Homeಅಂತರಾಷ್ಟ್ರೀಯಸಿವಿಲ್ ವಾರ್‌ ಸುದ್ದಿ: ಭಾರತೀಯ ಮಾಧ್ಯಮವನ್ನು ಟ್ರೋಲ್ ಮಾಡುತ್ತಿರುವ ಪಾಕಿಸ್ತಾನಿಯರು!

ಸಿವಿಲ್ ವಾರ್‌ ಸುದ್ದಿ: ಭಾರತೀಯ ಮಾಧ್ಯಮವನ್ನು ಟ್ರೋಲ್ ಮಾಡುತ್ತಿರುವ ಪಾಕಿಸ್ತಾನಿಯರು!

ಟೈಮ್ಸ್ ನೌ, ಜೀ ನ್ಯೂಸ್, ದಿ ಪ್ರಿಂಟ್.ಇನ್ ಮತ್ತು ಇಂಡಿಯಾ. ಕಾಮ್ ಸೇರಿದಂತೆ ಪ್ರಮುಖ ಟಿವಿ ಮತ್ತು ಆನ್‌ಲೈನ್ ನ್ಯೂಸ್ ಪೋರ್ಟಲ್‌ಗಳು 'ನಾಗರಿಕ ಯುದ್ಧದಂತಹ ಪರಿಸ್ಥಿತಿಯನ್ನು' ವರದಿ ಮಾಡುತ್ತಿವೆ.

- Advertisement -
- Advertisement -

ಅಕ್ಟೋಬರ್‌ 21 ರಂದು ಪಾಕಿಸ್ತಾನದ ಕರಾಚಿಯಲ್ಲಿ ನಾಲ್ಕು ಅಂತಸ್ತಿನ ಕಟ್ಟಡದಲ್ಲಿ ಸಂಭವಿಸಿದ ಸ್ಫೋಟದ ಕುರಿತು ಭಾರತೀಯ ಮಾಧ್ಯಮಗಳು ಮಾಡಿದ ವರದಿ ಈಗ ಪಾಕಿಸ್ತಾನದಲ್ಲಿ ಟ್ರೋಲ್ ಆಗಿದೆ. ಮಾಧ್ಯಮಗಳು ಸಿವಿಲ್ ವಾರ್ ಎಂಬ ಪದ ಬಳಸಿರುವುದು ಇದಕ್ಕೆ ಕಾರಣವಾಗಿದೆ.

ಮೊನ್ನೆ ನಡೆದ ಸ್ಫೋಟದಲ್ಲಿ ಕನಿಷ್ಠ ಮೂರು ಜನರು ಸಾವನ್ನಪ್ಪಿದ್ದು, 15 ಮಂದಿ ಗಾಯಗೊಂಡಿದ್ದಾರೆ ಎಂದು ಡಾನ್ ಪತ್ರಿಕೆ ವರದಿ ಮಾಡಿತ್ತು. ಇದು ಸಿಲಿಂಡರ್‌ ಸ್ಫೋಟವೂ ಆಗಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದರು. ಆದರೆ ಅದಕ್ಕೂ ಮುನ್ನವೇ ಭಾರತೀಯ ಮಾಧ್ಯಮಗಳು ಇದು ಸಿವಿಲ್ ವಾರ್ ಎಂದು ಸುದ್ದಿ ಮಾಡಿದ್ದವು.

ಇದನ್ನೂ ವಿರೋಧಿಸಿ, ಭಾರತೀಯ ಮಾಧ್ಯಮಗಳನ್ನು ಟ್ರೋಲ್ ಮಾಡಿರುವ ಪಾಕಿಸ್ತಾನದ ಸಾಮಾಜಿಕ ಜಾಲತಾಣ ಬಳಕೆದಾರರು ಸಿವಿಲ್ ವಾರ್ ಎಂಬ ಪದ ಬಳಕೆ ಬಗ್ಗೆ ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ಭಾರತದಲ್ಲಿ ಮಾನವಹಕ್ಕು ಹೋರಾಟಗಾರರ ಬಂಧನವಾಗುತ್ತಿದೆ: ವಿಶ್ವಸಂಸ್ಥೆ ಕಳವಳ

ಕರಾಚಿಯನ್ನು ಭಾರತೀಯ ಮಾಧ್ಯಮಗಳು ತೋರಿಸಿರುವ ರೀತಿ ಮತ್ತು ಕರಾಚಿ ಇರುವ ನಿಜ ಸ್ಥಿತಿಗಳನ್ನು ಹಲವು ಆಯಾಮಗಳಲ್ಲಿ ಚಿತ್ರಿಸಿ ಟ್ರೋಲ್ ಮಾಡುತ್ತಿದ್ದಾರೆ.

ಚಲನಚಿತ್ರಗಳ ದೃಶ್ಯಗಳನ್ನು ಹಂಚಿಕೊಳ್ಳುತ್ತಾ, ಭಾರತೀಯ ಮಾಧ್ಯಮಗಳ ಪ್ರಕಾರ ಇಂದು ಕರಾಚಿಯಲ್ಲಿ ನಡೆದ ಸಿವಿಲ್ ವಾರ್‌ ದೃಶ್ಯಗಳು ಎಂದು ಕೀಟಲ್ ಮಾಡಿದ್ದಾರೆ.

ಇದನ್ನೂ ಓದಿ: ಭಾರತದಲ್ಲಿ ಪತ್ರಕರ್ತರಿಗೆ ಕಿರುಕುಳ: ಮೋದಿಗೆ ಪತ್ರ ಬರೆದ ಅಂತರಾಷ್ಟ್ರೀಯ ಪತ್ರಿಕಾ ಸಂಘಗಳು!

“ಕರಾಚಿಯಲ್ಲಿ ನಾಗರಿಕ ಯುದ್ಧ(ಸಿವಿಲ್ ವಾರ್) ನಡೆದ ಮೇಲೆ, ಲಾಹೋರ್ ಮೇಲೆ ಗಾಡ್ಜಿಲ್ಲಾ ದಾಳಿ ಮಾಡಿದೆ” ಎಂದು ಟ್ವಿಟ್ಟರ್‌ ಬಳಕೆದಾರರೊಬ್ಬರು ಪೋಸ್ಟ್ ಮಡಿದ್ದು, ಚಿತ್ರಕ್ಕೆ ಭಾರತೀಯ ಸುದ್ದಿ ಚಾನೆಲ್‌ಗಳ ಕೃಪೆ ಹಾಕಿದ್ದಾರೆ.

ಇನ್ನೂ ಕೆಲವರು, ಬ್ರೇಕಿಂಗ್ ನ್ಯೂಸ್‌ಗಳನ್ನು ಹೇಳುವ ದಾಟಿಯಲ್ಲಿ, ವ್ಯಂಗ್ಯವಾಡಿ ತಮ್ಮ ಪೋಸ್ಟ್‌ಗಳನ್ನು ಶೇರ್‌ ಮಾಡಿದ್ದಾರೆ.

ಬಾಲಿವುಡ್ ಚಿತ್ರದ ಪೋಸ್ಟರ್ ಹಂಚಿಕೊಂಡ ಮತ್ತೊಬ್ಬ ಟ್ವಿಟರ್ ಬಳಕೆದಾರ, ’ನಾನು ಗುಲ್ಶನ್-ಇ-ಭಾಗ್‌ ಕರಾಚಿಯಿಂದ ಲೈವ್ ನೀಡುತ್ತಿದ್ದೇನೆ. ಇಲ್ಲಿ ಪೊಲೀಸ್ ವ್ಯಕ್ತಿಯೊಬ್ಬ ಸಿವಿಲ್ ವಾರ್‌ ನಡೆಯುವಾಗ,‌ ಸಿವಿಲ್ ಡ್ರೆಸ್‌ನಲ್ಲಿ ಇದ್ದಾರೆ ಎಂದು ವಿಶ್ವಯುದ್ಧ3 ಎಂಬ ಹ್ಯಾಶ್‌ಟ್ಯಾಗ್‌ನೊಂದಿಗೆ ಶೇರ್ ಮಾಡಿದ್ದಾರೆ.

ಇದನ್ನೂ ಓದಿ: ಅಸ್ಟ್ರಾಜೆನೆಕಾ ಕೊರೊನಾ ಲಸಿಕೆ ಪ್ರಯೋಗ: ಸ್ವಯಂಸೇವಕ ಸಾವು

ಇನ್ನೂ ಕೆಲವರು ಸಿವಿಲ್ ವಾರ್‌ ನಡೆಯಲು ಬಿರಿಯಾನಿ ಮತ್ತು ಪಲಾವ್ ಕಾರಣ ಎಂಬಂತ ಪೋಸ್ಟ್‌ಗಳನ್ನು ಹಾಕಿ ಗೇಲಿ ಮಾಡಿದ್ದಾರೆ.

ಟೈಮ್ಸ್ ನೌ, ಜೀ ನ್ಯೂಸ್, ದಿ ಪ್ರಿಂಟ್.ಇನ್ ಮತ್ತು ಇಂಡಿಯಾ. ಕಾಮ್ ಸೇರಿದಂತೆ ಪ್ರಮುಖ ಟಿವಿ ಮತ್ತು ಆನ್‌ಲೈನ್ ನ್ಯೂಸ್ ಪೋರ್ಟಲ್‌ಗಳು ಪಾಕಿಸ್ತಾನದಲ್ಲಿ ‘ನಾಗರಿಕ ಯುದ್ಧದಂತಹ ಪರಿಸ್ಥಿತಿ’ ಇದೆ ಎಂದು ವರದಿ ಮಾಡುತ್ತಿದ್ದು, ಸ್ಥಳೀಯ ಪೊಲೀಸ್ ಪಡೆಗಳು ಸೇನಾ ಬೆಟಾಲಿಯನ್‌ಗಳೊಂದಿಗೆ ಹೋರಾಡಿ ಸಿಂಧ್‌ನ ಪ್ರಾಂತೀಯ ಸರ್ಕಾರವನ್ನು ಉರುಳಿಸಲು ಪ್ರಯತ್ನಿಸುತ್ತಿವೆ ಎಂದಿದ್ದವು.

ಆದರೆ ಅಂತಹ ಯಾವುದೇ ವಿಷಯ ನಡೆಯುತ್ತಿಲ್ಲ. ಪಲಾಯನಗೈದ ಮಾಜಿ ಪ್ರಧಾನಿ ನವಾಜ್ ಷರೀಫ್ ಅವರ ಅಳಿಯ ಮೊಹಮ್ಮದ್ ಸಫ್ದಾರ್ ಅವರನ್ನು ಬಂಧಿಸುವಂತೆ ಒತ್ತಡ ಹೇರಿದ್ದ, ಸಿಂಧ್ ಪೊಲೀಸ್ ಮುಖ್ಯಸ್ಥ ಮುಷ್ತಾಕ್ ಮೆಹರ್ ಅವರನ್ನು ಬಂಧಿಸಿರುವ ಸೈನ್ಯದ ನಿರ್ಧಾರದಲ್ಲಿ ಸ್ವಲ್ಪ ಗೊಂದಲ ಉಂಟಾಗಿದೆ ಎಂದು ತಿಳಿದು ಬಂದಿದೆ.

ಆದರೆ ಭಾರತೀಯ ಮಾಧ್ಯಮಗಳು, ಸಿಂಧಿ ಮತ್ತು ಫೆಡರಲ್ ಪಡೆಗಳ ನಡುವೆ ನಾಗರಿಕ ಯುದ್ಧ ನಡೆಯುತ್ತಿದ್ದು, ನಗರವನ್ನು ಬೆಚ್ಚಿಬೀಳಿದೆ. ಕರಾಚಿಯು ಯುದ್ಧ ವಲಯವಾಗಿ ಮಾರ್ಪಟ್ಟಿದೆ ಎಂಬ ನಕಲಿ ಸುದ್ದಿ ಹರಡಿತ್ತು. ಇದನ್ನು ಪಾಕಿಸ್ತಾನದ ಸಾಮಾಜಿಕ ಜಾಲತಾಣದ ಖಾತೆಗಳು ಅಪಹಾಸ್ಯ ಮಾಡಲು ಪ್ರಾರಂಭಿಸಿದೆ.


ಇದನ್ನೂ ಓದಿ: ಬಿಹಾರ ಚುನಾವಣೆ: ಉಚಿತ ಕೊರೊನಾ ಲಸಿಕೆ ಪ್ರಸ್ತಾಪ; ಟ್ರೋಲ್‌ ಆದ ಬಿಜೆಪಿ ಪ್ರಣಾಳಿಕೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...