Homeಮುಖಪುಟಪಾಕಿಸ್ತಾನದ ಯುವತಿಗೆ ಚೆನ್ನೈನಲ್ಲಿ ಹೃದಯ ಕಸಿ: ದ್ವೇಷ ಕಾರಿದ ಕೆಲ ಬಲಪಂಥೀಯ 'ಎಕ್ಸ್‌' ಬಳಕೆದಾರರು

ಪಾಕಿಸ್ತಾನದ ಯುವತಿಗೆ ಚೆನ್ನೈನಲ್ಲಿ ಹೃದಯ ಕಸಿ: ದ್ವೇಷ ಕಾರಿದ ಕೆಲ ಬಲಪಂಥೀಯ ‘ಎಕ್ಸ್‌’ ಬಳಕೆದಾರರು

- Advertisement -
- Advertisement -

ಚೆನ್ನೈನಲ್ಲಿ ಪಾಕಿಸ್ತಾನದ ಪ್ರಜೆಯೋರ್ವರಿಗೆ ಹೃದಯ ಶಸ್ತ್ರಚಿಕಿತ್ಸೆ ನಡೆಸಿದ್ದಕ್ಕೆ ಕೆಲ ಬಲಪಂಥೀಯ ಸಾಮಾಜಿಕ ಮಾಧ್ಯಮ ಬಳಕೆದಾರರು ಆಕ್ರೋಶ ವ್ಯಕ್ತಪಡಿಸಿ ಪೋಸ್ಟ್‌ ಮಾಡಿದ್ದು, ಮಾನವೀಯತೆಯನ್ನೇ ಅಣಕಿಸುವಂತೆ ಮಾಡಿದೆ.

ಅಂಗಾಂಗ ದಾನಕ್ಕೆ ವಿದೇಶಿಯರಿಗೆ ಆದ್ಯತೆ ನೀಡಿದ್ದಕ್ಕಾಗಿ ಆರೋಗ್ಯ ವ್ಯವಸ್ಥೆಗೆ ಅವಮಾನ, ಪಾಕಿಸ್ತಾನದ ಪ್ರಜೆಯ ಮೇಲಿನ ಧಾರ್ಮಿಕ ಮತ್ತು ಪ್ರಾದೇಶಿಕ ದ್ವೇಷವನ್ನು ಪ್ರಚೋದಿಸುವುದು, ಚೆನ್ನೈನ ‘ಎನ್‌ಜಿಒ’ ಹೃದಯ ಕಸಿ ಶಸ್ತ್ರಚಿಕಿತ್ಸೆಗೆ ವೆಚ್ಚ ಭರಿಸಿದೆ ಎಂದು ಬಲಪಂಥೀಯ ಸಾಮಾಜಿಕ ಮಾಧ್ಯಮ ಬಳಕೆದಾರರು ಟೀಕಿಸಿರುವುದು ಕಂಡು ಬಂದಿದೆ.

ಇಲ್ಲಿ ನಾವು ಪಾಕಿಸ್ತಾನಿಯರಿಗೆ ನಮ್ಮ ಹೃದಯವನ್ನು ನೀಡುತ್ತಿದ್ದೇವೆ, ಆದರೆ ವೈಟಿಂಗ್‌ ಲಿಸ್ಟ್‌ನಲ್ಲಿದ್ದ ಭಾರತದ ಪ್ರಜೆಗೆ ಇದನ್ನು ನೀಡಬಹುದಿತ್ತು ಎಂದು ಎಕ್ಸ್‌ ಬಳಕೆದಾರರು ಬರೆದಿದ್ದಾರೆ.

ಅಂಗಗಳನ್ನು ಬಯಸುತ್ತಿರುವ ವಿದೇಶಿ ಪ್ರಜೆಗಳ ಪಟ್ಟಿಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ NOTTO ನೋಡಿಕೊಳ್ಳುತ್ತದೆ. ವೈಟಿಂಗ್‌ ಲಿಸ್ಟ್‌ನಲ್ಲಿ ಯಾವುದೇ ಭಾರತೀಯರು ಇಲ್ಲದಿದ್ದರೆ ಮಾತ್ರ ಅಂಗವನ್ನು ವಿದೇಶಿಯರಿಗೆ ಹಂಚಲಾಗುತ್ತದೆ. ಇದನ್ನು NOTTOನ ಮಾಜಿ ನಿರ್ದೇಶಕಿ ಡಾ. ವಸಂತಿ ರಮೇಶ್ ಅವರು 2018ರಲ್ಲಿ ದೃಢಪಡಿಸಿದ್ದರು.

ಪಾಕಿಸ್ತಾನದ 19 ವರ್ಷದ ಆಯೇಷಾ ರಶನ್ 2019ರಿಂದ NOTTOನ ವೈಟಿಂಗ್‌ ಲಿಸ್ಟ್‌ನಲ್ಲಿದ್ದರು. ಆಕೆ ಹೃದಯ ಕಸಿಗೆ ತನ್ನ ವಿನಂತಿಯನ್ನು ಸಲ್ಲಿಸಿದ ಐದು ವರ್ಷಗಳ ನಂತರ 2024ರ ಜನವರಿಯಲ್ಲಿ 69 ವರ್ಷದ ದೆಹಲಿ ಮೂಲದ ದಾನಿಯ ಹೃದಯವನ್ನು ಕಸಿಗೆ ಆಕೆಯನ್ನು ಆಯ್ಕೆ ಮಾಡಲಾಗಿತ್ತು. ಆಯೇಷಾ ಚಿಕಿತ್ಸೆಗಾಗಿ 2014 ರಲ್ಲಿ ಭಾರತಕ್ಕೆ ಭೇಟಿ ನೀಡಿದಾಗ ವೈದ್ಯರು ಅವಳಿಗೆ ಸಹಾಯ ಮಾಡಲು ಹೃದಯ ಪಂಪ್‌ನ್ನು ಅಳವಡಿಸಿದ್ದರು. ಆದರೆ ನಂತರ ಅದು ನಿಷ್ಕ್ರಿಯವಾಗಿತ್ತು.

ಆಯೇಷಾ ಅವರ ಶಸ್ತ್ರಚಿಕಿತ್ಸೆಗಾಗಿ ಹೃದಯವನ್ನು ದೆಹಲಿಗೆ ವಿಮಾನದಲ್ಲಿ ಸಾಗಿಸಲಾಯಿತು. ಚೆನ್ನೈ ಮೂಲದ ಎಂಜಿಎಂ ಹೆಲ್ತ್‌ಕೇರ್‌ನಲ್ಲಿ ಕಸಿ ಮಾಡಲಾಗಿದ್ದು, ಆಕೆಯ ಚಿಕಿತ್ಸಾ ವೆಚ್ಚವನ್ನು ಐಶ್ವರ್ಯ ಟ್ರಸ್ಟ್ ಎಂಬ ಎನ್‌ಜಿಒ ಭರಿಸಿತ್ತು. ಆಕೆಯ ಚಿಕಿತ್ಸಾ ಬಿಲ್ಲುಗಳನ್ನು ಪಾವತಿಸಲು ಕೆಲ ರೋಗಿಗಳು ಮತ್ತು ವೈದ್ಯರು ಸಹ ಸಹಾಯ ಮಾಡಿದ್ದರು.

ಈ ಕುರಿತು ಪ್ರತಿಕ್ರಿಯಿಸಿದ ಎಂಜಿಎಂ ಹೆಲ್ತ್‌ಕೇರ್‌ನ ವೈದ್ಯ ಕೆಜಿ ಸುರೇಶ್ ರಾವ್, ನಮಗೆ ರೋಗಿಗಳು-ರೋಗಿಗಳು. ನಾವು ಅವರ ಧರ್ಮ ಅಥವಾ ಅವರ ಜನ್ಮಸ್ಥಳವನ್ನು ನೋಡುವುದಿಲ್ಲ. ನಾವು ಸಾಧ್ಯವಿರುವ ಸಹಾಯವನ್ನು ಮಾಡುತ್ತೇವೆ. ಈ ಸಂದರ್ಭದಲ್ಲಿ ಅವಳು ಪಾಕಿಸ್ತಾನಿ ಅಥವಾ ಭಾರತೀಯ ಎಂದು ನಾವು ನೋಡಲಿಲ್ಲ. ಅವಳು ರೋಗಿ ಮತ್ತು ಚಿಕ್ಕ ಯುವತಿ ಎಂದು ನೋಡಿದೆವು ಎಂದು ಹೇಳಿದ್ದಾರೆ.

2019ರಿಂದ ಆಯೇಷಾಗೆ ಚಿಕಿತ್ಸೆ ನೀಡುತ್ತಿರುವ ಹಿರಿಯ ಹೃದಯ ಶಸ್ತ್ರಚಿಕಿತ್ಸಕ ಡಾ.ಕೆ.ಆರ್.ಬಾಲಕೃಷ್ಣನ್ ಮಾತನಾಡುತ್ತಾ, ಆಯೇಷಾ ಅವರ ತಾಯಿ ಒಂಟಿ ಪೋಷಕರಾಗಿದ್ದರು ಮತ್ತು ಮಗಳ ಚಿಕಿತ್ಸೆಯನ್ನು ಮುಂದುವರಿಸಲು ಕುಟುಂಬ ಬೇಕಾದಷ್ಟು ಸಂಪನ್ಮೂಲಗಳನ್ನು ಹೊಂದಿರಲಿಲ್ಲ ಎಂದು ಹೇಳಿದ್ದಾರೆ.

@colourSaffron ಎಂಬ ಎಕ್ಸ್‌ ಖಾತೆಯಲ್ಲಿ, ಭಾರತ ಏಕೆ ಉಚಿತ ಹೃದಯ ಕಸಿ ಮಾಡುತ್ತಿದೆ, ಈ ಕೃತಜ್ಞತೆಯಿಲ್ಲದ ಜನರಿಗಿಂತ ಹೆಚ್ಚಿನ ಅಗತ್ಯವಿರುವ ಅನೇಕ ಬಡವರು ಭಾರತದಲ್ಲಿದ್ದಾರೆ ಎಂದು ಬರೆಯಲಾಗಿದೆ.

ಮತ್ತೊಬ್ಬ ಬಳಕೆದಾರರಾದ @chaijeeevi, ಪಾವತಿ ಬಗ್ಗೆ ಹೇಳದೆ ಅವರು ನಮಗೆ ಚಿಕಿತ್ಸೆ ನೀಡುವ ಬಗ್ಗೆ ಮಾತನಾಡುವುದು ಕೂಡ ಇಲ್ಲ ಮತ್ತು ಇಲ್ಲಿ ಅವರು ಶತ್ರುಗಳಿಗೆ ಉಚಿತ ಚಿಕಿತ್ಸೆಯನ್ನು ನೀಡುತ್ತಿದ್ದಾರೆ ಎಂದು ಬರೆದುಕೊಂಡಿದ್ದಾರೆ.

ಭಾರತೀಯ ಸಾಮಾಜಿಕ ಮಾಧ್ಯಮ ಬಳಕೆದಾರರ ಈ ಪೋಸ್ಟ್‌ ಬಗ್ಗೆ ಪ್ರತಿಕ್ರಿಯಿಸಿದ @TheLiverDoc ಆನ್ ಎಕ್ಸ್ ಎಂದು ಕರೆಯಲ್ಪಡುವ ಡಾ ಸಿರಿಯಾಕ್ ಅಬ್ಬಿ ಫಿಲಿಪ್ಸ್, ಇದು ವೈದ್ಯಕೀಯ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿ. ಕಾಮೆಂಟ್‌ ಮಾಡುವ ವಿಭಾಗದಲ್ಲಿರುವ ಹೆಚ್ಚಿನ ಸಂಖ್ಯೆಯ ಜನರು ಮಾನವೀಯತೆಯನ್ನು ಅರ್ಥ  ಅರ್ಥಮಾಡಿಕೊಳ್ಳುವುದಿಲ್ಲ. ಇದು ವೈದ್ಯಕೀಯ ಉಪಚಾರದ ಮೂಲವಾಗಿದೆ. ಆರೋಗ್ಯ ಸೇವೆಯು ಸಾರ್ವತ್ರಿಕ ಹಕ್ಕಾಗಿದ್ದು, ನಕಾರಾತ್ಮಕವಾಗಿ ಕಾಮೆಂಟ್ ಮಾಡುವವರು ನಾಚಿಕೆಪಡಬೇಕು ಎಂದು ಹೇಳಿದ್ದಾರೆ.

ಇದನ್ನು ಓದಿ: ಬರಪರಿಹಾರ: ಮೋದಿಗೆ ಶ್ಲಾಘಿಸಿ ಕನ್ನಡಿಗರಿಂದ ಉಗಿಸಿಕೊಂಡ ಬಿಜೆಪಿ ನಾಯಕರು: ರಿಪೋರ್ಟ್ ಓದಿ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...