Homeಮುಖಪುಟಪಾಕಿಸ್ತಾನದ ಯುವತಿಗೆ ಚೆನ್ನೈನಲ್ಲಿ ಹೃದಯ ಕಸಿ: ದ್ವೇಷ ಕಾರಿದ ಕೆಲ ಬಲಪಂಥೀಯ 'ಎಕ್ಸ್‌' ಬಳಕೆದಾರರು

ಪಾಕಿಸ್ತಾನದ ಯುವತಿಗೆ ಚೆನ್ನೈನಲ್ಲಿ ಹೃದಯ ಕಸಿ: ದ್ವೇಷ ಕಾರಿದ ಕೆಲ ಬಲಪಂಥೀಯ ‘ಎಕ್ಸ್‌’ ಬಳಕೆದಾರರು

- Advertisement -
- Advertisement -

ಚೆನ್ನೈನಲ್ಲಿ ಪಾಕಿಸ್ತಾನದ ಪ್ರಜೆಯೋರ್ವರಿಗೆ ಹೃದಯ ಶಸ್ತ್ರಚಿಕಿತ್ಸೆ ನಡೆಸಿದ್ದಕ್ಕೆ ಕೆಲ ಬಲಪಂಥೀಯ ಸಾಮಾಜಿಕ ಮಾಧ್ಯಮ ಬಳಕೆದಾರರು ಆಕ್ರೋಶ ವ್ಯಕ್ತಪಡಿಸಿ ಪೋಸ್ಟ್‌ ಮಾಡಿದ್ದು, ಮಾನವೀಯತೆಯನ್ನೇ ಅಣಕಿಸುವಂತೆ ಮಾಡಿದೆ.

ಅಂಗಾಂಗ ದಾನಕ್ಕೆ ವಿದೇಶಿಯರಿಗೆ ಆದ್ಯತೆ ನೀಡಿದ್ದಕ್ಕಾಗಿ ಆರೋಗ್ಯ ವ್ಯವಸ್ಥೆಗೆ ಅವಮಾನ, ಪಾಕಿಸ್ತಾನದ ಪ್ರಜೆಯ ಮೇಲಿನ ಧಾರ್ಮಿಕ ಮತ್ತು ಪ್ರಾದೇಶಿಕ ದ್ವೇಷವನ್ನು ಪ್ರಚೋದಿಸುವುದು, ಚೆನ್ನೈನ ‘ಎನ್‌ಜಿಒ’ ಹೃದಯ ಕಸಿ ಶಸ್ತ್ರಚಿಕಿತ್ಸೆಗೆ ವೆಚ್ಚ ಭರಿಸಿದೆ ಎಂದು ಬಲಪಂಥೀಯ ಸಾಮಾಜಿಕ ಮಾಧ್ಯಮ ಬಳಕೆದಾರರು ಟೀಕಿಸಿರುವುದು ಕಂಡು ಬಂದಿದೆ.

ಇಲ್ಲಿ ನಾವು ಪಾಕಿಸ್ತಾನಿಯರಿಗೆ ನಮ್ಮ ಹೃದಯವನ್ನು ನೀಡುತ್ತಿದ್ದೇವೆ, ಆದರೆ ವೈಟಿಂಗ್‌ ಲಿಸ್ಟ್‌ನಲ್ಲಿದ್ದ ಭಾರತದ ಪ್ರಜೆಗೆ ಇದನ್ನು ನೀಡಬಹುದಿತ್ತು ಎಂದು ಎಕ್ಸ್‌ ಬಳಕೆದಾರರು ಬರೆದಿದ್ದಾರೆ.

ಅಂಗಗಳನ್ನು ಬಯಸುತ್ತಿರುವ ವಿದೇಶಿ ಪ್ರಜೆಗಳ ಪಟ್ಟಿಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ NOTTO ನೋಡಿಕೊಳ್ಳುತ್ತದೆ. ವೈಟಿಂಗ್‌ ಲಿಸ್ಟ್‌ನಲ್ಲಿ ಯಾವುದೇ ಭಾರತೀಯರು ಇಲ್ಲದಿದ್ದರೆ ಮಾತ್ರ ಅಂಗವನ್ನು ವಿದೇಶಿಯರಿಗೆ ಹಂಚಲಾಗುತ್ತದೆ. ಇದನ್ನು NOTTOನ ಮಾಜಿ ನಿರ್ದೇಶಕಿ ಡಾ. ವಸಂತಿ ರಮೇಶ್ ಅವರು 2018ರಲ್ಲಿ ದೃಢಪಡಿಸಿದ್ದರು.

ಪಾಕಿಸ್ತಾನದ 19 ವರ್ಷದ ಆಯೇಷಾ ರಶನ್ 2019ರಿಂದ NOTTOನ ವೈಟಿಂಗ್‌ ಲಿಸ್ಟ್‌ನಲ್ಲಿದ್ದರು. ಆಕೆ ಹೃದಯ ಕಸಿಗೆ ತನ್ನ ವಿನಂತಿಯನ್ನು ಸಲ್ಲಿಸಿದ ಐದು ವರ್ಷಗಳ ನಂತರ 2024ರ ಜನವರಿಯಲ್ಲಿ 69 ವರ್ಷದ ದೆಹಲಿ ಮೂಲದ ದಾನಿಯ ಹೃದಯವನ್ನು ಕಸಿಗೆ ಆಕೆಯನ್ನು ಆಯ್ಕೆ ಮಾಡಲಾಗಿತ್ತು. ಆಯೇಷಾ ಚಿಕಿತ್ಸೆಗಾಗಿ 2014 ರಲ್ಲಿ ಭಾರತಕ್ಕೆ ಭೇಟಿ ನೀಡಿದಾಗ ವೈದ್ಯರು ಅವಳಿಗೆ ಸಹಾಯ ಮಾಡಲು ಹೃದಯ ಪಂಪ್‌ನ್ನು ಅಳವಡಿಸಿದ್ದರು. ಆದರೆ ನಂತರ ಅದು ನಿಷ್ಕ್ರಿಯವಾಗಿತ್ತು.

ಆಯೇಷಾ ಅವರ ಶಸ್ತ್ರಚಿಕಿತ್ಸೆಗಾಗಿ ಹೃದಯವನ್ನು ದೆಹಲಿಗೆ ವಿಮಾನದಲ್ಲಿ ಸಾಗಿಸಲಾಯಿತು. ಚೆನ್ನೈ ಮೂಲದ ಎಂಜಿಎಂ ಹೆಲ್ತ್‌ಕೇರ್‌ನಲ್ಲಿ ಕಸಿ ಮಾಡಲಾಗಿದ್ದು, ಆಕೆಯ ಚಿಕಿತ್ಸಾ ವೆಚ್ಚವನ್ನು ಐಶ್ವರ್ಯ ಟ್ರಸ್ಟ್ ಎಂಬ ಎನ್‌ಜಿಒ ಭರಿಸಿತ್ತು. ಆಕೆಯ ಚಿಕಿತ್ಸಾ ಬಿಲ್ಲುಗಳನ್ನು ಪಾವತಿಸಲು ಕೆಲ ರೋಗಿಗಳು ಮತ್ತು ವೈದ್ಯರು ಸಹ ಸಹಾಯ ಮಾಡಿದ್ದರು.

ಈ ಕುರಿತು ಪ್ರತಿಕ್ರಿಯಿಸಿದ ಎಂಜಿಎಂ ಹೆಲ್ತ್‌ಕೇರ್‌ನ ವೈದ್ಯ ಕೆಜಿ ಸುರೇಶ್ ರಾವ್, ನಮಗೆ ರೋಗಿಗಳು-ರೋಗಿಗಳು. ನಾವು ಅವರ ಧರ್ಮ ಅಥವಾ ಅವರ ಜನ್ಮಸ್ಥಳವನ್ನು ನೋಡುವುದಿಲ್ಲ. ನಾವು ಸಾಧ್ಯವಿರುವ ಸಹಾಯವನ್ನು ಮಾಡುತ್ತೇವೆ. ಈ ಸಂದರ್ಭದಲ್ಲಿ ಅವಳು ಪಾಕಿಸ್ತಾನಿ ಅಥವಾ ಭಾರತೀಯ ಎಂದು ನಾವು ನೋಡಲಿಲ್ಲ. ಅವಳು ರೋಗಿ ಮತ್ತು ಚಿಕ್ಕ ಯುವತಿ ಎಂದು ನೋಡಿದೆವು ಎಂದು ಹೇಳಿದ್ದಾರೆ.

2019ರಿಂದ ಆಯೇಷಾಗೆ ಚಿಕಿತ್ಸೆ ನೀಡುತ್ತಿರುವ ಹಿರಿಯ ಹೃದಯ ಶಸ್ತ್ರಚಿಕಿತ್ಸಕ ಡಾ.ಕೆ.ಆರ್.ಬಾಲಕೃಷ್ಣನ್ ಮಾತನಾಡುತ್ತಾ, ಆಯೇಷಾ ಅವರ ತಾಯಿ ಒಂಟಿ ಪೋಷಕರಾಗಿದ್ದರು ಮತ್ತು ಮಗಳ ಚಿಕಿತ್ಸೆಯನ್ನು ಮುಂದುವರಿಸಲು ಕುಟುಂಬ ಬೇಕಾದಷ್ಟು ಸಂಪನ್ಮೂಲಗಳನ್ನು ಹೊಂದಿರಲಿಲ್ಲ ಎಂದು ಹೇಳಿದ್ದಾರೆ.

@colourSaffron ಎಂಬ ಎಕ್ಸ್‌ ಖಾತೆಯಲ್ಲಿ, ಭಾರತ ಏಕೆ ಉಚಿತ ಹೃದಯ ಕಸಿ ಮಾಡುತ್ತಿದೆ, ಈ ಕೃತಜ್ಞತೆಯಿಲ್ಲದ ಜನರಿಗಿಂತ ಹೆಚ್ಚಿನ ಅಗತ್ಯವಿರುವ ಅನೇಕ ಬಡವರು ಭಾರತದಲ್ಲಿದ್ದಾರೆ ಎಂದು ಬರೆಯಲಾಗಿದೆ.

ಮತ್ತೊಬ್ಬ ಬಳಕೆದಾರರಾದ @chaijeeevi, ಪಾವತಿ ಬಗ್ಗೆ ಹೇಳದೆ ಅವರು ನಮಗೆ ಚಿಕಿತ್ಸೆ ನೀಡುವ ಬಗ್ಗೆ ಮಾತನಾಡುವುದು ಕೂಡ ಇಲ್ಲ ಮತ್ತು ಇಲ್ಲಿ ಅವರು ಶತ್ರುಗಳಿಗೆ ಉಚಿತ ಚಿಕಿತ್ಸೆಯನ್ನು ನೀಡುತ್ತಿದ್ದಾರೆ ಎಂದು ಬರೆದುಕೊಂಡಿದ್ದಾರೆ.

ಭಾರತೀಯ ಸಾಮಾಜಿಕ ಮಾಧ್ಯಮ ಬಳಕೆದಾರರ ಈ ಪೋಸ್ಟ್‌ ಬಗ್ಗೆ ಪ್ರತಿಕ್ರಿಯಿಸಿದ @TheLiverDoc ಆನ್ ಎಕ್ಸ್ ಎಂದು ಕರೆಯಲ್ಪಡುವ ಡಾ ಸಿರಿಯಾಕ್ ಅಬ್ಬಿ ಫಿಲಿಪ್ಸ್, ಇದು ವೈದ್ಯಕೀಯ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿ. ಕಾಮೆಂಟ್‌ ಮಾಡುವ ವಿಭಾಗದಲ್ಲಿರುವ ಹೆಚ್ಚಿನ ಸಂಖ್ಯೆಯ ಜನರು ಮಾನವೀಯತೆಯನ್ನು ಅರ್ಥ  ಅರ್ಥಮಾಡಿಕೊಳ್ಳುವುದಿಲ್ಲ. ಇದು ವೈದ್ಯಕೀಯ ಉಪಚಾರದ ಮೂಲವಾಗಿದೆ. ಆರೋಗ್ಯ ಸೇವೆಯು ಸಾರ್ವತ್ರಿಕ ಹಕ್ಕಾಗಿದ್ದು, ನಕಾರಾತ್ಮಕವಾಗಿ ಕಾಮೆಂಟ್ ಮಾಡುವವರು ನಾಚಿಕೆಪಡಬೇಕು ಎಂದು ಹೇಳಿದ್ದಾರೆ.

ಇದನ್ನು ಓದಿ: ಬರಪರಿಹಾರ: ಮೋದಿಗೆ ಶ್ಲಾಘಿಸಿ ಕನ್ನಡಿಗರಿಂದ ಉಗಿಸಿಕೊಂಡ ಬಿಜೆಪಿ ನಾಯಕರು: ರಿಪೋರ್ಟ್ ಓದಿ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...