದ್ದಾರೆ” ಎಂದು ಸರ್ಕಾರಿ ರೇಡಿಯೋ ಪಾಕಿಸ್ತಾನ ವರದಿ ಮಾಡಿದೆ. ಅವರು ನಿಯೋಗದ ನಾಯಕತ್ವವನ್ನು ಬಿಲಾವಲ್ ಅವರಿಗೆ ವಹಿಸಿದ್ದಾರೆ.

“ಇಂದು ಮುಂಜಾನೆ ಪ್ರಧಾನಿ [ಶೆಹಬಾಜ್ ಷರೀಫ್] ನನ್ನನ್ನು ಸಂಪರ್ಕಿಸಿದರು. ಅವರು ಅಂತರರಾಷ್ಟ್ರೀಯ ವೇದಿಕೆಯಲ್ಲಿ ಶಾಂತಿಗಾಗಿ ಪಾಕಿಸ್ತಾನದ ವಾದವನ್ನು ಮಂಡಿಸಲು ನಿಯೋಗದ ನೇತೃತ್ವ ವಹಿಸುವಂತೆ ವಿನಂತಿಸಿದರು. ಈ ಜವಾಬ್ದಾರಿಯನ್ನು ಸ್ವೀಕರಿಸಲು ಮತ್ತು ಈ ಸವಾಲಿನ ಸಮಯದಲ್ಲಿ ಪಾಕಿಸ್ತಾನಕ್ಕೆ ಸೇವೆ ಸಲ್ಲಿಸಲು ಬದ್ಧರಾಗಿರಲು ನನಗೆ ಹೆಮ್ಮೆಯಿದೆ” ಎಂದು ಬಿಲಾವಲ್ ಶನಿವಾರ ಎಕ್ಸ್‌ನಲ್ಲಿ ಬರೆದಿದ್ದಾರೆ.

ಬಿಲಾವಲ್ ಜೊತೆಗೆ, ನಿಯೋಗದಲ್ಲಿ ಇಂಧನ ಸಚಿವ ಮುಸಾದಿಕ್ ಮಲಿಕ್, ಪಾಕಿಸ್ತಾನ ಮುಸ್ಲಿಂ ಲೀಗ್-ನವಾಜ್ ನಾಯಕ ಖುರ್ರಾಮ್ ದಸ್ತಗೀರ್ ಖಾನ್, ಸೆನೆಟರ್ ಶೆರ್ರಿ ರೆಹಮಾನ್, ಮಾಜಿ ವಿದೇಶಾಂಗ ಸಚಿವೆ ಹಿನಾ ರಬ್ಬಾನಿ ಖಾರ್, ಮುತ್ತಹಿದಾ ಕ್ವಾಮಿ ಚಳವಳಿಯ ಶಾಸಕ ಫೈಸಲ್ ಸಬ್ಜ್ವಾರಿ, ಮಾಜಿ ವಿದೇಶಾಂಗ ಕಾರ್ಯದರ್ಶಿ ತೆಹ್ಮಿನಾ ಜಂಜುವಾ ಮತ್ತು ಜಲೀಲ್ ಅಬ್ಬಾಸ್ ಜಿಲಾನಿ ಸೇರಿದ್ದಾರೆ.

ನಿಯೋಗವು “ಈ ಪ್ರದೇಶದಲ್ಲಿ ಶಾಂತಿ ಮತ್ತು ಸ್ಥಿರತೆಗಾಗಿ ಪಾಕಿಸ್ತಾನದ ಪ್ರಾಮಾಣಿಕ ಪ್ರಯತ್ನಗಳನ್ನು ಒತ್ತಿಹೇಳುತ್ತದೆ” ಎಂದು ಪ್ರಧಾನಿ ಕಚೇರಿ ತಿಳಿಸಿದೆ. ಇತ್ತೀಚಿನ ಸಂಘರ್ಷದ ಕುರಿತು ಪಾಕಿಸ್ತಾನದ ನಿಲುವನ್ನು ಎತ್ತಿ ತೋರಿಸಲು ನಿಯೋಗವು ಶೀಘ್ರದಲ್ಲೇ ಅಮೆರಿಕ, ಯುಕೆ, ಬೆಲ್ಜಿಯಮ್, ಫ್ರಾನ್ಸ್ ಮತ್ತು ರಷ್ಯಾಕ್ಕೆ ಭೇಟಿ ನೀಡಲಿದೆ ಎಂದು ಉಪ ಪ್ರಧಾನ ಮಂತ್ರಿ ಮತ್ತು ವಿದೇಶಾಂಗ ಸಚಿವ ಇಶಾಕ್ ದಾರ್ ಹೇಳಿದ್ದಾರೆ.

ಏಪ್ರಿಲ್ 22 ರಂದು ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಜನರು ಸಾವನ್ನಪ್ಪಿದ್ದಕ್ಕೆ ಪ್ರತಿಯಾಗಿ ಭಾರತವು ಮೇ 7 ರಂದು ಮುಂಜಾನೆ ‘ಆಪರೇಷನ್ ಸಿಂಧೂರ’ ಅಡಿಯಲ್ಲಿ ಭಯೋತ್ಪಾದಕ ಕೇಂದ್ರಗಳ ಮೇಲೆ ನಿಖರವಾದ ದಾಳಿಗಳನ್ನು ನಡೆಸಿತ್ತು. ಭಾರತದ ಈ ದಾಳಿಯ ನಂತರ, ಪಾಕಿಸ್ತಾನವು ಮೇ 8, 9 ಮತ್ತು 10 ರಂದು ಭಾರತೀಯ ಸೇನಾ ನೆಲೆಗಳ ಮೇಲೆ ದಾಳಿ ಮಾಡಲು ಪ್ರಯತ್ನಿಸಿತ್ತು.

ನಾಲ್ಕು ದಿನಗಳ ತೀವ್ರ ಡ್ರೋನ್ ಮತ್ತು ಕ್ಷಿಪಣಿ ದಾಳಿಯ ನಂತರ ಸಂಘರ್ಷವನ್ನು ಕೊನೆಗೊಳಿಸಲು ಭಾರತ ಮತ್ತು ಪಾಕಿಸ್ತಾನ ಮೇ 10 ರಂದು ಒಪ್ಪಂದಕ್ಕೆ ಬಂದವು. ಭಾರತಕ್ಕೆ ಸೆಡ್ಡು ಹೊಡೆಯಲು

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ತುಮಕೂರು ಮೆಟ್ರೋ ಕಾರ್ಯಸಾಧ್ಯತಾ ಅಧ್ಯಯನ ವರದಿ ಸಲ್ಲಿಸಿದ ಬಿಎಂಆರ್‌ಸಿಎಲ್

ತುಮಕೂರು ಮೆಟ್ರೋ ಕಾರ್ಯಸಾಧ್ಯತಾ ಅಧ್ಯಯನ ವರದಿ ಸಲ್ಲಿಸಿದ ಬಿಎಂಆರ್‌ಸಿಎಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...