Homeಅಂತರಾಷ್ಟ್ರೀಯಉದ್ದ ಕೂದಲು ಬಿಟ್ಟ ಕಾರಣಕ್ಕೆ ಪಾಕಿಸ್ತಾನದ ಕಲಾವಿದನನ್ನು ಬಂಧಿಸಿದ ಪೊಲೀಸರು! ತೀವ್ರ ಖಂಡನೆ

ಉದ್ದ ಕೂದಲು ಬಿಟ್ಟ ಕಾರಣಕ್ಕೆ ಪಾಕಿಸ್ತಾನದ ಕಲಾವಿದನನ್ನು ಬಂಧಿಸಿದ ಪೊಲೀಸರು! ತೀವ್ರ ಖಂಡನೆ

ನತಾಶಾರವರ ಪೋಸ್ಟ್ ಟ್ವಿಟರ್‌ನಲ್ಲಿ ವೈರಲ್ ಆದ ನಂತರ ಬಹುತೇಕರು ಪಾಕ್ ಪೊಲೀಸ್ ದೌರ್ಜನ್ಯವನ್ನು ತೀವ್ರ ಪದಗಳಲ್ಲಿ ಟೀಕಿಸಿದ್ದಾರೆ. ಈ ದೇಶದಲ್ಲಿ ಕೂದಲು ಬೆಳೆಸುವುದು ಅಪರಾಧವೇ ಎಂದು ಹಲವರು ಪ್ರಶ್ನಿಸಿದ್ದಾರೆ.

- Advertisement -
- Advertisement -

ಪೊಲೀಸ್ ದೌರ್ಜನಕ್ಕೆ ಕಾರಣಕ್ಕೆ ಅಮಾಯಕರು ಶಿಕ್ಷೆ ಅನುಭವಿಸಿದ ಹಲವಾರು ಪ್ರಕರಣಗಳು ವರದಿಯಾಗಿವೆ. ಇತ್ತೀಚೆಗೆ ಕರ್ನಾಟಕದ ಮೂಡಿಗೆರೆ ಸೇರಿದಂತೆ ಹಲವು ಕಡೆ ಪೊಲೀಸ್ ದೌರ್ಜನ್ಯ ಘಟನೆಗಳು ನಡೆದಿವೆ. ‘ಅಧಿಕಾರದ ಅಹಂ’ ನಿಂದ ಪೊಲೀಸರು ಕಾನೂನು ಬಾಹಿರವಾಗಿ ನಡೆಸುವ ಕೃತ್ಯಗಳು ಒಂದೇ ದೇಶ, ಒಂದು ಪ್ರದೇಶಕ್ಕೆ ಸಿಮೀತವಾಗಿಲ್ಲ. ಅವು ವಿಶ್ವವ್ಯಾಪಿಯಾಗಿವೆ ಎಂಬುದನ್ನು ಪಾಕಿಸ್ತಾನದ ಈ ನಿದರ್ಶನ ರುಜುವಾತು ಮಾಡಿದೆ.

ಪಾಕಿಸ್ತಾನದ ಅಬುಜರ್ ಮಧು ಎಂಬ ಕಲಾವಿದನನ್ನು ಜೂನ್‌ನಲ್ಲಿ ಲಾಹೋರ್‌ನಲ್ಲಿ ಪಂಜಾಬ್ ಪೊಲೀಸರು ಬಂಧಿಸಿದ್ದರು ಮತ್ತು ಮಾಡೆಲ್ ಟೌನ್ ಪೊಲೀಸ್ ಠಾಣೆಯಲ್ಲಿ ಒಂದು ರಾತ್ರಿ ಬಂಧನದಲ್ಲಿಟ್ಟಿದ್ದರು. ಕಾರಣವೆಂದರೆ ಆತ ಉದ್ದ ಕೂದಲು ಬೆಳಿಸಿದ್ದಾಗಿತ್ತು ಎಂದು ಅವನ ಸ್ನೇಹಿತೆ, ಟ್ವಿಟರ್ ಬಳಕೆದಾರ ನತಾಶಾ ಜಾವೇದ್ ತಿಳಿಸಿದ್ದಾರೆ.

“ಅಬುಜರ್ ಒಬ್ಬ ಕಲಾವಿದ ಮತ್ತು ಶಿಕ್ಷಕ. ಅವರು ಕಲ್ಮಾ ಚಾಕ್ ಬಳಿ ರಿಕ್ಷಾಗಾಗಿ ಕಾಯುತ್ತಿದ್ದಾಗ ಪೊಲೀಸರು ಅವರ ಬಳಿ ಬಂದು ಗುರುತಿನ ಚೀಟಿಯನ್ನು ತೋರಿಸಲು ಕೇಳಿದ್ದಾರೆ. ಅವರು ಗುರುತಿನ ಚೀಟಿ ತೋರಿಸಿದರೂ ಸಹ ಅವರನ್ನು ಬಂಧಿಸಿ ಕರೆದೊಯ್ಯಲಾಯಿತು” ಎಂದು ಜಾವೇದ್ ಹೇಳಿದ್ದಾರೆ.

“ತನ್ನನ್ನು ಬಂಧಿಸಿದ್ದರ ಕಾರಣ ಕೇಳಿದರೆ “ನೀನು ದುರುಗುಟ್ಟುಕೊಂಡು ನೋಡುತ್ತಿದ್ದೆ. ಉದ್ದ ಕೂದಲು ಬೆಳಿಸಿದ್ದೆ. ಅಲ್ಲದೇ ಮುಂಜಾನೆ 3 ಗಂಟೆ ಸಮಯದಲ್ಲಿ ರಸ್ತೆಯಲ್ಲಿದ್ದೀಯ ಎಂಬ ಕಾರಣದಿಂದಲೂ ಬಂಧನ ಮಾಡಲಾಗಿದೆ ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾಗಿ ಅಬುಜಾರ್‌” ತಿಳಿಸಿದರು.

ನತಾಶಾ ಜಾವೇದ್ ಘಟನೆಯ ಕುರಿತು ದೀರ್ಘವಾಗಿ ಟ್ವಿಟರ್‌ನಲ್ಲಿ ಬರೆದಿದ್ದಾರೆ. ಅವರ ಪ್ರಕಾರ, “ಯಾವುದೇ ಕಾರಣವಿಲ್ಲದೆ ಅಬುಜಾರ್‌ನನ್ನು ಬಂಧಿಸಲಾಯಿತು. ಈ ಬಗ್ಗೆ ಅವರು ಪ್ರಶ್ನಿಸಿದಾಗ ಅವರಿಗೆ ಬೆದರಿಕೆ ಒಡ್ಡಲಾಯಿತು. ಅವರ ಮೇಲೆ ದೌರ್ಜನ್ಯವೆಸಗಿ ಒಂದು ರಾತ್ರಿ ಜೈಲಿನಲ್ಲಿ ಕಳೆಯುವಂತೆ ಮಾಡಲಾಯಿತು. ಮಾರನೇಯ ದಿನ ಸ್ನೇಹಿತರ ಮಧ್ಯಪ್ರವೇಶದಿಂದ ಅವರನ್ನು ಬಿಡುಗಡೆ ಮಾಡಲಾಯಿತು” ಎಂದು ಆರೋಪಿಸಿದ್ದಾರೆ.

ಅವರನ್ನು ಏಕೆ ಬಂಧಿಸಲಾಯಿತು? ಅಬುಜಾರ್‌ ರಿಕ್ಷಾಗೆ ಕಾಯುತ್ತಿದ್ದರೆ ಹೊರತು ಅವರು ಖಾಸಗಿ ಕಾರ್‌ನಲ್ಲಿ ಕುಳಿತಿರಲಿಲ್ಲ.. ಅವರು ಉದ್ದನೆಯ ಕೂದಲು ಬಿಟ್ಟಿದ್ದರು.. ಅವರು ಹೇಗೆ ಕಾಣುತ್ತಿದ್ದಾರೆ ಎಂಬ ಕಾರಣದಿಂದ ಅವರನ್ನು ಬಂಧಿಸಬಹುದೇ? ಅವರು ಯಾವುದೇ ತಪ್ಪು ಮಾಡದೇ, ಸಮರ್ಪಕ ವಿಚಾರಣೆ ನಡೆಸದೇ ಬಂಧಿಸಬಹುದೆ? ಸೈಪುಲ್ಲ ಎಂಬ ಪೊಲೀಸ್ ಅಧಿಕಾರಿ ಬೇಕಂತಲೇ ಕಿರುಕುಳ ನೀಡಿದ್ದಾರೆ. ಈ ರೀತಿ ಅಧಿಕಾರ ದುರ್ಬಳಕೆ ಮಾಡಿದ ನಂತರವೂ ಅವರಿಗೆ ಯಾವುದೇ ಶಿಕ್ಷೆ ಇಲ್ಲ ಏಕೆ? ಎಂದು ಅವರ ಗೆಳತಿ ನತಾಶಾ ಜಾವೇದ್ ಪ್ರಶ್ನಿಸಿದ್ದಾರೆ.

ನತಾಶಾರವರ ಪೋಸ್ಟ್ ಟ್ವಿಟರ್‌ನಲ್ಲಿ ವೈರಲ್ ಆಗಿದ್ದು, ತದನಂತರ ಬಹುತೇಕರು ಪಾಕ್ ಪೊಲೀಸ್ ದೌರ್ಜನ್ಯವನ್ನು ತೀವ್ರ ಪದಗಳಲ್ಲಿ ಟೀಕಿಸಿದ್ದಾರೆ. ಈ ದೇಶದಲ್ಲಿ ಕೂದಲು ಬೆಳೆಸುವುದು ಅಪರಾಧವೇ ಎಂದು ಹಲವರು ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: ಉತ್ತರ ಪ್ರದೇಶ: ಜೈಶ್ರೀರಾಮ್ ಘೋಷಣೆ ಕೂಗುವಂತೆ ಮುಸ್ಲಿಂ ವೃದ್ಧನ ಮೇಲೆ ಹಲ್ಲೆ, ಗಡ್ಡ ಕಿತ್ತು ಚಿತ್ರಹಿಂಸೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...