Homeಮುಖಪುಟಪಾಕಿಸ್ತಾನದ ಯುವತಿಗೆ ಚೆನ್ನೈನಲ್ಲಿ ಹೃದಯ ಕಸಿ: ದ್ವೇಷ ಕಾರಿದ ಕೆಲ ಬಲಪಂಥೀಯ 'ಎಕ್ಸ್‌' ಬಳಕೆದಾರರು

ಪಾಕಿಸ್ತಾನದ ಯುವತಿಗೆ ಚೆನ್ನೈನಲ್ಲಿ ಹೃದಯ ಕಸಿ: ದ್ವೇಷ ಕಾರಿದ ಕೆಲ ಬಲಪಂಥೀಯ ‘ಎಕ್ಸ್‌’ ಬಳಕೆದಾರರು

- Advertisement -
- Advertisement -

ಚೆನ್ನೈನಲ್ಲಿ ಪಾಕಿಸ್ತಾನದ ಪ್ರಜೆಯೋರ್ವರಿಗೆ ಹೃದಯ ಶಸ್ತ್ರಚಿಕಿತ್ಸೆ ನಡೆಸಿದ್ದಕ್ಕೆ ಕೆಲ ಬಲಪಂಥೀಯ ಸಾಮಾಜಿಕ ಮಾಧ್ಯಮ ಬಳಕೆದಾರರು ಆಕ್ರೋಶ ವ್ಯಕ್ತಪಡಿಸಿ ಪೋಸ್ಟ್‌ ಮಾಡಿದ್ದು, ಮಾನವೀಯತೆಯನ್ನೇ ಅಣಕಿಸುವಂತೆ ಮಾಡಿದೆ.

ಅಂಗಾಂಗ ದಾನಕ್ಕೆ ವಿದೇಶಿಯರಿಗೆ ಆದ್ಯತೆ ನೀಡಿದ್ದಕ್ಕಾಗಿ ಆರೋಗ್ಯ ವ್ಯವಸ್ಥೆಗೆ ಅವಮಾನ, ಪಾಕಿಸ್ತಾನದ ಪ್ರಜೆಯ ಮೇಲಿನ ಧಾರ್ಮಿಕ ಮತ್ತು ಪ್ರಾದೇಶಿಕ ದ್ವೇಷವನ್ನು ಪ್ರಚೋದಿಸುವುದು, ಚೆನ್ನೈನ ‘ಎನ್‌ಜಿಒ’ ಹೃದಯ ಕಸಿ ಶಸ್ತ್ರಚಿಕಿತ್ಸೆಗೆ ವೆಚ್ಚ ಭರಿಸಿದೆ ಎಂದು ಬಲಪಂಥೀಯ ಸಾಮಾಜಿಕ ಮಾಧ್ಯಮ ಬಳಕೆದಾರರು ಟೀಕಿಸಿರುವುದು ಕಂಡು ಬಂದಿದೆ.

ಇಲ್ಲಿ ನಾವು ಪಾಕಿಸ್ತಾನಿಯರಿಗೆ ನಮ್ಮ ಹೃದಯವನ್ನು ನೀಡುತ್ತಿದ್ದೇವೆ, ಆದರೆ ವೈಟಿಂಗ್‌ ಲಿಸ್ಟ್‌ನಲ್ಲಿದ್ದ ಭಾರತದ ಪ್ರಜೆಗೆ ಇದನ್ನು ನೀಡಬಹುದಿತ್ತು ಎಂದು ಎಕ್ಸ್‌ ಬಳಕೆದಾರರು ಬರೆದಿದ್ದಾರೆ.

ಅಂಗಗಳನ್ನು ಬಯಸುತ್ತಿರುವ ವಿದೇಶಿ ಪ್ರಜೆಗಳ ಪಟ್ಟಿಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ NOTTO ನೋಡಿಕೊಳ್ಳುತ್ತದೆ. ವೈಟಿಂಗ್‌ ಲಿಸ್ಟ್‌ನಲ್ಲಿ ಯಾವುದೇ ಭಾರತೀಯರು ಇಲ್ಲದಿದ್ದರೆ ಮಾತ್ರ ಅಂಗವನ್ನು ವಿದೇಶಿಯರಿಗೆ ಹಂಚಲಾಗುತ್ತದೆ. ಇದನ್ನು NOTTOನ ಮಾಜಿ ನಿರ್ದೇಶಕಿ ಡಾ. ವಸಂತಿ ರಮೇಶ್ ಅವರು 2018ರಲ್ಲಿ ದೃಢಪಡಿಸಿದ್ದರು.

ಪಾಕಿಸ್ತಾನದ 19 ವರ್ಷದ ಆಯೇಷಾ ರಶನ್ 2019ರಿಂದ NOTTOನ ವೈಟಿಂಗ್‌ ಲಿಸ್ಟ್‌ನಲ್ಲಿದ್ದರು. ಆಕೆ ಹೃದಯ ಕಸಿಗೆ ತನ್ನ ವಿನಂತಿಯನ್ನು ಸಲ್ಲಿಸಿದ ಐದು ವರ್ಷಗಳ ನಂತರ 2024ರ ಜನವರಿಯಲ್ಲಿ 69 ವರ್ಷದ ದೆಹಲಿ ಮೂಲದ ದಾನಿಯ ಹೃದಯವನ್ನು ಕಸಿಗೆ ಆಕೆಯನ್ನು ಆಯ್ಕೆ ಮಾಡಲಾಗಿತ್ತು. ಆಯೇಷಾ ಚಿಕಿತ್ಸೆಗಾಗಿ 2014 ರಲ್ಲಿ ಭಾರತಕ್ಕೆ ಭೇಟಿ ನೀಡಿದಾಗ ವೈದ್ಯರು ಅವಳಿಗೆ ಸಹಾಯ ಮಾಡಲು ಹೃದಯ ಪಂಪ್‌ನ್ನು ಅಳವಡಿಸಿದ್ದರು. ಆದರೆ ನಂತರ ಅದು ನಿಷ್ಕ್ರಿಯವಾಗಿತ್ತು.

ಆಯೇಷಾ ಅವರ ಶಸ್ತ್ರಚಿಕಿತ್ಸೆಗಾಗಿ ಹೃದಯವನ್ನು ದೆಹಲಿಗೆ ವಿಮಾನದಲ್ಲಿ ಸಾಗಿಸಲಾಯಿತು. ಚೆನ್ನೈ ಮೂಲದ ಎಂಜಿಎಂ ಹೆಲ್ತ್‌ಕೇರ್‌ನಲ್ಲಿ ಕಸಿ ಮಾಡಲಾಗಿದ್ದು, ಆಕೆಯ ಚಿಕಿತ್ಸಾ ವೆಚ್ಚವನ್ನು ಐಶ್ವರ್ಯ ಟ್ರಸ್ಟ್ ಎಂಬ ಎನ್‌ಜಿಒ ಭರಿಸಿತ್ತು. ಆಕೆಯ ಚಿಕಿತ್ಸಾ ಬಿಲ್ಲುಗಳನ್ನು ಪಾವತಿಸಲು ಕೆಲ ರೋಗಿಗಳು ಮತ್ತು ವೈದ್ಯರು ಸಹ ಸಹಾಯ ಮಾಡಿದ್ದರು.

ಈ ಕುರಿತು ಪ್ರತಿಕ್ರಿಯಿಸಿದ ಎಂಜಿಎಂ ಹೆಲ್ತ್‌ಕೇರ್‌ನ ವೈದ್ಯ ಕೆಜಿ ಸುರೇಶ್ ರಾವ್, ನಮಗೆ ರೋಗಿಗಳು-ರೋಗಿಗಳು. ನಾವು ಅವರ ಧರ್ಮ ಅಥವಾ ಅವರ ಜನ್ಮಸ್ಥಳವನ್ನು ನೋಡುವುದಿಲ್ಲ. ನಾವು ಸಾಧ್ಯವಿರುವ ಸಹಾಯವನ್ನು ಮಾಡುತ್ತೇವೆ. ಈ ಸಂದರ್ಭದಲ್ಲಿ ಅವಳು ಪಾಕಿಸ್ತಾನಿ ಅಥವಾ ಭಾರತೀಯ ಎಂದು ನಾವು ನೋಡಲಿಲ್ಲ. ಅವಳು ರೋಗಿ ಮತ್ತು ಚಿಕ್ಕ ಯುವತಿ ಎಂದು ನೋಡಿದೆವು ಎಂದು ಹೇಳಿದ್ದಾರೆ.

2019ರಿಂದ ಆಯೇಷಾಗೆ ಚಿಕಿತ್ಸೆ ನೀಡುತ್ತಿರುವ ಹಿರಿಯ ಹೃದಯ ಶಸ್ತ್ರಚಿಕಿತ್ಸಕ ಡಾ.ಕೆ.ಆರ್.ಬಾಲಕೃಷ್ಣನ್ ಮಾತನಾಡುತ್ತಾ, ಆಯೇಷಾ ಅವರ ತಾಯಿ ಒಂಟಿ ಪೋಷಕರಾಗಿದ್ದರು ಮತ್ತು ಮಗಳ ಚಿಕಿತ್ಸೆಯನ್ನು ಮುಂದುವರಿಸಲು ಕುಟುಂಬ ಬೇಕಾದಷ್ಟು ಸಂಪನ್ಮೂಲಗಳನ್ನು ಹೊಂದಿರಲಿಲ್ಲ ಎಂದು ಹೇಳಿದ್ದಾರೆ.

@colourSaffron ಎಂಬ ಎಕ್ಸ್‌ ಖಾತೆಯಲ್ಲಿ, ಭಾರತ ಏಕೆ ಉಚಿತ ಹೃದಯ ಕಸಿ ಮಾಡುತ್ತಿದೆ, ಈ ಕೃತಜ್ಞತೆಯಿಲ್ಲದ ಜನರಿಗಿಂತ ಹೆಚ್ಚಿನ ಅಗತ್ಯವಿರುವ ಅನೇಕ ಬಡವರು ಭಾರತದಲ್ಲಿದ್ದಾರೆ ಎಂದು ಬರೆಯಲಾಗಿದೆ.

ಮತ್ತೊಬ್ಬ ಬಳಕೆದಾರರಾದ @chaijeeevi, ಪಾವತಿ ಬಗ್ಗೆ ಹೇಳದೆ ಅವರು ನಮಗೆ ಚಿಕಿತ್ಸೆ ನೀಡುವ ಬಗ್ಗೆ ಮಾತನಾಡುವುದು ಕೂಡ ಇಲ್ಲ ಮತ್ತು ಇಲ್ಲಿ ಅವರು ಶತ್ರುಗಳಿಗೆ ಉಚಿತ ಚಿಕಿತ್ಸೆಯನ್ನು ನೀಡುತ್ತಿದ್ದಾರೆ ಎಂದು ಬರೆದುಕೊಂಡಿದ್ದಾರೆ.

ಭಾರತೀಯ ಸಾಮಾಜಿಕ ಮಾಧ್ಯಮ ಬಳಕೆದಾರರ ಈ ಪೋಸ್ಟ್‌ ಬಗ್ಗೆ ಪ್ರತಿಕ್ರಿಯಿಸಿದ @TheLiverDoc ಆನ್ ಎಕ್ಸ್ ಎಂದು ಕರೆಯಲ್ಪಡುವ ಡಾ ಸಿರಿಯಾಕ್ ಅಬ್ಬಿ ಫಿಲಿಪ್ಸ್, ಇದು ವೈದ್ಯಕೀಯ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿ. ಕಾಮೆಂಟ್‌ ಮಾಡುವ ವಿಭಾಗದಲ್ಲಿರುವ ಹೆಚ್ಚಿನ ಸಂಖ್ಯೆಯ ಜನರು ಮಾನವೀಯತೆಯನ್ನು ಅರ್ಥ  ಅರ್ಥಮಾಡಿಕೊಳ್ಳುವುದಿಲ್ಲ. ಇದು ವೈದ್ಯಕೀಯ ಉಪಚಾರದ ಮೂಲವಾಗಿದೆ. ಆರೋಗ್ಯ ಸೇವೆಯು ಸಾರ್ವತ್ರಿಕ ಹಕ್ಕಾಗಿದ್ದು, ನಕಾರಾತ್ಮಕವಾಗಿ ಕಾಮೆಂಟ್ ಮಾಡುವವರು ನಾಚಿಕೆಪಡಬೇಕು ಎಂದು ಹೇಳಿದ್ದಾರೆ.

ಇದನ್ನು ಓದಿ: ಬರಪರಿಹಾರ: ಮೋದಿಗೆ ಶ್ಲಾಘಿಸಿ ಕನ್ನಡಿಗರಿಂದ ಉಗಿಸಿಕೊಂಡ ಬಿಜೆಪಿ ನಾಯಕರು: ರಿಪೋರ್ಟ್ ಓದಿ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಬಿಕ್ಕಟ್ಟು| ’10 ಅಂಶಗಳ ಪ್ರಸ್ತಾವನೆಯ ಮೂರು ಷರತ್ತುಗಳನ್ನು ಉಲ್ಲಂಘಿಸಲಾಗಿದೆ’: ‘ಕದನ ವಿರಾಮ’ದ ಮರುದಿನ ಇರಾನ್ ಹೇಳಿಕೆ

ಮಂಗಳವಾರ ಒಪ್ಪಿಕೊಂಡ ಕದನ ವಿರಾಮದ ನಿಯಮಗಳನ್ನು ಅಮೆರಿಕ ಉಲ್ಲಂಘಿಸಿದೆ ಎಂದು ಇರಾನ್ ಸಂಸತ್ತಿನ ಸ್ಪೀಕರ್ ಎಂ.ಬಿ ಗಾಲಿಬಾಫ್ ಬುಧವಾರ ಆರೋಪಿಸಿದ್ದಾರೆ. ತಮ್ಮ ಅಧಿಕೃತ ಸಾಮಾಜಿಕ ಮಾಧ್ಯಮ  X ನಲ್ಲಿ ಈಬರೆದಿರುವ ಗಾಲಿಬಾಫ್, ಅಮೆರಿಕದ ಬಗ್ಗೆ...

ಬಂಗಾಳ ಚುನಾವಣೆ: ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಆರ್‌ಜಿ-ಕರ್ ಸಂತ್ರಸ್ತೆ ತಾಯಿ

ಕರ್ತವ್ಯದಲ್ಲಿರುವಾಗಲೇ ಅತ್ಯಾಚಾರಕ್ಕೊಳಗಾಗಿ ಸಾವನ್ನಪ್ಪಿದ ಆರ್‌ಜಿಕರ್ ಆಸ್ಪತ್ರೆಯ ವೈದ್ಯೆಯ ತಾಯಿ ರತ್ನಾ ದೇಬ್ನಾಥ್ ಅವರು ಪಾಣಿಹತಿಯ ಬಿಜೆಪಿ ಅಭ್ಯರ್ಥಿಯಾಗಿ ಗುರುವಾರ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ. ಅವರೊಂದಿಗೆ ಬಿಜೆಪಿಯ ಹಿರಿಯ ನಾಯಕಿ ಮತ್ತು ಮಾಜಿ ಕೇಂದ್ರ ಸಚಿವೆ...

‘ಮುಸ್ಲಿಮರನ್ನು ಮರುಳು ಮಾಡುವುದು ಸುಲಭ’: ಹುಮಾಯೂನ್ ಕಬೀರ್ ವಿಡಿಯೋ ವಿವಾದ: ತನಿಖೆಗೆ ಟಿಎಂಸಿ ಒತ್ತಾಯ

ಪಶ್ಚಿಮ ಬಂಗಾಳದಲ್ಲಿ ಗುರುವಾರ ರಾಜಕೀಯ ವಿವಾದ ಭುಗಿಲೆದ್ದಿದ್ದು, ಹುಮಾಯೂನ್ ಕಬೀರ್ ಅವರ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿದ್ದು, ಇದರಲ್ಲಿ ಅವರು ಹಿರಿಯ ಬಿಜೆಪಿ ನಾಯಕರೊಂದಿಗೆ ಸಂಪರ್ಕ ಹೊಂದಿದ್ದಾರೆ ಮತ್ತು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ...

ಲೆಬನಾನ್ ಮೇಲೆ ‘ಅಗತ್ಯವಿರುವಲ್ಲೆಲ್ಲಾ’ ದಾಳಿ ಮುಂದುವರಿಸುವುದಾಗಿ ಘೋಷಿಸಿದ ನೆತನ್ಯಾಹು; ಹಿಜ್ಬೊಲ್ಲಾದ ಉನ್ನತ ಅಧಿಕಾರಿ ಹತ್ಯೆ 

ಇಸ್ರೇಲ್, ಲೆಬನಾನ್ ಮೇಲೆ ದಾಳಿ ಮಾಡಿದ ಮರುದಿನ, ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಗುರುವಾರ, ಇರಾನ್ ಬೆಂಬಲಿತ ಹೆಜ್ಬೊಲ್ಲಾ ಮೇಲೆ "ಅಗತ್ಯವಿರುವಲ್ಲೆಲ್ಲಾ" ದಾಳಿ ಮುಂದುವರಿಸುವುದಾಗಿ ಘೋಷಿಸಿದ್ದಾರೆ. ಇಸ್ರೇಲಿ ಸೇನೆಯು ಗುರುವಾರ ದಕ್ಷಿಣ ಲೆಬನಾನ್‌ನಲ್ಲಿ ಮತ್ತಷ್ಟು...

ಬಾರಾಮತಿ ಉಪ ಚುನಾವಣಾ ಕಣದಿಂದ ಹಿಂದೆ ಸರಿದ ಕಾಂಗ್ರೆಸ್ ; ಸುನೇತ್ರಾ ಪವಾರ್ ಗೆಲುವು ಖಚಿತ

ಬಾರಾಮತಿ ಕ್ಷೇತ್ರದ ಉಪಚುನಾವಣಾ ಕಣದಿಂದ ಕಾಂಗ್ರೆಸ್ ಪಕ್ಷ ಹಿಂದೆ ಸರಿದ ಕಾರಣ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಸುನೇತ್ರಾ ಪವಾರ್ ಅವರ ಗೆಲುವು ಖಚಿತವಾಗಿದೆ. ಬಾರಾಮತಿ ವಿಮಾನ ದುರಂತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್...

ಗಿಗ್ ಕಾರ್ಮಿಕರ ಹಿನ್ನೆಲೆ ಪರಿಶೀಲನೆ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಸರ್ಕಾರ

ದಾಖಲೆರಹಿತ ವಲಸಿಗರ ಒಳನುಸುಳುವಿಕೆ ಆರೋಪದ ರಾಜಕೀಯ ವಿವಾದದ ನಡುವೆ, ಮುಂಬೈ ಮತ್ತು ಮುಂಬೈ ಮೆಟ್ರೋಪಾಲಿಟನ್ ಪ್ರದೇಶದಾದ್ಯಂತ (ಎಂಎಂಆರ್‌) ಲಕ್ಷಾಂತರ ಗಿಗ್ ಮತ್ತು ವಿತರಣಾ ಕಾರ್ಮಿಕರಿಗೆ ಕಠಿಣ, ಕಡ್ಡಾಯ ಪರಿಶೀಲನಾ ಪ್ರಕ್ರಿಯೆಯನ್ನು ಮಹಾರಾಷ್ಟ್ರ ಸರ್ಕಾರ...

ಪಶ್ಚಿಮ ಬಂಗಾಳ| ಎಸ್‌ಐಆರ್‌ ತೀರ್ಪಿನ ನಂತರ ಒಂದೇ ಗ್ರಾಮದ 3,700 ಹೆಸರುಗಳು ಡಿಲೀಟ್!

ಪಶ್ಚಿಮ ಬಂಗಾಳದ ಮಾಲ್ಡಾದ ಹಳ್ಳಿಯೊಂದರ ಸುಮಾರು 4,000 ಮತದಾರರ ಭವಿಷ್ಯವು ತೂಗುಯ್ಯಾಲೆಯಲ್ಲಿದೆ. ಮೊದಲ ಹಂತದ ಮತದಾರರ ಪಟ್ಟಿ ಈಗಾಗಲೇ ಸ್ಥಗಿತಗೊಂಡಿದ್ದು, ಇದರಿಂದಾಗಿ ಅವರು ರಾಜ್ಯಾದ್ಯಂತ ಲಕ್ಷಾಂತರ ಜನರಂತೆ ಏಪ್ರಿಲ್ 23 ರಂದು...

ದಲಿತ ಯುವಕನ ಕಸ್ಟಡಿ ಸಾವು ಆರೋಪ : ರಾಜ್ಯ ಸರ್ಕಾರ, ಪೊಲೀಸರು, ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ಹೈಕೋರ್ಟ್ ನೋಟಿಸ್

ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ (ಪಿಯುಸಿಎಲ್‌) ಕರ್ನಾಟಕ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್)ಗೆ ಸಂಬಂಧಿಸಿದಂತೆ ಹೈಕೋರ್ಟ್ ಬುಧವಾರ (ಏ.8) ರಾಜ್ಯ ಸರ್ಕಾರ, ಪೊಲೀಸರು ಮತ್ತು ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ...

ಇಬ್ಬರು ಮಕ್ಕಳ ಸಾವಿನ ಬಳಿಕ ಮಣಿಪುರದಲ್ಲಿ ಭುಗಿಲೆದ್ದ ಪ್ರತಿಭಟನೆ; ಅಶ್ರುವಾಯು ಪ್ರಯೋಗಿಸಿದ ಪೊಲೀಸರು

ಏಪ್ರಿಲ್ 7 ರಂದು ಬಿಷ್ಣುಪುರ ಜಿಲ್ಲೆಯಲ್ಲಿ ಬಾಂಬ್ ದಾಳಿಯಲ್ಲಿ ಇಬ್ಬರು ಅಪ್ರಾಪ್ತ ಮಕ್ಕಳು ಸಾವನ್ನಪ್ಪಿದ ನಂತರ ಕಣಿವೆ ರಾಜ್ಯದಲ್ಲಿ ವ್ಯಾಪಕ ಪ್ರತಿಭಟನೆಗಳು ಭುಗಿಲೆದ್ದ ಕಾರಣ ಬುಧವಾರ (ಏಪ್ರಿಲ್ 8) ಮಣಿಪುರದಾದ್ಯಂತ ಉದ್ವಿಗ್ನತೆ ಉಂಟಾಗಿತ್ತು....

ಮತಕ್ಕಾಗಿ ನಗದು ಪ್ರಕರಣ: ಪಾಲಕ್ಕಾಡ್‌ನಲ್ಲಿ ಎನ್‌ಡಿಎ ಕಾರ್ಯಕರ್ತರ ವಿರುದ್ಧ ಎಫ್‌ಐಆರ್

ಮತದಾನದ ಒಂದು ದಿನಕ್ಕೆ ಮುಂಚಿತವಾಗಿ ಮತದಾರರಿಗೆ ಲಂಚ ನೀಡಿದ ಆರೋಪದ ಮೇಲೆ ಪಾಲಕ್ಕಾಡ್ ಕ್ಷೇತ್ರದ ಬಿಜೆಪಿ ನೇತೃತ್ವದ ಎನ್‌ಡಿಎ ಪ್ರತಿನಿಧಿಗಳ ವಿರುದ್ಧ ಬುಧವಾರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಏಪ್ರಿಲ್ 8 ರಂದು ಬೆಳಿಗ್ಗೆ 10...