Homeಅಂತರಾಷ್ಟ್ರೀಯಉದ್ದ ಕೂದಲು ಬಿಟ್ಟ ಕಾರಣಕ್ಕೆ ಪಾಕಿಸ್ತಾನದ ಕಲಾವಿದನನ್ನು ಬಂಧಿಸಿದ ಪೊಲೀಸರು! ತೀವ್ರ ಖಂಡನೆ

ಉದ್ದ ಕೂದಲು ಬಿಟ್ಟ ಕಾರಣಕ್ಕೆ ಪಾಕಿಸ್ತಾನದ ಕಲಾವಿದನನ್ನು ಬಂಧಿಸಿದ ಪೊಲೀಸರು! ತೀವ್ರ ಖಂಡನೆ

ನತಾಶಾರವರ ಪೋಸ್ಟ್ ಟ್ವಿಟರ್‌ನಲ್ಲಿ ವೈರಲ್ ಆದ ನಂತರ ಬಹುತೇಕರು ಪಾಕ್ ಪೊಲೀಸ್ ದೌರ್ಜನ್ಯವನ್ನು ತೀವ್ರ ಪದಗಳಲ್ಲಿ ಟೀಕಿಸಿದ್ದಾರೆ. ಈ ದೇಶದಲ್ಲಿ ಕೂದಲು ಬೆಳೆಸುವುದು ಅಪರಾಧವೇ ಎಂದು ಹಲವರು ಪ್ರಶ್ನಿಸಿದ್ದಾರೆ.

- Advertisement -
- Advertisement -

ಪೊಲೀಸ್ ದೌರ್ಜನಕ್ಕೆ ಕಾರಣಕ್ಕೆ ಅಮಾಯಕರು ಶಿಕ್ಷೆ ಅನುಭವಿಸಿದ ಹಲವಾರು ಪ್ರಕರಣಗಳು ವರದಿಯಾಗಿವೆ. ಇತ್ತೀಚೆಗೆ ಕರ್ನಾಟಕದ ಮೂಡಿಗೆರೆ ಸೇರಿದಂತೆ ಹಲವು ಕಡೆ ಪೊಲೀಸ್ ದೌರ್ಜನ್ಯ ಘಟನೆಗಳು ನಡೆದಿವೆ. ‘ಅಧಿಕಾರದ ಅಹಂ’ ನಿಂದ ಪೊಲೀಸರು ಕಾನೂನು ಬಾಹಿರವಾಗಿ ನಡೆಸುವ ಕೃತ್ಯಗಳು ಒಂದೇ ದೇಶ, ಒಂದು ಪ್ರದೇಶಕ್ಕೆ ಸಿಮೀತವಾಗಿಲ್ಲ. ಅವು ವಿಶ್ವವ್ಯಾಪಿಯಾಗಿವೆ ಎಂಬುದನ್ನು ಪಾಕಿಸ್ತಾನದ ಈ ನಿದರ್ಶನ ರುಜುವಾತು ಮಾಡಿದೆ.

ಪಾಕಿಸ್ತಾನದ ಅಬುಜರ್ ಮಧು ಎಂಬ ಕಲಾವಿದನನ್ನು ಜೂನ್‌ನಲ್ಲಿ ಲಾಹೋರ್‌ನಲ್ಲಿ ಪಂಜಾಬ್ ಪೊಲೀಸರು ಬಂಧಿಸಿದ್ದರು ಮತ್ತು ಮಾಡೆಲ್ ಟೌನ್ ಪೊಲೀಸ್ ಠಾಣೆಯಲ್ಲಿ ಒಂದು ರಾತ್ರಿ ಬಂಧನದಲ್ಲಿಟ್ಟಿದ್ದರು. ಕಾರಣವೆಂದರೆ ಆತ ಉದ್ದ ಕೂದಲು ಬೆಳಿಸಿದ್ದಾಗಿತ್ತು ಎಂದು ಅವನ ಸ್ನೇಹಿತೆ, ಟ್ವಿಟರ್ ಬಳಕೆದಾರ ನತಾಶಾ ಜಾವೇದ್ ತಿಳಿಸಿದ್ದಾರೆ.

“ಅಬುಜರ್ ಒಬ್ಬ ಕಲಾವಿದ ಮತ್ತು ಶಿಕ್ಷಕ. ಅವರು ಕಲ್ಮಾ ಚಾಕ್ ಬಳಿ ರಿಕ್ಷಾಗಾಗಿ ಕಾಯುತ್ತಿದ್ದಾಗ ಪೊಲೀಸರು ಅವರ ಬಳಿ ಬಂದು ಗುರುತಿನ ಚೀಟಿಯನ್ನು ತೋರಿಸಲು ಕೇಳಿದ್ದಾರೆ. ಅವರು ಗುರುತಿನ ಚೀಟಿ ತೋರಿಸಿದರೂ ಸಹ ಅವರನ್ನು ಬಂಧಿಸಿ ಕರೆದೊಯ್ಯಲಾಯಿತು” ಎಂದು ಜಾವೇದ್ ಹೇಳಿದ್ದಾರೆ.

“ತನ್ನನ್ನು ಬಂಧಿಸಿದ್ದರ ಕಾರಣ ಕೇಳಿದರೆ “ನೀನು ದುರುಗುಟ್ಟುಕೊಂಡು ನೋಡುತ್ತಿದ್ದೆ. ಉದ್ದ ಕೂದಲು ಬೆಳಿಸಿದ್ದೆ. ಅಲ್ಲದೇ ಮುಂಜಾನೆ 3 ಗಂಟೆ ಸಮಯದಲ್ಲಿ ರಸ್ತೆಯಲ್ಲಿದ್ದೀಯ ಎಂಬ ಕಾರಣದಿಂದಲೂ ಬಂಧನ ಮಾಡಲಾಗಿದೆ ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾಗಿ ಅಬುಜಾರ್‌” ತಿಳಿಸಿದರು.

ನತಾಶಾ ಜಾವೇದ್ ಘಟನೆಯ ಕುರಿತು ದೀರ್ಘವಾಗಿ ಟ್ವಿಟರ್‌ನಲ್ಲಿ ಬರೆದಿದ್ದಾರೆ. ಅವರ ಪ್ರಕಾರ, “ಯಾವುದೇ ಕಾರಣವಿಲ್ಲದೆ ಅಬುಜಾರ್‌ನನ್ನು ಬಂಧಿಸಲಾಯಿತು. ಈ ಬಗ್ಗೆ ಅವರು ಪ್ರಶ್ನಿಸಿದಾಗ ಅವರಿಗೆ ಬೆದರಿಕೆ ಒಡ್ಡಲಾಯಿತು. ಅವರ ಮೇಲೆ ದೌರ್ಜನ್ಯವೆಸಗಿ ಒಂದು ರಾತ್ರಿ ಜೈಲಿನಲ್ಲಿ ಕಳೆಯುವಂತೆ ಮಾಡಲಾಯಿತು. ಮಾರನೇಯ ದಿನ ಸ್ನೇಹಿತರ ಮಧ್ಯಪ್ರವೇಶದಿಂದ ಅವರನ್ನು ಬಿಡುಗಡೆ ಮಾಡಲಾಯಿತು” ಎಂದು ಆರೋಪಿಸಿದ್ದಾರೆ.

ಅವರನ್ನು ಏಕೆ ಬಂಧಿಸಲಾಯಿತು? ಅಬುಜಾರ್‌ ರಿಕ್ಷಾಗೆ ಕಾಯುತ್ತಿದ್ದರೆ ಹೊರತು ಅವರು ಖಾಸಗಿ ಕಾರ್‌ನಲ್ಲಿ ಕುಳಿತಿರಲಿಲ್ಲ.. ಅವರು ಉದ್ದನೆಯ ಕೂದಲು ಬಿಟ್ಟಿದ್ದರು.. ಅವರು ಹೇಗೆ ಕಾಣುತ್ತಿದ್ದಾರೆ ಎಂಬ ಕಾರಣದಿಂದ ಅವರನ್ನು ಬಂಧಿಸಬಹುದೇ? ಅವರು ಯಾವುದೇ ತಪ್ಪು ಮಾಡದೇ, ಸಮರ್ಪಕ ವಿಚಾರಣೆ ನಡೆಸದೇ ಬಂಧಿಸಬಹುದೆ? ಸೈಪುಲ್ಲ ಎಂಬ ಪೊಲೀಸ್ ಅಧಿಕಾರಿ ಬೇಕಂತಲೇ ಕಿರುಕುಳ ನೀಡಿದ್ದಾರೆ. ಈ ರೀತಿ ಅಧಿಕಾರ ದುರ್ಬಳಕೆ ಮಾಡಿದ ನಂತರವೂ ಅವರಿಗೆ ಯಾವುದೇ ಶಿಕ್ಷೆ ಇಲ್ಲ ಏಕೆ? ಎಂದು ಅವರ ಗೆಳತಿ ನತಾಶಾ ಜಾವೇದ್ ಪ್ರಶ್ನಿಸಿದ್ದಾರೆ.

ನತಾಶಾರವರ ಪೋಸ್ಟ್ ಟ್ವಿಟರ್‌ನಲ್ಲಿ ವೈರಲ್ ಆಗಿದ್ದು, ತದನಂತರ ಬಹುತೇಕರು ಪಾಕ್ ಪೊಲೀಸ್ ದೌರ್ಜನ್ಯವನ್ನು ತೀವ್ರ ಪದಗಳಲ್ಲಿ ಟೀಕಿಸಿದ್ದಾರೆ. ಈ ದೇಶದಲ್ಲಿ ಕೂದಲು ಬೆಳೆಸುವುದು ಅಪರಾಧವೇ ಎಂದು ಹಲವರು ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: ಉತ್ತರ ಪ್ರದೇಶ: ಜೈಶ್ರೀರಾಮ್ ಘೋಷಣೆ ಕೂಗುವಂತೆ ಮುಸ್ಲಿಂ ವೃದ್ಧನ ಮೇಲೆ ಹಲ್ಲೆ, ಗಡ್ಡ ಕಿತ್ತು ಚಿತ್ರಹಿಂಸೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...