Homeಮುಖಪುಟಪುಲ್ವಾಮಾ ದಾಳಿ ಕುರಿತ ಸತ್ಯಪಾಲ್ ಹೇಳಿಕೆಗೆ ಪಾಕಿಸ್ತಾನ ಪ್ರತಿಕ್ರಿಯೆ

ಪುಲ್ವಾಮಾ ದಾಳಿ ಕುರಿತ ಸತ್ಯಪಾಲ್ ಹೇಳಿಕೆಗೆ ಪಾಕಿಸ್ತಾನ ಪ್ರತಿಕ್ರಿಯೆ

- Advertisement -
- Advertisement -

ಫೆಬ್ರವರಿ 14, 2019ರಂದು ನಡೆದ ಪುಲ್ವಾಮಾ ದಾಳಿಯ ಬಗ್ಗೆ ಜಮ್ಮು ಮತ್ತು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ಮಾಡಿರುವ ಗಂಭೀರ ಆರೋಪಗಳಿಗೆ ಸಂಬಂಧಿಸಿದಂತೆ ಪಾಕಿಸ್ತಾನ ಪ್ರತಿಕ್ರಿಯಿಸಿದೆ.

ಮೋದಿ ಸರ್ಕಾರವು ‘ಹಿಂದುತ್ವದ ಅಜೆಂಡಾವನ್ನು ಮುಂದಿಡಲು’ ಘಟನೆಯನ್ನು ಬಳಸಿಕೊಂಡಿದೆ ಎಂಬ ಅಂಶ ಇದರಿಂದ ಸಾಬೀತಾಗಿದೆ ಎಂದು ಪಾಕಿಸ್ತಾನದ ವಿದೇಶಾಂಗ ಸಚಿವಾಲಯ ಏಪ್ರಿಲ್ 16 ರಂದು ತಿಳಿಸಿದೆ.

ಪಾಕಿಸ್ತಾನದ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಪತ್ರಿಕಾ ಪ್ರಕಟಣೆ ನೀಡಿದ್ದು, “ಪುಲ್ವಾಮ ಘಟನೆಯ ಕುರಿತ ಪಾಕಿಸ್ತಾನದ ನಿಲುವನ್ನು ಮಲಿಕ್ ಅವರ ಹೇಳಿಕೆಗಳು ಸಮರ್ಥಿಸಿವೆ” ಎಂದು ಅಭಿಪ್ರಾಯಪಟ್ಟಿದೆ.

“ಭಾರತೀಯ ನಾಯಕತ್ವವು ಪಾಕಿಸ್ತಾನದ ಭಯೋತ್ಪಾದನೆ ಎಂಬ ಹುಸಿ ನಿರೂಪಣೆಯ ಮೂಲಕ ಮತ್ತು ಹಿಂದುತ್ವದ ಅಜೆಂಡಾವನ್ನು ಸ್ಪಷ್ಟವಾಗಿ ಹೇಗೆ ತಮ್ಮ ದೇಶೀಯ ಲಾಭಕ್ಕಾಗಿ ಬಳಸಿಕೊಂಡಿದೆ ಎಂಬುದನ್ನು ಸತ್ಯಪಾಲ್ ಹೇಳಿಕೆ ತೋರಿಸಿದೆ” ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ.

“ವ್ಯಾಪಕವಾಗಿ ಪ್ರಸಾರವಾದ ಸಂದರ್ಶನದಲ್ಲಿ ಮಲಿಕ್ ಅವರು ಪುಲ್ವಾಮ ದಾಳಿಯ ಕುರಿತು ಹೇಳಿದ್ದಾರೆ. ದಾಳಿಯಲ್ಲಿ ಮಡಿದ ಸಿಆರ್‌ಪಿಎಫ್ ಸಿಬ್ಬಂದಿಗೆ ಭದ್ರತೆಯನ್ನು ಖಾತರಿಪಡಿಸುವಲ್ಲಿ ಸರ್ಕಾರದ ವೈಫಲ್ಯದ ಬಗ್ಗೆ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ”.

‘ದಿ ವೈರ್‌’ ಜಾಲತಾಣದ ಖ್ಯಾತ ಪತ್ರಕರ್ತ ಕರಣ್ ಥಾಪರ್ ಅವರು ನಡೆಸಿದ ಸಂದರ್ಶನದಲ್ಲಿ ಸತ್ಯಪಾಲ್‌ ಹಲವಾರು ವಿಚಾರಗಳನ್ನು ಹಂಚಿಕೊಂಡಿದ್ದರು.

ಮೋದಿ ಸರ್ಕಾರದ ಅಸಮರ್ಥತೆಯಿಂದ 2019ರ ಫೆಬ್ರವರಿಯಲ್ಲಿ ಪುಲ್ವಾಮ ದಾಳಿ ನಡೆದು 40 ಭಾರತೀಯ ಸೈನಿಕರು ಹುತಾತ್ಮರಾಗಬೇಕಾಯಿತು ಎಂದು ಸತ್ಯಪಾಲ್ ಮಲಿಕ್ ಸ್ಫೋಟಕ ಹೇಳಿಕೆ ನೀಡಿದ್ದರು.

“ಪುಲ್ವಾಮಾದಲ್ಲಿ ಸಿಆರ್‌ಪಿಎಫ್ ಬೆಂಗಾವಲು ಪಡೆಯ ಮೇಲಿನ ದಾಳಿಯು ಭಾರತೀಯ ಗುಪ್ತಚರ ಇಲಾಖೆಯ ಬಹುದೊಡ್ಡ ವೈಫಲ್ಯ ಮತ್ತು ನಿರ್ದಿಷ್ಟವಾಗಿ ಗೃಹ ಸಚಿವಾಲಯದ ಅಸಮರ್ಥತೆಯ ಪರಿಣಾಮವಾಗಿದೆ. ಆಗ ರಾಜನಾಥ್ ಸಿಂಗ್ ಗೃಹ ಸಚಿವರಾಗಿದ್ದರು. ಸಿಆರ್‌ಪಿಎಫ್ ತನ್ನ ಜವಾನರನ್ನು ಸಾಗಿಸಲು ವಿಮಾನವನ್ನು ಕೇಳಿತ್ತು. ಆದರೆ ಕೇಂದ್ರ ಗೃಹ ಸಚಿವಾಲಯ ಅದನ್ನು ನಿರಾಕರಿಸಿತು” ಎಂದು ಮಲಿಕ್ ದೂರಿದ್ದಾರೆ.

ಸತ್ಯ ಪಾಲ್ ಮಲಿಕ್ ಪುಲ್ವಾಮ ದಾಳಿ ನಡೆದಾಗ ಮತ್ತು ಆರ್ಟಿಕಲ್ 370 ಅನ್ನು ಕಿತ್ತು ಹಾಕಿದ ಸಂದರ್ಭದಲ್ಲಿ ಜಮ್ಮು ಕಾಶ್ಮೀರದ ರಾಜ್ಯಪಾಲರಾಗಿದ್ದರು. ನಂತರ ಗೋವಾದ ರಾಜ್ಯಪಾಲರಾಗಿದ್ದ ಅವರು, ಆನಂತರ 2022ರವರೆಗೆ ಮೇಘಾಲಯದ ರಾಜ್ಯಪಾಲರಾಗಿದ್ದರು. ಮೋದಿ ಸರ್ಕಾರ ಕೃಷಿ ಕಾಯ್ದೆಗಳನ್ನು ಜಾರಿಗೊಳಿಸಿದಾಗ ಅದನ್ನು ಕಟು ಶಬ್ದಗಳಲ್ಲಿ ಟೀಕಿಸಿದ್ದರು. ಅಲ್ಲದೇ ಆರ್‌ಎಸ್‌ಎಸ್‌ ಭಾರೀ ಭ್ರಷ್ಟಾಚಾರ ನಡೆಸುತ್ತದೆ ಎಂದು ಆರೋಪಿಸಿದ್ದರು.

ದಾಳಿ ನಡೆದ ದಿನ ಸಂಜೆಯೇ ಪ್ರಧಾನಿ ಮೋದಿಯವರಿಗೆ ಈ ವೈಫಲ್ಯಗಳ ಬಗ್ಗೆ ತಿಳಿಸಿದೆ. ನಮ್ಮ ತಪ್ಪಿನಿಂದಾಗಿ 40 ಸೈನಿಕರು ಪ್ರಾಣ ಕಳೆದುಕೊಳ್ಳಬೇಕಾಯಿತು ಎಂದು ವಿವರಿಸಿದೆ. ಆದರೆ ಅವರು ಯಾರಿಗೂ ಹೇಳಬೇಡಿ, ಸುಮ್ಮನಿದ್ದುಬಿಡಿ ಎಂದರು.

ಇದನ್ನೂ ಓದಿರಿ: ಪುಲ್ವಾಮ ದಾಳಿ ಸಂದರ್ಭದಲ್ಲಿ ಮೋದಿ ಸರ್ಕಾರದ ಅಸಮರ್ಥತೆಯಿಂದ ಸೈನಿಕರನ್ನು ಉಳಿಸಿಕೊಳ್ಳಲಾಗಲಿಲ್ಲ: ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲರ ಗಂಭೀರ ಆರೋಪ

“ಎನ್‌ಎಸ್‌ಎ ಅಜಿತ್ ದೋವಲ್ ಕೂಡ ನನ್ನ ಬಾಯಿ ಮುಚ್ಚಿಸಿದರು. ಆಗ ನನಗೆ ತಕ್ಷಣವೇ ಅರ್ಥವಾಯಿತು, ಅವರ ಉದ್ದೇಶ ಪಾಕಿಸ್ತಾನದ ಮೇಲೆ ದೋಷಾರೋಪ ಮಾಡಿ ಚುನಾವಣೆಯಲ್ಲಿ ಸರ್ಕಾರ ಮತ್ತು ಬಿಜೆಪಿಗೆ ಲಾಭ ಪಡೆಯುವುದಾಗಿತ್ತು” ಎಂದು ಸತ್ಯಪಾಲ್ ಮಲಿಕ್ ಸಂದರ್ಶನದಲ್ಲಿ ಹೇಳಿದ್ದಾರೆ.

ಪುಲ್ವಾಮಾ ಘಟನೆಯಲ್ಲಿ 300 ಕೆಜಿ ಆರ್‌ಡಿಎಕ್ಸ್ ಸ್ಫೋಟಕಗಳನ್ನು ಹೊತ್ತ ಕಾರು ಪಾಕಿಸ್ತಾನದಿಂದ ಬಂದಿದ್ದು, ಜಮ್ಮು ಮತ್ತು ಕಾಶ್ಮೀರದ ರಸ್ತೆಗಳು ಮತ್ತು ಹಳ್ಳಿಗಳಲ್ಲಿ 10-15 ದಿನಗಳ ಕಾಲ ಯಾರಿಗೂ ಗೊತ್ತಾಗದಂತೆ ಮತ್ತು ಯಾರಿಗೂ ತಿಳಿಯದಂತೆ ಸಂಚರಿಸುತ್ತಿತ್ತು ಎಂದರೆ ಇದು ಗಂಭೀರ ಗುಪ್ತಚರ ವೈಫಲ್ಯ ಅಲ್ಲವೇ ಎಂದಿದ್ದಾರೆ.

ಭ್ರಷ್ಟಾಚಾರದ ವಿಷಯಕ ಕುರಿತು ಮಾತನಾಡಿದ ಅವರು, “ಹೈಡ್ರೋ ಎಲೆಕ್ಟ್ರಿಕ್ ಯೋಜನೆ ಮತ್ತು ರಿಲಯೆನ್ಸ್ ಇನ್ಸೂರೆನ್ಸ್ ಯೋಜನೆಗೆ ಅನುಮತಿ ಪಡೆಯಲು ಬಿಜೆಪಿ ಆರ್‌ಎಸ್‌ಎಸ್‌ ಮುಖಂಡ ರಾಮ್ ಮಾಧವ್ ಬಂದಿದ್ದರು. ಆ ಯೋಜನೆಗಳಿಗೆ ಸಹಿ ಹಾಕಿದ್ದರೆ ನನಗೆ 300 ಕೋಟಿ ಸಿಗುತ್ತದೆ ಎಂದು ಜನ ಮಾತನಾಡುತ್ತಿದ್ದರು. ಆದರೆ ನಾನು ಆ ತಪ್ಪು ಕೆಲಸ ಮಾಡಲಿಲ್ಲ. ರಾಮ್ ಮಾಧವ್ ಎಷ್ಟೇ ಪ್ರಯತ್ನ ಪಟ್ಟರೂ ನಾನು ಆ ಯೋಜನೆಗಳನ್ನು ಜಾರಿಗೊಳಿಸಲಿಲ್ಲ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...