Homeಮುಖಪುಟಪಾಕಿಸ್ತಾನದ ಯುವತಿಗೆ ಚೆನ್ನೈನಲ್ಲಿ ಹೃದಯ ಕಸಿ: ದ್ವೇಷ ಕಾರಿದ ಕೆಲ ಬಲಪಂಥೀಯ 'ಎಕ್ಸ್‌' ಬಳಕೆದಾರರು

ಪಾಕಿಸ್ತಾನದ ಯುವತಿಗೆ ಚೆನ್ನೈನಲ್ಲಿ ಹೃದಯ ಕಸಿ: ದ್ವೇಷ ಕಾರಿದ ಕೆಲ ಬಲಪಂಥೀಯ ‘ಎಕ್ಸ್‌’ ಬಳಕೆದಾರರು

- Advertisement -
- Advertisement -

ಚೆನ್ನೈನಲ್ಲಿ ಪಾಕಿಸ್ತಾನದ ಪ್ರಜೆಯೋರ್ವರಿಗೆ ಹೃದಯ ಶಸ್ತ್ರಚಿಕಿತ್ಸೆ ನಡೆಸಿದ್ದಕ್ಕೆ ಕೆಲ ಬಲಪಂಥೀಯ ಸಾಮಾಜಿಕ ಮಾಧ್ಯಮ ಬಳಕೆದಾರರು ಆಕ್ರೋಶ ವ್ಯಕ್ತಪಡಿಸಿ ಪೋಸ್ಟ್‌ ಮಾಡಿದ್ದು, ಮಾನವೀಯತೆಯನ್ನೇ ಅಣಕಿಸುವಂತೆ ಮಾಡಿದೆ.

ಅಂಗಾಂಗ ದಾನಕ್ಕೆ ವಿದೇಶಿಯರಿಗೆ ಆದ್ಯತೆ ನೀಡಿದ್ದಕ್ಕಾಗಿ ಆರೋಗ್ಯ ವ್ಯವಸ್ಥೆಗೆ ಅವಮಾನ, ಪಾಕಿಸ್ತಾನದ ಪ್ರಜೆಯ ಮೇಲಿನ ಧಾರ್ಮಿಕ ಮತ್ತು ಪ್ರಾದೇಶಿಕ ದ್ವೇಷವನ್ನು ಪ್ರಚೋದಿಸುವುದು, ಚೆನ್ನೈನ ‘ಎನ್‌ಜಿಒ’ ಹೃದಯ ಕಸಿ ಶಸ್ತ್ರಚಿಕಿತ್ಸೆಗೆ ವೆಚ್ಚ ಭರಿಸಿದೆ ಎಂದು ಬಲಪಂಥೀಯ ಸಾಮಾಜಿಕ ಮಾಧ್ಯಮ ಬಳಕೆದಾರರು ಟೀಕಿಸಿರುವುದು ಕಂಡು ಬಂದಿದೆ.

ಇಲ್ಲಿ ನಾವು ಪಾಕಿಸ್ತಾನಿಯರಿಗೆ ನಮ್ಮ ಹೃದಯವನ್ನು ನೀಡುತ್ತಿದ್ದೇವೆ, ಆದರೆ ವೈಟಿಂಗ್‌ ಲಿಸ್ಟ್‌ನಲ್ಲಿದ್ದ ಭಾರತದ ಪ್ರಜೆಗೆ ಇದನ್ನು ನೀಡಬಹುದಿತ್ತು ಎಂದು ಎಕ್ಸ್‌ ಬಳಕೆದಾರರು ಬರೆದಿದ್ದಾರೆ.

ಅಂಗಗಳನ್ನು ಬಯಸುತ್ತಿರುವ ವಿದೇಶಿ ಪ್ರಜೆಗಳ ಪಟ್ಟಿಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ NOTTO ನೋಡಿಕೊಳ್ಳುತ್ತದೆ. ವೈಟಿಂಗ್‌ ಲಿಸ್ಟ್‌ನಲ್ಲಿ ಯಾವುದೇ ಭಾರತೀಯರು ಇಲ್ಲದಿದ್ದರೆ ಮಾತ್ರ ಅಂಗವನ್ನು ವಿದೇಶಿಯರಿಗೆ ಹಂಚಲಾಗುತ್ತದೆ. ಇದನ್ನು NOTTOನ ಮಾಜಿ ನಿರ್ದೇಶಕಿ ಡಾ. ವಸಂತಿ ರಮೇಶ್ ಅವರು 2018ರಲ್ಲಿ ದೃಢಪಡಿಸಿದ್ದರು.

ಪಾಕಿಸ್ತಾನದ 19 ವರ್ಷದ ಆಯೇಷಾ ರಶನ್ 2019ರಿಂದ NOTTOನ ವೈಟಿಂಗ್‌ ಲಿಸ್ಟ್‌ನಲ್ಲಿದ್ದರು. ಆಕೆ ಹೃದಯ ಕಸಿಗೆ ತನ್ನ ವಿನಂತಿಯನ್ನು ಸಲ್ಲಿಸಿದ ಐದು ವರ್ಷಗಳ ನಂತರ 2024ರ ಜನವರಿಯಲ್ಲಿ 69 ವರ್ಷದ ದೆಹಲಿ ಮೂಲದ ದಾನಿಯ ಹೃದಯವನ್ನು ಕಸಿಗೆ ಆಕೆಯನ್ನು ಆಯ್ಕೆ ಮಾಡಲಾಗಿತ್ತು. ಆಯೇಷಾ ಚಿಕಿತ್ಸೆಗಾಗಿ 2014 ರಲ್ಲಿ ಭಾರತಕ್ಕೆ ಭೇಟಿ ನೀಡಿದಾಗ ವೈದ್ಯರು ಅವಳಿಗೆ ಸಹಾಯ ಮಾಡಲು ಹೃದಯ ಪಂಪ್‌ನ್ನು ಅಳವಡಿಸಿದ್ದರು. ಆದರೆ ನಂತರ ಅದು ನಿಷ್ಕ್ರಿಯವಾಗಿತ್ತು.

ಆಯೇಷಾ ಅವರ ಶಸ್ತ್ರಚಿಕಿತ್ಸೆಗಾಗಿ ಹೃದಯವನ್ನು ದೆಹಲಿಗೆ ವಿಮಾನದಲ್ಲಿ ಸಾಗಿಸಲಾಯಿತು. ಚೆನ್ನೈ ಮೂಲದ ಎಂಜಿಎಂ ಹೆಲ್ತ್‌ಕೇರ್‌ನಲ್ಲಿ ಕಸಿ ಮಾಡಲಾಗಿದ್ದು, ಆಕೆಯ ಚಿಕಿತ್ಸಾ ವೆಚ್ಚವನ್ನು ಐಶ್ವರ್ಯ ಟ್ರಸ್ಟ್ ಎಂಬ ಎನ್‌ಜಿಒ ಭರಿಸಿತ್ತು. ಆಕೆಯ ಚಿಕಿತ್ಸಾ ಬಿಲ್ಲುಗಳನ್ನು ಪಾವತಿಸಲು ಕೆಲ ರೋಗಿಗಳು ಮತ್ತು ವೈದ್ಯರು ಸಹ ಸಹಾಯ ಮಾಡಿದ್ದರು.

ಈ ಕುರಿತು ಪ್ರತಿಕ್ರಿಯಿಸಿದ ಎಂಜಿಎಂ ಹೆಲ್ತ್‌ಕೇರ್‌ನ ವೈದ್ಯ ಕೆಜಿ ಸುರೇಶ್ ರಾವ್, ನಮಗೆ ರೋಗಿಗಳು-ರೋಗಿಗಳು. ನಾವು ಅವರ ಧರ್ಮ ಅಥವಾ ಅವರ ಜನ್ಮಸ್ಥಳವನ್ನು ನೋಡುವುದಿಲ್ಲ. ನಾವು ಸಾಧ್ಯವಿರುವ ಸಹಾಯವನ್ನು ಮಾಡುತ್ತೇವೆ. ಈ ಸಂದರ್ಭದಲ್ಲಿ ಅವಳು ಪಾಕಿಸ್ತಾನಿ ಅಥವಾ ಭಾರತೀಯ ಎಂದು ನಾವು ನೋಡಲಿಲ್ಲ. ಅವಳು ರೋಗಿ ಮತ್ತು ಚಿಕ್ಕ ಯುವತಿ ಎಂದು ನೋಡಿದೆವು ಎಂದು ಹೇಳಿದ್ದಾರೆ.

2019ರಿಂದ ಆಯೇಷಾಗೆ ಚಿಕಿತ್ಸೆ ನೀಡುತ್ತಿರುವ ಹಿರಿಯ ಹೃದಯ ಶಸ್ತ್ರಚಿಕಿತ್ಸಕ ಡಾ.ಕೆ.ಆರ್.ಬಾಲಕೃಷ್ಣನ್ ಮಾತನಾಡುತ್ತಾ, ಆಯೇಷಾ ಅವರ ತಾಯಿ ಒಂಟಿ ಪೋಷಕರಾಗಿದ್ದರು ಮತ್ತು ಮಗಳ ಚಿಕಿತ್ಸೆಯನ್ನು ಮುಂದುವರಿಸಲು ಕುಟುಂಬ ಬೇಕಾದಷ್ಟು ಸಂಪನ್ಮೂಲಗಳನ್ನು ಹೊಂದಿರಲಿಲ್ಲ ಎಂದು ಹೇಳಿದ್ದಾರೆ.

@colourSaffron ಎಂಬ ಎಕ್ಸ್‌ ಖಾತೆಯಲ್ಲಿ, ಭಾರತ ಏಕೆ ಉಚಿತ ಹೃದಯ ಕಸಿ ಮಾಡುತ್ತಿದೆ, ಈ ಕೃತಜ್ಞತೆಯಿಲ್ಲದ ಜನರಿಗಿಂತ ಹೆಚ್ಚಿನ ಅಗತ್ಯವಿರುವ ಅನೇಕ ಬಡವರು ಭಾರತದಲ್ಲಿದ್ದಾರೆ ಎಂದು ಬರೆಯಲಾಗಿದೆ.

ಮತ್ತೊಬ್ಬ ಬಳಕೆದಾರರಾದ @chaijeeevi, ಪಾವತಿ ಬಗ್ಗೆ ಹೇಳದೆ ಅವರು ನಮಗೆ ಚಿಕಿತ್ಸೆ ನೀಡುವ ಬಗ್ಗೆ ಮಾತನಾಡುವುದು ಕೂಡ ಇಲ್ಲ ಮತ್ತು ಇಲ್ಲಿ ಅವರು ಶತ್ರುಗಳಿಗೆ ಉಚಿತ ಚಿಕಿತ್ಸೆಯನ್ನು ನೀಡುತ್ತಿದ್ದಾರೆ ಎಂದು ಬರೆದುಕೊಂಡಿದ್ದಾರೆ.

ಭಾರತೀಯ ಸಾಮಾಜಿಕ ಮಾಧ್ಯಮ ಬಳಕೆದಾರರ ಈ ಪೋಸ್ಟ್‌ ಬಗ್ಗೆ ಪ್ರತಿಕ್ರಿಯಿಸಿದ @TheLiverDoc ಆನ್ ಎಕ್ಸ್ ಎಂದು ಕರೆಯಲ್ಪಡುವ ಡಾ ಸಿರಿಯಾಕ್ ಅಬ್ಬಿ ಫಿಲಿಪ್ಸ್, ಇದು ವೈದ್ಯಕೀಯ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿ. ಕಾಮೆಂಟ್‌ ಮಾಡುವ ವಿಭಾಗದಲ್ಲಿರುವ ಹೆಚ್ಚಿನ ಸಂಖ್ಯೆಯ ಜನರು ಮಾನವೀಯತೆಯನ್ನು ಅರ್ಥ  ಅರ್ಥಮಾಡಿಕೊಳ್ಳುವುದಿಲ್ಲ. ಇದು ವೈದ್ಯಕೀಯ ಉಪಚಾರದ ಮೂಲವಾಗಿದೆ. ಆರೋಗ್ಯ ಸೇವೆಯು ಸಾರ್ವತ್ರಿಕ ಹಕ್ಕಾಗಿದ್ದು, ನಕಾರಾತ್ಮಕವಾಗಿ ಕಾಮೆಂಟ್ ಮಾಡುವವರು ನಾಚಿಕೆಪಡಬೇಕು ಎಂದು ಹೇಳಿದ್ದಾರೆ.

ಇದನ್ನು ಓದಿ: ಬರಪರಿಹಾರ: ಮೋದಿಗೆ ಶ್ಲಾಘಿಸಿ ಕನ್ನಡಿಗರಿಂದ ಉಗಿಸಿಕೊಂಡ ಬಿಜೆಪಿ ನಾಯಕರು: ರಿಪೋರ್ಟ್ ಓದಿ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...