Homeಮುಖಪುಟಕೇವಲ 'ಪಾಕಿಸ್ತಾನ್ ಜಿಂದಾಬಾದ್' ಘೋಷಣೆ ರಾಷ್ಟ್ರದ್ರೋಹವಲ್ಲ: ಮಾಜಿ ಸಾಲಿಸಿಟರ್ ಜನರಲ್ ಸೋಲಿ ಸೊರಾಬ್ಜಿ

ಕೇವಲ ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ರಾಷ್ಟ್ರದ್ರೋಹವಲ್ಲ: ಮಾಜಿ ಸಾಲಿಸಿಟರ್ ಜನರಲ್ ಸೋಲಿ ಸೊರಾಬ್ಜಿ

- Advertisement -
- Advertisement -

2016ರಲ್ಲಿ ಕನ್ಹಯ್ಯ ಕುಮಾರ್ ವಿಚಾರದ ಕುರಿತು ರಾಹುಲ್ ಕುನ್ವಾಲ್ (ನಿರ್ವಾಹಕ ಸಂಪಾದಕ, ಟೈಮ್ಸ್ ಆಫ್ ಇಂಡಿಯಾ) ನಡೆಸಿದ ಸಂದರ್ಶನ

ಅನುವಾದ: ನಿಖಿಲ್ ಕೋಲ್ಪೆ

ಜವಾಹರಲಾಲ್ ನೆಹರೂ ಯುನಿವರ್ಸಿಟಿ (ಜೆಎನ್‌ಯು)ಲ್ಲಿ ಕೂಗಲಾದ ಕೆಲವು ಘೋಷಣೆಗಳು ‘ಸಮಸ್ಯಾತ್ಮಕ’ವಾಗಿದ್ದರೂ, ಈ ಘಟನೆ ನಡೆಯುವಾಗ ಸ್ಥಳದಲ್ಲಿದ್ದ ಕನ್ನಯ್ಯ ಕುಮಾರ್ ವಿರುದ್ಧ ಹೊರಿಸಲಾದ ರಾಷ್ಟ್ರದ್ರೋಹದ ಆರೋಪಕ್ಕೆ ಸಮವಲ್ಲ ಎಂದು ಹೇಳಿರುವ ಮಾಜಿ ಸಾಲಿಸಿಟರ್ ಜನರಲ್ ಸೋಲಿ ಸೊರಾಬ್ಜಿ ದೇಶದ್ರೋಹದ ಕಾನೂನನ್ನು ಸ್ಪಷ್ಟಪಡಿಸಿದ್ದಾರೆ.

ಪ್ರಶ್ನೆ: ನಿಮ್ಮೆಲ್ಲಾ ಖ್ಯಾತಿ ಮತ್ತು ಅನುಭವದ ಹಿನ್ನೆಲೆಯಲ್ಲಿ ಜೆಎನ್‌ಯು ವಿದ್ಯಾರ್ಥಿ ಸಂಘ (ಜೆಎನ್‌ಯುಎಸ್‌ಯು)ದ ಅಧ್ಯಕ್ಷರಾಗಿದ್ದ ಕನ್ನಯ್ಯ ಕುಮಾರ್ ವಿರುದ್ಧ ರಾಷ್ಟ್ರದ್ರೋಹ ಆರೋಪ ಹೊರಿಸಿದ್ದು ಸರಿಯೋ, ತಪ್ಪೋ ಎಂದು ವಿಶ್ಲೇಷಿಸುವಂತೆ ನಾವು ಕೋರುತ್ತೇವೆ.

ಸೊರಾಬ್ಜಿ: ಅವೆಲ್ಲವೂ ವಾಸ್ತವಾಂಶಗಳ ಮೇಲೆ ಅವಲಂಬಿಸಿವೆ. ಮೊತ್ತಮೊದಲಾಗಿ ರಾಷ್ಟ್ರದ್ರೋಹ ಎಂದರೆ ಏನು ಎಂಬುದನ್ನು ಅರ್ಥ ಮಾಡಿಕೊಳ್ಳೋಣ. ಸರಕಾರದ ಮೇಲಿನ ಯಾವುದೇ ಟೀಕೆ, ಸರಕಾರ ಕೈಗೊಂಡ ಕಾರ್ಯಗಳ ನಿರಾಕರಣೆ- ಅದೆಷ್ಟೇ ಬಲವಾಗಿ ಅಭಿವ್ಯಕ್ತಗೊಳಿಸಿದರೂ ಅದು ರಾಷ್ಟ್ರದ್ರೋಹವಾಗುವುದಿಲ್ಲ. ಕೇದಾರನಾಥ ಪ್ರಕರಣದಲ್ಲಿ ವಿಧಿ 124ಎಯ ಸಿಂಧುತ್ವವನ್ನು ಪರಿಗಣಿಸಿದಾಗ, ಈ ವಿಧಿಯು ಸಾರ್ವಜನಿಕ ಶಿಸ್ತನ್ನು ಭಂಗಗೊಳಿಸುವ ಅಥವಾ ಹಿಂಸೆಯನ್ನು ಪ್ರಚೋದಿಸುವ ಯಾವುದೇ ಮಾತು, ಶಬ್ದಗಳು ಅಥವಾ ಕೃತಿಗೆ ಸೀಮಿತವಾಗಿದೆ.

ಪ್ರಶ್ನೆ: ನಾವು 1962ರ ಕೇದಾರನಾಥ ಪ್ರಕರಣವನ್ನು ಉದಾಹರಣೆಯಾಗಿ ತೆಗೆದುಕೊಂಡು, ಅದೇ ಮಾನದಂಡವನ್ನು ಜೆಎನ್‌ಯು ಪ್ರಕರಣಕ್ಕೆ ಅನ್ವಯಿಸಿದರೆ, ರಾಷ್ಟ್ರದ್ರೋಹದ ಆರೋಪವನ್ನು ತಪ್ಪಾಗಿ ಅನ್ವಯಿಸಲಾಗಿದೆಯೇ?

ಸೊರಾಬ್ಜಿ: ಅದು ಬೇರೆಬೇರೆ ವಿಷಯಗಳ ಮೇಲೆ ಅವಲಂಬಿಸಿದೆ. ಅವರು ಕೇವಲ ‘ ಪಾಕಿಸ್ತಾನ್ ಜಿಂದಾಬಾದ್’ ಎಂದು ಹೇಳಿದ್ದರೆ, ನನ್ನ ಮಟ್ಟಿಗೆ ಅದು ತೀರಾ ಖಂಡನೀಯ. ಆದರೆ, ಅದು ರಾಷ್ಟ್ರದ್ರೋಹವಲ್ಲ. ಆದರೆ, ಅವರು ಈ ಸರಕಾರವೊಂದು ದಬ್ಬಾಳಿಕೆಯ ಸರಕಾರ, ಜನರಿಗೆ ಅವರ ಮೂಲಭೂತ ಹಕ್ಕುಗಳನ್ನು ತಿಳಿಯುವ ಅವಕಾಶವಿಲ್ಲ, ಅದರ ವಿರುದ್ಧ ಪ್ರತಿಭಟಿಸಿ ಪ್ರಯೋಜನವಿಲ್ಲ, ನಾವದನ್ನು ಕಿತ್ತೆಸೆಯಬೇಕು ಎಂದು ಹೇಳಿದ್ದರೆ, ಅದು ಹಿಂಸೆಗೆ ಪ್ರಚೋದನೆಯಾಗುತ್ತದೆ ಮತ್ತು ರಾಷ್ಟ್ರದ್ರೋಹದ ಪ್ರಕರಣವನ್ನು ಆಕರ್ಷಿಸುತ್ತದೆ. ಆದರೆ, ಎಲ್ಲವೂ ವಾಸ್ತವಾಂಶಗಳ ಮೇಲೆ ಅವಲಂಬಿಸಿದೆ.

ಪ್ರಶ್ನೆ: ವಾಸ್ತವಾಂಶಗಳು. ಜೆಎನ್‌ಯುನಲ್ಲಿ ಕೂಗಲಾದ ಕೆಲವು ಘೋಷಣೆಗಳೆಂದರೆ, ‘ಪಾಕಿಸ್ತಾನ್ ಜಿಂದಾಬಾದ್’, ‘ಭಾರತ್‌ಕೆ ಬರ್ಬಾದಿ ತಕ್ ಜಂಗ್ ರಹೇಗಿ’ (ಭಾರತದ ಸರ್ವನಾಶದ ತನಕ ಯುದ್ಧ), ‘ಕಾಶ್ಮೀರ್ ಕಿ ಆಜಾದಿ ತಕ್ ಜಂಗ್ ರಹೇಗಿ’ (ಕಾಶ್ಮೀರದ ಸ್ವಾತಂತ್ರ್ಯದ ತನಕ ಯುದ್ಧ), ‘ಅಫ್ಜಲ್ ಹಮ್ ಶರ್ಮಿಂದಾ ಹೈ. ತೇರೇ ಕಾತಿಲ್ ಜಿಂದಾ ಹೈ’ ( ಅಫ್ಜಲ್ ನಮಗೆ ನಾಚಿಕೆಯಾಗುತ್ತಿದೆ, ನಿನ್ನ ಹಂತಕರು ಜೀವಂತವಿದ್ದಾರೆ), ‘ತುಮ್ ಕಿತ್ನೇ ಅಫ್ಜಲ್ ಮಾರೋಗೆ, ಹರ್ ಘರ್‌ಮೇ ಅಫ್ಜಲ್ ನಿಕ್ಲೇಗಾ’ ( ನೀನೆಷ್ಟು ಅಫ್ಜಲ್‌ಗಳನ್ನು ಕೊಲ್ಲುವೆ, ಪ್ರತಿ ಮನೆಯಲ್ಲಿ ಅಫ್ಜಲ್ ಹುಟ್ಟುವನು), ‘ಅಫ್ಜಲ್ ತೇರೆ ಖೂನ್ ಸೆ ಇಂಕ್ವಿಲಾಬ್ ಆಯೇಗಾ’ (ಅಫ್ಜಲ್ ನಿನ್ನ ರಕ್ತದಿಂದ ಕ್ರಾಂತಿ ಬರುವುದು)

ಸೊರಾಬ್ಜಿ: ಕೇವಲ ಪಾಕಿಸ್ತಾನ್ ಜಿಂದಾಬಾದ್ ಎಂದು ಹೇಳುವುದು ರಾಷ್ಟ್ರದ್ರೋಹವಲ್ಲ. ಭಾರತ್ ಕೆ ಬರ್ಬಾದಿ… ಇದು ಸಮಸ್ಯಾತ್ಮಕ. ಆದರೆ, ರಾಷ್ಟ್ರದ್ರೋಹವೆಂದು ನಾನು ಹೇಳಲಾರೆ. ಈ ವಿಧಿ ಅತ್ಯಂತ ಗಂಭೀರವಾದ ದಂಡನಾ ವಿಧಿ. ಅದು ಅತ್ಯಂತ ಸುಸ್ಪಷ್ಟ ಪ್ರಕರಣಗಳಿಗೆ ಅನ್ವಯಿಸುತ್ತದೆ. ಉಳಿದವುಗಳು ಪ್ರಚೋದನೆ. ಆದರೆ, ಅದನ್ನು ಸಾಬೀತುಪಡಿಸಬೇಕಾಗುತ್ತದೆ.

ಪ್ರಶ್ನೆ: ಕನ್ನಯ್ಯ ಕುಮಾರ್ ಈ ಘೋಷಣೆ ಕೂಗಿಲ್ಲ. ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಯೂನಿಯನ್ ಎಂಬ ಸಂಘಟನೆಗೆ ಸೇರಿದ ವಿದ್ಯಾರ್ಥಿಗಳ ಗುಂಪೊಂದು ಈ ಘೋಷಣೆಗಳನ್ನು ಕೂಗಿತ್ತು. ಆದರೆ, ಅವರೆಲ್ಲರೂ ಸದ್ಯಕ್ಕೆ ತಲೆತಪ್ಪಿಸಿಕೊಂಡಿದ್ದಾರೆ. ಆದರೆ, ಈ ಘೋಷಣೆಗಳನ್ನು ಕೂಗದವರ ಮೇಲೆ ರಾಷ್ಟ್ರದ್ರೋಹದ ಆರೋಪ ಹೊರಿಸಲಾಗಿದೆ.

ಸೊರಾಬ್ಜಿ: ನೀವು ಹೇಳುವುದು ಸರಿಯಾಗಿದ್ದಲ್ಲಿ ಖಂಡಿತವಾಗಿಯೂ ಸಂಪೂರ್ಣ ತಪ್ಪಾಗಿ ರಾಷ್ಟ್ರದ್ರೋಹವನ್ನು ಅನ್ವಯಿಸಲಾಗಿದೆ. ಒಂದು ಸಭೆಯಲ್ಲಿ ಕೇವಲ ಹಾಜರಿರುವುದು ರಾಷ್ಟ್ರದ್ರೋಹವಾಗುವುದಿಲ್ಲ. ಆತ ಸಕ್ರಿಯವಾಗಿ ಅವರನ್ನು ಪ್ರಚೋದಿಸದೇ ಇದ್ದರೆ, (ಆತ ಈ ಘೋಷಣೆಗಳನ್ನು ಕೂಗಿಲ್ಲ ಎಂದು ಪೊಲೀಸರು ಒಪ್ಪಿಕೊಂಡಿದ್ದರೆ) ಹೇಗೆ ಆತನ ಮೇಲೆ ರಾಷ್ಟ್ರದ್ರೋಹದ ಆರೋಪ ಹೊರಿಸಲು ಸಾಧ್ಯ? ಅದು ಸಂಪೂರ್ಣ ಅನ್ಯಾಯ. ನೀವು ಹೇಳಿದ ವಾಸ್ತವಾಂಶಗಳು ನಿಜವಾಗಿದ್ದರೆ, ಆ ನಿರ್ಧಾರ ಒಂದು ಗಂಭೀರವಾದ ಪ್ರಮಾದ. ಇದನ್ನೆಲ್ಲಾ ಒಟ್ಟಿನಲ್ಲಿ ನೋಡೋಣ. ವಿದ್ಯಾರ್ಥಿಗಳಿಗೆ ಒಂದು ದೃಷ್ಟಿಕೋನವಿದೆ. ಅವರದನ್ನು ಅಭಿವ್ಯಕ್ತಗೊಳಿಸಲು ಬಯಸುತ್ತಾರೆ. ಹಿಂದೂಸ್ತಾನ್ ಕಿ ಬರ್ಬಾದಿ…ಸೇರಿದಂತೆ ಅವರು ಹಾಗೆ ಮಾಡುವಾಗ ಎಲ್ಲೆ ಮೀರಿ ಅಭಿವ್ಯಕ್ತಗೊಳಿಸಿರಬಹುದು. ಇದು ಬಹುವಾಗಿ ಅಭಿವ್ಯಕ್ತಿ ಸ್ವಾತಂತ್ರ್ಯದ ಪ್ರಶ್ನೆಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...