Homeಮುಖಪುಟಪಾಕಿಸ್ತಾನದ ಯುವತಿಗೆ ಚೆನ್ನೈನಲ್ಲಿ ಹೃದಯ ಕಸಿ: ದ್ವೇಷ ಕಾರಿದ ಕೆಲ ಬಲಪಂಥೀಯ 'ಎಕ್ಸ್‌' ಬಳಕೆದಾರರು

ಪಾಕಿಸ್ತಾನದ ಯುವತಿಗೆ ಚೆನ್ನೈನಲ್ಲಿ ಹೃದಯ ಕಸಿ: ದ್ವೇಷ ಕಾರಿದ ಕೆಲ ಬಲಪಂಥೀಯ ‘ಎಕ್ಸ್‌’ ಬಳಕೆದಾರರು

- Advertisement -
- Advertisement -

ಚೆನ್ನೈನಲ್ಲಿ ಪಾಕಿಸ್ತಾನದ ಪ್ರಜೆಯೋರ್ವರಿಗೆ ಹೃದಯ ಶಸ್ತ್ರಚಿಕಿತ್ಸೆ ನಡೆಸಿದ್ದಕ್ಕೆ ಕೆಲ ಬಲಪಂಥೀಯ ಸಾಮಾಜಿಕ ಮಾಧ್ಯಮ ಬಳಕೆದಾರರು ಆಕ್ರೋಶ ವ್ಯಕ್ತಪಡಿಸಿ ಪೋಸ್ಟ್‌ ಮಾಡಿದ್ದು, ಮಾನವೀಯತೆಯನ್ನೇ ಅಣಕಿಸುವಂತೆ ಮಾಡಿದೆ.

ಅಂಗಾಂಗ ದಾನಕ್ಕೆ ವಿದೇಶಿಯರಿಗೆ ಆದ್ಯತೆ ನೀಡಿದ್ದಕ್ಕಾಗಿ ಆರೋಗ್ಯ ವ್ಯವಸ್ಥೆಗೆ ಅವಮಾನ, ಪಾಕಿಸ್ತಾನದ ಪ್ರಜೆಯ ಮೇಲಿನ ಧಾರ್ಮಿಕ ಮತ್ತು ಪ್ರಾದೇಶಿಕ ದ್ವೇಷವನ್ನು ಪ್ರಚೋದಿಸುವುದು, ಚೆನ್ನೈನ ‘ಎನ್‌ಜಿಒ’ ಹೃದಯ ಕಸಿ ಶಸ್ತ್ರಚಿಕಿತ್ಸೆಗೆ ವೆಚ್ಚ ಭರಿಸಿದೆ ಎಂದು ಬಲಪಂಥೀಯ ಸಾಮಾಜಿಕ ಮಾಧ್ಯಮ ಬಳಕೆದಾರರು ಟೀಕಿಸಿರುವುದು ಕಂಡು ಬಂದಿದೆ.

ಇಲ್ಲಿ ನಾವು ಪಾಕಿಸ್ತಾನಿಯರಿಗೆ ನಮ್ಮ ಹೃದಯವನ್ನು ನೀಡುತ್ತಿದ್ದೇವೆ, ಆದರೆ ವೈಟಿಂಗ್‌ ಲಿಸ್ಟ್‌ನಲ್ಲಿದ್ದ ಭಾರತದ ಪ್ರಜೆಗೆ ಇದನ್ನು ನೀಡಬಹುದಿತ್ತು ಎಂದು ಎಕ್ಸ್‌ ಬಳಕೆದಾರರು ಬರೆದಿದ್ದಾರೆ.

ಅಂಗಗಳನ್ನು ಬಯಸುತ್ತಿರುವ ವಿದೇಶಿ ಪ್ರಜೆಗಳ ಪಟ್ಟಿಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ NOTTO ನೋಡಿಕೊಳ್ಳುತ್ತದೆ. ವೈಟಿಂಗ್‌ ಲಿಸ್ಟ್‌ನಲ್ಲಿ ಯಾವುದೇ ಭಾರತೀಯರು ಇಲ್ಲದಿದ್ದರೆ ಮಾತ್ರ ಅಂಗವನ್ನು ವಿದೇಶಿಯರಿಗೆ ಹಂಚಲಾಗುತ್ತದೆ. ಇದನ್ನು NOTTOನ ಮಾಜಿ ನಿರ್ದೇಶಕಿ ಡಾ. ವಸಂತಿ ರಮೇಶ್ ಅವರು 2018ರಲ್ಲಿ ದೃಢಪಡಿಸಿದ್ದರು.

ಪಾಕಿಸ್ತಾನದ 19 ವರ್ಷದ ಆಯೇಷಾ ರಶನ್ 2019ರಿಂದ NOTTOನ ವೈಟಿಂಗ್‌ ಲಿಸ್ಟ್‌ನಲ್ಲಿದ್ದರು. ಆಕೆ ಹೃದಯ ಕಸಿಗೆ ತನ್ನ ವಿನಂತಿಯನ್ನು ಸಲ್ಲಿಸಿದ ಐದು ವರ್ಷಗಳ ನಂತರ 2024ರ ಜನವರಿಯಲ್ಲಿ 69 ವರ್ಷದ ದೆಹಲಿ ಮೂಲದ ದಾನಿಯ ಹೃದಯವನ್ನು ಕಸಿಗೆ ಆಕೆಯನ್ನು ಆಯ್ಕೆ ಮಾಡಲಾಗಿತ್ತು. ಆಯೇಷಾ ಚಿಕಿತ್ಸೆಗಾಗಿ 2014 ರಲ್ಲಿ ಭಾರತಕ್ಕೆ ಭೇಟಿ ನೀಡಿದಾಗ ವೈದ್ಯರು ಅವಳಿಗೆ ಸಹಾಯ ಮಾಡಲು ಹೃದಯ ಪಂಪ್‌ನ್ನು ಅಳವಡಿಸಿದ್ದರು. ಆದರೆ ನಂತರ ಅದು ನಿಷ್ಕ್ರಿಯವಾಗಿತ್ತು.

ಆಯೇಷಾ ಅವರ ಶಸ್ತ್ರಚಿಕಿತ್ಸೆಗಾಗಿ ಹೃದಯವನ್ನು ದೆಹಲಿಗೆ ವಿಮಾನದಲ್ಲಿ ಸಾಗಿಸಲಾಯಿತು. ಚೆನ್ನೈ ಮೂಲದ ಎಂಜಿಎಂ ಹೆಲ್ತ್‌ಕೇರ್‌ನಲ್ಲಿ ಕಸಿ ಮಾಡಲಾಗಿದ್ದು, ಆಕೆಯ ಚಿಕಿತ್ಸಾ ವೆಚ್ಚವನ್ನು ಐಶ್ವರ್ಯ ಟ್ರಸ್ಟ್ ಎಂಬ ಎನ್‌ಜಿಒ ಭರಿಸಿತ್ತು. ಆಕೆಯ ಚಿಕಿತ್ಸಾ ಬಿಲ್ಲುಗಳನ್ನು ಪಾವತಿಸಲು ಕೆಲ ರೋಗಿಗಳು ಮತ್ತು ವೈದ್ಯರು ಸಹ ಸಹಾಯ ಮಾಡಿದ್ದರು.

ಈ ಕುರಿತು ಪ್ರತಿಕ್ರಿಯಿಸಿದ ಎಂಜಿಎಂ ಹೆಲ್ತ್‌ಕೇರ್‌ನ ವೈದ್ಯ ಕೆಜಿ ಸುರೇಶ್ ರಾವ್, ನಮಗೆ ರೋಗಿಗಳು-ರೋಗಿಗಳು. ನಾವು ಅವರ ಧರ್ಮ ಅಥವಾ ಅವರ ಜನ್ಮಸ್ಥಳವನ್ನು ನೋಡುವುದಿಲ್ಲ. ನಾವು ಸಾಧ್ಯವಿರುವ ಸಹಾಯವನ್ನು ಮಾಡುತ್ತೇವೆ. ಈ ಸಂದರ್ಭದಲ್ಲಿ ಅವಳು ಪಾಕಿಸ್ತಾನಿ ಅಥವಾ ಭಾರತೀಯ ಎಂದು ನಾವು ನೋಡಲಿಲ್ಲ. ಅವಳು ರೋಗಿ ಮತ್ತು ಚಿಕ್ಕ ಯುವತಿ ಎಂದು ನೋಡಿದೆವು ಎಂದು ಹೇಳಿದ್ದಾರೆ.

2019ರಿಂದ ಆಯೇಷಾಗೆ ಚಿಕಿತ್ಸೆ ನೀಡುತ್ತಿರುವ ಹಿರಿಯ ಹೃದಯ ಶಸ್ತ್ರಚಿಕಿತ್ಸಕ ಡಾ.ಕೆ.ಆರ್.ಬಾಲಕೃಷ್ಣನ್ ಮಾತನಾಡುತ್ತಾ, ಆಯೇಷಾ ಅವರ ತಾಯಿ ಒಂಟಿ ಪೋಷಕರಾಗಿದ್ದರು ಮತ್ತು ಮಗಳ ಚಿಕಿತ್ಸೆಯನ್ನು ಮುಂದುವರಿಸಲು ಕುಟುಂಬ ಬೇಕಾದಷ್ಟು ಸಂಪನ್ಮೂಲಗಳನ್ನು ಹೊಂದಿರಲಿಲ್ಲ ಎಂದು ಹೇಳಿದ್ದಾರೆ.

@colourSaffron ಎಂಬ ಎಕ್ಸ್‌ ಖಾತೆಯಲ್ಲಿ, ಭಾರತ ಏಕೆ ಉಚಿತ ಹೃದಯ ಕಸಿ ಮಾಡುತ್ತಿದೆ, ಈ ಕೃತಜ್ಞತೆಯಿಲ್ಲದ ಜನರಿಗಿಂತ ಹೆಚ್ಚಿನ ಅಗತ್ಯವಿರುವ ಅನೇಕ ಬಡವರು ಭಾರತದಲ್ಲಿದ್ದಾರೆ ಎಂದು ಬರೆಯಲಾಗಿದೆ.

ಮತ್ತೊಬ್ಬ ಬಳಕೆದಾರರಾದ @chaijeeevi, ಪಾವತಿ ಬಗ್ಗೆ ಹೇಳದೆ ಅವರು ನಮಗೆ ಚಿಕಿತ್ಸೆ ನೀಡುವ ಬಗ್ಗೆ ಮಾತನಾಡುವುದು ಕೂಡ ಇಲ್ಲ ಮತ್ತು ಇಲ್ಲಿ ಅವರು ಶತ್ರುಗಳಿಗೆ ಉಚಿತ ಚಿಕಿತ್ಸೆಯನ್ನು ನೀಡುತ್ತಿದ್ದಾರೆ ಎಂದು ಬರೆದುಕೊಂಡಿದ್ದಾರೆ.

ಭಾರತೀಯ ಸಾಮಾಜಿಕ ಮಾಧ್ಯಮ ಬಳಕೆದಾರರ ಈ ಪೋಸ್ಟ್‌ ಬಗ್ಗೆ ಪ್ರತಿಕ್ರಿಯಿಸಿದ @TheLiverDoc ಆನ್ ಎಕ್ಸ್ ಎಂದು ಕರೆಯಲ್ಪಡುವ ಡಾ ಸಿರಿಯಾಕ್ ಅಬ್ಬಿ ಫಿಲಿಪ್ಸ್, ಇದು ವೈದ್ಯಕೀಯ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿ. ಕಾಮೆಂಟ್‌ ಮಾಡುವ ವಿಭಾಗದಲ್ಲಿರುವ ಹೆಚ್ಚಿನ ಸಂಖ್ಯೆಯ ಜನರು ಮಾನವೀಯತೆಯನ್ನು ಅರ್ಥ  ಅರ್ಥಮಾಡಿಕೊಳ್ಳುವುದಿಲ್ಲ. ಇದು ವೈದ್ಯಕೀಯ ಉಪಚಾರದ ಮೂಲವಾಗಿದೆ. ಆರೋಗ್ಯ ಸೇವೆಯು ಸಾರ್ವತ್ರಿಕ ಹಕ್ಕಾಗಿದ್ದು, ನಕಾರಾತ್ಮಕವಾಗಿ ಕಾಮೆಂಟ್ ಮಾಡುವವರು ನಾಚಿಕೆಪಡಬೇಕು ಎಂದು ಹೇಳಿದ್ದಾರೆ.

ಇದನ್ನು ಓದಿ: ಬರಪರಿಹಾರ: ಮೋದಿಗೆ ಶ್ಲಾಘಿಸಿ ಕನ್ನಡಿಗರಿಂದ ಉಗಿಸಿಕೊಂಡ ಬಿಜೆಪಿ ನಾಯಕರು: ರಿಪೋರ್ಟ್ ಓದಿ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...