Homeಮುಖಪುಟಪಾಕಿಸ್ತಾನದ ಯುವತಿಗೆ ಚೆನ್ನೈನಲ್ಲಿ ಹೃದಯ ಕಸಿ: ದ್ವೇಷ ಕಾರಿದ ಕೆಲ ಬಲಪಂಥೀಯ 'ಎಕ್ಸ್‌' ಬಳಕೆದಾರರು

ಪಾಕಿಸ್ತಾನದ ಯುವತಿಗೆ ಚೆನ್ನೈನಲ್ಲಿ ಹೃದಯ ಕಸಿ: ದ್ವೇಷ ಕಾರಿದ ಕೆಲ ಬಲಪಂಥೀಯ ‘ಎಕ್ಸ್‌’ ಬಳಕೆದಾರರು

- Advertisement -
- Advertisement -

ಚೆನ್ನೈನಲ್ಲಿ ಪಾಕಿಸ್ತಾನದ ಪ್ರಜೆಯೋರ್ವರಿಗೆ ಹೃದಯ ಶಸ್ತ್ರಚಿಕಿತ್ಸೆ ನಡೆಸಿದ್ದಕ್ಕೆ ಕೆಲ ಬಲಪಂಥೀಯ ಸಾಮಾಜಿಕ ಮಾಧ್ಯಮ ಬಳಕೆದಾರರು ಆಕ್ರೋಶ ವ್ಯಕ್ತಪಡಿಸಿ ಪೋಸ್ಟ್‌ ಮಾಡಿದ್ದು, ಮಾನವೀಯತೆಯನ್ನೇ ಅಣಕಿಸುವಂತೆ ಮಾಡಿದೆ.

ಅಂಗಾಂಗ ದಾನಕ್ಕೆ ವಿದೇಶಿಯರಿಗೆ ಆದ್ಯತೆ ನೀಡಿದ್ದಕ್ಕಾಗಿ ಆರೋಗ್ಯ ವ್ಯವಸ್ಥೆಗೆ ಅವಮಾನ, ಪಾಕಿಸ್ತಾನದ ಪ್ರಜೆಯ ಮೇಲಿನ ಧಾರ್ಮಿಕ ಮತ್ತು ಪ್ರಾದೇಶಿಕ ದ್ವೇಷವನ್ನು ಪ್ರಚೋದಿಸುವುದು, ಚೆನ್ನೈನ ‘ಎನ್‌ಜಿಒ’ ಹೃದಯ ಕಸಿ ಶಸ್ತ್ರಚಿಕಿತ್ಸೆಗೆ ವೆಚ್ಚ ಭರಿಸಿದೆ ಎಂದು ಬಲಪಂಥೀಯ ಸಾಮಾಜಿಕ ಮಾಧ್ಯಮ ಬಳಕೆದಾರರು ಟೀಕಿಸಿರುವುದು ಕಂಡು ಬಂದಿದೆ.

ಇಲ್ಲಿ ನಾವು ಪಾಕಿಸ್ತಾನಿಯರಿಗೆ ನಮ್ಮ ಹೃದಯವನ್ನು ನೀಡುತ್ತಿದ್ದೇವೆ, ಆದರೆ ವೈಟಿಂಗ್‌ ಲಿಸ್ಟ್‌ನಲ್ಲಿದ್ದ ಭಾರತದ ಪ್ರಜೆಗೆ ಇದನ್ನು ನೀಡಬಹುದಿತ್ತು ಎಂದು ಎಕ್ಸ್‌ ಬಳಕೆದಾರರು ಬರೆದಿದ್ದಾರೆ.

ಅಂಗಗಳನ್ನು ಬಯಸುತ್ತಿರುವ ವಿದೇಶಿ ಪ್ರಜೆಗಳ ಪಟ್ಟಿಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ NOTTO ನೋಡಿಕೊಳ್ಳುತ್ತದೆ. ವೈಟಿಂಗ್‌ ಲಿಸ್ಟ್‌ನಲ್ಲಿ ಯಾವುದೇ ಭಾರತೀಯರು ಇಲ್ಲದಿದ್ದರೆ ಮಾತ್ರ ಅಂಗವನ್ನು ವಿದೇಶಿಯರಿಗೆ ಹಂಚಲಾಗುತ್ತದೆ. ಇದನ್ನು NOTTOನ ಮಾಜಿ ನಿರ್ದೇಶಕಿ ಡಾ. ವಸಂತಿ ರಮೇಶ್ ಅವರು 2018ರಲ್ಲಿ ದೃಢಪಡಿಸಿದ್ದರು.

ಪಾಕಿಸ್ತಾನದ 19 ವರ್ಷದ ಆಯೇಷಾ ರಶನ್ 2019ರಿಂದ NOTTOನ ವೈಟಿಂಗ್‌ ಲಿಸ್ಟ್‌ನಲ್ಲಿದ್ದರು. ಆಕೆ ಹೃದಯ ಕಸಿಗೆ ತನ್ನ ವಿನಂತಿಯನ್ನು ಸಲ್ಲಿಸಿದ ಐದು ವರ್ಷಗಳ ನಂತರ 2024ರ ಜನವರಿಯಲ್ಲಿ 69 ವರ್ಷದ ದೆಹಲಿ ಮೂಲದ ದಾನಿಯ ಹೃದಯವನ್ನು ಕಸಿಗೆ ಆಕೆಯನ್ನು ಆಯ್ಕೆ ಮಾಡಲಾಗಿತ್ತು. ಆಯೇಷಾ ಚಿಕಿತ್ಸೆಗಾಗಿ 2014 ರಲ್ಲಿ ಭಾರತಕ್ಕೆ ಭೇಟಿ ನೀಡಿದಾಗ ವೈದ್ಯರು ಅವಳಿಗೆ ಸಹಾಯ ಮಾಡಲು ಹೃದಯ ಪಂಪ್‌ನ್ನು ಅಳವಡಿಸಿದ್ದರು. ಆದರೆ ನಂತರ ಅದು ನಿಷ್ಕ್ರಿಯವಾಗಿತ್ತು.

ಆಯೇಷಾ ಅವರ ಶಸ್ತ್ರಚಿಕಿತ್ಸೆಗಾಗಿ ಹೃದಯವನ್ನು ದೆಹಲಿಗೆ ವಿಮಾನದಲ್ಲಿ ಸಾಗಿಸಲಾಯಿತು. ಚೆನ್ನೈ ಮೂಲದ ಎಂಜಿಎಂ ಹೆಲ್ತ್‌ಕೇರ್‌ನಲ್ಲಿ ಕಸಿ ಮಾಡಲಾಗಿದ್ದು, ಆಕೆಯ ಚಿಕಿತ್ಸಾ ವೆಚ್ಚವನ್ನು ಐಶ್ವರ್ಯ ಟ್ರಸ್ಟ್ ಎಂಬ ಎನ್‌ಜಿಒ ಭರಿಸಿತ್ತು. ಆಕೆಯ ಚಿಕಿತ್ಸಾ ಬಿಲ್ಲುಗಳನ್ನು ಪಾವತಿಸಲು ಕೆಲ ರೋಗಿಗಳು ಮತ್ತು ವೈದ್ಯರು ಸಹ ಸಹಾಯ ಮಾಡಿದ್ದರು.

ಈ ಕುರಿತು ಪ್ರತಿಕ್ರಿಯಿಸಿದ ಎಂಜಿಎಂ ಹೆಲ್ತ್‌ಕೇರ್‌ನ ವೈದ್ಯ ಕೆಜಿ ಸುರೇಶ್ ರಾವ್, ನಮಗೆ ರೋಗಿಗಳು-ರೋಗಿಗಳು. ನಾವು ಅವರ ಧರ್ಮ ಅಥವಾ ಅವರ ಜನ್ಮಸ್ಥಳವನ್ನು ನೋಡುವುದಿಲ್ಲ. ನಾವು ಸಾಧ್ಯವಿರುವ ಸಹಾಯವನ್ನು ಮಾಡುತ್ತೇವೆ. ಈ ಸಂದರ್ಭದಲ್ಲಿ ಅವಳು ಪಾಕಿಸ್ತಾನಿ ಅಥವಾ ಭಾರತೀಯ ಎಂದು ನಾವು ನೋಡಲಿಲ್ಲ. ಅವಳು ರೋಗಿ ಮತ್ತು ಚಿಕ್ಕ ಯುವತಿ ಎಂದು ನೋಡಿದೆವು ಎಂದು ಹೇಳಿದ್ದಾರೆ.

2019ರಿಂದ ಆಯೇಷಾಗೆ ಚಿಕಿತ್ಸೆ ನೀಡುತ್ತಿರುವ ಹಿರಿಯ ಹೃದಯ ಶಸ್ತ್ರಚಿಕಿತ್ಸಕ ಡಾ.ಕೆ.ಆರ್.ಬಾಲಕೃಷ್ಣನ್ ಮಾತನಾಡುತ್ತಾ, ಆಯೇಷಾ ಅವರ ತಾಯಿ ಒಂಟಿ ಪೋಷಕರಾಗಿದ್ದರು ಮತ್ತು ಮಗಳ ಚಿಕಿತ್ಸೆಯನ್ನು ಮುಂದುವರಿಸಲು ಕುಟುಂಬ ಬೇಕಾದಷ್ಟು ಸಂಪನ್ಮೂಲಗಳನ್ನು ಹೊಂದಿರಲಿಲ್ಲ ಎಂದು ಹೇಳಿದ್ದಾರೆ.

@colourSaffron ಎಂಬ ಎಕ್ಸ್‌ ಖಾತೆಯಲ್ಲಿ, ಭಾರತ ಏಕೆ ಉಚಿತ ಹೃದಯ ಕಸಿ ಮಾಡುತ್ತಿದೆ, ಈ ಕೃತಜ್ಞತೆಯಿಲ್ಲದ ಜನರಿಗಿಂತ ಹೆಚ್ಚಿನ ಅಗತ್ಯವಿರುವ ಅನೇಕ ಬಡವರು ಭಾರತದಲ್ಲಿದ್ದಾರೆ ಎಂದು ಬರೆಯಲಾಗಿದೆ.

ಮತ್ತೊಬ್ಬ ಬಳಕೆದಾರರಾದ @chaijeeevi, ಪಾವತಿ ಬಗ್ಗೆ ಹೇಳದೆ ಅವರು ನಮಗೆ ಚಿಕಿತ್ಸೆ ನೀಡುವ ಬಗ್ಗೆ ಮಾತನಾಡುವುದು ಕೂಡ ಇಲ್ಲ ಮತ್ತು ಇಲ್ಲಿ ಅವರು ಶತ್ರುಗಳಿಗೆ ಉಚಿತ ಚಿಕಿತ್ಸೆಯನ್ನು ನೀಡುತ್ತಿದ್ದಾರೆ ಎಂದು ಬರೆದುಕೊಂಡಿದ್ದಾರೆ.

ಭಾರತೀಯ ಸಾಮಾಜಿಕ ಮಾಧ್ಯಮ ಬಳಕೆದಾರರ ಈ ಪೋಸ್ಟ್‌ ಬಗ್ಗೆ ಪ್ರತಿಕ್ರಿಯಿಸಿದ @TheLiverDoc ಆನ್ ಎಕ್ಸ್ ಎಂದು ಕರೆಯಲ್ಪಡುವ ಡಾ ಸಿರಿಯಾಕ್ ಅಬ್ಬಿ ಫಿಲಿಪ್ಸ್, ಇದು ವೈದ್ಯಕೀಯ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿ. ಕಾಮೆಂಟ್‌ ಮಾಡುವ ವಿಭಾಗದಲ್ಲಿರುವ ಹೆಚ್ಚಿನ ಸಂಖ್ಯೆಯ ಜನರು ಮಾನವೀಯತೆಯನ್ನು ಅರ್ಥ  ಅರ್ಥಮಾಡಿಕೊಳ್ಳುವುದಿಲ್ಲ. ಇದು ವೈದ್ಯಕೀಯ ಉಪಚಾರದ ಮೂಲವಾಗಿದೆ. ಆರೋಗ್ಯ ಸೇವೆಯು ಸಾರ್ವತ್ರಿಕ ಹಕ್ಕಾಗಿದ್ದು, ನಕಾರಾತ್ಮಕವಾಗಿ ಕಾಮೆಂಟ್ ಮಾಡುವವರು ನಾಚಿಕೆಪಡಬೇಕು ಎಂದು ಹೇಳಿದ್ದಾರೆ.

ಇದನ್ನು ಓದಿ: ಬರಪರಿಹಾರ: ಮೋದಿಗೆ ಶ್ಲಾಘಿಸಿ ಕನ್ನಡಿಗರಿಂದ ಉಗಿಸಿಕೊಂಡ ಬಿಜೆಪಿ ನಾಯಕರು: ರಿಪೋರ್ಟ್ ಓದಿ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುಪ್ರೀಂ ಕೋರ್ಟ್ ನಿರ್ದೇಶನದ ಹೊರತಾಗಿಯೂ ಮುಂದುವರೆದ ಬುಲ್ಡೋಝರ್ ಅ’ನ್ಯಾಯ’ : ಯುಪಿ ಸರ್ಕಾರಕ್ಕೆ ಅಲಾಹಾಬಾದ್‌ ಹೈಕೋರ್ಟ್‌ ಛೀಮಾರಿ

ಉತ್ತರ ಪ್ರದೇಶದ ಸರ್ಕಾರದ "ಬುಲ್ಡೋಝರ್ ಅನ್ಯಾಯ" ವಿರುದ್ಧ ಸುಪ್ರೀಂ ಕೋರ್ಟ್ 2024ರ ನವೆಂಬರ್‌ನಲ್ಲಿ ಕಟ್ಟುನಿಟ್ಟಾದ ತೀರ್ಪು ನೀಡಿದ್ದರೂ, ದಂಡನಾತ್ಮಕ ಕ್ರಮವಾಗಿ ಕಟ್ಟಡಗಳನ್ನು ಉರುಳಿಸುವ ಪ್ರಕ್ರಿಯೆ ಇನ್ನೂ ಮುಂದುವರಿಯುತ್ತಿರುವುದರ ಬಗ್ಗೆ ಅಲಹಾಬಾದ್ ಹೈಕೋರ್ಟ್ ತೀವ್ರ...

‘ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರ ಪ್ರೋತ್ಸಾಹಿಸುತ್ತಿದೆ’: ಮೆಹಬೂಬಾ ಮುಫ್ತಿ ಆರೋಪ

ಶ್ರೀನಗರ: ಕೇಂದ್ರಾಡಳಿತ ಪ್ರದೇಶದ ಹೊರಗೆ ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರಗಳು ಪ್ರೋತ್ಸಾಹ ನೀಡುತ್ತಿರುವಂತೆ ಕಾಣುತ್ತಿದೆ, ಕಾನೂನಿನ ಆಡಳಿತವನ್ನು ದ್ವೇಷವು ಬದಲಾಯಿಸಲು ಅವಕಾಶ ನೀಡುತ್ತದೆ ಎಂದು ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ | ಒತ್ತಡಕ್ಕೆ ಮಣಿದು ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ : ರಾಹುಲ್ ಗಾಂಧಿ

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಸಂಬಂಧ ಪ್ರಧಾನಿ ನರೇಂದ್ರ ಮೋದಿ ವಿರುದ್ದ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಂಗಳವಾರ (ಫೆ.3) ತೀವ್ರ ವಾಗ್ದಾಳಿ ನಡೆಸಿದ್ದು, "ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ" ಎಂದು ಆರೋಪಿಸಿದರು. ಸಂಸತ್ತಿನ...

ಧರ್ಮಸ್ಥಳ ಪ್ರಕರಣದ ಚರ್ಚೆ ವೇಳೆ ಹಲ್ಲೆಗೆ ಯತ್ನ; ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ, ಕಿರಿಕ್ ಕೀರ್ತಿ ವಿರುದ್ಧ ಎಫ್‌ಐಆರ್

2025ರ ಅಕ್ಟೋಬರ್‌ನಲ್ಲಿ ‘R.ಕನ್ನಡ’ ಸುದ್ದಿ ವಾಹಿನಿಯಲ್ಲಿ ಧರ್ಮಸ್ಥಳ ಪ್ರಕರಣ ಸಂಬಂಧ ನಡೆದಿದ್ದ ಚರ್ಚಾ ಕಾರ್ಯಕ್ರಮದ ವೇಳೆ ದಾಂಧಲೆ ನಡೆಸಿ, ಹಲ್ಲೆಗೆ ಯತ್ನಿಸಿದ್ದ ಹಿಂದುತ್ವ ಕೋಮುವಾದಿ ಕಾರ್ಯಕರ್ತ ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ ಹಾಗೂ...

ಲೋಕಸಭೆಯಲ್ಲಿ ನರವಾಣೆ ಆತ್ಮಕಥೆ ಗದ್ದಲ : ವಿಪಕ್ಷಗಳ 8 ಮಂದಿ ಸಂಸದರು ಅಮಾನತು

ಮಾಜಿ ಸೇನಾ ಮುಖ್ಯಸ್ಥ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಕತೆಯ ವಿಚಾರ ಮಂಗಳವಾರ (ಫೆ.3) ಕೂಡ ಲೋಕಸಭೆಯಲ್ಲಿ ತೀವ್ರ ಗದ್ದಲಕ್ಕೆ ಕಾರಣವಾಯಿತು. ಪುಸ್ತಕದ ವಿಷಯಗಳನ್ನು ಪ್ರಸ್ತಾಪಿಸಲು ವಿರೋಧ ಪಕ್ಷದ ನಾಯಕ ರಾಹುಲ್...

ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್ ರಾಷ್ಟ್ರಪತಿಗಳಿಗೆ ಬರೆದ ಮನ ಮುಟ್ಟುವ ಪತ್ರ

ಕೇಂದ್ರ ಸರ್ಕಾರ ವಿಬಿಜಿ- ರಾಮ್ ಜಿ 2025 ಕಾನೂನನ್ನು ವಾಪಸ್ ಪಡೆಯಬೇಕು ಹಾಗೂ ನರೇಗಾ ಯೋಜನೆಯನ್ನು ಮರು ಸ್ಥಾಪಿಸಬೇಕು ಎಂದು ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್‌ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಿದೆ.  2026 ಫೆಬ್ರವರಿ...

ಗುಜರಾತ್‌| ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ

ಗುಜರಾತ್‌ನ ಪಠಾನ್ ಜಿಲ್ಲೆಯ ಗ್ರಾಮವೊಂದರಲ್ಲಿ, ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ದಲಿತ ಸಮುದಾಯದ ಯುವಕ ವಿಶಾಲ್ ಚಾವ್ಡಾಗೆ ಮದುವೆಯ ಸಂತೋಷದ ದಿನವು ಜೀವನದ ದುಃಸ್ವಪ್ನವಾಗಿ...

ಗೃಹಲಕ್ಷ್ಮಿ ಯೋಜನೆಯಿಂದ 52 ಸಾವಿರಕ್ಕೂ ಹೆಚ್ಚಿನ ಮಹಿಳೆಯರು ಹೊರಕ್ಕೆ: ಆದಾಯ ತೆರಿಗೆ ಇಲಾಖೆ ದಾಖಲೆಗಳು ಕಾರಣ ಎಂದ ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ರಾಜ್ಯಾದ್ಯಂತ 1.26 ಕೋಟಿ ಫಲಾನುಭವಿಗಳಲ್ಲಿ 52,000 ಕ್ಕೂ ಹೆಚ್ಚು ಮಹಿಳೆಯರನ್ನು ಗೃಹಲಕ್ಷ್ಮಿ ಯೋಜನೆಯಿಂದ ತೆಗೆದುಹಾಕಲಾಗಿದೆ, ಏಕೆಂದರೆ ಅವರು ಜಿಎಸ್ಟಿ ಅಥವಾ ಆದಾಯ ತೆರಿಗೆ ಇಲಾಖೆಗಳ ದಾಖಲೆಗಳಲ್ಲಿ ತೆರಿಗೆದಾರರಾಗಿದ್ದಾರೆ ಎಂದು ಮಹಿಳಾ ಮತ್ತು...

ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಮಂಡನೆ

ಮನರೇಗಾ ಬದಲಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ (ಫೆ.3) ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದರು. ರಾಜ್ಯದ ಗ್ರಾಮೀಣ ಜನರ ಬದುಕಿನ ಹಕ್ಕನ್ನು ಕಾಪಾಡುವ ದೃಷ್ಟಿಯಿಂದ,...

‘ಖಾಸಗಿ ಮಾಹಿತಿಯ ಕಳ್ಳತನ’ : ವಿವಾದಾತ್ಮಕ ಗೌಪ್ಯತೆ ನೀತಿ ಸಂಬಂಧ ವಾಟ್ಸಾಪ್, ಮೆಟಾ ವಿರುದ್ಧ ಸುಪ್ರೀಂ ಕೋರ್ಟ್ ಕಿಡಿ

ನಾಗರಿಕರ ಗೌಪ್ಯತೆಯ ಹಕ್ಕನ್ನು ಉಲ್ಲಂಘಿಸಲಾಗಿದೆ ಎಂದು ಮಂಗಳವಾರ ಸುಪ್ರೀಂ ಕೋರ್ಟ್ ವಾಟ್ಸಾಪ್ ಮತ್ತು ಅದರ ಪೋಷಕ ಕಂಪನಿ ಮೆಟಾವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಡೇಟಾ ಹಂಚಿಕೆಯ ಹೆಸರಿನಲ್ಲಿ ಬಳಕೆದಾರರ ಖಾಸಗಿ ಡೇಟಾವನ್ನು ಬಳಸಿಕೊಳ್ಳಲು...