Homeಅಂತರಾಷ್ಟ್ರೀಯಉದ್ದ ಕೂದಲು ಬಿಟ್ಟ ಕಾರಣಕ್ಕೆ ಪಾಕಿಸ್ತಾನದ ಕಲಾವಿದನನ್ನು ಬಂಧಿಸಿದ ಪೊಲೀಸರು! ತೀವ್ರ ಖಂಡನೆ

ಉದ್ದ ಕೂದಲು ಬಿಟ್ಟ ಕಾರಣಕ್ಕೆ ಪಾಕಿಸ್ತಾನದ ಕಲಾವಿದನನ್ನು ಬಂಧಿಸಿದ ಪೊಲೀಸರು! ತೀವ್ರ ಖಂಡನೆ

ನತಾಶಾರವರ ಪೋಸ್ಟ್ ಟ್ವಿಟರ್‌ನಲ್ಲಿ ವೈರಲ್ ಆದ ನಂತರ ಬಹುತೇಕರು ಪಾಕ್ ಪೊಲೀಸ್ ದೌರ್ಜನ್ಯವನ್ನು ತೀವ್ರ ಪದಗಳಲ್ಲಿ ಟೀಕಿಸಿದ್ದಾರೆ. ಈ ದೇಶದಲ್ಲಿ ಕೂದಲು ಬೆಳೆಸುವುದು ಅಪರಾಧವೇ ಎಂದು ಹಲವರು ಪ್ರಶ್ನಿಸಿದ್ದಾರೆ.

- Advertisement -
- Advertisement -

ಪೊಲೀಸ್ ದೌರ್ಜನಕ್ಕೆ ಕಾರಣಕ್ಕೆ ಅಮಾಯಕರು ಶಿಕ್ಷೆ ಅನುಭವಿಸಿದ ಹಲವಾರು ಪ್ರಕರಣಗಳು ವರದಿಯಾಗಿವೆ. ಇತ್ತೀಚೆಗೆ ಕರ್ನಾಟಕದ ಮೂಡಿಗೆರೆ ಸೇರಿದಂತೆ ಹಲವು ಕಡೆ ಪೊಲೀಸ್ ದೌರ್ಜನ್ಯ ಘಟನೆಗಳು ನಡೆದಿವೆ. ‘ಅಧಿಕಾರದ ಅಹಂ’ ನಿಂದ ಪೊಲೀಸರು ಕಾನೂನು ಬಾಹಿರವಾಗಿ ನಡೆಸುವ ಕೃತ್ಯಗಳು ಒಂದೇ ದೇಶ, ಒಂದು ಪ್ರದೇಶಕ್ಕೆ ಸಿಮೀತವಾಗಿಲ್ಲ. ಅವು ವಿಶ್ವವ್ಯಾಪಿಯಾಗಿವೆ ಎಂಬುದನ್ನು ಪಾಕಿಸ್ತಾನದ ಈ ನಿದರ್ಶನ ರುಜುವಾತು ಮಾಡಿದೆ.

ಪಾಕಿಸ್ತಾನದ ಅಬುಜರ್ ಮಧು ಎಂಬ ಕಲಾವಿದನನ್ನು ಜೂನ್‌ನಲ್ಲಿ ಲಾಹೋರ್‌ನಲ್ಲಿ ಪಂಜಾಬ್ ಪೊಲೀಸರು ಬಂಧಿಸಿದ್ದರು ಮತ್ತು ಮಾಡೆಲ್ ಟೌನ್ ಪೊಲೀಸ್ ಠಾಣೆಯಲ್ಲಿ ಒಂದು ರಾತ್ರಿ ಬಂಧನದಲ್ಲಿಟ್ಟಿದ್ದರು. ಕಾರಣವೆಂದರೆ ಆತ ಉದ್ದ ಕೂದಲು ಬೆಳಿಸಿದ್ದಾಗಿತ್ತು ಎಂದು ಅವನ ಸ್ನೇಹಿತೆ, ಟ್ವಿಟರ್ ಬಳಕೆದಾರ ನತಾಶಾ ಜಾವೇದ್ ತಿಳಿಸಿದ್ದಾರೆ.

“ಅಬುಜರ್ ಒಬ್ಬ ಕಲಾವಿದ ಮತ್ತು ಶಿಕ್ಷಕ. ಅವರು ಕಲ್ಮಾ ಚಾಕ್ ಬಳಿ ರಿಕ್ಷಾಗಾಗಿ ಕಾಯುತ್ತಿದ್ದಾಗ ಪೊಲೀಸರು ಅವರ ಬಳಿ ಬಂದು ಗುರುತಿನ ಚೀಟಿಯನ್ನು ತೋರಿಸಲು ಕೇಳಿದ್ದಾರೆ. ಅವರು ಗುರುತಿನ ಚೀಟಿ ತೋರಿಸಿದರೂ ಸಹ ಅವರನ್ನು ಬಂಧಿಸಿ ಕರೆದೊಯ್ಯಲಾಯಿತು” ಎಂದು ಜಾವೇದ್ ಹೇಳಿದ್ದಾರೆ.

“ತನ್ನನ್ನು ಬಂಧಿಸಿದ್ದರ ಕಾರಣ ಕೇಳಿದರೆ “ನೀನು ದುರುಗುಟ್ಟುಕೊಂಡು ನೋಡುತ್ತಿದ್ದೆ. ಉದ್ದ ಕೂದಲು ಬೆಳಿಸಿದ್ದೆ. ಅಲ್ಲದೇ ಮುಂಜಾನೆ 3 ಗಂಟೆ ಸಮಯದಲ್ಲಿ ರಸ್ತೆಯಲ್ಲಿದ್ದೀಯ ಎಂಬ ಕಾರಣದಿಂದಲೂ ಬಂಧನ ಮಾಡಲಾಗಿದೆ ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾಗಿ ಅಬುಜಾರ್‌” ತಿಳಿಸಿದರು.

ನತಾಶಾ ಜಾವೇದ್ ಘಟನೆಯ ಕುರಿತು ದೀರ್ಘವಾಗಿ ಟ್ವಿಟರ್‌ನಲ್ಲಿ ಬರೆದಿದ್ದಾರೆ. ಅವರ ಪ್ರಕಾರ, “ಯಾವುದೇ ಕಾರಣವಿಲ್ಲದೆ ಅಬುಜಾರ್‌ನನ್ನು ಬಂಧಿಸಲಾಯಿತು. ಈ ಬಗ್ಗೆ ಅವರು ಪ್ರಶ್ನಿಸಿದಾಗ ಅವರಿಗೆ ಬೆದರಿಕೆ ಒಡ್ಡಲಾಯಿತು. ಅವರ ಮೇಲೆ ದೌರ್ಜನ್ಯವೆಸಗಿ ಒಂದು ರಾತ್ರಿ ಜೈಲಿನಲ್ಲಿ ಕಳೆಯುವಂತೆ ಮಾಡಲಾಯಿತು. ಮಾರನೇಯ ದಿನ ಸ್ನೇಹಿತರ ಮಧ್ಯಪ್ರವೇಶದಿಂದ ಅವರನ್ನು ಬಿಡುಗಡೆ ಮಾಡಲಾಯಿತು” ಎಂದು ಆರೋಪಿಸಿದ್ದಾರೆ.

ಅವರನ್ನು ಏಕೆ ಬಂಧಿಸಲಾಯಿತು? ಅಬುಜಾರ್‌ ರಿಕ್ಷಾಗೆ ಕಾಯುತ್ತಿದ್ದರೆ ಹೊರತು ಅವರು ಖಾಸಗಿ ಕಾರ್‌ನಲ್ಲಿ ಕುಳಿತಿರಲಿಲ್ಲ.. ಅವರು ಉದ್ದನೆಯ ಕೂದಲು ಬಿಟ್ಟಿದ್ದರು.. ಅವರು ಹೇಗೆ ಕಾಣುತ್ತಿದ್ದಾರೆ ಎಂಬ ಕಾರಣದಿಂದ ಅವರನ್ನು ಬಂಧಿಸಬಹುದೇ? ಅವರು ಯಾವುದೇ ತಪ್ಪು ಮಾಡದೇ, ಸಮರ್ಪಕ ವಿಚಾರಣೆ ನಡೆಸದೇ ಬಂಧಿಸಬಹುದೆ? ಸೈಪುಲ್ಲ ಎಂಬ ಪೊಲೀಸ್ ಅಧಿಕಾರಿ ಬೇಕಂತಲೇ ಕಿರುಕುಳ ನೀಡಿದ್ದಾರೆ. ಈ ರೀತಿ ಅಧಿಕಾರ ದುರ್ಬಳಕೆ ಮಾಡಿದ ನಂತರವೂ ಅವರಿಗೆ ಯಾವುದೇ ಶಿಕ್ಷೆ ಇಲ್ಲ ಏಕೆ? ಎಂದು ಅವರ ಗೆಳತಿ ನತಾಶಾ ಜಾವೇದ್ ಪ್ರಶ್ನಿಸಿದ್ದಾರೆ.

ನತಾಶಾರವರ ಪೋಸ್ಟ್ ಟ್ವಿಟರ್‌ನಲ್ಲಿ ವೈರಲ್ ಆಗಿದ್ದು, ತದನಂತರ ಬಹುತೇಕರು ಪಾಕ್ ಪೊಲೀಸ್ ದೌರ್ಜನ್ಯವನ್ನು ತೀವ್ರ ಪದಗಳಲ್ಲಿ ಟೀಕಿಸಿದ್ದಾರೆ. ಈ ದೇಶದಲ್ಲಿ ಕೂದಲು ಬೆಳೆಸುವುದು ಅಪರಾಧವೇ ಎಂದು ಹಲವರು ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: ಉತ್ತರ ಪ್ರದೇಶ: ಜೈಶ್ರೀರಾಮ್ ಘೋಷಣೆ ಕೂಗುವಂತೆ ಮುಸ್ಲಿಂ ವೃದ್ಧನ ಮೇಲೆ ಹಲ್ಲೆ, ಗಡ್ಡ ಕಿತ್ತು ಚಿತ್ರಹಿಂಸೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...