Homeಮುಖಪುಟಕೇವಲ 'ಪಾಕಿಸ್ತಾನ್ ಜಿಂದಾಬಾದ್' ಘೋಷಣೆ ರಾಷ್ಟ್ರದ್ರೋಹವಲ್ಲ: ಮಾಜಿ ಸಾಲಿಸಿಟರ್ ಜನರಲ್ ಸೋಲಿ ಸೊರಾಬ್ಜಿ

ಕೇವಲ ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ರಾಷ್ಟ್ರದ್ರೋಹವಲ್ಲ: ಮಾಜಿ ಸಾಲಿಸಿಟರ್ ಜನರಲ್ ಸೋಲಿ ಸೊರಾಬ್ಜಿ

- Advertisement -
- Advertisement -

2016ರಲ್ಲಿ ಕನ್ಹಯ್ಯ ಕುಮಾರ್ ವಿಚಾರದ ಕುರಿತು ರಾಹುಲ್ ಕುನ್ವಾಲ್ (ನಿರ್ವಾಹಕ ಸಂಪಾದಕ, ಟೈಮ್ಸ್ ಆಫ್ ಇಂಡಿಯಾ) ನಡೆಸಿದ ಸಂದರ್ಶನ

ಅನುವಾದ: ನಿಖಿಲ್ ಕೋಲ್ಪೆ

ಜವಾಹರಲಾಲ್ ನೆಹರೂ ಯುನಿವರ್ಸಿಟಿ (ಜೆಎನ್‌ಯು)ಲ್ಲಿ ಕೂಗಲಾದ ಕೆಲವು ಘೋಷಣೆಗಳು ‘ಸಮಸ್ಯಾತ್ಮಕ’ವಾಗಿದ್ದರೂ, ಈ ಘಟನೆ ನಡೆಯುವಾಗ ಸ್ಥಳದಲ್ಲಿದ್ದ ಕನ್ನಯ್ಯ ಕುಮಾರ್ ವಿರುದ್ಧ ಹೊರಿಸಲಾದ ರಾಷ್ಟ್ರದ್ರೋಹದ ಆರೋಪಕ್ಕೆ ಸಮವಲ್ಲ ಎಂದು ಹೇಳಿರುವ ಮಾಜಿ ಸಾಲಿಸಿಟರ್ ಜನರಲ್ ಸೋಲಿ ಸೊರಾಬ್ಜಿ ದೇಶದ್ರೋಹದ ಕಾನೂನನ್ನು ಸ್ಪಷ್ಟಪಡಿಸಿದ್ದಾರೆ.

ಪ್ರಶ್ನೆ: ನಿಮ್ಮೆಲ್ಲಾ ಖ್ಯಾತಿ ಮತ್ತು ಅನುಭವದ ಹಿನ್ನೆಲೆಯಲ್ಲಿ ಜೆಎನ್‌ಯು ವಿದ್ಯಾರ್ಥಿ ಸಂಘ (ಜೆಎನ್‌ಯುಎಸ್‌ಯು)ದ ಅಧ್ಯಕ್ಷರಾಗಿದ್ದ ಕನ್ನಯ್ಯ ಕುಮಾರ್ ವಿರುದ್ಧ ರಾಷ್ಟ್ರದ್ರೋಹ ಆರೋಪ ಹೊರಿಸಿದ್ದು ಸರಿಯೋ, ತಪ್ಪೋ ಎಂದು ವಿಶ್ಲೇಷಿಸುವಂತೆ ನಾವು ಕೋರುತ್ತೇವೆ.

ಸೊರಾಬ್ಜಿ: ಅವೆಲ್ಲವೂ ವಾಸ್ತವಾಂಶಗಳ ಮೇಲೆ ಅವಲಂಬಿಸಿವೆ. ಮೊತ್ತಮೊದಲಾಗಿ ರಾಷ್ಟ್ರದ್ರೋಹ ಎಂದರೆ ಏನು ಎಂಬುದನ್ನು ಅರ್ಥ ಮಾಡಿಕೊಳ್ಳೋಣ. ಸರಕಾರದ ಮೇಲಿನ ಯಾವುದೇ ಟೀಕೆ, ಸರಕಾರ ಕೈಗೊಂಡ ಕಾರ್ಯಗಳ ನಿರಾಕರಣೆ- ಅದೆಷ್ಟೇ ಬಲವಾಗಿ ಅಭಿವ್ಯಕ್ತಗೊಳಿಸಿದರೂ ಅದು ರಾಷ್ಟ್ರದ್ರೋಹವಾಗುವುದಿಲ್ಲ. ಕೇದಾರನಾಥ ಪ್ರಕರಣದಲ್ಲಿ ವಿಧಿ 124ಎಯ ಸಿಂಧುತ್ವವನ್ನು ಪರಿಗಣಿಸಿದಾಗ, ಈ ವಿಧಿಯು ಸಾರ್ವಜನಿಕ ಶಿಸ್ತನ್ನು ಭಂಗಗೊಳಿಸುವ ಅಥವಾ ಹಿಂಸೆಯನ್ನು ಪ್ರಚೋದಿಸುವ ಯಾವುದೇ ಮಾತು, ಶಬ್ದಗಳು ಅಥವಾ ಕೃತಿಗೆ ಸೀಮಿತವಾಗಿದೆ.

ಪ್ರಶ್ನೆ: ನಾವು 1962ರ ಕೇದಾರನಾಥ ಪ್ರಕರಣವನ್ನು ಉದಾಹರಣೆಯಾಗಿ ತೆಗೆದುಕೊಂಡು, ಅದೇ ಮಾನದಂಡವನ್ನು ಜೆಎನ್‌ಯು ಪ್ರಕರಣಕ್ಕೆ ಅನ್ವಯಿಸಿದರೆ, ರಾಷ್ಟ್ರದ್ರೋಹದ ಆರೋಪವನ್ನು ತಪ್ಪಾಗಿ ಅನ್ವಯಿಸಲಾಗಿದೆಯೇ?

ಸೊರಾಬ್ಜಿ: ಅದು ಬೇರೆಬೇರೆ ವಿಷಯಗಳ ಮೇಲೆ ಅವಲಂಬಿಸಿದೆ. ಅವರು ಕೇವಲ ‘ ಪಾಕಿಸ್ತಾನ್ ಜಿಂದಾಬಾದ್’ ಎಂದು ಹೇಳಿದ್ದರೆ, ನನ್ನ ಮಟ್ಟಿಗೆ ಅದು ತೀರಾ ಖಂಡನೀಯ. ಆದರೆ, ಅದು ರಾಷ್ಟ್ರದ್ರೋಹವಲ್ಲ. ಆದರೆ, ಅವರು ಈ ಸರಕಾರವೊಂದು ದಬ್ಬಾಳಿಕೆಯ ಸರಕಾರ, ಜನರಿಗೆ ಅವರ ಮೂಲಭೂತ ಹಕ್ಕುಗಳನ್ನು ತಿಳಿಯುವ ಅವಕಾಶವಿಲ್ಲ, ಅದರ ವಿರುದ್ಧ ಪ್ರತಿಭಟಿಸಿ ಪ್ರಯೋಜನವಿಲ್ಲ, ನಾವದನ್ನು ಕಿತ್ತೆಸೆಯಬೇಕು ಎಂದು ಹೇಳಿದ್ದರೆ, ಅದು ಹಿಂಸೆಗೆ ಪ್ರಚೋದನೆಯಾಗುತ್ತದೆ ಮತ್ತು ರಾಷ್ಟ್ರದ್ರೋಹದ ಪ್ರಕರಣವನ್ನು ಆಕರ್ಷಿಸುತ್ತದೆ. ಆದರೆ, ಎಲ್ಲವೂ ವಾಸ್ತವಾಂಶಗಳ ಮೇಲೆ ಅವಲಂಬಿಸಿದೆ.

ಪ್ರಶ್ನೆ: ವಾಸ್ತವಾಂಶಗಳು. ಜೆಎನ್‌ಯುನಲ್ಲಿ ಕೂಗಲಾದ ಕೆಲವು ಘೋಷಣೆಗಳೆಂದರೆ, ‘ಪಾಕಿಸ್ತಾನ್ ಜಿಂದಾಬಾದ್’, ‘ಭಾರತ್‌ಕೆ ಬರ್ಬಾದಿ ತಕ್ ಜಂಗ್ ರಹೇಗಿ’ (ಭಾರತದ ಸರ್ವನಾಶದ ತನಕ ಯುದ್ಧ), ‘ಕಾಶ್ಮೀರ್ ಕಿ ಆಜಾದಿ ತಕ್ ಜಂಗ್ ರಹೇಗಿ’ (ಕಾಶ್ಮೀರದ ಸ್ವಾತಂತ್ರ್ಯದ ತನಕ ಯುದ್ಧ), ‘ಅಫ್ಜಲ್ ಹಮ್ ಶರ್ಮಿಂದಾ ಹೈ. ತೇರೇ ಕಾತಿಲ್ ಜಿಂದಾ ಹೈ’ ( ಅಫ್ಜಲ್ ನಮಗೆ ನಾಚಿಕೆಯಾಗುತ್ತಿದೆ, ನಿನ್ನ ಹಂತಕರು ಜೀವಂತವಿದ್ದಾರೆ), ‘ತುಮ್ ಕಿತ್ನೇ ಅಫ್ಜಲ್ ಮಾರೋಗೆ, ಹರ್ ಘರ್‌ಮೇ ಅಫ್ಜಲ್ ನಿಕ್ಲೇಗಾ’ ( ನೀನೆಷ್ಟು ಅಫ್ಜಲ್‌ಗಳನ್ನು ಕೊಲ್ಲುವೆ, ಪ್ರತಿ ಮನೆಯಲ್ಲಿ ಅಫ್ಜಲ್ ಹುಟ್ಟುವನು), ‘ಅಫ್ಜಲ್ ತೇರೆ ಖೂನ್ ಸೆ ಇಂಕ್ವಿಲಾಬ್ ಆಯೇಗಾ’ (ಅಫ್ಜಲ್ ನಿನ್ನ ರಕ್ತದಿಂದ ಕ್ರಾಂತಿ ಬರುವುದು)

ಸೊರಾಬ್ಜಿ: ಕೇವಲ ಪಾಕಿಸ್ತಾನ್ ಜಿಂದಾಬಾದ್ ಎಂದು ಹೇಳುವುದು ರಾಷ್ಟ್ರದ್ರೋಹವಲ್ಲ. ಭಾರತ್ ಕೆ ಬರ್ಬಾದಿ… ಇದು ಸಮಸ್ಯಾತ್ಮಕ. ಆದರೆ, ರಾಷ್ಟ್ರದ್ರೋಹವೆಂದು ನಾನು ಹೇಳಲಾರೆ. ಈ ವಿಧಿ ಅತ್ಯಂತ ಗಂಭೀರವಾದ ದಂಡನಾ ವಿಧಿ. ಅದು ಅತ್ಯಂತ ಸುಸ್ಪಷ್ಟ ಪ್ರಕರಣಗಳಿಗೆ ಅನ್ವಯಿಸುತ್ತದೆ. ಉಳಿದವುಗಳು ಪ್ರಚೋದನೆ. ಆದರೆ, ಅದನ್ನು ಸಾಬೀತುಪಡಿಸಬೇಕಾಗುತ್ತದೆ.

ಪ್ರಶ್ನೆ: ಕನ್ನಯ್ಯ ಕುಮಾರ್ ಈ ಘೋಷಣೆ ಕೂಗಿಲ್ಲ. ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಯೂನಿಯನ್ ಎಂಬ ಸಂಘಟನೆಗೆ ಸೇರಿದ ವಿದ್ಯಾರ್ಥಿಗಳ ಗುಂಪೊಂದು ಈ ಘೋಷಣೆಗಳನ್ನು ಕೂಗಿತ್ತು. ಆದರೆ, ಅವರೆಲ್ಲರೂ ಸದ್ಯಕ್ಕೆ ತಲೆತಪ್ಪಿಸಿಕೊಂಡಿದ್ದಾರೆ. ಆದರೆ, ಈ ಘೋಷಣೆಗಳನ್ನು ಕೂಗದವರ ಮೇಲೆ ರಾಷ್ಟ್ರದ್ರೋಹದ ಆರೋಪ ಹೊರಿಸಲಾಗಿದೆ.

ಸೊರಾಬ್ಜಿ: ನೀವು ಹೇಳುವುದು ಸರಿಯಾಗಿದ್ದಲ್ಲಿ ಖಂಡಿತವಾಗಿಯೂ ಸಂಪೂರ್ಣ ತಪ್ಪಾಗಿ ರಾಷ್ಟ್ರದ್ರೋಹವನ್ನು ಅನ್ವಯಿಸಲಾಗಿದೆ. ಒಂದು ಸಭೆಯಲ್ಲಿ ಕೇವಲ ಹಾಜರಿರುವುದು ರಾಷ್ಟ್ರದ್ರೋಹವಾಗುವುದಿಲ್ಲ. ಆತ ಸಕ್ರಿಯವಾಗಿ ಅವರನ್ನು ಪ್ರಚೋದಿಸದೇ ಇದ್ದರೆ, (ಆತ ಈ ಘೋಷಣೆಗಳನ್ನು ಕೂಗಿಲ್ಲ ಎಂದು ಪೊಲೀಸರು ಒಪ್ಪಿಕೊಂಡಿದ್ದರೆ) ಹೇಗೆ ಆತನ ಮೇಲೆ ರಾಷ್ಟ್ರದ್ರೋಹದ ಆರೋಪ ಹೊರಿಸಲು ಸಾಧ್ಯ? ಅದು ಸಂಪೂರ್ಣ ಅನ್ಯಾಯ. ನೀವು ಹೇಳಿದ ವಾಸ್ತವಾಂಶಗಳು ನಿಜವಾಗಿದ್ದರೆ, ಆ ನಿರ್ಧಾರ ಒಂದು ಗಂಭೀರವಾದ ಪ್ರಮಾದ. ಇದನ್ನೆಲ್ಲಾ ಒಟ್ಟಿನಲ್ಲಿ ನೋಡೋಣ. ವಿದ್ಯಾರ್ಥಿಗಳಿಗೆ ಒಂದು ದೃಷ್ಟಿಕೋನವಿದೆ. ಅವರದನ್ನು ಅಭಿವ್ಯಕ್ತಗೊಳಿಸಲು ಬಯಸುತ್ತಾರೆ. ಹಿಂದೂಸ್ತಾನ್ ಕಿ ಬರ್ಬಾದಿ…ಸೇರಿದಂತೆ ಅವರು ಹಾಗೆ ಮಾಡುವಾಗ ಎಲ್ಲೆ ಮೀರಿ ಅಭಿವ್ಯಕ್ತಗೊಳಿಸಿರಬಹುದು. ಇದು ಬಹುವಾಗಿ ಅಭಿವ್ಯಕ್ತಿ ಸ್ವಾತಂತ್ರ್ಯದ ಪ್ರಶ್ನೆಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...