Homeಅಂತರಾಷ್ಟ್ರೀಯಉದ್ದ ಕೂದಲು ಬಿಟ್ಟ ಕಾರಣಕ್ಕೆ ಪಾಕಿಸ್ತಾನದ ಕಲಾವಿದನನ್ನು ಬಂಧಿಸಿದ ಪೊಲೀಸರು! ತೀವ್ರ ಖಂಡನೆ

ಉದ್ದ ಕೂದಲು ಬಿಟ್ಟ ಕಾರಣಕ್ಕೆ ಪಾಕಿಸ್ತಾನದ ಕಲಾವಿದನನ್ನು ಬಂಧಿಸಿದ ಪೊಲೀಸರು! ತೀವ್ರ ಖಂಡನೆ

ನತಾಶಾರವರ ಪೋಸ್ಟ್ ಟ್ವಿಟರ್‌ನಲ್ಲಿ ವೈರಲ್ ಆದ ನಂತರ ಬಹುತೇಕರು ಪಾಕ್ ಪೊಲೀಸ್ ದೌರ್ಜನ್ಯವನ್ನು ತೀವ್ರ ಪದಗಳಲ್ಲಿ ಟೀಕಿಸಿದ್ದಾರೆ. ಈ ದೇಶದಲ್ಲಿ ಕೂದಲು ಬೆಳೆಸುವುದು ಅಪರಾಧವೇ ಎಂದು ಹಲವರು ಪ್ರಶ್ನಿಸಿದ್ದಾರೆ.

- Advertisement -
- Advertisement -

ಪೊಲೀಸ್ ದೌರ್ಜನಕ್ಕೆ ಕಾರಣಕ್ಕೆ ಅಮಾಯಕರು ಶಿಕ್ಷೆ ಅನುಭವಿಸಿದ ಹಲವಾರು ಪ್ರಕರಣಗಳು ವರದಿಯಾಗಿವೆ. ಇತ್ತೀಚೆಗೆ ಕರ್ನಾಟಕದ ಮೂಡಿಗೆರೆ ಸೇರಿದಂತೆ ಹಲವು ಕಡೆ ಪೊಲೀಸ್ ದೌರ್ಜನ್ಯ ಘಟನೆಗಳು ನಡೆದಿವೆ. ‘ಅಧಿಕಾರದ ಅಹಂ’ ನಿಂದ ಪೊಲೀಸರು ಕಾನೂನು ಬಾಹಿರವಾಗಿ ನಡೆಸುವ ಕೃತ್ಯಗಳು ಒಂದೇ ದೇಶ, ಒಂದು ಪ್ರದೇಶಕ್ಕೆ ಸಿಮೀತವಾಗಿಲ್ಲ. ಅವು ವಿಶ್ವವ್ಯಾಪಿಯಾಗಿವೆ ಎಂಬುದನ್ನು ಪಾಕಿಸ್ತಾನದ ಈ ನಿದರ್ಶನ ರುಜುವಾತು ಮಾಡಿದೆ.

ಪಾಕಿಸ್ತಾನದ ಅಬುಜರ್ ಮಧು ಎಂಬ ಕಲಾವಿದನನ್ನು ಜೂನ್‌ನಲ್ಲಿ ಲಾಹೋರ್‌ನಲ್ಲಿ ಪಂಜಾಬ್ ಪೊಲೀಸರು ಬಂಧಿಸಿದ್ದರು ಮತ್ತು ಮಾಡೆಲ್ ಟೌನ್ ಪೊಲೀಸ್ ಠಾಣೆಯಲ್ಲಿ ಒಂದು ರಾತ್ರಿ ಬಂಧನದಲ್ಲಿಟ್ಟಿದ್ದರು. ಕಾರಣವೆಂದರೆ ಆತ ಉದ್ದ ಕೂದಲು ಬೆಳಿಸಿದ್ದಾಗಿತ್ತು ಎಂದು ಅವನ ಸ್ನೇಹಿತೆ, ಟ್ವಿಟರ್ ಬಳಕೆದಾರ ನತಾಶಾ ಜಾವೇದ್ ತಿಳಿಸಿದ್ದಾರೆ.

“ಅಬುಜರ್ ಒಬ್ಬ ಕಲಾವಿದ ಮತ್ತು ಶಿಕ್ಷಕ. ಅವರು ಕಲ್ಮಾ ಚಾಕ್ ಬಳಿ ರಿಕ್ಷಾಗಾಗಿ ಕಾಯುತ್ತಿದ್ದಾಗ ಪೊಲೀಸರು ಅವರ ಬಳಿ ಬಂದು ಗುರುತಿನ ಚೀಟಿಯನ್ನು ತೋರಿಸಲು ಕೇಳಿದ್ದಾರೆ. ಅವರು ಗುರುತಿನ ಚೀಟಿ ತೋರಿಸಿದರೂ ಸಹ ಅವರನ್ನು ಬಂಧಿಸಿ ಕರೆದೊಯ್ಯಲಾಯಿತು” ಎಂದು ಜಾವೇದ್ ಹೇಳಿದ್ದಾರೆ.

“ತನ್ನನ್ನು ಬಂಧಿಸಿದ್ದರ ಕಾರಣ ಕೇಳಿದರೆ “ನೀನು ದುರುಗುಟ್ಟುಕೊಂಡು ನೋಡುತ್ತಿದ್ದೆ. ಉದ್ದ ಕೂದಲು ಬೆಳಿಸಿದ್ದೆ. ಅಲ್ಲದೇ ಮುಂಜಾನೆ 3 ಗಂಟೆ ಸಮಯದಲ್ಲಿ ರಸ್ತೆಯಲ್ಲಿದ್ದೀಯ ಎಂಬ ಕಾರಣದಿಂದಲೂ ಬಂಧನ ಮಾಡಲಾಗಿದೆ ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾಗಿ ಅಬುಜಾರ್‌” ತಿಳಿಸಿದರು.

ನತಾಶಾ ಜಾವೇದ್ ಘಟನೆಯ ಕುರಿತು ದೀರ್ಘವಾಗಿ ಟ್ವಿಟರ್‌ನಲ್ಲಿ ಬರೆದಿದ್ದಾರೆ. ಅವರ ಪ್ರಕಾರ, “ಯಾವುದೇ ಕಾರಣವಿಲ್ಲದೆ ಅಬುಜಾರ್‌ನನ್ನು ಬಂಧಿಸಲಾಯಿತು. ಈ ಬಗ್ಗೆ ಅವರು ಪ್ರಶ್ನಿಸಿದಾಗ ಅವರಿಗೆ ಬೆದರಿಕೆ ಒಡ್ಡಲಾಯಿತು. ಅವರ ಮೇಲೆ ದೌರ್ಜನ್ಯವೆಸಗಿ ಒಂದು ರಾತ್ರಿ ಜೈಲಿನಲ್ಲಿ ಕಳೆಯುವಂತೆ ಮಾಡಲಾಯಿತು. ಮಾರನೇಯ ದಿನ ಸ್ನೇಹಿತರ ಮಧ್ಯಪ್ರವೇಶದಿಂದ ಅವರನ್ನು ಬಿಡುಗಡೆ ಮಾಡಲಾಯಿತು” ಎಂದು ಆರೋಪಿಸಿದ್ದಾರೆ.

ಅವರನ್ನು ಏಕೆ ಬಂಧಿಸಲಾಯಿತು? ಅಬುಜಾರ್‌ ರಿಕ್ಷಾಗೆ ಕಾಯುತ್ತಿದ್ದರೆ ಹೊರತು ಅವರು ಖಾಸಗಿ ಕಾರ್‌ನಲ್ಲಿ ಕುಳಿತಿರಲಿಲ್ಲ.. ಅವರು ಉದ್ದನೆಯ ಕೂದಲು ಬಿಟ್ಟಿದ್ದರು.. ಅವರು ಹೇಗೆ ಕಾಣುತ್ತಿದ್ದಾರೆ ಎಂಬ ಕಾರಣದಿಂದ ಅವರನ್ನು ಬಂಧಿಸಬಹುದೇ? ಅವರು ಯಾವುದೇ ತಪ್ಪು ಮಾಡದೇ, ಸಮರ್ಪಕ ವಿಚಾರಣೆ ನಡೆಸದೇ ಬಂಧಿಸಬಹುದೆ? ಸೈಪುಲ್ಲ ಎಂಬ ಪೊಲೀಸ್ ಅಧಿಕಾರಿ ಬೇಕಂತಲೇ ಕಿರುಕುಳ ನೀಡಿದ್ದಾರೆ. ಈ ರೀತಿ ಅಧಿಕಾರ ದುರ್ಬಳಕೆ ಮಾಡಿದ ನಂತರವೂ ಅವರಿಗೆ ಯಾವುದೇ ಶಿಕ್ಷೆ ಇಲ್ಲ ಏಕೆ? ಎಂದು ಅವರ ಗೆಳತಿ ನತಾಶಾ ಜಾವೇದ್ ಪ್ರಶ್ನಿಸಿದ್ದಾರೆ.

ನತಾಶಾರವರ ಪೋಸ್ಟ್ ಟ್ವಿಟರ್‌ನಲ್ಲಿ ವೈರಲ್ ಆಗಿದ್ದು, ತದನಂತರ ಬಹುತೇಕರು ಪಾಕ್ ಪೊಲೀಸ್ ದೌರ್ಜನ್ಯವನ್ನು ತೀವ್ರ ಪದಗಳಲ್ಲಿ ಟೀಕಿಸಿದ್ದಾರೆ. ಈ ದೇಶದಲ್ಲಿ ಕೂದಲು ಬೆಳೆಸುವುದು ಅಪರಾಧವೇ ಎಂದು ಹಲವರು ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: ಉತ್ತರ ಪ್ರದೇಶ: ಜೈಶ್ರೀರಾಮ್ ಘೋಷಣೆ ಕೂಗುವಂತೆ ಮುಸ್ಲಿಂ ವೃದ್ಧನ ಮೇಲೆ ಹಲ್ಲೆ, ಗಡ್ಡ ಕಿತ್ತು ಚಿತ್ರಹಿಂಸೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...