Homeಅಂತರಾಷ್ಟ್ರೀಯಉದ್ದ ಕೂದಲು ಬಿಟ್ಟ ಕಾರಣಕ್ಕೆ ಪಾಕಿಸ್ತಾನದ ಕಲಾವಿದನನ್ನು ಬಂಧಿಸಿದ ಪೊಲೀಸರು! ತೀವ್ರ ಖಂಡನೆ

ಉದ್ದ ಕೂದಲು ಬಿಟ್ಟ ಕಾರಣಕ್ಕೆ ಪಾಕಿಸ್ತಾನದ ಕಲಾವಿದನನ್ನು ಬಂಧಿಸಿದ ಪೊಲೀಸರು! ತೀವ್ರ ಖಂಡನೆ

ನತಾಶಾರವರ ಪೋಸ್ಟ್ ಟ್ವಿಟರ್‌ನಲ್ಲಿ ವೈರಲ್ ಆದ ನಂತರ ಬಹುತೇಕರು ಪಾಕ್ ಪೊಲೀಸ್ ದೌರ್ಜನ್ಯವನ್ನು ತೀವ್ರ ಪದಗಳಲ್ಲಿ ಟೀಕಿಸಿದ್ದಾರೆ. ಈ ದೇಶದಲ್ಲಿ ಕೂದಲು ಬೆಳೆಸುವುದು ಅಪರಾಧವೇ ಎಂದು ಹಲವರು ಪ್ರಶ್ನಿಸಿದ್ದಾರೆ.

- Advertisement -
- Advertisement -

ಪೊಲೀಸ್ ದೌರ್ಜನಕ್ಕೆ ಕಾರಣಕ್ಕೆ ಅಮಾಯಕರು ಶಿಕ್ಷೆ ಅನುಭವಿಸಿದ ಹಲವಾರು ಪ್ರಕರಣಗಳು ವರದಿಯಾಗಿವೆ. ಇತ್ತೀಚೆಗೆ ಕರ್ನಾಟಕದ ಮೂಡಿಗೆರೆ ಸೇರಿದಂತೆ ಹಲವು ಕಡೆ ಪೊಲೀಸ್ ದೌರ್ಜನ್ಯ ಘಟನೆಗಳು ನಡೆದಿವೆ. ‘ಅಧಿಕಾರದ ಅಹಂ’ ನಿಂದ ಪೊಲೀಸರು ಕಾನೂನು ಬಾಹಿರವಾಗಿ ನಡೆಸುವ ಕೃತ್ಯಗಳು ಒಂದೇ ದೇಶ, ಒಂದು ಪ್ರದೇಶಕ್ಕೆ ಸಿಮೀತವಾಗಿಲ್ಲ. ಅವು ವಿಶ್ವವ್ಯಾಪಿಯಾಗಿವೆ ಎಂಬುದನ್ನು ಪಾಕಿಸ್ತಾನದ ಈ ನಿದರ್ಶನ ರುಜುವಾತು ಮಾಡಿದೆ.

ಪಾಕಿಸ್ತಾನದ ಅಬುಜರ್ ಮಧು ಎಂಬ ಕಲಾವಿದನನ್ನು ಜೂನ್‌ನಲ್ಲಿ ಲಾಹೋರ್‌ನಲ್ಲಿ ಪಂಜಾಬ್ ಪೊಲೀಸರು ಬಂಧಿಸಿದ್ದರು ಮತ್ತು ಮಾಡೆಲ್ ಟೌನ್ ಪೊಲೀಸ್ ಠಾಣೆಯಲ್ಲಿ ಒಂದು ರಾತ್ರಿ ಬಂಧನದಲ್ಲಿಟ್ಟಿದ್ದರು. ಕಾರಣವೆಂದರೆ ಆತ ಉದ್ದ ಕೂದಲು ಬೆಳಿಸಿದ್ದಾಗಿತ್ತು ಎಂದು ಅವನ ಸ್ನೇಹಿತೆ, ಟ್ವಿಟರ್ ಬಳಕೆದಾರ ನತಾಶಾ ಜಾವೇದ್ ತಿಳಿಸಿದ್ದಾರೆ.

“ಅಬುಜರ್ ಒಬ್ಬ ಕಲಾವಿದ ಮತ್ತು ಶಿಕ್ಷಕ. ಅವರು ಕಲ್ಮಾ ಚಾಕ್ ಬಳಿ ರಿಕ್ಷಾಗಾಗಿ ಕಾಯುತ್ತಿದ್ದಾಗ ಪೊಲೀಸರು ಅವರ ಬಳಿ ಬಂದು ಗುರುತಿನ ಚೀಟಿಯನ್ನು ತೋರಿಸಲು ಕೇಳಿದ್ದಾರೆ. ಅವರು ಗುರುತಿನ ಚೀಟಿ ತೋರಿಸಿದರೂ ಸಹ ಅವರನ್ನು ಬಂಧಿಸಿ ಕರೆದೊಯ್ಯಲಾಯಿತು” ಎಂದು ಜಾವೇದ್ ಹೇಳಿದ್ದಾರೆ.

“ತನ್ನನ್ನು ಬಂಧಿಸಿದ್ದರ ಕಾರಣ ಕೇಳಿದರೆ “ನೀನು ದುರುಗುಟ್ಟುಕೊಂಡು ನೋಡುತ್ತಿದ್ದೆ. ಉದ್ದ ಕೂದಲು ಬೆಳಿಸಿದ್ದೆ. ಅಲ್ಲದೇ ಮುಂಜಾನೆ 3 ಗಂಟೆ ಸಮಯದಲ್ಲಿ ರಸ್ತೆಯಲ್ಲಿದ್ದೀಯ ಎಂಬ ಕಾರಣದಿಂದಲೂ ಬಂಧನ ಮಾಡಲಾಗಿದೆ ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾಗಿ ಅಬುಜಾರ್‌” ತಿಳಿಸಿದರು.

ನತಾಶಾ ಜಾವೇದ್ ಘಟನೆಯ ಕುರಿತು ದೀರ್ಘವಾಗಿ ಟ್ವಿಟರ್‌ನಲ್ಲಿ ಬರೆದಿದ್ದಾರೆ. ಅವರ ಪ್ರಕಾರ, “ಯಾವುದೇ ಕಾರಣವಿಲ್ಲದೆ ಅಬುಜಾರ್‌ನನ್ನು ಬಂಧಿಸಲಾಯಿತು. ಈ ಬಗ್ಗೆ ಅವರು ಪ್ರಶ್ನಿಸಿದಾಗ ಅವರಿಗೆ ಬೆದರಿಕೆ ಒಡ್ಡಲಾಯಿತು. ಅವರ ಮೇಲೆ ದೌರ್ಜನ್ಯವೆಸಗಿ ಒಂದು ರಾತ್ರಿ ಜೈಲಿನಲ್ಲಿ ಕಳೆಯುವಂತೆ ಮಾಡಲಾಯಿತು. ಮಾರನೇಯ ದಿನ ಸ್ನೇಹಿತರ ಮಧ್ಯಪ್ರವೇಶದಿಂದ ಅವರನ್ನು ಬಿಡುಗಡೆ ಮಾಡಲಾಯಿತು” ಎಂದು ಆರೋಪಿಸಿದ್ದಾರೆ.

ಅವರನ್ನು ಏಕೆ ಬಂಧಿಸಲಾಯಿತು? ಅಬುಜಾರ್‌ ರಿಕ್ಷಾಗೆ ಕಾಯುತ್ತಿದ್ದರೆ ಹೊರತು ಅವರು ಖಾಸಗಿ ಕಾರ್‌ನಲ್ಲಿ ಕುಳಿತಿರಲಿಲ್ಲ.. ಅವರು ಉದ್ದನೆಯ ಕೂದಲು ಬಿಟ್ಟಿದ್ದರು.. ಅವರು ಹೇಗೆ ಕಾಣುತ್ತಿದ್ದಾರೆ ಎಂಬ ಕಾರಣದಿಂದ ಅವರನ್ನು ಬಂಧಿಸಬಹುದೇ? ಅವರು ಯಾವುದೇ ತಪ್ಪು ಮಾಡದೇ, ಸಮರ್ಪಕ ವಿಚಾರಣೆ ನಡೆಸದೇ ಬಂಧಿಸಬಹುದೆ? ಸೈಪುಲ್ಲ ಎಂಬ ಪೊಲೀಸ್ ಅಧಿಕಾರಿ ಬೇಕಂತಲೇ ಕಿರುಕುಳ ನೀಡಿದ್ದಾರೆ. ಈ ರೀತಿ ಅಧಿಕಾರ ದುರ್ಬಳಕೆ ಮಾಡಿದ ನಂತರವೂ ಅವರಿಗೆ ಯಾವುದೇ ಶಿಕ್ಷೆ ಇಲ್ಲ ಏಕೆ? ಎಂದು ಅವರ ಗೆಳತಿ ನತಾಶಾ ಜಾವೇದ್ ಪ್ರಶ್ನಿಸಿದ್ದಾರೆ.

ನತಾಶಾರವರ ಪೋಸ್ಟ್ ಟ್ವಿಟರ್‌ನಲ್ಲಿ ವೈರಲ್ ಆಗಿದ್ದು, ತದನಂತರ ಬಹುತೇಕರು ಪಾಕ್ ಪೊಲೀಸ್ ದೌರ್ಜನ್ಯವನ್ನು ತೀವ್ರ ಪದಗಳಲ್ಲಿ ಟೀಕಿಸಿದ್ದಾರೆ. ಈ ದೇಶದಲ್ಲಿ ಕೂದಲು ಬೆಳೆಸುವುದು ಅಪರಾಧವೇ ಎಂದು ಹಲವರು ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: ಉತ್ತರ ಪ್ರದೇಶ: ಜೈಶ್ರೀರಾಮ್ ಘೋಷಣೆ ಕೂಗುವಂತೆ ಮುಸ್ಲಿಂ ವೃದ್ಧನ ಮೇಲೆ ಹಲ್ಲೆ, ಗಡ್ಡ ಕಿತ್ತು ಚಿತ್ರಹಿಂಸೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....