Homeಮುಖಪುಟಭಾರತದ ಪ್ರಮುಖ ಸ್ಥಳಗಳ ಮೇಲೆ 15 ಲಕ್ಷ ಸೈಬರ್ ದಾಳಿ ನಡೆಸಿದ ಪಾಕಿಸ್ತಾನಿ ಹ್ಯಾಕರ್‌ಗಳು!

ಭಾರತದ ಪ್ರಮುಖ ಸ್ಥಳಗಳ ಮೇಲೆ 15 ಲಕ್ಷ ಸೈಬರ್ ದಾಳಿ ನಡೆಸಿದ ಪಾಕಿಸ್ತಾನಿ ಹ್ಯಾಕರ್‌ಗಳು!

- Advertisement -
- Advertisement -

ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ದೇಶಾದ್ಯಂತ ಪ್ರಮುಖ ವೆಬ್‌ಸೈಟ್‌ಗಳು, ರಕ್ಷಣಾ ಸಿಬ್ಬಂದಿ ಮತ್ತು ಪತ್ರಕರ್ತರು ಗುರಿಯಾಗಿಸಿಕೊಂಡು 15 ಲಕ್ಷಕ್ಕೂ ಹೆಚ್ಚು ಸೈಬರ್ ದಾಳಿಗಳನ್ನು ನಡೆಸಿದ ಏಳು ಅಡ್ವಾನ್ಸ್ಡ್ ಪರ್ಸಿಸ್ಟೆಂಟ್ ಥ್ರೆಟ್ (ಎಪಿಟಿ) ಗುಂಪುಗಳನ್ನು ಭಾರತೀಯ ಸೈಬರ್ ಏಜೆನ್ಸಿಗಳು ಗುರುತಿಸಿವೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಭಾರತದ ಪ್ರಮುಖ ಸ್ಥಳಗಳ

ಕೆಲವು ಪಾಕಿಸ್ತಾನಿ ಗುಪ್ತಚರ ಕಾರ್ಯಾಚರಣೆಗಳು (ಪಿಐಒಗಳು) ‘ಡ್ಯಾನ್ಸ್ ಆಫ್ ಹಿಲರಿ’ ಮತ್ತು ‘ಕಾಲ್ಸ್ ಫ್ರಮ್ ಮಿಲಿಟರಿ’ ಎಂಬ ಸಂಕೇತನಾಮ ಹೊಂದಿರುವ ಮಾಲ್‌ವೇರ್‌ಗಳ ಮೂಲಕ ಭಾರತದಲ್ಲಿ ರಕ್ಷಣಾ ಸಿಬ್ಬಂದಿ ಮತ್ತು ಪತ್ರಕರ್ತರು ಬಳಸುವ ಮೊಬೈಲ್ ಫೋನ್‌ಗಳನ್ನು ಗುರಿಯಾಗಿಸಿಕೊಂಡಿರುವುದು ಕಂಡುಬಂದಿದೆ ಎಂದು ಅವರು ಹೇಳಿದ್ದಾರೆ.

ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಮಧ್ಯಪ್ರಾಚ್ಯ ಪ್ರದೇಶದಿಂದ ಈ ದಾಳಿಗಳು ನಡೆದಿರುವುದರಿಂದ 15 ಲಕ್ಷ ಸೈಬರ್ ದಾಳಿ ಪ್ರಯತ್ನಗಳಲ್ಲಿ ಕೇವಲ 150 ಮಾತ್ರ ಯಶಸ್ವಿಯಾಗಬಹುದು ಎಂದು ಅಧಿಕಾರಿಗಳು ಹೇಳಿದ್ದಾರೆ.

“ಭಾರತ-ಪಾಕಿಸ್ತಾನ ಎರಡೂ ಕಡೆಯಿಂದ ಯಾವುದೇ ಗುಂಡಿನ ದಾಳಿ ನಡೆಸದಿರುವ ಒಪ್ಪಂದಕ್ಕೆ ಬಂದ ನಂತರ ಭಾರತದಲ್ಲಿ ಸರ್ಕಾರಿ ವೆಬ್‌ಸೈಟ್‌ಗಳ ಮೇಲಿನ ಸೈಬರ್ ದಾಳಿಗಳು ಕಡಿಮೆಯಾಗಿವೆ ಎಂದು ನಮ್ಮ ತನಿಖೆಯಲ್ಲಿ ಕಂಡುಬಂದಿದೆ. ಅದಾಗ್ಯೂ, ಸಂಪೂರ್ಣವಾಗಿ ನಿಂತಿಲ್ಲ. ಪಾಕಿಸ್ತಾನ, ಬಾಂಗ್ಲಾದೇಶ, ಇಂಡೋನೇಷ್ಯಾ, ಮೊರಾಕೊ ಮತ್ತು ಮಧ್ಯಪ್ರಾಚ್ಯ ದೇಶಗಳಿಂದ ಈ ದಾಳಿಗಳು ಮುಂದುವರೆದಿವೆ.” ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ದಾಳಿಯ ಸ್ವರೂಪದ ವಿವರಗಳನ್ನು ನೀಡಿದ ಅಧಿಕಾರಿ, ದಾಳಿಕೋರರು ಮಾಲ್‌ವೇರ್ ಅಭಿಯಾನಗಳನ್ನು ಬಳಸಿದ್ದಾರೆ. ಇದರಲ್ಲಿ ‘ಡಿಸ್ಟ್ರಿಬ್ಯೂಟೆಡ್ ಡಿನೈಯಲ್-ಆಫ್-ಸರ್ವಿಸ್ (DDoS) ದಾಳಿಗಳು’ ಮತ್ತು ‘GPS ವಂಚನೆ’ ಸೇರಿವೆ ಎಂದು ಅವರು ಹೇಳಿದ್ದಾರೆ.

ಈ ದಾಳಿಯ ಮೂಲಕ ಭಾರತೀಯ ವೆಬ್‌ಸೈಟ್‌ಗಳ ವಿರೂಪಗೊಳಿಸುವಿಕೆಯ ಪ್ರಕರಣಗಳು ಸಹ ವರದಿಯಾಗಿವೆ ಎಂದು ಅವರು ಹೇಳಿದ್ದಾರೆ. ಅದಾಗ್ಯೂ, ಅಂತಹ ಅನೇಕ ದಾಳಿಗಳನ್ನು ತಡೆಯಲಾಗಿದ್ದು, ದೇಶದ ನಿರ್ಣಾಯಕ ಮೂಲಸೌಕರ್ಯವನ್ನು ಉಳಿಸಲಾಗಿದೆ ಎಂದು ಅವರು ಹೇಳಿದ್ದಾರೆ. ಭಾರತದ ಪ್ರಮುಖ ಸ್ಥಳಗಳ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮುರ್ಷಿದಾಬಾದ್ ಹಿಂಸಾಚಾರ | ಎಸ್‌ಐಟಿ, ಸಿಬಿಐ ತನಿಖೆ ಕೋರಿ ಸಲ್ಲಿಸಿದ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್ ನಕಾರ

ಮುರ್ಷಿದಾಬಾದ್ ಹಿಂಸಾಚಾರ | ಎಸ್‌ಐಟಿ, ಸಿಬಿಐ ತನಿಖೆ ಕೋರಿ ಸಲ್ಲಿಸಿದ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್ ನಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...

ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರನ್ನು ವಾಪಸ್ ಕರೆತಂದ ಕೇಂದ್ರ ಸರ್ಕಾರ

ವರ್ಷದ ಹಿಂದೆ, ಅಂದರೆ 2025ರ ಜೂನ್ ತಿಂಗಳಲ್ಲಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರು ಬುಧವಾರ (ಜು.8) ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ತಮ್ಮ ಗ್ರಾಮಕ್ಕೆ ಹಿಂದಿರುಗಿದ್ದಾರೆ ಎಂದು ವರದಿಯಾಗಿದೆ. ಸುನಾಲಿ...

ಬೆಂಗಳೂರಿನ ಜ್ವಲಂತ ನಾಗರಿಕ ಸಮಸ್ಯೆಗಳ ವಿರುದ್ಧ ಜುಲೈ 12ಕ್ಕೆ ಬೃಹತ್ ‘ಜನಾಕ್ರೋಶ ಸಮಾವೇಶ

ಸಿಲಿಕಾನ್ ಸಿಟಿ ಬೆಂಗಳೂರಿನ ನಾಗರಿಕರು ಪ್ರತಿನಿತ್ಯ ಎದುರಿಸುತ್ತಿರುವ ನರಕಸದೃಶ ಸಮಸ್ಯೆಗಳ ವಿರುದ್ಧ ಮತ್ತು ಆಡಳಿತ ವ್ಯವಸ್ಥೆಯ ಭ್ರಷ್ಟಾಚಾರವನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೃಹತ್ ‘ಜನಾಕ್ರೋಶ ಸಮಾವೇಶ’ವನ್ನು ಹಮ್ಮಿಕೊಂಡಿದೆ. ಈ ‘ಜನಾಕ್ರೋಶ...

ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

ಮಹಾರಾಷ್ಟ್ರದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಪ್ರಕೃತಿಯ ವಿಕೋಪದ ನಡುವೆ ರಾಯಗಢ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್...

ಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

ತೆಲುಗು ಯೂಟ್ಯೂಬರ್, ಸಾಮಾಜಿಕ ಕಾರ್ಯಕರ್ತ ರಾವಣ್‌ (ಬಚಲಕೂರಿ ಜೋಸೆಫ್) ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಬಂಧಿಸಿದ್ದು, ಆಂಧ್ರಪ್ರದೇಶ ಪೊಲೀಸರು ಹೈದರಾಬಾದ್‌ನಲ್ಲಿರುವ ಯೂಟ್ಯೂಬರ್ ರಾವಣ್ ನಿವಾಸದಲ್ಲಿ...

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...