Homeಅಂತರಾಷ್ಟ್ರೀಯಉದ್ದ ಕೂದಲು ಬಿಟ್ಟ ಕಾರಣಕ್ಕೆ ಪಾಕಿಸ್ತಾನದ ಕಲಾವಿದನನ್ನು ಬಂಧಿಸಿದ ಪೊಲೀಸರು! ತೀವ್ರ ಖಂಡನೆ

ಉದ್ದ ಕೂದಲು ಬಿಟ್ಟ ಕಾರಣಕ್ಕೆ ಪಾಕಿಸ್ತಾನದ ಕಲಾವಿದನನ್ನು ಬಂಧಿಸಿದ ಪೊಲೀಸರು! ತೀವ್ರ ಖಂಡನೆ

ನತಾಶಾರವರ ಪೋಸ್ಟ್ ಟ್ವಿಟರ್‌ನಲ್ಲಿ ವೈರಲ್ ಆದ ನಂತರ ಬಹುತೇಕರು ಪಾಕ್ ಪೊಲೀಸ್ ದೌರ್ಜನ್ಯವನ್ನು ತೀವ್ರ ಪದಗಳಲ್ಲಿ ಟೀಕಿಸಿದ್ದಾರೆ. ಈ ದೇಶದಲ್ಲಿ ಕೂದಲು ಬೆಳೆಸುವುದು ಅಪರಾಧವೇ ಎಂದು ಹಲವರು ಪ್ರಶ್ನಿಸಿದ್ದಾರೆ.

- Advertisement -
- Advertisement -

ಪೊಲೀಸ್ ದೌರ್ಜನಕ್ಕೆ ಕಾರಣಕ್ಕೆ ಅಮಾಯಕರು ಶಿಕ್ಷೆ ಅನುಭವಿಸಿದ ಹಲವಾರು ಪ್ರಕರಣಗಳು ವರದಿಯಾಗಿವೆ. ಇತ್ತೀಚೆಗೆ ಕರ್ನಾಟಕದ ಮೂಡಿಗೆರೆ ಸೇರಿದಂತೆ ಹಲವು ಕಡೆ ಪೊಲೀಸ್ ದೌರ್ಜನ್ಯ ಘಟನೆಗಳು ನಡೆದಿವೆ. ‘ಅಧಿಕಾರದ ಅಹಂ’ ನಿಂದ ಪೊಲೀಸರು ಕಾನೂನು ಬಾಹಿರವಾಗಿ ನಡೆಸುವ ಕೃತ್ಯಗಳು ಒಂದೇ ದೇಶ, ಒಂದು ಪ್ರದೇಶಕ್ಕೆ ಸಿಮೀತವಾಗಿಲ್ಲ. ಅವು ವಿಶ್ವವ್ಯಾಪಿಯಾಗಿವೆ ಎಂಬುದನ್ನು ಪಾಕಿಸ್ತಾನದ ಈ ನಿದರ್ಶನ ರುಜುವಾತು ಮಾಡಿದೆ.

ಪಾಕಿಸ್ತಾನದ ಅಬುಜರ್ ಮಧು ಎಂಬ ಕಲಾವಿದನನ್ನು ಜೂನ್‌ನಲ್ಲಿ ಲಾಹೋರ್‌ನಲ್ಲಿ ಪಂಜಾಬ್ ಪೊಲೀಸರು ಬಂಧಿಸಿದ್ದರು ಮತ್ತು ಮಾಡೆಲ್ ಟೌನ್ ಪೊಲೀಸ್ ಠಾಣೆಯಲ್ಲಿ ಒಂದು ರಾತ್ರಿ ಬಂಧನದಲ್ಲಿಟ್ಟಿದ್ದರು. ಕಾರಣವೆಂದರೆ ಆತ ಉದ್ದ ಕೂದಲು ಬೆಳಿಸಿದ್ದಾಗಿತ್ತು ಎಂದು ಅವನ ಸ್ನೇಹಿತೆ, ಟ್ವಿಟರ್ ಬಳಕೆದಾರ ನತಾಶಾ ಜಾವೇದ್ ತಿಳಿಸಿದ್ದಾರೆ.

“ಅಬುಜರ್ ಒಬ್ಬ ಕಲಾವಿದ ಮತ್ತು ಶಿಕ್ಷಕ. ಅವರು ಕಲ್ಮಾ ಚಾಕ್ ಬಳಿ ರಿಕ್ಷಾಗಾಗಿ ಕಾಯುತ್ತಿದ್ದಾಗ ಪೊಲೀಸರು ಅವರ ಬಳಿ ಬಂದು ಗುರುತಿನ ಚೀಟಿಯನ್ನು ತೋರಿಸಲು ಕೇಳಿದ್ದಾರೆ. ಅವರು ಗುರುತಿನ ಚೀಟಿ ತೋರಿಸಿದರೂ ಸಹ ಅವರನ್ನು ಬಂಧಿಸಿ ಕರೆದೊಯ್ಯಲಾಯಿತು” ಎಂದು ಜಾವೇದ್ ಹೇಳಿದ್ದಾರೆ.

“ತನ್ನನ್ನು ಬಂಧಿಸಿದ್ದರ ಕಾರಣ ಕೇಳಿದರೆ “ನೀನು ದುರುಗುಟ್ಟುಕೊಂಡು ನೋಡುತ್ತಿದ್ದೆ. ಉದ್ದ ಕೂದಲು ಬೆಳಿಸಿದ್ದೆ. ಅಲ್ಲದೇ ಮುಂಜಾನೆ 3 ಗಂಟೆ ಸಮಯದಲ್ಲಿ ರಸ್ತೆಯಲ್ಲಿದ್ದೀಯ ಎಂಬ ಕಾರಣದಿಂದಲೂ ಬಂಧನ ಮಾಡಲಾಗಿದೆ ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾಗಿ ಅಬುಜಾರ್‌” ತಿಳಿಸಿದರು.

ನತಾಶಾ ಜಾವೇದ್ ಘಟನೆಯ ಕುರಿತು ದೀರ್ಘವಾಗಿ ಟ್ವಿಟರ್‌ನಲ್ಲಿ ಬರೆದಿದ್ದಾರೆ. ಅವರ ಪ್ರಕಾರ, “ಯಾವುದೇ ಕಾರಣವಿಲ್ಲದೆ ಅಬುಜಾರ್‌ನನ್ನು ಬಂಧಿಸಲಾಯಿತು. ಈ ಬಗ್ಗೆ ಅವರು ಪ್ರಶ್ನಿಸಿದಾಗ ಅವರಿಗೆ ಬೆದರಿಕೆ ಒಡ್ಡಲಾಯಿತು. ಅವರ ಮೇಲೆ ದೌರ್ಜನ್ಯವೆಸಗಿ ಒಂದು ರಾತ್ರಿ ಜೈಲಿನಲ್ಲಿ ಕಳೆಯುವಂತೆ ಮಾಡಲಾಯಿತು. ಮಾರನೇಯ ದಿನ ಸ್ನೇಹಿತರ ಮಧ್ಯಪ್ರವೇಶದಿಂದ ಅವರನ್ನು ಬಿಡುಗಡೆ ಮಾಡಲಾಯಿತು” ಎಂದು ಆರೋಪಿಸಿದ್ದಾರೆ.

ಅವರನ್ನು ಏಕೆ ಬಂಧಿಸಲಾಯಿತು? ಅಬುಜಾರ್‌ ರಿಕ್ಷಾಗೆ ಕಾಯುತ್ತಿದ್ದರೆ ಹೊರತು ಅವರು ಖಾಸಗಿ ಕಾರ್‌ನಲ್ಲಿ ಕುಳಿತಿರಲಿಲ್ಲ.. ಅವರು ಉದ್ದನೆಯ ಕೂದಲು ಬಿಟ್ಟಿದ್ದರು.. ಅವರು ಹೇಗೆ ಕಾಣುತ್ತಿದ್ದಾರೆ ಎಂಬ ಕಾರಣದಿಂದ ಅವರನ್ನು ಬಂಧಿಸಬಹುದೇ? ಅವರು ಯಾವುದೇ ತಪ್ಪು ಮಾಡದೇ, ಸಮರ್ಪಕ ವಿಚಾರಣೆ ನಡೆಸದೇ ಬಂಧಿಸಬಹುದೆ? ಸೈಪುಲ್ಲ ಎಂಬ ಪೊಲೀಸ್ ಅಧಿಕಾರಿ ಬೇಕಂತಲೇ ಕಿರುಕುಳ ನೀಡಿದ್ದಾರೆ. ಈ ರೀತಿ ಅಧಿಕಾರ ದುರ್ಬಳಕೆ ಮಾಡಿದ ನಂತರವೂ ಅವರಿಗೆ ಯಾವುದೇ ಶಿಕ್ಷೆ ಇಲ್ಲ ಏಕೆ? ಎಂದು ಅವರ ಗೆಳತಿ ನತಾಶಾ ಜಾವೇದ್ ಪ್ರಶ್ನಿಸಿದ್ದಾರೆ.

ನತಾಶಾರವರ ಪೋಸ್ಟ್ ಟ್ವಿಟರ್‌ನಲ್ಲಿ ವೈರಲ್ ಆಗಿದ್ದು, ತದನಂತರ ಬಹುತೇಕರು ಪಾಕ್ ಪೊಲೀಸ್ ದೌರ್ಜನ್ಯವನ್ನು ತೀವ್ರ ಪದಗಳಲ್ಲಿ ಟೀಕಿಸಿದ್ದಾರೆ. ಈ ದೇಶದಲ್ಲಿ ಕೂದಲು ಬೆಳೆಸುವುದು ಅಪರಾಧವೇ ಎಂದು ಹಲವರು ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: ಉತ್ತರ ಪ್ರದೇಶ: ಜೈಶ್ರೀರಾಮ್ ಘೋಷಣೆ ಕೂಗುವಂತೆ ಮುಸ್ಲಿಂ ವೃದ್ಧನ ಮೇಲೆ ಹಲ್ಲೆ, ಗಡ್ಡ ಕಿತ್ತು ಚಿತ್ರಹಿಂಸೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...

ಮೊದಲ ಪತ್ನಿಗೆ ಮುಸ್ಲಿಂ ಪತಿ ಜೀವನಾಂಶ ನಿರಾಕರಿಸುವಂತಿಲ್ಲ: ಕೇರಳ ಹೈಕೋರ್ಟ್

ಎರಡನೇ ಪತ್ನಿಯ ಮೇಲಿನ ಆರ್ಥಿಕ ಜವಾಬ್ದಾರಿ ಕುರಿತ ಮಹತ್ವದ ತೀರ್ಪಿನಲ್ಲಿ, ಮುಸ್ಲಿಂ ಪುರುಷನು ತನ್ನ ಮೊದಲ ಪತ್ನಿಗೆ ಜೀವನಾಂಶ ಪಾವತಿಸುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. ಎಲ್ಲ ಪತ್ನಿಯರನ್ನು ಸಮಾನವಾಗಿ...

ಆಸ್ಪತ್ರೆಗಳು ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು, ಹಣ ಪಾವತಿಸದ ಕಾರಣ ತುರ್ತು ಆರೈಕೆ ನಿರಾಕರಿಸುವಂತಿಲ್ಲ : ಕಾನೂನು ಎತ್ತಿ ಹಿಡಿದ ಹೈಕೋರ್ಟ್

ಕೇರಳ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಮತ್ತು ನಿಬಂಧನೆಗಳನ್ನು ಎತ್ತಿಹಿಡಿದ ಹೈಕೋರ್ಟ್‌ನ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮತ್ತು ಕೇರಳ ಖಾಸಗಿ ಆಸ್ಪತ್ರೆಗಳ ಸಂಘ ಸಲ್ಲಿಸಿದ್ದ ಮೇಲ್ಮನವಿಗಳನ್ನು...

ಎಸ್‌ಐಆರ್‌ನ ನಿಜವಾದ ಉದ್ದೇಶ ಎನ್‌ಆರ್‌ಸಿ : ಮಮತಾ ಬ್ಯಾನರ್ಜಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್‌) ಹಿಂದಿನ ಕೇಂದ್ರ ಸರ್ಕಾರದ ನಿಜವಾದ ಉದ್ದೇಶ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಮಾಡುವುದು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ನವೆಂಬರ್...