Homeಅಂತರಾಷ್ಟ್ರೀಯಸಿವಿಲ್ ವಾರ್‌ ಸುದ್ದಿ: ಭಾರತೀಯ ಮಾಧ್ಯಮವನ್ನು ಟ್ರೋಲ್ ಮಾಡುತ್ತಿರುವ ಪಾಕಿಸ್ತಾನಿಯರು!

ಸಿವಿಲ್ ವಾರ್‌ ಸುದ್ದಿ: ಭಾರತೀಯ ಮಾಧ್ಯಮವನ್ನು ಟ್ರೋಲ್ ಮಾಡುತ್ತಿರುವ ಪಾಕಿಸ್ತಾನಿಯರು!

ಟೈಮ್ಸ್ ನೌ, ಜೀ ನ್ಯೂಸ್, ದಿ ಪ್ರಿಂಟ್.ಇನ್ ಮತ್ತು ಇಂಡಿಯಾ. ಕಾಮ್ ಸೇರಿದಂತೆ ಪ್ರಮುಖ ಟಿವಿ ಮತ್ತು ಆನ್‌ಲೈನ್ ನ್ಯೂಸ್ ಪೋರ್ಟಲ್‌ಗಳು 'ನಾಗರಿಕ ಯುದ್ಧದಂತಹ ಪರಿಸ್ಥಿತಿಯನ್ನು' ವರದಿ ಮಾಡುತ್ತಿವೆ.

- Advertisement -
- Advertisement -

ಅಕ್ಟೋಬರ್‌ 21 ರಂದು ಪಾಕಿಸ್ತಾನದ ಕರಾಚಿಯಲ್ಲಿ ನಾಲ್ಕು ಅಂತಸ್ತಿನ ಕಟ್ಟಡದಲ್ಲಿ ಸಂಭವಿಸಿದ ಸ್ಫೋಟದ ಕುರಿತು ಭಾರತೀಯ ಮಾಧ್ಯಮಗಳು ಮಾಡಿದ ವರದಿ ಈಗ ಪಾಕಿಸ್ತಾನದಲ್ಲಿ ಟ್ರೋಲ್ ಆಗಿದೆ. ಮಾಧ್ಯಮಗಳು ಸಿವಿಲ್ ವಾರ್ ಎಂಬ ಪದ ಬಳಸಿರುವುದು ಇದಕ್ಕೆ ಕಾರಣವಾಗಿದೆ.

ಮೊನ್ನೆ ನಡೆದ ಸ್ಫೋಟದಲ್ಲಿ ಕನಿಷ್ಠ ಮೂರು ಜನರು ಸಾವನ್ನಪ್ಪಿದ್ದು, 15 ಮಂದಿ ಗಾಯಗೊಂಡಿದ್ದಾರೆ ಎಂದು ಡಾನ್ ಪತ್ರಿಕೆ ವರದಿ ಮಾಡಿತ್ತು. ಇದು ಸಿಲಿಂಡರ್‌ ಸ್ಫೋಟವೂ ಆಗಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದರು. ಆದರೆ ಅದಕ್ಕೂ ಮುನ್ನವೇ ಭಾರತೀಯ ಮಾಧ್ಯಮಗಳು ಇದು ಸಿವಿಲ್ ವಾರ್ ಎಂದು ಸುದ್ದಿ ಮಾಡಿದ್ದವು.

ಇದನ್ನೂ ವಿರೋಧಿಸಿ, ಭಾರತೀಯ ಮಾಧ್ಯಮಗಳನ್ನು ಟ್ರೋಲ್ ಮಾಡಿರುವ ಪಾಕಿಸ್ತಾನದ ಸಾಮಾಜಿಕ ಜಾಲತಾಣ ಬಳಕೆದಾರರು ಸಿವಿಲ್ ವಾರ್ ಎಂಬ ಪದ ಬಳಕೆ ಬಗ್ಗೆ ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ಭಾರತದಲ್ಲಿ ಮಾನವಹಕ್ಕು ಹೋರಾಟಗಾರರ ಬಂಧನವಾಗುತ್ತಿದೆ: ವಿಶ್ವಸಂಸ್ಥೆ ಕಳವಳ

ಕರಾಚಿಯನ್ನು ಭಾರತೀಯ ಮಾಧ್ಯಮಗಳು ತೋರಿಸಿರುವ ರೀತಿ ಮತ್ತು ಕರಾಚಿ ಇರುವ ನಿಜ ಸ್ಥಿತಿಗಳನ್ನು ಹಲವು ಆಯಾಮಗಳಲ್ಲಿ ಚಿತ್ರಿಸಿ ಟ್ರೋಲ್ ಮಾಡುತ್ತಿದ್ದಾರೆ.

ಚಲನಚಿತ್ರಗಳ ದೃಶ್ಯಗಳನ್ನು ಹಂಚಿಕೊಳ್ಳುತ್ತಾ, ಭಾರತೀಯ ಮಾಧ್ಯಮಗಳ ಪ್ರಕಾರ ಇಂದು ಕರಾಚಿಯಲ್ಲಿ ನಡೆದ ಸಿವಿಲ್ ವಾರ್‌ ದೃಶ್ಯಗಳು ಎಂದು ಕೀಟಲ್ ಮಾಡಿದ್ದಾರೆ.

ಇದನ್ನೂ ಓದಿ: ಭಾರತದಲ್ಲಿ ಪತ್ರಕರ್ತರಿಗೆ ಕಿರುಕುಳ: ಮೋದಿಗೆ ಪತ್ರ ಬರೆದ ಅಂತರಾಷ್ಟ್ರೀಯ ಪತ್ರಿಕಾ ಸಂಘಗಳು!

“ಕರಾಚಿಯಲ್ಲಿ ನಾಗರಿಕ ಯುದ್ಧ(ಸಿವಿಲ್ ವಾರ್) ನಡೆದ ಮೇಲೆ, ಲಾಹೋರ್ ಮೇಲೆ ಗಾಡ್ಜಿಲ್ಲಾ ದಾಳಿ ಮಾಡಿದೆ” ಎಂದು ಟ್ವಿಟ್ಟರ್‌ ಬಳಕೆದಾರರೊಬ್ಬರು ಪೋಸ್ಟ್ ಮಡಿದ್ದು, ಚಿತ್ರಕ್ಕೆ ಭಾರತೀಯ ಸುದ್ದಿ ಚಾನೆಲ್‌ಗಳ ಕೃಪೆ ಹಾಕಿದ್ದಾರೆ.

ಇನ್ನೂ ಕೆಲವರು, ಬ್ರೇಕಿಂಗ್ ನ್ಯೂಸ್‌ಗಳನ್ನು ಹೇಳುವ ದಾಟಿಯಲ್ಲಿ, ವ್ಯಂಗ್ಯವಾಡಿ ತಮ್ಮ ಪೋಸ್ಟ್‌ಗಳನ್ನು ಶೇರ್‌ ಮಾಡಿದ್ದಾರೆ.

ಬಾಲಿವುಡ್ ಚಿತ್ರದ ಪೋಸ್ಟರ್ ಹಂಚಿಕೊಂಡ ಮತ್ತೊಬ್ಬ ಟ್ವಿಟರ್ ಬಳಕೆದಾರ, ’ನಾನು ಗುಲ್ಶನ್-ಇ-ಭಾಗ್‌ ಕರಾಚಿಯಿಂದ ಲೈವ್ ನೀಡುತ್ತಿದ್ದೇನೆ. ಇಲ್ಲಿ ಪೊಲೀಸ್ ವ್ಯಕ್ತಿಯೊಬ್ಬ ಸಿವಿಲ್ ವಾರ್‌ ನಡೆಯುವಾಗ,‌ ಸಿವಿಲ್ ಡ್ರೆಸ್‌ನಲ್ಲಿ ಇದ್ದಾರೆ ಎಂದು ವಿಶ್ವಯುದ್ಧ3 ಎಂಬ ಹ್ಯಾಶ್‌ಟ್ಯಾಗ್‌ನೊಂದಿಗೆ ಶೇರ್ ಮಾಡಿದ್ದಾರೆ.

ಇದನ್ನೂ ಓದಿ: ಅಸ್ಟ್ರಾಜೆನೆಕಾ ಕೊರೊನಾ ಲಸಿಕೆ ಪ್ರಯೋಗ: ಸ್ವಯಂಸೇವಕ ಸಾವು

ಇನ್ನೂ ಕೆಲವರು ಸಿವಿಲ್ ವಾರ್‌ ನಡೆಯಲು ಬಿರಿಯಾನಿ ಮತ್ತು ಪಲಾವ್ ಕಾರಣ ಎಂಬಂತ ಪೋಸ್ಟ್‌ಗಳನ್ನು ಹಾಕಿ ಗೇಲಿ ಮಾಡಿದ್ದಾರೆ.

ಟೈಮ್ಸ್ ನೌ, ಜೀ ನ್ಯೂಸ್, ದಿ ಪ್ರಿಂಟ್.ಇನ್ ಮತ್ತು ಇಂಡಿಯಾ. ಕಾಮ್ ಸೇರಿದಂತೆ ಪ್ರಮುಖ ಟಿವಿ ಮತ್ತು ಆನ್‌ಲೈನ್ ನ್ಯೂಸ್ ಪೋರ್ಟಲ್‌ಗಳು ಪಾಕಿಸ್ತಾನದಲ್ಲಿ ‘ನಾಗರಿಕ ಯುದ್ಧದಂತಹ ಪರಿಸ್ಥಿತಿ’ ಇದೆ ಎಂದು ವರದಿ ಮಾಡುತ್ತಿದ್ದು, ಸ್ಥಳೀಯ ಪೊಲೀಸ್ ಪಡೆಗಳು ಸೇನಾ ಬೆಟಾಲಿಯನ್‌ಗಳೊಂದಿಗೆ ಹೋರಾಡಿ ಸಿಂಧ್‌ನ ಪ್ರಾಂತೀಯ ಸರ್ಕಾರವನ್ನು ಉರುಳಿಸಲು ಪ್ರಯತ್ನಿಸುತ್ತಿವೆ ಎಂದಿದ್ದವು.

ಆದರೆ ಅಂತಹ ಯಾವುದೇ ವಿಷಯ ನಡೆಯುತ್ತಿಲ್ಲ. ಪಲಾಯನಗೈದ ಮಾಜಿ ಪ್ರಧಾನಿ ನವಾಜ್ ಷರೀಫ್ ಅವರ ಅಳಿಯ ಮೊಹಮ್ಮದ್ ಸಫ್ದಾರ್ ಅವರನ್ನು ಬಂಧಿಸುವಂತೆ ಒತ್ತಡ ಹೇರಿದ್ದ, ಸಿಂಧ್ ಪೊಲೀಸ್ ಮುಖ್ಯಸ್ಥ ಮುಷ್ತಾಕ್ ಮೆಹರ್ ಅವರನ್ನು ಬಂಧಿಸಿರುವ ಸೈನ್ಯದ ನಿರ್ಧಾರದಲ್ಲಿ ಸ್ವಲ್ಪ ಗೊಂದಲ ಉಂಟಾಗಿದೆ ಎಂದು ತಿಳಿದು ಬಂದಿದೆ.

ಆದರೆ ಭಾರತೀಯ ಮಾಧ್ಯಮಗಳು, ಸಿಂಧಿ ಮತ್ತು ಫೆಡರಲ್ ಪಡೆಗಳ ನಡುವೆ ನಾಗರಿಕ ಯುದ್ಧ ನಡೆಯುತ್ತಿದ್ದು, ನಗರವನ್ನು ಬೆಚ್ಚಿಬೀಳಿದೆ. ಕರಾಚಿಯು ಯುದ್ಧ ವಲಯವಾಗಿ ಮಾರ್ಪಟ್ಟಿದೆ ಎಂಬ ನಕಲಿ ಸುದ್ದಿ ಹರಡಿತ್ತು. ಇದನ್ನು ಪಾಕಿಸ್ತಾನದ ಸಾಮಾಜಿಕ ಜಾಲತಾಣದ ಖಾತೆಗಳು ಅಪಹಾಸ್ಯ ಮಾಡಲು ಪ್ರಾರಂಭಿಸಿದೆ.


ಇದನ್ನೂ ಓದಿ: ಬಿಹಾರ ಚುನಾವಣೆ: ಉಚಿತ ಕೊರೊನಾ ಲಸಿಕೆ ಪ್ರಸ್ತಾಪ; ಟ್ರೋಲ್‌ ಆದ ಬಿಜೆಪಿ ಪ್ರಣಾಳಿಕೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...