Homeಅಂತರಾಷ್ಟ್ರೀಯಸಿವಿಲ್ ವಾರ್‌ ಸುದ್ದಿ: ಭಾರತೀಯ ಮಾಧ್ಯಮವನ್ನು ಟ್ರೋಲ್ ಮಾಡುತ್ತಿರುವ ಪಾಕಿಸ್ತಾನಿಯರು!

ಸಿವಿಲ್ ವಾರ್‌ ಸುದ್ದಿ: ಭಾರತೀಯ ಮಾಧ್ಯಮವನ್ನು ಟ್ರೋಲ್ ಮಾಡುತ್ತಿರುವ ಪಾಕಿಸ್ತಾನಿಯರು!

ಟೈಮ್ಸ್ ನೌ, ಜೀ ನ್ಯೂಸ್, ದಿ ಪ್ರಿಂಟ್.ಇನ್ ಮತ್ತು ಇಂಡಿಯಾ. ಕಾಮ್ ಸೇರಿದಂತೆ ಪ್ರಮುಖ ಟಿವಿ ಮತ್ತು ಆನ್‌ಲೈನ್ ನ್ಯೂಸ್ ಪೋರ್ಟಲ್‌ಗಳು 'ನಾಗರಿಕ ಯುದ್ಧದಂತಹ ಪರಿಸ್ಥಿತಿಯನ್ನು' ವರದಿ ಮಾಡುತ್ತಿವೆ.

- Advertisement -
- Advertisement -

ಅಕ್ಟೋಬರ್‌ 21 ರಂದು ಪಾಕಿಸ್ತಾನದ ಕರಾಚಿಯಲ್ಲಿ ನಾಲ್ಕು ಅಂತಸ್ತಿನ ಕಟ್ಟಡದಲ್ಲಿ ಸಂಭವಿಸಿದ ಸ್ಫೋಟದ ಕುರಿತು ಭಾರತೀಯ ಮಾಧ್ಯಮಗಳು ಮಾಡಿದ ವರದಿ ಈಗ ಪಾಕಿಸ್ತಾನದಲ್ಲಿ ಟ್ರೋಲ್ ಆಗಿದೆ. ಮಾಧ್ಯಮಗಳು ಸಿವಿಲ್ ವಾರ್ ಎಂಬ ಪದ ಬಳಸಿರುವುದು ಇದಕ್ಕೆ ಕಾರಣವಾಗಿದೆ.

ಮೊನ್ನೆ ನಡೆದ ಸ್ಫೋಟದಲ್ಲಿ ಕನಿಷ್ಠ ಮೂರು ಜನರು ಸಾವನ್ನಪ್ಪಿದ್ದು, 15 ಮಂದಿ ಗಾಯಗೊಂಡಿದ್ದಾರೆ ಎಂದು ಡಾನ್ ಪತ್ರಿಕೆ ವರದಿ ಮಾಡಿತ್ತು. ಇದು ಸಿಲಿಂಡರ್‌ ಸ್ಫೋಟವೂ ಆಗಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದರು. ಆದರೆ ಅದಕ್ಕೂ ಮುನ್ನವೇ ಭಾರತೀಯ ಮಾಧ್ಯಮಗಳು ಇದು ಸಿವಿಲ್ ವಾರ್ ಎಂದು ಸುದ್ದಿ ಮಾಡಿದ್ದವು.

ಇದನ್ನೂ ವಿರೋಧಿಸಿ, ಭಾರತೀಯ ಮಾಧ್ಯಮಗಳನ್ನು ಟ್ರೋಲ್ ಮಾಡಿರುವ ಪಾಕಿಸ್ತಾನದ ಸಾಮಾಜಿಕ ಜಾಲತಾಣ ಬಳಕೆದಾರರು ಸಿವಿಲ್ ವಾರ್ ಎಂಬ ಪದ ಬಳಕೆ ಬಗ್ಗೆ ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ಭಾರತದಲ್ಲಿ ಮಾನವಹಕ್ಕು ಹೋರಾಟಗಾರರ ಬಂಧನವಾಗುತ್ತಿದೆ: ವಿಶ್ವಸಂಸ್ಥೆ ಕಳವಳ

ಕರಾಚಿಯನ್ನು ಭಾರತೀಯ ಮಾಧ್ಯಮಗಳು ತೋರಿಸಿರುವ ರೀತಿ ಮತ್ತು ಕರಾಚಿ ಇರುವ ನಿಜ ಸ್ಥಿತಿಗಳನ್ನು ಹಲವು ಆಯಾಮಗಳಲ್ಲಿ ಚಿತ್ರಿಸಿ ಟ್ರೋಲ್ ಮಾಡುತ್ತಿದ್ದಾರೆ.

ಚಲನಚಿತ್ರಗಳ ದೃಶ್ಯಗಳನ್ನು ಹಂಚಿಕೊಳ್ಳುತ್ತಾ, ಭಾರತೀಯ ಮಾಧ್ಯಮಗಳ ಪ್ರಕಾರ ಇಂದು ಕರಾಚಿಯಲ್ಲಿ ನಡೆದ ಸಿವಿಲ್ ವಾರ್‌ ದೃಶ್ಯಗಳು ಎಂದು ಕೀಟಲ್ ಮಾಡಿದ್ದಾರೆ.

ಇದನ್ನೂ ಓದಿ: ಭಾರತದಲ್ಲಿ ಪತ್ರಕರ್ತರಿಗೆ ಕಿರುಕುಳ: ಮೋದಿಗೆ ಪತ್ರ ಬರೆದ ಅಂತರಾಷ್ಟ್ರೀಯ ಪತ್ರಿಕಾ ಸಂಘಗಳು!

“ಕರಾಚಿಯಲ್ಲಿ ನಾಗರಿಕ ಯುದ್ಧ(ಸಿವಿಲ್ ವಾರ್) ನಡೆದ ಮೇಲೆ, ಲಾಹೋರ್ ಮೇಲೆ ಗಾಡ್ಜಿಲ್ಲಾ ದಾಳಿ ಮಾಡಿದೆ” ಎಂದು ಟ್ವಿಟ್ಟರ್‌ ಬಳಕೆದಾರರೊಬ್ಬರು ಪೋಸ್ಟ್ ಮಡಿದ್ದು, ಚಿತ್ರಕ್ಕೆ ಭಾರತೀಯ ಸುದ್ದಿ ಚಾನೆಲ್‌ಗಳ ಕೃಪೆ ಹಾಕಿದ್ದಾರೆ.

ಇನ್ನೂ ಕೆಲವರು, ಬ್ರೇಕಿಂಗ್ ನ್ಯೂಸ್‌ಗಳನ್ನು ಹೇಳುವ ದಾಟಿಯಲ್ಲಿ, ವ್ಯಂಗ್ಯವಾಡಿ ತಮ್ಮ ಪೋಸ್ಟ್‌ಗಳನ್ನು ಶೇರ್‌ ಮಾಡಿದ್ದಾರೆ.

ಬಾಲಿವುಡ್ ಚಿತ್ರದ ಪೋಸ್ಟರ್ ಹಂಚಿಕೊಂಡ ಮತ್ತೊಬ್ಬ ಟ್ವಿಟರ್ ಬಳಕೆದಾರ, ’ನಾನು ಗುಲ್ಶನ್-ಇ-ಭಾಗ್‌ ಕರಾಚಿಯಿಂದ ಲೈವ್ ನೀಡುತ್ತಿದ್ದೇನೆ. ಇಲ್ಲಿ ಪೊಲೀಸ್ ವ್ಯಕ್ತಿಯೊಬ್ಬ ಸಿವಿಲ್ ವಾರ್‌ ನಡೆಯುವಾಗ,‌ ಸಿವಿಲ್ ಡ್ರೆಸ್‌ನಲ್ಲಿ ಇದ್ದಾರೆ ಎಂದು ವಿಶ್ವಯುದ್ಧ3 ಎಂಬ ಹ್ಯಾಶ್‌ಟ್ಯಾಗ್‌ನೊಂದಿಗೆ ಶೇರ್ ಮಾಡಿದ್ದಾರೆ.

ಇದನ್ನೂ ಓದಿ: ಅಸ್ಟ್ರಾಜೆನೆಕಾ ಕೊರೊನಾ ಲಸಿಕೆ ಪ್ರಯೋಗ: ಸ್ವಯಂಸೇವಕ ಸಾವು

ಇನ್ನೂ ಕೆಲವರು ಸಿವಿಲ್ ವಾರ್‌ ನಡೆಯಲು ಬಿರಿಯಾನಿ ಮತ್ತು ಪಲಾವ್ ಕಾರಣ ಎಂಬಂತ ಪೋಸ್ಟ್‌ಗಳನ್ನು ಹಾಕಿ ಗೇಲಿ ಮಾಡಿದ್ದಾರೆ.

ಟೈಮ್ಸ್ ನೌ, ಜೀ ನ್ಯೂಸ್, ದಿ ಪ್ರಿಂಟ್.ಇನ್ ಮತ್ತು ಇಂಡಿಯಾ. ಕಾಮ್ ಸೇರಿದಂತೆ ಪ್ರಮುಖ ಟಿವಿ ಮತ್ತು ಆನ್‌ಲೈನ್ ನ್ಯೂಸ್ ಪೋರ್ಟಲ್‌ಗಳು ಪಾಕಿಸ್ತಾನದಲ್ಲಿ ‘ನಾಗರಿಕ ಯುದ್ಧದಂತಹ ಪರಿಸ್ಥಿತಿ’ ಇದೆ ಎಂದು ವರದಿ ಮಾಡುತ್ತಿದ್ದು, ಸ್ಥಳೀಯ ಪೊಲೀಸ್ ಪಡೆಗಳು ಸೇನಾ ಬೆಟಾಲಿಯನ್‌ಗಳೊಂದಿಗೆ ಹೋರಾಡಿ ಸಿಂಧ್‌ನ ಪ್ರಾಂತೀಯ ಸರ್ಕಾರವನ್ನು ಉರುಳಿಸಲು ಪ್ರಯತ್ನಿಸುತ್ತಿವೆ ಎಂದಿದ್ದವು.

ಆದರೆ ಅಂತಹ ಯಾವುದೇ ವಿಷಯ ನಡೆಯುತ್ತಿಲ್ಲ. ಪಲಾಯನಗೈದ ಮಾಜಿ ಪ್ರಧಾನಿ ನವಾಜ್ ಷರೀಫ್ ಅವರ ಅಳಿಯ ಮೊಹಮ್ಮದ್ ಸಫ್ದಾರ್ ಅವರನ್ನು ಬಂಧಿಸುವಂತೆ ಒತ್ತಡ ಹೇರಿದ್ದ, ಸಿಂಧ್ ಪೊಲೀಸ್ ಮುಖ್ಯಸ್ಥ ಮುಷ್ತಾಕ್ ಮೆಹರ್ ಅವರನ್ನು ಬಂಧಿಸಿರುವ ಸೈನ್ಯದ ನಿರ್ಧಾರದಲ್ಲಿ ಸ್ವಲ್ಪ ಗೊಂದಲ ಉಂಟಾಗಿದೆ ಎಂದು ತಿಳಿದು ಬಂದಿದೆ.

ಆದರೆ ಭಾರತೀಯ ಮಾಧ್ಯಮಗಳು, ಸಿಂಧಿ ಮತ್ತು ಫೆಡರಲ್ ಪಡೆಗಳ ನಡುವೆ ನಾಗರಿಕ ಯುದ್ಧ ನಡೆಯುತ್ತಿದ್ದು, ನಗರವನ್ನು ಬೆಚ್ಚಿಬೀಳಿದೆ. ಕರಾಚಿಯು ಯುದ್ಧ ವಲಯವಾಗಿ ಮಾರ್ಪಟ್ಟಿದೆ ಎಂಬ ನಕಲಿ ಸುದ್ದಿ ಹರಡಿತ್ತು. ಇದನ್ನು ಪಾಕಿಸ್ತಾನದ ಸಾಮಾಜಿಕ ಜಾಲತಾಣದ ಖಾತೆಗಳು ಅಪಹಾಸ್ಯ ಮಾಡಲು ಪ್ರಾರಂಭಿಸಿದೆ.


ಇದನ್ನೂ ಓದಿ: ಬಿಹಾರ ಚುನಾವಣೆ: ಉಚಿತ ಕೊರೊನಾ ಲಸಿಕೆ ಪ್ರಸ್ತಾಪ; ಟ್ರೋಲ್‌ ಆದ ಬಿಜೆಪಿ ಪ್ರಣಾಳಿಕೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...