Homeಅಂತರಾಷ್ಟ್ರೀಯಸಿವಿಲ್ ವಾರ್‌ ಸುದ್ದಿ: ಭಾರತೀಯ ಮಾಧ್ಯಮವನ್ನು ಟ್ರೋಲ್ ಮಾಡುತ್ತಿರುವ ಪಾಕಿಸ್ತಾನಿಯರು!

ಸಿವಿಲ್ ವಾರ್‌ ಸುದ್ದಿ: ಭಾರತೀಯ ಮಾಧ್ಯಮವನ್ನು ಟ್ರೋಲ್ ಮಾಡುತ್ತಿರುವ ಪಾಕಿಸ್ತಾನಿಯರು!

ಟೈಮ್ಸ್ ನೌ, ಜೀ ನ್ಯೂಸ್, ದಿ ಪ್ರಿಂಟ್.ಇನ್ ಮತ್ತು ಇಂಡಿಯಾ. ಕಾಮ್ ಸೇರಿದಂತೆ ಪ್ರಮುಖ ಟಿವಿ ಮತ್ತು ಆನ್‌ಲೈನ್ ನ್ಯೂಸ್ ಪೋರ್ಟಲ್‌ಗಳು 'ನಾಗರಿಕ ಯುದ್ಧದಂತಹ ಪರಿಸ್ಥಿತಿಯನ್ನು' ವರದಿ ಮಾಡುತ್ತಿವೆ.

- Advertisement -
- Advertisement -

ಅಕ್ಟೋಬರ್‌ 21 ರಂದು ಪಾಕಿಸ್ತಾನದ ಕರಾಚಿಯಲ್ಲಿ ನಾಲ್ಕು ಅಂತಸ್ತಿನ ಕಟ್ಟಡದಲ್ಲಿ ಸಂಭವಿಸಿದ ಸ್ಫೋಟದ ಕುರಿತು ಭಾರತೀಯ ಮಾಧ್ಯಮಗಳು ಮಾಡಿದ ವರದಿ ಈಗ ಪಾಕಿಸ್ತಾನದಲ್ಲಿ ಟ್ರೋಲ್ ಆಗಿದೆ. ಮಾಧ್ಯಮಗಳು ಸಿವಿಲ್ ವಾರ್ ಎಂಬ ಪದ ಬಳಸಿರುವುದು ಇದಕ್ಕೆ ಕಾರಣವಾಗಿದೆ.

ಮೊನ್ನೆ ನಡೆದ ಸ್ಫೋಟದಲ್ಲಿ ಕನಿಷ್ಠ ಮೂರು ಜನರು ಸಾವನ್ನಪ್ಪಿದ್ದು, 15 ಮಂದಿ ಗಾಯಗೊಂಡಿದ್ದಾರೆ ಎಂದು ಡಾನ್ ಪತ್ರಿಕೆ ವರದಿ ಮಾಡಿತ್ತು. ಇದು ಸಿಲಿಂಡರ್‌ ಸ್ಫೋಟವೂ ಆಗಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದರು. ಆದರೆ ಅದಕ್ಕೂ ಮುನ್ನವೇ ಭಾರತೀಯ ಮಾಧ್ಯಮಗಳು ಇದು ಸಿವಿಲ್ ವಾರ್ ಎಂದು ಸುದ್ದಿ ಮಾಡಿದ್ದವು.

ಇದನ್ನೂ ವಿರೋಧಿಸಿ, ಭಾರತೀಯ ಮಾಧ್ಯಮಗಳನ್ನು ಟ್ರೋಲ್ ಮಾಡಿರುವ ಪಾಕಿಸ್ತಾನದ ಸಾಮಾಜಿಕ ಜಾಲತಾಣ ಬಳಕೆದಾರರು ಸಿವಿಲ್ ವಾರ್ ಎಂಬ ಪದ ಬಳಕೆ ಬಗ್ಗೆ ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ಭಾರತದಲ್ಲಿ ಮಾನವಹಕ್ಕು ಹೋರಾಟಗಾರರ ಬಂಧನವಾಗುತ್ತಿದೆ: ವಿಶ್ವಸಂಸ್ಥೆ ಕಳವಳ

ಕರಾಚಿಯನ್ನು ಭಾರತೀಯ ಮಾಧ್ಯಮಗಳು ತೋರಿಸಿರುವ ರೀತಿ ಮತ್ತು ಕರಾಚಿ ಇರುವ ನಿಜ ಸ್ಥಿತಿಗಳನ್ನು ಹಲವು ಆಯಾಮಗಳಲ್ಲಿ ಚಿತ್ರಿಸಿ ಟ್ರೋಲ್ ಮಾಡುತ್ತಿದ್ದಾರೆ.

ಚಲನಚಿತ್ರಗಳ ದೃಶ್ಯಗಳನ್ನು ಹಂಚಿಕೊಳ್ಳುತ್ತಾ, ಭಾರತೀಯ ಮಾಧ್ಯಮಗಳ ಪ್ರಕಾರ ಇಂದು ಕರಾಚಿಯಲ್ಲಿ ನಡೆದ ಸಿವಿಲ್ ವಾರ್‌ ದೃಶ್ಯಗಳು ಎಂದು ಕೀಟಲ್ ಮಾಡಿದ್ದಾರೆ.

ಇದನ್ನೂ ಓದಿ: ಭಾರತದಲ್ಲಿ ಪತ್ರಕರ್ತರಿಗೆ ಕಿರುಕುಳ: ಮೋದಿಗೆ ಪತ್ರ ಬರೆದ ಅಂತರಾಷ್ಟ್ರೀಯ ಪತ್ರಿಕಾ ಸಂಘಗಳು!

“ಕರಾಚಿಯಲ್ಲಿ ನಾಗರಿಕ ಯುದ್ಧ(ಸಿವಿಲ್ ವಾರ್) ನಡೆದ ಮೇಲೆ, ಲಾಹೋರ್ ಮೇಲೆ ಗಾಡ್ಜಿಲ್ಲಾ ದಾಳಿ ಮಾಡಿದೆ” ಎಂದು ಟ್ವಿಟ್ಟರ್‌ ಬಳಕೆದಾರರೊಬ್ಬರು ಪೋಸ್ಟ್ ಮಡಿದ್ದು, ಚಿತ್ರಕ್ಕೆ ಭಾರತೀಯ ಸುದ್ದಿ ಚಾನೆಲ್‌ಗಳ ಕೃಪೆ ಹಾಕಿದ್ದಾರೆ.

ಇನ್ನೂ ಕೆಲವರು, ಬ್ರೇಕಿಂಗ್ ನ್ಯೂಸ್‌ಗಳನ್ನು ಹೇಳುವ ದಾಟಿಯಲ್ಲಿ, ವ್ಯಂಗ್ಯವಾಡಿ ತಮ್ಮ ಪೋಸ್ಟ್‌ಗಳನ್ನು ಶೇರ್‌ ಮಾಡಿದ್ದಾರೆ.

ಬಾಲಿವುಡ್ ಚಿತ್ರದ ಪೋಸ್ಟರ್ ಹಂಚಿಕೊಂಡ ಮತ್ತೊಬ್ಬ ಟ್ವಿಟರ್ ಬಳಕೆದಾರ, ’ನಾನು ಗುಲ್ಶನ್-ಇ-ಭಾಗ್‌ ಕರಾಚಿಯಿಂದ ಲೈವ್ ನೀಡುತ್ತಿದ್ದೇನೆ. ಇಲ್ಲಿ ಪೊಲೀಸ್ ವ್ಯಕ್ತಿಯೊಬ್ಬ ಸಿವಿಲ್ ವಾರ್‌ ನಡೆಯುವಾಗ,‌ ಸಿವಿಲ್ ಡ್ರೆಸ್‌ನಲ್ಲಿ ಇದ್ದಾರೆ ಎಂದು ವಿಶ್ವಯುದ್ಧ3 ಎಂಬ ಹ್ಯಾಶ್‌ಟ್ಯಾಗ್‌ನೊಂದಿಗೆ ಶೇರ್ ಮಾಡಿದ್ದಾರೆ.

ಇದನ್ನೂ ಓದಿ: ಅಸ್ಟ್ರಾಜೆನೆಕಾ ಕೊರೊನಾ ಲಸಿಕೆ ಪ್ರಯೋಗ: ಸ್ವಯಂಸೇವಕ ಸಾವು

ಇನ್ನೂ ಕೆಲವರು ಸಿವಿಲ್ ವಾರ್‌ ನಡೆಯಲು ಬಿರಿಯಾನಿ ಮತ್ತು ಪಲಾವ್ ಕಾರಣ ಎಂಬಂತ ಪೋಸ್ಟ್‌ಗಳನ್ನು ಹಾಕಿ ಗೇಲಿ ಮಾಡಿದ್ದಾರೆ.

ಟೈಮ್ಸ್ ನೌ, ಜೀ ನ್ಯೂಸ್, ದಿ ಪ್ರಿಂಟ್.ಇನ್ ಮತ್ತು ಇಂಡಿಯಾ. ಕಾಮ್ ಸೇರಿದಂತೆ ಪ್ರಮುಖ ಟಿವಿ ಮತ್ತು ಆನ್‌ಲೈನ್ ನ್ಯೂಸ್ ಪೋರ್ಟಲ್‌ಗಳು ಪಾಕಿಸ್ತಾನದಲ್ಲಿ ‘ನಾಗರಿಕ ಯುದ್ಧದಂತಹ ಪರಿಸ್ಥಿತಿ’ ಇದೆ ಎಂದು ವರದಿ ಮಾಡುತ್ತಿದ್ದು, ಸ್ಥಳೀಯ ಪೊಲೀಸ್ ಪಡೆಗಳು ಸೇನಾ ಬೆಟಾಲಿಯನ್‌ಗಳೊಂದಿಗೆ ಹೋರಾಡಿ ಸಿಂಧ್‌ನ ಪ್ರಾಂತೀಯ ಸರ್ಕಾರವನ್ನು ಉರುಳಿಸಲು ಪ್ರಯತ್ನಿಸುತ್ತಿವೆ ಎಂದಿದ್ದವು.

ಆದರೆ ಅಂತಹ ಯಾವುದೇ ವಿಷಯ ನಡೆಯುತ್ತಿಲ್ಲ. ಪಲಾಯನಗೈದ ಮಾಜಿ ಪ್ರಧಾನಿ ನವಾಜ್ ಷರೀಫ್ ಅವರ ಅಳಿಯ ಮೊಹಮ್ಮದ್ ಸಫ್ದಾರ್ ಅವರನ್ನು ಬಂಧಿಸುವಂತೆ ಒತ್ತಡ ಹೇರಿದ್ದ, ಸಿಂಧ್ ಪೊಲೀಸ್ ಮುಖ್ಯಸ್ಥ ಮುಷ್ತಾಕ್ ಮೆಹರ್ ಅವರನ್ನು ಬಂಧಿಸಿರುವ ಸೈನ್ಯದ ನಿರ್ಧಾರದಲ್ಲಿ ಸ್ವಲ್ಪ ಗೊಂದಲ ಉಂಟಾಗಿದೆ ಎಂದು ತಿಳಿದು ಬಂದಿದೆ.

ಆದರೆ ಭಾರತೀಯ ಮಾಧ್ಯಮಗಳು, ಸಿಂಧಿ ಮತ್ತು ಫೆಡರಲ್ ಪಡೆಗಳ ನಡುವೆ ನಾಗರಿಕ ಯುದ್ಧ ನಡೆಯುತ್ತಿದ್ದು, ನಗರವನ್ನು ಬೆಚ್ಚಿಬೀಳಿದೆ. ಕರಾಚಿಯು ಯುದ್ಧ ವಲಯವಾಗಿ ಮಾರ್ಪಟ್ಟಿದೆ ಎಂಬ ನಕಲಿ ಸುದ್ದಿ ಹರಡಿತ್ತು. ಇದನ್ನು ಪಾಕಿಸ್ತಾನದ ಸಾಮಾಜಿಕ ಜಾಲತಾಣದ ಖಾತೆಗಳು ಅಪಹಾಸ್ಯ ಮಾಡಲು ಪ್ರಾರಂಭಿಸಿದೆ.


ಇದನ್ನೂ ಓದಿ: ಬಿಹಾರ ಚುನಾವಣೆ: ಉಚಿತ ಕೊರೊನಾ ಲಸಿಕೆ ಪ್ರಸ್ತಾಪ; ಟ್ರೋಲ್‌ ಆದ ಬಿಜೆಪಿ ಪ್ರಣಾಳಿಕೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...