Homeಮುಖಪುಟಪಾಕಿಸ್ತಾನದ ಯುವತಿಗೆ ಚೆನ್ನೈನಲ್ಲಿ ಹೃದಯ ಕಸಿ: ದ್ವೇಷ ಕಾರಿದ ಕೆಲ ಬಲಪಂಥೀಯ 'ಎಕ್ಸ್‌' ಬಳಕೆದಾರರು

ಪಾಕಿಸ್ತಾನದ ಯುವತಿಗೆ ಚೆನ್ನೈನಲ್ಲಿ ಹೃದಯ ಕಸಿ: ದ್ವೇಷ ಕಾರಿದ ಕೆಲ ಬಲಪಂಥೀಯ ‘ಎಕ್ಸ್‌’ ಬಳಕೆದಾರರು

- Advertisement -
- Advertisement -

ಚೆನ್ನೈನಲ್ಲಿ ಪಾಕಿಸ್ತಾನದ ಪ್ರಜೆಯೋರ್ವರಿಗೆ ಹೃದಯ ಶಸ್ತ್ರಚಿಕಿತ್ಸೆ ನಡೆಸಿದ್ದಕ್ಕೆ ಕೆಲ ಬಲಪಂಥೀಯ ಸಾಮಾಜಿಕ ಮಾಧ್ಯಮ ಬಳಕೆದಾರರು ಆಕ್ರೋಶ ವ್ಯಕ್ತಪಡಿಸಿ ಪೋಸ್ಟ್‌ ಮಾಡಿದ್ದು, ಮಾನವೀಯತೆಯನ್ನೇ ಅಣಕಿಸುವಂತೆ ಮಾಡಿದೆ.

ಅಂಗಾಂಗ ದಾನಕ್ಕೆ ವಿದೇಶಿಯರಿಗೆ ಆದ್ಯತೆ ನೀಡಿದ್ದಕ್ಕಾಗಿ ಆರೋಗ್ಯ ವ್ಯವಸ್ಥೆಗೆ ಅವಮಾನ, ಪಾಕಿಸ್ತಾನದ ಪ್ರಜೆಯ ಮೇಲಿನ ಧಾರ್ಮಿಕ ಮತ್ತು ಪ್ರಾದೇಶಿಕ ದ್ವೇಷವನ್ನು ಪ್ರಚೋದಿಸುವುದು, ಚೆನ್ನೈನ ‘ಎನ್‌ಜಿಒ’ ಹೃದಯ ಕಸಿ ಶಸ್ತ್ರಚಿಕಿತ್ಸೆಗೆ ವೆಚ್ಚ ಭರಿಸಿದೆ ಎಂದು ಬಲಪಂಥೀಯ ಸಾಮಾಜಿಕ ಮಾಧ್ಯಮ ಬಳಕೆದಾರರು ಟೀಕಿಸಿರುವುದು ಕಂಡು ಬಂದಿದೆ.

ಇಲ್ಲಿ ನಾವು ಪಾಕಿಸ್ತಾನಿಯರಿಗೆ ನಮ್ಮ ಹೃದಯವನ್ನು ನೀಡುತ್ತಿದ್ದೇವೆ, ಆದರೆ ವೈಟಿಂಗ್‌ ಲಿಸ್ಟ್‌ನಲ್ಲಿದ್ದ ಭಾರತದ ಪ್ರಜೆಗೆ ಇದನ್ನು ನೀಡಬಹುದಿತ್ತು ಎಂದು ಎಕ್ಸ್‌ ಬಳಕೆದಾರರು ಬರೆದಿದ್ದಾರೆ.

ಅಂಗಗಳನ್ನು ಬಯಸುತ್ತಿರುವ ವಿದೇಶಿ ಪ್ರಜೆಗಳ ಪಟ್ಟಿಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ NOTTO ನೋಡಿಕೊಳ್ಳುತ್ತದೆ. ವೈಟಿಂಗ್‌ ಲಿಸ್ಟ್‌ನಲ್ಲಿ ಯಾವುದೇ ಭಾರತೀಯರು ಇಲ್ಲದಿದ್ದರೆ ಮಾತ್ರ ಅಂಗವನ್ನು ವಿದೇಶಿಯರಿಗೆ ಹಂಚಲಾಗುತ್ತದೆ. ಇದನ್ನು NOTTOನ ಮಾಜಿ ನಿರ್ದೇಶಕಿ ಡಾ. ವಸಂತಿ ರಮೇಶ್ ಅವರು 2018ರಲ್ಲಿ ದೃಢಪಡಿಸಿದ್ದರು.

ಪಾಕಿಸ್ತಾನದ 19 ವರ್ಷದ ಆಯೇಷಾ ರಶನ್ 2019ರಿಂದ NOTTOನ ವೈಟಿಂಗ್‌ ಲಿಸ್ಟ್‌ನಲ್ಲಿದ್ದರು. ಆಕೆ ಹೃದಯ ಕಸಿಗೆ ತನ್ನ ವಿನಂತಿಯನ್ನು ಸಲ್ಲಿಸಿದ ಐದು ವರ್ಷಗಳ ನಂತರ 2024ರ ಜನವರಿಯಲ್ಲಿ 69 ವರ್ಷದ ದೆಹಲಿ ಮೂಲದ ದಾನಿಯ ಹೃದಯವನ್ನು ಕಸಿಗೆ ಆಕೆಯನ್ನು ಆಯ್ಕೆ ಮಾಡಲಾಗಿತ್ತು. ಆಯೇಷಾ ಚಿಕಿತ್ಸೆಗಾಗಿ 2014 ರಲ್ಲಿ ಭಾರತಕ್ಕೆ ಭೇಟಿ ನೀಡಿದಾಗ ವೈದ್ಯರು ಅವಳಿಗೆ ಸಹಾಯ ಮಾಡಲು ಹೃದಯ ಪಂಪ್‌ನ್ನು ಅಳವಡಿಸಿದ್ದರು. ಆದರೆ ನಂತರ ಅದು ನಿಷ್ಕ್ರಿಯವಾಗಿತ್ತು.

ಆಯೇಷಾ ಅವರ ಶಸ್ತ್ರಚಿಕಿತ್ಸೆಗಾಗಿ ಹೃದಯವನ್ನು ದೆಹಲಿಗೆ ವಿಮಾನದಲ್ಲಿ ಸಾಗಿಸಲಾಯಿತು. ಚೆನ್ನೈ ಮೂಲದ ಎಂಜಿಎಂ ಹೆಲ್ತ್‌ಕೇರ್‌ನಲ್ಲಿ ಕಸಿ ಮಾಡಲಾಗಿದ್ದು, ಆಕೆಯ ಚಿಕಿತ್ಸಾ ವೆಚ್ಚವನ್ನು ಐಶ್ವರ್ಯ ಟ್ರಸ್ಟ್ ಎಂಬ ಎನ್‌ಜಿಒ ಭರಿಸಿತ್ತು. ಆಕೆಯ ಚಿಕಿತ್ಸಾ ಬಿಲ್ಲುಗಳನ್ನು ಪಾವತಿಸಲು ಕೆಲ ರೋಗಿಗಳು ಮತ್ತು ವೈದ್ಯರು ಸಹ ಸಹಾಯ ಮಾಡಿದ್ದರು.

ಈ ಕುರಿತು ಪ್ರತಿಕ್ರಿಯಿಸಿದ ಎಂಜಿಎಂ ಹೆಲ್ತ್‌ಕೇರ್‌ನ ವೈದ್ಯ ಕೆಜಿ ಸುರೇಶ್ ರಾವ್, ನಮಗೆ ರೋಗಿಗಳು-ರೋಗಿಗಳು. ನಾವು ಅವರ ಧರ್ಮ ಅಥವಾ ಅವರ ಜನ್ಮಸ್ಥಳವನ್ನು ನೋಡುವುದಿಲ್ಲ. ನಾವು ಸಾಧ್ಯವಿರುವ ಸಹಾಯವನ್ನು ಮಾಡುತ್ತೇವೆ. ಈ ಸಂದರ್ಭದಲ್ಲಿ ಅವಳು ಪಾಕಿಸ್ತಾನಿ ಅಥವಾ ಭಾರತೀಯ ಎಂದು ನಾವು ನೋಡಲಿಲ್ಲ. ಅವಳು ರೋಗಿ ಮತ್ತು ಚಿಕ್ಕ ಯುವತಿ ಎಂದು ನೋಡಿದೆವು ಎಂದು ಹೇಳಿದ್ದಾರೆ.

2019ರಿಂದ ಆಯೇಷಾಗೆ ಚಿಕಿತ್ಸೆ ನೀಡುತ್ತಿರುವ ಹಿರಿಯ ಹೃದಯ ಶಸ್ತ್ರಚಿಕಿತ್ಸಕ ಡಾ.ಕೆ.ಆರ್.ಬಾಲಕೃಷ್ಣನ್ ಮಾತನಾಡುತ್ತಾ, ಆಯೇಷಾ ಅವರ ತಾಯಿ ಒಂಟಿ ಪೋಷಕರಾಗಿದ್ದರು ಮತ್ತು ಮಗಳ ಚಿಕಿತ್ಸೆಯನ್ನು ಮುಂದುವರಿಸಲು ಕುಟುಂಬ ಬೇಕಾದಷ್ಟು ಸಂಪನ್ಮೂಲಗಳನ್ನು ಹೊಂದಿರಲಿಲ್ಲ ಎಂದು ಹೇಳಿದ್ದಾರೆ.

@colourSaffron ಎಂಬ ಎಕ್ಸ್‌ ಖಾತೆಯಲ್ಲಿ, ಭಾರತ ಏಕೆ ಉಚಿತ ಹೃದಯ ಕಸಿ ಮಾಡುತ್ತಿದೆ, ಈ ಕೃತಜ್ಞತೆಯಿಲ್ಲದ ಜನರಿಗಿಂತ ಹೆಚ್ಚಿನ ಅಗತ್ಯವಿರುವ ಅನೇಕ ಬಡವರು ಭಾರತದಲ್ಲಿದ್ದಾರೆ ಎಂದು ಬರೆಯಲಾಗಿದೆ.

ಮತ್ತೊಬ್ಬ ಬಳಕೆದಾರರಾದ @chaijeeevi, ಪಾವತಿ ಬಗ್ಗೆ ಹೇಳದೆ ಅವರು ನಮಗೆ ಚಿಕಿತ್ಸೆ ನೀಡುವ ಬಗ್ಗೆ ಮಾತನಾಡುವುದು ಕೂಡ ಇಲ್ಲ ಮತ್ತು ಇಲ್ಲಿ ಅವರು ಶತ್ರುಗಳಿಗೆ ಉಚಿತ ಚಿಕಿತ್ಸೆಯನ್ನು ನೀಡುತ್ತಿದ್ದಾರೆ ಎಂದು ಬರೆದುಕೊಂಡಿದ್ದಾರೆ.

ಭಾರತೀಯ ಸಾಮಾಜಿಕ ಮಾಧ್ಯಮ ಬಳಕೆದಾರರ ಈ ಪೋಸ್ಟ್‌ ಬಗ್ಗೆ ಪ್ರತಿಕ್ರಿಯಿಸಿದ @TheLiverDoc ಆನ್ ಎಕ್ಸ್ ಎಂದು ಕರೆಯಲ್ಪಡುವ ಡಾ ಸಿರಿಯಾಕ್ ಅಬ್ಬಿ ಫಿಲಿಪ್ಸ್, ಇದು ವೈದ್ಯಕೀಯ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿ. ಕಾಮೆಂಟ್‌ ಮಾಡುವ ವಿಭಾಗದಲ್ಲಿರುವ ಹೆಚ್ಚಿನ ಸಂಖ್ಯೆಯ ಜನರು ಮಾನವೀಯತೆಯನ್ನು ಅರ್ಥ  ಅರ್ಥಮಾಡಿಕೊಳ್ಳುವುದಿಲ್ಲ. ಇದು ವೈದ್ಯಕೀಯ ಉಪಚಾರದ ಮೂಲವಾಗಿದೆ. ಆರೋಗ್ಯ ಸೇವೆಯು ಸಾರ್ವತ್ರಿಕ ಹಕ್ಕಾಗಿದ್ದು, ನಕಾರಾತ್ಮಕವಾಗಿ ಕಾಮೆಂಟ್ ಮಾಡುವವರು ನಾಚಿಕೆಪಡಬೇಕು ಎಂದು ಹೇಳಿದ್ದಾರೆ.

ಇದನ್ನು ಓದಿ: ಬರಪರಿಹಾರ: ಮೋದಿಗೆ ಶ್ಲಾಘಿಸಿ ಕನ್ನಡಿಗರಿಂದ ಉಗಿಸಿಕೊಂಡ ಬಿಜೆಪಿ ನಾಯಕರು: ರಿಪೋರ್ಟ್ ಓದಿ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...