Homeಮುಖಪುಟಪಾಕಿಸ್ತಾನದ ಯುವತಿಗೆ ಚೆನ್ನೈನಲ್ಲಿ ಹೃದಯ ಕಸಿ: ದ್ವೇಷ ಕಾರಿದ ಕೆಲ ಬಲಪಂಥೀಯ 'ಎಕ್ಸ್‌' ಬಳಕೆದಾರರು

ಪಾಕಿಸ್ತಾನದ ಯುವತಿಗೆ ಚೆನ್ನೈನಲ್ಲಿ ಹೃದಯ ಕಸಿ: ದ್ವೇಷ ಕಾರಿದ ಕೆಲ ಬಲಪಂಥೀಯ ‘ಎಕ್ಸ್‌’ ಬಳಕೆದಾರರು

- Advertisement -
- Advertisement -

ಚೆನ್ನೈನಲ್ಲಿ ಪಾಕಿಸ್ತಾನದ ಪ್ರಜೆಯೋರ್ವರಿಗೆ ಹೃದಯ ಶಸ್ತ್ರಚಿಕಿತ್ಸೆ ನಡೆಸಿದ್ದಕ್ಕೆ ಕೆಲ ಬಲಪಂಥೀಯ ಸಾಮಾಜಿಕ ಮಾಧ್ಯಮ ಬಳಕೆದಾರರು ಆಕ್ರೋಶ ವ್ಯಕ್ತಪಡಿಸಿ ಪೋಸ್ಟ್‌ ಮಾಡಿದ್ದು, ಮಾನವೀಯತೆಯನ್ನೇ ಅಣಕಿಸುವಂತೆ ಮಾಡಿದೆ.

ಅಂಗಾಂಗ ದಾನಕ್ಕೆ ವಿದೇಶಿಯರಿಗೆ ಆದ್ಯತೆ ನೀಡಿದ್ದಕ್ಕಾಗಿ ಆರೋಗ್ಯ ವ್ಯವಸ್ಥೆಗೆ ಅವಮಾನ, ಪಾಕಿಸ್ತಾನದ ಪ್ರಜೆಯ ಮೇಲಿನ ಧಾರ್ಮಿಕ ಮತ್ತು ಪ್ರಾದೇಶಿಕ ದ್ವೇಷವನ್ನು ಪ್ರಚೋದಿಸುವುದು, ಚೆನ್ನೈನ ‘ಎನ್‌ಜಿಒ’ ಹೃದಯ ಕಸಿ ಶಸ್ತ್ರಚಿಕಿತ್ಸೆಗೆ ವೆಚ್ಚ ಭರಿಸಿದೆ ಎಂದು ಬಲಪಂಥೀಯ ಸಾಮಾಜಿಕ ಮಾಧ್ಯಮ ಬಳಕೆದಾರರು ಟೀಕಿಸಿರುವುದು ಕಂಡು ಬಂದಿದೆ.

ಇಲ್ಲಿ ನಾವು ಪಾಕಿಸ್ತಾನಿಯರಿಗೆ ನಮ್ಮ ಹೃದಯವನ್ನು ನೀಡುತ್ತಿದ್ದೇವೆ, ಆದರೆ ವೈಟಿಂಗ್‌ ಲಿಸ್ಟ್‌ನಲ್ಲಿದ್ದ ಭಾರತದ ಪ್ರಜೆಗೆ ಇದನ್ನು ನೀಡಬಹುದಿತ್ತು ಎಂದು ಎಕ್ಸ್‌ ಬಳಕೆದಾರರು ಬರೆದಿದ್ದಾರೆ.

ಅಂಗಗಳನ್ನು ಬಯಸುತ್ತಿರುವ ವಿದೇಶಿ ಪ್ರಜೆಗಳ ಪಟ್ಟಿಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ NOTTO ನೋಡಿಕೊಳ್ಳುತ್ತದೆ. ವೈಟಿಂಗ್‌ ಲಿಸ್ಟ್‌ನಲ್ಲಿ ಯಾವುದೇ ಭಾರತೀಯರು ಇಲ್ಲದಿದ್ದರೆ ಮಾತ್ರ ಅಂಗವನ್ನು ವಿದೇಶಿಯರಿಗೆ ಹಂಚಲಾಗುತ್ತದೆ. ಇದನ್ನು NOTTOನ ಮಾಜಿ ನಿರ್ದೇಶಕಿ ಡಾ. ವಸಂತಿ ರಮೇಶ್ ಅವರು 2018ರಲ್ಲಿ ದೃಢಪಡಿಸಿದ್ದರು.

ಪಾಕಿಸ್ತಾನದ 19 ವರ್ಷದ ಆಯೇಷಾ ರಶನ್ 2019ರಿಂದ NOTTOನ ವೈಟಿಂಗ್‌ ಲಿಸ್ಟ್‌ನಲ್ಲಿದ್ದರು. ಆಕೆ ಹೃದಯ ಕಸಿಗೆ ತನ್ನ ವಿನಂತಿಯನ್ನು ಸಲ್ಲಿಸಿದ ಐದು ವರ್ಷಗಳ ನಂತರ 2024ರ ಜನವರಿಯಲ್ಲಿ 69 ವರ್ಷದ ದೆಹಲಿ ಮೂಲದ ದಾನಿಯ ಹೃದಯವನ್ನು ಕಸಿಗೆ ಆಕೆಯನ್ನು ಆಯ್ಕೆ ಮಾಡಲಾಗಿತ್ತು. ಆಯೇಷಾ ಚಿಕಿತ್ಸೆಗಾಗಿ 2014 ರಲ್ಲಿ ಭಾರತಕ್ಕೆ ಭೇಟಿ ನೀಡಿದಾಗ ವೈದ್ಯರು ಅವಳಿಗೆ ಸಹಾಯ ಮಾಡಲು ಹೃದಯ ಪಂಪ್‌ನ್ನು ಅಳವಡಿಸಿದ್ದರು. ಆದರೆ ನಂತರ ಅದು ನಿಷ್ಕ್ರಿಯವಾಗಿತ್ತು.

ಆಯೇಷಾ ಅವರ ಶಸ್ತ್ರಚಿಕಿತ್ಸೆಗಾಗಿ ಹೃದಯವನ್ನು ದೆಹಲಿಗೆ ವಿಮಾನದಲ್ಲಿ ಸಾಗಿಸಲಾಯಿತು. ಚೆನ್ನೈ ಮೂಲದ ಎಂಜಿಎಂ ಹೆಲ್ತ್‌ಕೇರ್‌ನಲ್ಲಿ ಕಸಿ ಮಾಡಲಾಗಿದ್ದು, ಆಕೆಯ ಚಿಕಿತ್ಸಾ ವೆಚ್ಚವನ್ನು ಐಶ್ವರ್ಯ ಟ್ರಸ್ಟ್ ಎಂಬ ಎನ್‌ಜಿಒ ಭರಿಸಿತ್ತು. ಆಕೆಯ ಚಿಕಿತ್ಸಾ ಬಿಲ್ಲುಗಳನ್ನು ಪಾವತಿಸಲು ಕೆಲ ರೋಗಿಗಳು ಮತ್ತು ವೈದ್ಯರು ಸಹ ಸಹಾಯ ಮಾಡಿದ್ದರು.

ಈ ಕುರಿತು ಪ್ರತಿಕ್ರಿಯಿಸಿದ ಎಂಜಿಎಂ ಹೆಲ್ತ್‌ಕೇರ್‌ನ ವೈದ್ಯ ಕೆಜಿ ಸುರೇಶ್ ರಾವ್, ನಮಗೆ ರೋಗಿಗಳು-ರೋಗಿಗಳು. ನಾವು ಅವರ ಧರ್ಮ ಅಥವಾ ಅವರ ಜನ್ಮಸ್ಥಳವನ್ನು ನೋಡುವುದಿಲ್ಲ. ನಾವು ಸಾಧ್ಯವಿರುವ ಸಹಾಯವನ್ನು ಮಾಡುತ್ತೇವೆ. ಈ ಸಂದರ್ಭದಲ್ಲಿ ಅವಳು ಪಾಕಿಸ್ತಾನಿ ಅಥವಾ ಭಾರತೀಯ ಎಂದು ನಾವು ನೋಡಲಿಲ್ಲ. ಅವಳು ರೋಗಿ ಮತ್ತು ಚಿಕ್ಕ ಯುವತಿ ಎಂದು ನೋಡಿದೆವು ಎಂದು ಹೇಳಿದ್ದಾರೆ.

2019ರಿಂದ ಆಯೇಷಾಗೆ ಚಿಕಿತ್ಸೆ ನೀಡುತ್ತಿರುವ ಹಿರಿಯ ಹೃದಯ ಶಸ್ತ್ರಚಿಕಿತ್ಸಕ ಡಾ.ಕೆ.ಆರ್.ಬಾಲಕೃಷ್ಣನ್ ಮಾತನಾಡುತ್ತಾ, ಆಯೇಷಾ ಅವರ ತಾಯಿ ಒಂಟಿ ಪೋಷಕರಾಗಿದ್ದರು ಮತ್ತು ಮಗಳ ಚಿಕಿತ್ಸೆಯನ್ನು ಮುಂದುವರಿಸಲು ಕುಟುಂಬ ಬೇಕಾದಷ್ಟು ಸಂಪನ್ಮೂಲಗಳನ್ನು ಹೊಂದಿರಲಿಲ್ಲ ಎಂದು ಹೇಳಿದ್ದಾರೆ.

@colourSaffron ಎಂಬ ಎಕ್ಸ್‌ ಖಾತೆಯಲ್ಲಿ, ಭಾರತ ಏಕೆ ಉಚಿತ ಹೃದಯ ಕಸಿ ಮಾಡುತ್ತಿದೆ, ಈ ಕೃತಜ್ಞತೆಯಿಲ್ಲದ ಜನರಿಗಿಂತ ಹೆಚ್ಚಿನ ಅಗತ್ಯವಿರುವ ಅನೇಕ ಬಡವರು ಭಾರತದಲ್ಲಿದ್ದಾರೆ ಎಂದು ಬರೆಯಲಾಗಿದೆ.

ಮತ್ತೊಬ್ಬ ಬಳಕೆದಾರರಾದ @chaijeeevi, ಪಾವತಿ ಬಗ್ಗೆ ಹೇಳದೆ ಅವರು ನಮಗೆ ಚಿಕಿತ್ಸೆ ನೀಡುವ ಬಗ್ಗೆ ಮಾತನಾಡುವುದು ಕೂಡ ಇಲ್ಲ ಮತ್ತು ಇಲ್ಲಿ ಅವರು ಶತ್ರುಗಳಿಗೆ ಉಚಿತ ಚಿಕಿತ್ಸೆಯನ್ನು ನೀಡುತ್ತಿದ್ದಾರೆ ಎಂದು ಬರೆದುಕೊಂಡಿದ್ದಾರೆ.

ಭಾರತೀಯ ಸಾಮಾಜಿಕ ಮಾಧ್ಯಮ ಬಳಕೆದಾರರ ಈ ಪೋಸ್ಟ್‌ ಬಗ್ಗೆ ಪ್ರತಿಕ್ರಿಯಿಸಿದ @TheLiverDoc ಆನ್ ಎಕ್ಸ್ ಎಂದು ಕರೆಯಲ್ಪಡುವ ಡಾ ಸಿರಿಯಾಕ್ ಅಬ್ಬಿ ಫಿಲಿಪ್ಸ್, ಇದು ವೈದ್ಯಕೀಯ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿ. ಕಾಮೆಂಟ್‌ ಮಾಡುವ ವಿಭಾಗದಲ್ಲಿರುವ ಹೆಚ್ಚಿನ ಸಂಖ್ಯೆಯ ಜನರು ಮಾನವೀಯತೆಯನ್ನು ಅರ್ಥ  ಅರ್ಥಮಾಡಿಕೊಳ್ಳುವುದಿಲ್ಲ. ಇದು ವೈದ್ಯಕೀಯ ಉಪಚಾರದ ಮೂಲವಾಗಿದೆ. ಆರೋಗ್ಯ ಸೇವೆಯು ಸಾರ್ವತ್ರಿಕ ಹಕ್ಕಾಗಿದ್ದು, ನಕಾರಾತ್ಮಕವಾಗಿ ಕಾಮೆಂಟ್ ಮಾಡುವವರು ನಾಚಿಕೆಪಡಬೇಕು ಎಂದು ಹೇಳಿದ್ದಾರೆ.

ಇದನ್ನು ಓದಿ: ಬರಪರಿಹಾರ: ಮೋದಿಗೆ ಶ್ಲಾಘಿಸಿ ಕನ್ನಡಿಗರಿಂದ ಉಗಿಸಿಕೊಂಡ ಬಿಜೆಪಿ ನಾಯಕರು: ರಿಪೋರ್ಟ್ ಓದಿ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಛತ್ತೀಸ್‌ಗಢ| ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿ ಗುಂಪಿನಿಂದ ಹಲ್ಲೆ; ‘ಜೈ ಶ್ರೀ ರಾಮ್’ ಕೂಗುವಂತೆ ಒತ್ತಾಯ

ಛತ್ತೀಸ್‌ಗಢದ ಜಂಜ್‌ಗೀರ್-ಚಂಪಾ ಜಿಲ್ಲೆಯಲ್ಲಿ ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿಗಳ ಗುಂಪೊಂದು ಹಲ್ಲೆ ನಡೆಸಿ, ಜೈಶ್ರೀರಾಮ್ ಎಂದು ಘೋಷಣೆಗಳನ್ನು ಕೂಗುವಂತೆ ಒತ್ತಾಯಿಸಿದೆ ಎಂಬ ಆರೋಪ ಕೇಳಿಬಂದಿದೆ. ಇಂದು (ಮಾ.18) ನಡೆದಿದೆ ಎನ್ನಲಾದ ಈ ಘಟನೆಯ...

ಯುಪಿಎಸ್‌ಸಿ 440 ನೇ ರ‍್ಯಾಂಕ್ ಎಂದು ಸುಳ್ಳು ಹೇಳಿ ಸಂಭ್ರಮಾಚರಣೆ ಮಾಡಿದ್ದ ಬಿಹಾರದ ಯುವಕನ ಬಂಧನ

ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ನಾಗರಿಕ ಸೇವಾ ಪರೀಕ್ಷೆ (ಸಿಎಸ್‌ಇ) 2025 ರಲ್ಲಿ ಅಖಿಲ ಭಾರತ ರ‍್ಯಾಂಕ್ (ಎಐಆರ್) 440 ಗಳಿಸಿದ್ದೇನೆ ಎಂದು ಸುಳ್ಳು ಹೇಳಿಕೊಂಡ ಕೆಲವು ದಿನಗಳ ನಂತರ, ಬಿಹಾರದ ಶೇಖ್‌ಪುರ...

‘ಜೈ ಬಾಂಗ್ಲಾ’ ಘೋಷಣೆ ಕೂಗಿದ ಆರೋಪ: ಮಹಿಳೆಗೆ ಜಾಮೀನು ನೀಡಿದ ಹೈಕೋರ್ಟ್

ಬೆಂಗಳೂರಿನ ಹೆಬ್ಬಗೂಡಿಯಲ್ಲಿ ಅಕ್ರಮ ಎನ್ನಲಾದ ಶೆಡ್‌ಗಳ ತೆರವು ಕಾರ್ಯಾಚರಣೆ ವೇಳೆ 'ಜೈ ಬಾಂಗ್ಲಾ' ಘೋಷಣೆ ಕೂಗಿದ ಆರೋಪದ ಮೇಲೆ ಬಂಧಿತರಾದ ಪಶ್ಚಿಮ ಬಂಗಾಳದ ಮಹಿಳೆಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ನ್ಯಾಯಮೂರ್ತಿ ಎಸ್.ರಾಚಯ್ಯ...

ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಡಿಜೆ, ಐಟಂ ಹಾಡು ನಿಷೇಧಿಸಲು ಕರ್ನಾಟಕ ಯೋಜನೆ; ವಿಧಾನಸಭೆಯಲ್ಲಿ ಸಂತೋಷ್ ಲಾಡ್ ಪ್ರಸ್ತಾಪ

ಬೆಂಗಳೂರು: ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಧಾರ್ಮಿಕ ಮೆರವಣಿಗೆಗಳಲ್ಲಿ ಅಬ್ಬರದ ಸಂಗೀತ ಮತ್ತು "ಐಟಂ ಹಾಡುಗಳನ್ನು" ನುಡಿಸುವ ಡಿಸ್ಕ್ ಜಾಕಿಗಳನ್ನು (ಡಿಜೆ) ನಿಷೇಧಿಸುವ ಪರವಾಗಿ ಕರ್ನಾಟಕ ಸರ್ಕಾರವಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ...

ದೆಹಲಿಯ ಪಾಲಂನಲ್ಲಿರುವ ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಅವಘಡ: ಮೂವರು ಮಕ್ಕಳು ಸೇರಿ ಏಳು ಮಂದಿ ಸಾವು

ರಾಷ್ಟ್ರ ರಾಜಧಾನಿಯ ಪಾಲಂ ಪ್ರದೇಶದ ವಸತಿ ಕಟ್ಟಡದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡು ಮೂವರು ಮಕ್ಕಳು ಸೇರಿದಂತೆ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ದೆಹಲಿ ಪೊಲೀಸರು ಬುಧವಾರ ತಿಳಿಸಿದ್ದಾರೆ. ಘಟನೆಯ ಮಾಹಿತಿ ತಿಳಿದ ತಕ್ಷಣ...

ವಾರಣಾಸಿ: ಗಂಗಾ ನದಿಯ ದೋಣಿಯಲ್ಲಿ ‘ಇಫ್ತಾರ್’ ಕೂಟ ಆಯೋಜಿಸಿದ್ದಕ್ಕಾಗಿ 14 ಜನರ ಬಂಧನ 

ವಾರಣಾಸಿಯಲ್ಲಿ ಗಂಗಾ ನದಿಯ ಮಧ್ಯದಲ್ಲಿ ದೋಣಿಯಲ್ಲಿ 'ಇಫ್ತಾರ್' (ರಂಜಾನ್ ಸಮಯದಲ್ಲಿ ಸೂರ್ಯಾಸ್ತದ ನಂತರ ತಿನ್ನುವ ಊಟ) ಕೂಟವನ್ನು ಆಯೋಜಿಸಿದ್ದಕ್ಕಾಗಿ ಹದಿನಾಲ್ಕು ಮುಸ್ಲಿಂ ಯುವಕರನ್ನು ಬಂಧಿಸಲಾಗಿದೆ.  ದೈನಂದಿನ ಮುಸ್ಲಿಂ ಜೀವನವನ್ನು ಅಪರಾಧೀಕರಿಸುವ ಮತ್ತೊಂದು ಪ್ರಕರಣ ಇದಾಗಿದ್ದು,...

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ರಾಜೀನಾಮೆ

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ತಮ್ಮ ಸ್ಥಾನಗಳಿಗೆ ಮಂಗಳವಾರ (ಮಾ.17) ರಾಜೀನಾಮೆ ಸಲ್ಲಿಸಿದ್ದಾರೆ. ಪಕ್ಷದ ಹಿರಿಯ ನಾಯಕ ಹಾಗೂ ನೌಗಾಂಗ್ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಪ್ರದ್ಯುತ್ ಬೋರ್ಡೊಲೊಯ್...

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ : ಮೂವರು ಶಾಸಕರನ್ನು ಅಮಾನತುಗೊಳಿಸಿದ ಒಡಿಶಾ ಕಾಂಗ್ರೆಸ್

ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ್ದಕ್ಕಾಗಿ ಒಡಿಶಾ ಕಾಂಗ್ರೆಸ್ ಮೂವರು ಶಾಸಕರಾದ ಸೋಫಿಯಾ ಫಿರ್ದೌಸ್, ರಮೇಶ್ ಜೆನಾ ಮತ್ತು ದಾಸರಥಿ ಗೊಮಾಂಗೊ ಅವರನ್ನು ಅಮಾನತುಗೊಳಿಸಿದೆ. ಒಡಿಶಾ ವಿಧಾನಸಭೆಯಲ್ಲಿ ಕಾಂಗ್ರೆಸ್ 14 ಶಾಸಕರನ್ನು ಹೊಂದಿದ್ದು, ನಾಲ್ಕನೇ...

ಅಮೆರಿಕ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ದಳದ ನಿರ್ದೇಶಕ ಜೋ ಕೆಂಟ್‌ ರಾಜೀನಾಮೆ

ಅಮೆರಿಕದ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಕೇಂದ್ರದ (ಎನ್‌ಸಿಟಿಸಿ) ನಿರ್ದೇಶಕ ಜೋ ಕೆಂಟ್ ಅವರು ಇರಾನ್ ಜೊತೆಗಿನ ಯುದ್ಧಕ್ಕೆ ವಿರೋಧ ವ್ಯಕ್ತಪಡಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. "ಇರಾನ್‌ನಿಂದ ಅಮೆರಿಕಕ್ಕೆ ಯಾವುದೇ ತಕ್ಷಣದ ಅಪಾಯವಿರಲಿಲ್ಲ. ಇಸ್ರೇಲ್‌ನ ಒತ್ತಡದಿಂದಾಗಿ...

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...