Homeಮುಖಪುಟಪಾಕಿಸ್ತಾನದ ಕರಾಚಿ ಭಾರತದ ಭಾಗವಾಗಲಿದೆ: ಬಿಜೆಪಿ ಮುಖಂಡ ದೇವೇಂದ್ರ ಫಡ್ನವೀಸ್

ಪಾಕಿಸ್ತಾನದ ಕರಾಚಿ ಭಾರತದ ಭಾಗವಾಗಲಿದೆ: ಬಿಜೆಪಿ ಮುಖಂಡ ದೇವೇಂದ್ರ ಫಡ್ನವೀಸ್

"ನಮಗೆ ಅಖಂಡ ಭಾರತದಲ್ಲಿ ನಂಬಿಕೆಯಿದೆ"

- Advertisement -
- Advertisement -

‘ಮುಂದೊಂದು ದಿನ ಪಾಕಿಸ್ತಾನದ ಕರಾಚಿ ಭಾರತದ ಭಾಗವಾಗಲಿದೆ’ ಎಂದು ಮಹಾರಾ‍ಷ್ಟ್ರ ಬಿಜೆಪಿ ಮುಖಂಡ ದೇವೇಂದ್ರ ಫಡ್ನವೀಸ್ ಹೇಳಿದ್ದು, ತಾವು ಅಖಂಡ ಭಾರತದಲ್ಲಿ ನಂಬಿಕೆಯಿರಿಸಿರುವುದಾಗಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಪತ್ರಕರ್ತರೊಂದಿಗೆ ಮಾತನಾಡಿದ ದೇವೇಂದ್ರ ಫಡ್ನವೀಸ್, “ನಮಗೆ ಅಖಂಡ ಭಾರತದಲ್ಲಿ ನಂಬಿಕೆಯಿದೆ. ಜೊತೆಗೆ ಮುಂದೊಂದು ದಿನ ಕರಾಚಿ ಭಾರತದ ಭಾಗವಾಗಲಿದೆ ಎನ್ನುವ ನಂಬಿಕೆಯೂ ಇದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕ್ರಿಮಿನಲ್ ಪ್ರಕರಣ ಹಿಂಪಡೆಯಲು ಒತ್ತಾಯ: ದಲಿತರ ಗುಡಿಸಲು ಸುಟ್ಟ ಮೇಲ್ಜಾತಿಯವರು!

ಇದನ್ನೂ ಓದಿ: ತೇಜಸ್ವಿ ಯಾದವ್ ಬಿಹಾರ ವಿರೋಧ ಪಕ್ಷದ ನಾಯಕನಾಗಬಾರದು: ಜೆಡಿಯು ಆಗ್ರಹ

ಇತ್ತೀಚೆಗೆ ಮುಂಬೈನಲ್ಲಿನ ಕರಾಚಿ ಸ್ವೀಟ್ಸ್‌ ಅಂಗಡಿಯ ಹೆಸರನ್ನು ಬದಲಾಯಿಸುವಂತೆ ಶಿವಸೇನೆಯ ಮುಖಂಡರು ಒತ್ತಾಯಿಸಿರುವ ಬಗ್ಗೆ ಪತ್ರಕರ್ತರು ಪ್ರಶ್ನಿಸಿದಾಗ ದೇವೇಂದ್ರ ಫಡ್ನವೀಸ್ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.

‘ಕರಾಚಿ ಸ್ವೀಟ್ಸ್‌ ಅಂಗಡಿ’ಯ ಹೆಸರನ್ನು ಬದಲಾಯಿಸುವಂತೆ ಶಿವಸೇನೆಯ ಮುಖಂಡ ನಿತಿನ್ ನಂದಗಾಂವ್ಕರ್ ಅಂಗಡಿ ಮಾಲೀಕನನ್ನು ಒತ್ತಾಯಿಸುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು. ಕರಾಚಿ ಎನ್ನುವುದು ಪಾಕಿಸ್ತಾನದ ಒಂದು ಸ್ಥಳದ ಹೆಸರಾಗಿದೆ. ಹಾಗಾಗಿ ಇದನ್ನು ಬದಲಾಯಿಸಿ, ಮರಾಠಿಯಲ್ಲಿ ಯಾವುದಾದರೂ ಹೆಸರಿಡುವಂತೆ ಶಿವಸೇನೆ ಮುಖಂಡ ಒತ್ತಾಯಿಸಿದ್ದರು.

ಇದನ್ನೂ ಓದಿ: ಕಾಂಗ್ರೆಸ್‌ನಲ್ಲಿ ನಾಯಕತ್ವ ಬಿಕ್ಕಟ್ಟಿಲ್ಲ, ಸೋನಿಯಾ- ರಾಹುಲ್‌ಗೆ ಬೆಂಬಲವಿದೆ: ಸಲ್ಮಾನ್ ಖುರ್ಷಿದ್

ಘಟನೆ ನಡೆದ ಬಳಿಕ ಬೆದರಿಕೆ ಮಣಿದ ಅಂಗಡಿ ಮಾಲೀಕ ‘ಕರಾಚಿ’ ಎನ್ನುವ ಅಕ್ಷರಗಳು ಕಾಣಿಸದಂತೆ ಪೇಪರ್‌ನಿಂದ ಮುಚ್ಚಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ.

ದೇವೇಂದ್ರ ಫಡ್ನವೀಸ್ ಅವರ ಹೇಳಿಕೆಯನ್ನು ಉಲ್ಲೇಖಿಸಿ ಮಹಾರಾಷ್ಟ್ರ ಕಾಂಗ್ರೆಸ್ ಸಚಿವ ನವಾಬ್ ಮಲಿಕ್, ‘ಭಾರತ, ಪಾಕಿಸ್ತಾನ ಮತ್ತು ಬಾಂಗ್ಲಾದೇಶವನ್ನು ವಿಲೀನಗೊಳಿಸಿ ಒಂದು ದೇಶವನ್ನು ಸೃಷ್ಟಿಸಿದರೆ’ ಬಿಜೆಪಿಯ ಈ ಕ್ರಮವನ್ನು ತಮ್ಮ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷ (ಎನ್‌ಸಿಪಿ) ಸ್ವಾಗತಿಸುತ್ತದೆ ಎಂದು ಹೇಳಿದ್ದಾರೆ.


ಇದನ್ನೂ ಓದಿ: ಬೆಂಗಳೂರು: ಬಿಎಂಟಿಸಿ ಮಹಿಳಾ ಕಂಡಕ್ಟರ್‌ಗಳಿಗೆ ಸ್ವಯಂ ರಕ್ಷಣಾ ತರಬೇತಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...