Homeಕ್ರೀಡೆಕ್ರಿಕೆಟ್ದಕ್ಷಿಣ ಆಫ್ರಿಕಾ ವಿರುದ್ದ ಪಾಕ್‌ಗೆ ಜಯ: ಗ್ರೂಪ್ 2ರ ಸೆಮಿಫೈನಲ್ ಸಾಧ್ಯತೆಗಳು ಇಂತಿವೆ

ದಕ್ಷಿಣ ಆಫ್ರಿಕಾ ವಿರುದ್ದ ಪಾಕ್‌ಗೆ ಜಯ: ಗ್ರೂಪ್ 2ರ ಸೆಮಿಫೈನಲ್ ಸಾಧ್ಯತೆಗಳು ಇಂತಿವೆ

- Advertisement -
- Advertisement -

ಟಿ20 ವಿಶ್ವಕಪ್ ಗೆಲ್ಲುವ ನೆಚ್ಚಿನ ತಂಡಗಳಲ್ಲಿ ಒಂದಾಗಿರುವ ಪಾಕಿಸ್ತಾನ ತಂಡವು ಗ್ರೂಪ್ 2ರ ಸೂಪರ್ 12ನ ಮೊದಲ ಎರಡು ಪಂದ್ಯಗಳಲ್ಲಿ ಸೋತು ಟೂರ್ನಿಯಿಂದ ಹೊರಹೋಗುವ ಆತಂಕದಲ್ಲಿತ್ತು. ಆದರೆ ನಂತರ ನೆದರ್ಲೆಂಡ್ಸ್ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ಎದುರು ಗೆದ್ದು 04 ಅಂಕ ಗಳಿಸಿ ಸೆಮಿಫೈನಲ್ ತಲುಪುವ ಆಸೆ ಜೀವಂತವಾಗಿರಿಸಿಕೊಂಡಿದೆ. ಆದರೆ ಅದು ತನ್ನ ಕೊನೆಯ ಪಂದ್ಯದಲ್ಲಿ ಬಾಂಗ್ಲಾದೇಶದ ಎದುರು ಗೆಲುವು ಸಾಧಿಸುವುದು ಮಾತ್ರವಲ್ಲದೆ ಉಳಿದ ಪಂದ್ಯಗಳತ್ತ ನೋಡುತ್ತ ಕೂರಬೇಕಿದೆ. ಗ್ರೂಪ್ ಎರಡರ ಸೆಮಿಫೈನಲ್ ಸಾಧ್ಯತೆಗಳು ಕೆಳಗಿನಂತಿವೆ.

ಗ್ರೂಪ್ ಎರಡರಲ್ಲಿ 6 ತಂಡಗಳಿದ್ದು ಪಾಯಿಂಟ್ಸ್ ಪಟ್ಟಿಯಲ್ಲಿ ಅಗ್ರ ಸ್ಥಾನ ಪಡೆದ ಎರಡು ತಂಡಗಳಷ್ಟೇ ಸೆಮಿಫೈನಲ್ ಪ್ರವೇಶಿಸುವ ಅವಕಾಶವಿದೆ. ಸದ್ಯಕ್ಕೆ 6 ಅಂಕ ಗಳಿಸಿರುವ ಭಾರತ ಅಗ್ರಸ್ಥಾನದಲ್ಲಿದೆ. 5 ಅಂಕ ಗಳಿಸಿರುವ ದಕ್ಷಿಣ ಆಫ್ರಿಕಾ ಎರಡನೇ ಸ್ಥಾನದಲ್ಲಿದೆ. ಪಾಕಿಸ್ತಾನ 3, ಬಾಂಗ್ಲಾದೇಶ 4, ಜಿಂಬಾಬ್ವೆ 5 ಮತ್ತು ನೆದರ್ಲೆಂಡ್ಸ್ 6ನೇ ಸ್ಥಾನದಲ್ಲಿವೆ.

ಭಾರತದ ಸಾಧ್ಯತೆಗಳು

ಭಾರತವು ತನ್ನ ಕೊನೆಯ ಪಂದ್ಯವನ್ನು ಜಿಂಬಾಬ್ವೆ ತಂಡದ ಎದುರು ನವೆಂಬರ್ 6 ರಂದು ಎದುರಿಸಲಿದೆ. ಆ ಪಂದ್ಯದಲ್ಲಿ ಭಾರತ ಗೆದ್ದಲ್ಲಿ ಒಟ್ಟು 08 ಅಂಕಗಳೊಂದಿಗೆ ಅಗ್ರಸ್ಥಾನ ಪಡೆದು ಸುಲಭವಾಗಿ ಸೆಮಿಫೈನಲ್ ಪ್ರವೇಶಿಸಲಿದೆ. ಭಾರತ ಸೋತರೂ ಕೂಡ ಅದೇ ದಿನ ನಡೆಯುವ ಮತ್ತೊಂದು ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ ನೆದರ್ಲೆಂಡ್ಸ್ ವಿರುದ್ಧ ಸೋತರೆ ಭಾರತಕ್ಕೆ ಅವಕಾಶವಿದೆ. ಒಂದು ವೇಳೆ ಭಾರತ ಸೋತು, ದಕ್ಷಿಣ ಆಫ್ರಿಕಾ ತಂಡ ಗೆದ್ದಲ್ಲಿ ಬಾಂಗ್ಲಾದೇಶ ತಂಡವು ತನ್ನ ಕೊನೆಯ ಪಂದ್ಯದಲ್ಲಿ ಪಾಕಿಸ್ತಾನ ತಂಡವನ್ನು ಕಡಿಮೆ ಅಂತರದಿಂದ ಸೋಲಿಸಬೇಕೆಂದು ಭಾರತ ಪ್ರಾರ್ಥಿಸಬೇಕಿರುತ್ತದೆ. ಆಗ ನೆಟ್ ರನ್ ರೇಟ್ ಆಧಾರದಲ್ಲಿ ಬಾಂಗ್ಲಾದೇಶಕ್ಕಿಂತ ಹೆಚ್ಚಿರುವ ಭಾರತ ತಂಡ ದಕ್ಷಿಣ ಆಫ್ರಿಕಾ ತಂಡದೊಂದಿಗೆ ಸೆಮಿಫೈನಲ್ ತಲುಪಬಹುದು.

ದಕ್ಷಿಣ ಆಫ್ರಿಕಾ:

4 ಪಂದ್ಯಗಳಿಂದ 5 ಅಂಕ ಗಳಿಸಿರುವ ದಕ್ಷಿಣ ಆಫ್ರಿಕಾ ತಂಡವು ತನ್ನ ಕೊನೆಯ ಪಂದ್ಯದಲ್ಲಿ ನೆದರ್ಲೆಂಡ್ಸ್ ವಿರುದ್ಧ ಗೆಲ್ಲಲೇಬೇಕಿದೆ. ಅಲ್ಲಿ ಸೋತಲ್ಲಿ ಟೂರ್ನಿಯಿಂದ ಹೊರಬೀಳಲಿದೆ. ಅಂತಹ ಸಂದರ್ಭದಲ್ಲಿ ಕೊನೆಯ ಆಸೆಯಾಗಿ ಪಾಕಿಸ್ತಾನ ಮತ್ತು ಬಾಂಗ್ಲಾದೇಶದ ಪಂದ್ಯ ಮಳೆಯ ಕಾರಣಕ್ಕೆ ರದ್ದಾದರೆ ರನ್ ರೇಟ್ ಆಧಾರದಲ್ಲಿ ದಕ್ಷಿಣ ಆಫ್ರಿಕಾ ತಂಡಕ್ಕೆ ಅವಕಾಶಗಳು ತೆರೆದುಕೊಳ್ಳಲಿವೆ.

ಪಾಕಿಸ್ತಾನ:

ಪಾಕಿಸ್ತಾನ ತಂಡವು ತನ್ನ ಕೊನೆಯ ಪಂದ್ಯದಲ್ಲಿ ಬಾಂಗ್ಲಾದೇಶದ ವಿರುದ್ಧ ಗೆದ್ದರೂ ದಕ್ಷಿಣ ಆಫ್ರಿಕಾ ತಂಡ ನೆದರ್ಲೆಂಡ್ಸ್ ಎದುರು ಸೋಲುವುದನ್ನು ಕಾಯಬೇಕಿದೆ. ಅಲ್ಲದೆ ಭಾರತವು ಜಿಂಬಾಬ್ವೆ ವಿರುದ್ಧ ಸೋತಲ್ಲಿ ನೆಟ್ ರನ್ ರೇಟ್ ಆಧಾರದಲ್ಲಿ ಪಾಕಿಸ್ತಾನ ಸೆಮಿಫೈನಲ್ ಪ್ರವೇಶಿಸಬಹುದಾಗಿದೆ.

ಬಾಂಗ್ಲಾದೇಶ

ಗ್ರೂಪ್ ಎರಡರಲ್ಲಿ ಅತಿ ಕೆಟ್ಟ ನೆಟ್ ರನ್ ರೇಟ್ ಹೊಂದಿರುವ ಬಾಂಗ್ಲಾದೇಶದ ಸೆಮಿಫೈನಲ್ ಪ್ರವೇಶ ತೀರಾ ಕಠಿಣವಾಗಿದೆ. ಪಾಕಿಸ್ತಾನದ ವಿರುದ್ಧ ದೊಡ್ಡ ಅಂತರದಲ್ಲಿ ಬಾಂಗ್ಲಾದೇಶ ಗೆದ್ದು ದಕ್ಷಿಣ ಆಫ್ರಿಕಾ ತಂಡ ನೆದರ್ಲೆಂಡ್ಸ್ ವಿರುದ್ಧ ಸೋತಲ್ಲಿ ಭಾರತದ ಜೊತೆಗೆ ಬಾಂಗ್ಲಾದೇಶಕ್ಕೆ ಸೆಮಿಫೈನಲ್ ಅವಕಾಶ ತೆರೆದುಕೊಳ್ಳುತ್ತದೆ.

ಜಿಂಬಾಬ್ವೆ ಮತ್ತು ನೆದರ್ಲೆಂಡ್ಸ್ ತಂಡಗಳು ಹೆಚ್ಚಿನ ಸೋಲು ಕಂಡಿರುವ ಕಾರಣ ಸೆಮಿಫೈನಲ್ ಪ್ರವೇಶಿಸುವ ಅವಕಾಶ ಕಳೆದುಕೊಂಡಿವೆ.

ಇನ್ನು ಗ್ರೂಪ್ 1 ರಲ್ಲಿ ನ್ಯೂಜಿಲೆಂಡ್, ಇಂಗ್ಲೆಂಡ್, ಆಸ್ಟ್ರೇಲಿಯಾ ಮತ್ತು ಶ್ರೀಲಂಕಾ ತಂಡಗಳು ಸೆಮಿಫೈನಲ್‌ಗಾಗಿ ಸೆಣಸಾಟ ನಡೆಸುತ್ತಿವೆ. ಈ ಎಲ್ಲಾ ತಂಡಗಳಿಗೂ ಕಡೆಯ ಪಂದ್ಯ ಬಾಕಿ ಇದ್ದು ಗೆದ್ದ ಎರಡು ತಂಡಗಳು ಸೆಮಿಫೈನಲ್ ತಲುಪಲಿದ್ದಾರೆ. ಒಂದು ವೇಳೆ ಮಳೆ ಬಂದು ಎರಡೂ ಪಂದ್ಯ ರದ್ದಾದರೆ ನ್ಯೂಜಿಲೆಂಡ್, ಇಂಗ್ಲೆಂಡ್ ತಂಡಗಳಿಗೆ ಸಾಧ್ಯತೆ ಹೆಚ್ಚಾಗಿದೆ.

ನವೆಂಬರ್ 9 ಮತ್ತು 10 ರಂದು ಸೆಮಿಫೈನಲ್ ಪಂದ್ಯಗಳು ನಡೆಯಲಿದ್ದು, ನವೆಂಬರ್ 13 ರಂದು ಫೈನಲ್ ಪಂದ್ಯ ನಡೆಯಲಿದೆ.

ಇದನ್ನೂ ಓದಿ: ಬಾಂಗ್ಲಾ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ‘ನಕಲಿ ಫೀಲ್ಡಿಂಗ್’ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...