Homeಅಂತರಾಷ್ಟ್ರೀಯಭಾರತಕ್ಕೆ ಸೆಡ್ಡು ಹೊಡೆಯಲು ವಿದೇಶಕ್ಕೆ ರಾಜತಾಂತ್ರಿಕ ನಿಯೋಗ ಕಳುಹಿಸಲು ಮುಂದಾದ ಪಾಕಿಸ್ತಾನ

ಭಾರತಕ್ಕೆ ಸೆಡ್ಡು ಹೊಡೆಯಲು ವಿದೇಶಕ್ಕೆ ರಾಜತಾಂತ್ರಿಕ ನಿಯೋಗ ಕಳುಹಿಸಲು ಮುಂದಾದ ಪಾಕಿಸ್ತಾನ

- Advertisement -
- Advertisement -

ಆಪರೇಷನ್ ಸಿಂಧೂರ ಮತ್ತು ಗಡಿಯಾಚೆಗಿನ ಭಯೋತ್ಪಾದನೆಯ ವಿರುದ್ಧದ ಭಾರತದ ನಿಲುವನ್ನು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಸದಸ್ಯರು ಮತ್ತು ವಿವಿಧ ರಾಷ್ಟ್ರಗಳಿಗೆ ತಿಳಿಸಲು ನಿಯೋಗವೊಂದನ್ನು ಭಾರತ ಸರ್ಕಾರ ರಚಿಸಿದ ಬೆನ್ನಲ್ಲೆ ಪಾಕಿಸ್ತಾನ ಕೂಡಾ ವಿಶ್ವದ ಪ್ರಮುಖ ರಾಷ್ಟ್ರಗಳಿಗೆ ರಾಜತಾಂತ್ರಿಕ ತಂಡವನ್ನು ಕಳುಹಿಸುವುದಾಗಿ ಘೋಷಿಸಿದೆ. ಭಾರತಕ್ಕೆ ಸೆಡ್ಡು ಹೊಡೆಯಲು

ಭಾರತದ ಪ್ರಮುಖ ಪಕ್ಷಗಳ 7 ಸಂಸದರ ನಿಯೋಗ ಈ ತಿಂಗಳ ಕೊನೆಯಲ್ಲಿ ವಿಶ್ವದ ಪ್ರಮುಖ ದೇಶಗಳಿಗೆ ಪ್ರವಾಸ ಕೈಗೊಳ್ಳಲಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವಾಲಯ ಮೇ 17ರಂದು ಪ್ರಕಟಣೆಯಲ್ಲಿ ತಿಳಿಸಿತ್ತು. ಇದರ ಬೆನ್ನಲ್ಲೆ ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ದೇಶದ ನಿಲುವನ್ನು ಮಂಡಿಸಲು ಪ್ರಮುಖ ರಾಷ್ಟ್ರಗಳಿಗೆ ರಾಜತಾಂತ್ರಿಕ ತಂಡವನ್ನು ಕಳುಹಿಸುವುದಾಗಿ ಘೋಷಿಸಿದ್ದಾರೆ.

ಮಾಜಿ ವಿದೇಶಾಂಗ ಸಚಿವ ಮತ್ತು ಪಾಕಿಸ್ತಾನ ಪೀಪಲ್ಸ್ ಪಾರ್ಟಿ (ಪಿಪಿಪಿ) ಮುಖ್ಯಸ್ಥ ಬಿಲಾವಲ್ ಭುಟ್ಟೋ ಜರ್ದಾರಿ ಅವರೊಂದಿಗೆ ದೂರವಾಣಿ ಸಂಭಾಷಣೆಯ ನಂತರ ಶನಿವಾರ ಪ್ರಧಾನಿ ಶೆಹಬಾಜ್ ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಪ್ರಧಾನಿ ಕಚೇರಿ ತಿಳಿಸಿದೆ.

“ಭಾರತದ ಪ್ರೊಪಗಾಂಡವನ್ನು ಬಹಿರಂಗಪಡಿಸಲು ವಿಶ್ವದ ಪ್ರಮುಖ ರಾಜಧಾನಿಗಳಿಗೆ ಉನ್ನತ ಮಟ್ಟದ ರಾಜತಾಂತ್ರಿಕ ನಿಯೋಗವನ್ನು ಕಳುಹಿಸಲು ಪ್ರಧಾನಿ ಶೆಹಬಾಜ್ ನಿರ್ಧರಿಸಿದ್ದಾರೆ” ಎಂದು ಸರ್ಕಾರಿ ರೇಡಿಯೋ ಪಾಕಿಸ್ತಾನ ವರದಿ ಮಾಡಿದೆ. ಅವರು ನಿಯೋಗದ ನಾಯಕತ್ವವನ್ನು ಬಿಲಾವಲ್ ಅವರಿಗೆ ವಹಿಸಿದ್ದಾರೆ.

“ಇಂದು ಮುಂಜಾನೆ ಪ್ರಧಾನಿ [ಶೆಹಬಾಜ್ ಷರೀಫ್] ನನ್ನನ್ನು ಸಂಪರ್ಕಿಸಿದರು. ಅವರು ಅಂತರರಾಷ್ಟ್ರೀಯ ವೇದಿಕೆಯಲ್ಲಿ ಶಾಂತಿಗಾಗಿ ಪಾಕಿಸ್ತಾನದ ವಾದವನ್ನು ಮಂಡಿಸಲು ನಿಯೋಗದ ನೇತೃತ್ವ ವಹಿಸುವಂತೆ ವಿನಂತಿಸಿದರು. ಈ ಜವಾಬ್ದಾರಿಯನ್ನು ಸ್ವೀಕರಿಸಲು ಮತ್ತು ಈ ಸವಾಲಿನ ಸಮಯದಲ್ಲಿ ಪಾಕಿಸ್ತಾನಕ್ಕೆ ಸೇವೆ ಸಲ್ಲಿಸಲು ಬದ್ಧರಾಗಿರಲು ನನಗೆ ಹೆಮ್ಮೆಯಿದೆ” ಎಂದು ಬಿಲಾವಲ್ ಶನಿವಾರ ಎಕ್ಸ್‌ನಲ್ಲಿ ಬರೆದಿದ್ದಾರೆ.

ಬಿಲಾವಲ್ ಜೊತೆಗೆ, ನಿಯೋಗದಲ್ಲಿ ಇಂಧನ ಸಚಿವ ಮುಸಾದಿಕ್ ಮಲಿಕ್, ಪಾಕಿಸ್ತಾನ ಮುಸ್ಲಿಂ ಲೀಗ್-ನವಾಜ್ ನಾಯಕ ಖುರ್ರಾಮ್ ದಸ್ತಗೀರ್ ಖಾನ್, ಸೆನೆಟರ್ ಶೆರ್ರಿ ರೆಹಮಾನ್, ಮಾಜಿ ವಿದೇಶಾಂಗ ಸಚಿವೆ ಹಿನಾ ರಬ್ಬಾನಿ ಖಾರ್, ಮುತ್ತಹಿದಾ ಕ್ವಾಮಿ ಚಳವಳಿಯ ಶಾಸಕ ಫೈಸಲ್ ಸಬ್ಜ್ವಾರಿ, ಮಾಜಿ ವಿದೇಶಾಂಗ ಕಾರ್ಯದರ್ಶಿ ತೆಹ್ಮಿನಾ ಜಂಜುವಾ ಮತ್ತು ಜಲೀಲ್ ಅಬ್ಬಾಸ್ ಜಿಲಾನಿ ಸೇರಿದ್ದಾರೆ.

ನಿಯೋಗವು “ಈ ಪ್ರದೇಶದಲ್ಲಿ ಶಾಂತಿ ಮತ್ತು ಸ್ಥಿರತೆಗಾಗಿ ಪಾಕಿಸ್ತಾನದ ಪ್ರಾಮಾಣಿಕ ಪ್ರಯತ್ನಗಳನ್ನು ಒತ್ತಿಹೇಳುತ್ತದೆ” ಎಂದು ಪ್ರಧಾನಿ ಕಚೇರಿ ತಿಳಿಸಿದೆ. ಇತ್ತೀಚಿನ ಸಂಘರ್ಷದ ಕುರಿತು ಪಾಕಿಸ್ತಾನದ ನಿಲುವನ್ನು ಎತ್ತಿ ತೋರಿಸಲು ನಿಯೋಗವು ಶೀಘ್ರದಲ್ಲೇ ಅಮೆರಿಕ, ಯುಕೆ, ಬೆಲ್ಜಿಯಮ್, ಫ್ರಾನ್ಸ್ ಮತ್ತು ರಷ್ಯಾಕ್ಕೆ ಭೇಟಿ ನೀಡಲಿದೆ ಎಂದು ಉಪ ಪ್ರಧಾನ ಮಂತ್ರಿ ಮತ್ತು ವಿದೇಶಾಂಗ ಸಚಿವ ಇಶಾಕ್ ದಾರ್ ಹೇಳಿದ್ದಾರೆ.

ಏಪ್ರಿಲ್ 22 ರಂದು ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಜನರು ಸಾವನ್ನಪ್ಪಿದ್ದಕ್ಕೆ ಪ್ರತಿಯಾಗಿ ಭಾರತವು ಮೇ 7 ರಂದು ಮುಂಜಾನೆ ‘ಆಪರೇಷನ್ ಸಿಂಧೂರ’ ಅಡಿಯಲ್ಲಿ ಭಯೋತ್ಪಾದಕ ಕೇಂದ್ರಗಳ ಮೇಲೆ ನಿಖರವಾದ ದಾಳಿಗಳನ್ನು ನಡೆಸಿತ್ತು. ಭಾರತದ ಈ ದಾಳಿಯ ನಂತರ, ಪಾಕಿಸ್ತಾನವು ಮೇ 8, 9 ಮತ್ತು 10 ರಂದು ಭಾರತೀಯ ಸೇನಾ ನೆಲೆಗಳ ಮೇಲೆ ದಾಳಿ ಮಾಡಲು ಪ್ರಯತ್ನಿಸಿತ್ತು.

ನಾಲ್ಕು ದಿನಗಳ ತೀವ್ರ ಡ್ರೋನ್ ಮತ್ತು ಕ್ಷಿಪಣಿ ದಾಳಿಯ ನಂತರ ಸಂಘರ್ಷವನ್ನು ಕೊನೆಗೊಳಿಸಲು ಭಾರತ ಮತ್ತು ಪಾಕಿಸ್ತಾನ ಮೇ 10 ರಂದು ಒಪ್ಪಂದಕ್ಕೆ ಬಂದವು. ಭಾರತಕ್ಕೆ ಸೆಡ್ಡು ಹೊಡೆಯಲು

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ತುಮಕೂರು ಮೆಟ್ರೋ ಕಾರ್ಯಸಾಧ್ಯತಾ ಅಧ್ಯಯನ ವರದಿ ಸಲ್ಲಿಸಿದ ಬಿಎಂಆರ್‌ಸಿಎಲ್

ತುಮಕೂರು ಮೆಟ್ರೋ ಕಾರ್ಯಸಾಧ್ಯತಾ ಅಧ್ಯಯನ ವರದಿ ಸಲ್ಲಿಸಿದ ಬಿಎಂಆರ್‌ಸಿಎಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...