Homeಅಂತರಾಷ್ಟ್ರೀಯಸಿವಿಲ್ ವಾರ್‌ ಸುದ್ದಿ: ಭಾರತೀಯ ಮಾಧ್ಯಮವನ್ನು ಟ್ರೋಲ್ ಮಾಡುತ್ತಿರುವ ಪಾಕಿಸ್ತಾನಿಯರು!

ಸಿವಿಲ್ ವಾರ್‌ ಸುದ್ದಿ: ಭಾರತೀಯ ಮಾಧ್ಯಮವನ್ನು ಟ್ರೋಲ್ ಮಾಡುತ್ತಿರುವ ಪಾಕಿಸ್ತಾನಿಯರು!

ಟೈಮ್ಸ್ ನೌ, ಜೀ ನ್ಯೂಸ್, ದಿ ಪ್ರಿಂಟ್.ಇನ್ ಮತ್ತು ಇಂಡಿಯಾ. ಕಾಮ್ ಸೇರಿದಂತೆ ಪ್ರಮುಖ ಟಿವಿ ಮತ್ತು ಆನ್‌ಲೈನ್ ನ್ಯೂಸ್ ಪೋರ್ಟಲ್‌ಗಳು 'ನಾಗರಿಕ ಯುದ್ಧದಂತಹ ಪರಿಸ್ಥಿತಿಯನ್ನು' ವರದಿ ಮಾಡುತ್ತಿವೆ.

- Advertisement -
- Advertisement -

ಅಕ್ಟೋಬರ್‌ 21 ರಂದು ಪಾಕಿಸ್ತಾನದ ಕರಾಚಿಯಲ್ಲಿ ನಾಲ್ಕು ಅಂತಸ್ತಿನ ಕಟ್ಟಡದಲ್ಲಿ ಸಂಭವಿಸಿದ ಸ್ಫೋಟದ ಕುರಿತು ಭಾರತೀಯ ಮಾಧ್ಯಮಗಳು ಮಾಡಿದ ವರದಿ ಈಗ ಪಾಕಿಸ್ತಾನದಲ್ಲಿ ಟ್ರೋಲ್ ಆಗಿದೆ. ಮಾಧ್ಯಮಗಳು ಸಿವಿಲ್ ವಾರ್ ಎಂಬ ಪದ ಬಳಸಿರುವುದು ಇದಕ್ಕೆ ಕಾರಣವಾಗಿದೆ.

ಮೊನ್ನೆ ನಡೆದ ಸ್ಫೋಟದಲ್ಲಿ ಕನಿಷ್ಠ ಮೂರು ಜನರು ಸಾವನ್ನಪ್ಪಿದ್ದು, 15 ಮಂದಿ ಗಾಯಗೊಂಡಿದ್ದಾರೆ ಎಂದು ಡಾನ್ ಪತ್ರಿಕೆ ವರದಿ ಮಾಡಿತ್ತು. ಇದು ಸಿಲಿಂಡರ್‌ ಸ್ಫೋಟವೂ ಆಗಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದರು. ಆದರೆ ಅದಕ್ಕೂ ಮುನ್ನವೇ ಭಾರತೀಯ ಮಾಧ್ಯಮಗಳು ಇದು ಸಿವಿಲ್ ವಾರ್ ಎಂದು ಸುದ್ದಿ ಮಾಡಿದ್ದವು.

ಇದನ್ನೂ ವಿರೋಧಿಸಿ, ಭಾರತೀಯ ಮಾಧ್ಯಮಗಳನ್ನು ಟ್ರೋಲ್ ಮಾಡಿರುವ ಪಾಕಿಸ್ತಾನದ ಸಾಮಾಜಿಕ ಜಾಲತಾಣ ಬಳಕೆದಾರರು ಸಿವಿಲ್ ವಾರ್ ಎಂಬ ಪದ ಬಳಕೆ ಬಗ್ಗೆ ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ಭಾರತದಲ್ಲಿ ಮಾನವಹಕ್ಕು ಹೋರಾಟಗಾರರ ಬಂಧನವಾಗುತ್ತಿದೆ: ವಿಶ್ವಸಂಸ್ಥೆ ಕಳವಳ

ಕರಾಚಿಯನ್ನು ಭಾರತೀಯ ಮಾಧ್ಯಮಗಳು ತೋರಿಸಿರುವ ರೀತಿ ಮತ್ತು ಕರಾಚಿ ಇರುವ ನಿಜ ಸ್ಥಿತಿಗಳನ್ನು ಹಲವು ಆಯಾಮಗಳಲ್ಲಿ ಚಿತ್ರಿಸಿ ಟ್ರೋಲ್ ಮಾಡುತ್ತಿದ್ದಾರೆ.

ಚಲನಚಿತ್ರಗಳ ದೃಶ್ಯಗಳನ್ನು ಹಂಚಿಕೊಳ್ಳುತ್ತಾ, ಭಾರತೀಯ ಮಾಧ್ಯಮಗಳ ಪ್ರಕಾರ ಇಂದು ಕರಾಚಿಯಲ್ಲಿ ನಡೆದ ಸಿವಿಲ್ ವಾರ್‌ ದೃಶ್ಯಗಳು ಎಂದು ಕೀಟಲ್ ಮಾಡಿದ್ದಾರೆ.

ಇದನ್ನೂ ಓದಿ: ಭಾರತದಲ್ಲಿ ಪತ್ರಕರ್ತರಿಗೆ ಕಿರುಕುಳ: ಮೋದಿಗೆ ಪತ್ರ ಬರೆದ ಅಂತರಾಷ್ಟ್ರೀಯ ಪತ್ರಿಕಾ ಸಂಘಗಳು!

“ಕರಾಚಿಯಲ್ಲಿ ನಾಗರಿಕ ಯುದ್ಧ(ಸಿವಿಲ್ ವಾರ್) ನಡೆದ ಮೇಲೆ, ಲಾಹೋರ್ ಮೇಲೆ ಗಾಡ್ಜಿಲ್ಲಾ ದಾಳಿ ಮಾಡಿದೆ” ಎಂದು ಟ್ವಿಟ್ಟರ್‌ ಬಳಕೆದಾರರೊಬ್ಬರು ಪೋಸ್ಟ್ ಮಡಿದ್ದು, ಚಿತ್ರಕ್ಕೆ ಭಾರತೀಯ ಸುದ್ದಿ ಚಾನೆಲ್‌ಗಳ ಕೃಪೆ ಹಾಕಿದ್ದಾರೆ.

ಇನ್ನೂ ಕೆಲವರು, ಬ್ರೇಕಿಂಗ್ ನ್ಯೂಸ್‌ಗಳನ್ನು ಹೇಳುವ ದಾಟಿಯಲ್ಲಿ, ವ್ಯಂಗ್ಯವಾಡಿ ತಮ್ಮ ಪೋಸ್ಟ್‌ಗಳನ್ನು ಶೇರ್‌ ಮಾಡಿದ್ದಾರೆ.

ಬಾಲಿವುಡ್ ಚಿತ್ರದ ಪೋಸ್ಟರ್ ಹಂಚಿಕೊಂಡ ಮತ್ತೊಬ್ಬ ಟ್ವಿಟರ್ ಬಳಕೆದಾರ, ’ನಾನು ಗುಲ್ಶನ್-ಇ-ಭಾಗ್‌ ಕರಾಚಿಯಿಂದ ಲೈವ್ ನೀಡುತ್ತಿದ್ದೇನೆ. ಇಲ್ಲಿ ಪೊಲೀಸ್ ವ್ಯಕ್ತಿಯೊಬ್ಬ ಸಿವಿಲ್ ವಾರ್‌ ನಡೆಯುವಾಗ,‌ ಸಿವಿಲ್ ಡ್ರೆಸ್‌ನಲ್ಲಿ ಇದ್ದಾರೆ ಎಂದು ವಿಶ್ವಯುದ್ಧ3 ಎಂಬ ಹ್ಯಾಶ್‌ಟ್ಯಾಗ್‌ನೊಂದಿಗೆ ಶೇರ್ ಮಾಡಿದ್ದಾರೆ.

ಇದನ್ನೂ ಓದಿ: ಅಸ್ಟ್ರಾಜೆನೆಕಾ ಕೊರೊನಾ ಲಸಿಕೆ ಪ್ರಯೋಗ: ಸ್ವಯಂಸೇವಕ ಸಾವು

ಇನ್ನೂ ಕೆಲವರು ಸಿವಿಲ್ ವಾರ್‌ ನಡೆಯಲು ಬಿರಿಯಾನಿ ಮತ್ತು ಪಲಾವ್ ಕಾರಣ ಎಂಬಂತ ಪೋಸ್ಟ್‌ಗಳನ್ನು ಹಾಕಿ ಗೇಲಿ ಮಾಡಿದ್ದಾರೆ.

ಟೈಮ್ಸ್ ನೌ, ಜೀ ನ್ಯೂಸ್, ದಿ ಪ್ರಿಂಟ್.ಇನ್ ಮತ್ತು ಇಂಡಿಯಾ. ಕಾಮ್ ಸೇರಿದಂತೆ ಪ್ರಮುಖ ಟಿವಿ ಮತ್ತು ಆನ್‌ಲೈನ್ ನ್ಯೂಸ್ ಪೋರ್ಟಲ್‌ಗಳು ಪಾಕಿಸ್ತಾನದಲ್ಲಿ ‘ನಾಗರಿಕ ಯುದ್ಧದಂತಹ ಪರಿಸ್ಥಿತಿ’ ಇದೆ ಎಂದು ವರದಿ ಮಾಡುತ್ತಿದ್ದು, ಸ್ಥಳೀಯ ಪೊಲೀಸ್ ಪಡೆಗಳು ಸೇನಾ ಬೆಟಾಲಿಯನ್‌ಗಳೊಂದಿಗೆ ಹೋರಾಡಿ ಸಿಂಧ್‌ನ ಪ್ರಾಂತೀಯ ಸರ್ಕಾರವನ್ನು ಉರುಳಿಸಲು ಪ್ರಯತ್ನಿಸುತ್ತಿವೆ ಎಂದಿದ್ದವು.

ಆದರೆ ಅಂತಹ ಯಾವುದೇ ವಿಷಯ ನಡೆಯುತ್ತಿಲ್ಲ. ಪಲಾಯನಗೈದ ಮಾಜಿ ಪ್ರಧಾನಿ ನವಾಜ್ ಷರೀಫ್ ಅವರ ಅಳಿಯ ಮೊಹಮ್ಮದ್ ಸಫ್ದಾರ್ ಅವರನ್ನು ಬಂಧಿಸುವಂತೆ ಒತ್ತಡ ಹೇರಿದ್ದ, ಸಿಂಧ್ ಪೊಲೀಸ್ ಮುಖ್ಯಸ್ಥ ಮುಷ್ತಾಕ್ ಮೆಹರ್ ಅವರನ್ನು ಬಂಧಿಸಿರುವ ಸೈನ್ಯದ ನಿರ್ಧಾರದಲ್ಲಿ ಸ್ವಲ್ಪ ಗೊಂದಲ ಉಂಟಾಗಿದೆ ಎಂದು ತಿಳಿದು ಬಂದಿದೆ.

ಆದರೆ ಭಾರತೀಯ ಮಾಧ್ಯಮಗಳು, ಸಿಂಧಿ ಮತ್ತು ಫೆಡರಲ್ ಪಡೆಗಳ ನಡುವೆ ನಾಗರಿಕ ಯುದ್ಧ ನಡೆಯುತ್ತಿದ್ದು, ನಗರವನ್ನು ಬೆಚ್ಚಿಬೀಳಿದೆ. ಕರಾಚಿಯು ಯುದ್ಧ ವಲಯವಾಗಿ ಮಾರ್ಪಟ್ಟಿದೆ ಎಂಬ ನಕಲಿ ಸುದ್ದಿ ಹರಡಿತ್ತು. ಇದನ್ನು ಪಾಕಿಸ್ತಾನದ ಸಾಮಾಜಿಕ ಜಾಲತಾಣದ ಖಾತೆಗಳು ಅಪಹಾಸ್ಯ ಮಾಡಲು ಪ್ರಾರಂಭಿಸಿದೆ.


ಇದನ್ನೂ ಓದಿ: ಬಿಹಾರ ಚುನಾವಣೆ: ಉಚಿತ ಕೊರೊನಾ ಲಸಿಕೆ ಪ್ರಸ್ತಾಪ; ಟ್ರೋಲ್‌ ಆದ ಬಿಜೆಪಿ ಪ್ರಣಾಳಿಕೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...