Homeಅಂತರಾಷ್ಟ್ರೀಯಉದ್ದ ಕೂದಲು ಬಿಟ್ಟ ಕಾರಣಕ್ಕೆ ಪಾಕಿಸ್ತಾನದ ಕಲಾವಿದನನ್ನು ಬಂಧಿಸಿದ ಪೊಲೀಸರು! ತೀವ್ರ ಖಂಡನೆ

ಉದ್ದ ಕೂದಲು ಬಿಟ್ಟ ಕಾರಣಕ್ಕೆ ಪಾಕಿಸ್ತಾನದ ಕಲಾವಿದನನ್ನು ಬಂಧಿಸಿದ ಪೊಲೀಸರು! ತೀವ್ರ ಖಂಡನೆ

ನತಾಶಾರವರ ಪೋಸ್ಟ್ ಟ್ವಿಟರ್‌ನಲ್ಲಿ ವೈರಲ್ ಆದ ನಂತರ ಬಹುತೇಕರು ಪಾಕ್ ಪೊಲೀಸ್ ದೌರ್ಜನ್ಯವನ್ನು ತೀವ್ರ ಪದಗಳಲ್ಲಿ ಟೀಕಿಸಿದ್ದಾರೆ. ಈ ದೇಶದಲ್ಲಿ ಕೂದಲು ಬೆಳೆಸುವುದು ಅಪರಾಧವೇ ಎಂದು ಹಲವರು ಪ್ರಶ್ನಿಸಿದ್ದಾರೆ.

- Advertisement -
- Advertisement -

ಪೊಲೀಸ್ ದೌರ್ಜನಕ್ಕೆ ಕಾರಣಕ್ಕೆ ಅಮಾಯಕರು ಶಿಕ್ಷೆ ಅನುಭವಿಸಿದ ಹಲವಾರು ಪ್ರಕರಣಗಳು ವರದಿಯಾಗಿವೆ. ಇತ್ತೀಚೆಗೆ ಕರ್ನಾಟಕದ ಮೂಡಿಗೆರೆ ಸೇರಿದಂತೆ ಹಲವು ಕಡೆ ಪೊಲೀಸ್ ದೌರ್ಜನ್ಯ ಘಟನೆಗಳು ನಡೆದಿವೆ. ‘ಅಧಿಕಾರದ ಅಹಂ’ ನಿಂದ ಪೊಲೀಸರು ಕಾನೂನು ಬಾಹಿರವಾಗಿ ನಡೆಸುವ ಕೃತ್ಯಗಳು ಒಂದೇ ದೇಶ, ಒಂದು ಪ್ರದೇಶಕ್ಕೆ ಸಿಮೀತವಾಗಿಲ್ಲ. ಅವು ವಿಶ್ವವ್ಯಾಪಿಯಾಗಿವೆ ಎಂಬುದನ್ನು ಪಾಕಿಸ್ತಾನದ ಈ ನಿದರ್ಶನ ರುಜುವಾತು ಮಾಡಿದೆ.

ಪಾಕಿಸ್ತಾನದ ಅಬುಜರ್ ಮಧು ಎಂಬ ಕಲಾವಿದನನ್ನು ಜೂನ್‌ನಲ್ಲಿ ಲಾಹೋರ್‌ನಲ್ಲಿ ಪಂಜಾಬ್ ಪೊಲೀಸರು ಬಂಧಿಸಿದ್ದರು ಮತ್ತು ಮಾಡೆಲ್ ಟೌನ್ ಪೊಲೀಸ್ ಠಾಣೆಯಲ್ಲಿ ಒಂದು ರಾತ್ರಿ ಬಂಧನದಲ್ಲಿಟ್ಟಿದ್ದರು. ಕಾರಣವೆಂದರೆ ಆತ ಉದ್ದ ಕೂದಲು ಬೆಳಿಸಿದ್ದಾಗಿತ್ತು ಎಂದು ಅವನ ಸ್ನೇಹಿತೆ, ಟ್ವಿಟರ್ ಬಳಕೆದಾರ ನತಾಶಾ ಜಾವೇದ್ ತಿಳಿಸಿದ್ದಾರೆ.

“ಅಬುಜರ್ ಒಬ್ಬ ಕಲಾವಿದ ಮತ್ತು ಶಿಕ್ಷಕ. ಅವರು ಕಲ್ಮಾ ಚಾಕ್ ಬಳಿ ರಿಕ್ಷಾಗಾಗಿ ಕಾಯುತ್ತಿದ್ದಾಗ ಪೊಲೀಸರು ಅವರ ಬಳಿ ಬಂದು ಗುರುತಿನ ಚೀಟಿಯನ್ನು ತೋರಿಸಲು ಕೇಳಿದ್ದಾರೆ. ಅವರು ಗುರುತಿನ ಚೀಟಿ ತೋರಿಸಿದರೂ ಸಹ ಅವರನ್ನು ಬಂಧಿಸಿ ಕರೆದೊಯ್ಯಲಾಯಿತು” ಎಂದು ಜಾವೇದ್ ಹೇಳಿದ್ದಾರೆ.

“ತನ್ನನ್ನು ಬಂಧಿಸಿದ್ದರ ಕಾರಣ ಕೇಳಿದರೆ “ನೀನು ದುರುಗುಟ್ಟುಕೊಂಡು ನೋಡುತ್ತಿದ್ದೆ. ಉದ್ದ ಕೂದಲು ಬೆಳಿಸಿದ್ದೆ. ಅಲ್ಲದೇ ಮುಂಜಾನೆ 3 ಗಂಟೆ ಸಮಯದಲ್ಲಿ ರಸ್ತೆಯಲ್ಲಿದ್ದೀಯ ಎಂಬ ಕಾರಣದಿಂದಲೂ ಬಂಧನ ಮಾಡಲಾಗಿದೆ ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾಗಿ ಅಬುಜಾರ್‌” ತಿಳಿಸಿದರು.

ನತಾಶಾ ಜಾವೇದ್ ಘಟನೆಯ ಕುರಿತು ದೀರ್ಘವಾಗಿ ಟ್ವಿಟರ್‌ನಲ್ಲಿ ಬರೆದಿದ್ದಾರೆ. ಅವರ ಪ್ರಕಾರ, “ಯಾವುದೇ ಕಾರಣವಿಲ್ಲದೆ ಅಬುಜಾರ್‌ನನ್ನು ಬಂಧಿಸಲಾಯಿತು. ಈ ಬಗ್ಗೆ ಅವರು ಪ್ರಶ್ನಿಸಿದಾಗ ಅವರಿಗೆ ಬೆದರಿಕೆ ಒಡ್ಡಲಾಯಿತು. ಅವರ ಮೇಲೆ ದೌರ್ಜನ್ಯವೆಸಗಿ ಒಂದು ರಾತ್ರಿ ಜೈಲಿನಲ್ಲಿ ಕಳೆಯುವಂತೆ ಮಾಡಲಾಯಿತು. ಮಾರನೇಯ ದಿನ ಸ್ನೇಹಿತರ ಮಧ್ಯಪ್ರವೇಶದಿಂದ ಅವರನ್ನು ಬಿಡುಗಡೆ ಮಾಡಲಾಯಿತು” ಎಂದು ಆರೋಪಿಸಿದ್ದಾರೆ.

ಅವರನ್ನು ಏಕೆ ಬಂಧಿಸಲಾಯಿತು? ಅಬುಜಾರ್‌ ರಿಕ್ಷಾಗೆ ಕಾಯುತ್ತಿದ್ದರೆ ಹೊರತು ಅವರು ಖಾಸಗಿ ಕಾರ್‌ನಲ್ಲಿ ಕುಳಿತಿರಲಿಲ್ಲ.. ಅವರು ಉದ್ದನೆಯ ಕೂದಲು ಬಿಟ್ಟಿದ್ದರು.. ಅವರು ಹೇಗೆ ಕಾಣುತ್ತಿದ್ದಾರೆ ಎಂಬ ಕಾರಣದಿಂದ ಅವರನ್ನು ಬಂಧಿಸಬಹುದೇ? ಅವರು ಯಾವುದೇ ತಪ್ಪು ಮಾಡದೇ, ಸಮರ್ಪಕ ವಿಚಾರಣೆ ನಡೆಸದೇ ಬಂಧಿಸಬಹುದೆ? ಸೈಪುಲ್ಲ ಎಂಬ ಪೊಲೀಸ್ ಅಧಿಕಾರಿ ಬೇಕಂತಲೇ ಕಿರುಕುಳ ನೀಡಿದ್ದಾರೆ. ಈ ರೀತಿ ಅಧಿಕಾರ ದುರ್ಬಳಕೆ ಮಾಡಿದ ನಂತರವೂ ಅವರಿಗೆ ಯಾವುದೇ ಶಿಕ್ಷೆ ಇಲ್ಲ ಏಕೆ? ಎಂದು ಅವರ ಗೆಳತಿ ನತಾಶಾ ಜಾವೇದ್ ಪ್ರಶ್ನಿಸಿದ್ದಾರೆ.

ನತಾಶಾರವರ ಪೋಸ್ಟ್ ಟ್ವಿಟರ್‌ನಲ್ಲಿ ವೈರಲ್ ಆಗಿದ್ದು, ತದನಂತರ ಬಹುತೇಕರು ಪಾಕ್ ಪೊಲೀಸ್ ದೌರ್ಜನ್ಯವನ್ನು ತೀವ್ರ ಪದಗಳಲ್ಲಿ ಟೀಕಿಸಿದ್ದಾರೆ. ಈ ದೇಶದಲ್ಲಿ ಕೂದಲು ಬೆಳೆಸುವುದು ಅಪರಾಧವೇ ಎಂದು ಹಲವರು ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: ಉತ್ತರ ಪ್ರದೇಶ: ಜೈಶ್ರೀರಾಮ್ ಘೋಷಣೆ ಕೂಗುವಂತೆ ಮುಸ್ಲಿಂ ವೃದ್ಧನ ಮೇಲೆ ಹಲ್ಲೆ, ಗಡ್ಡ ಕಿತ್ತು ಚಿತ್ರಹಿಂಸೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....