Homeಮುಖಪುಟಕೇವಲ 'ಪಾಕಿಸ್ತಾನ್ ಜಿಂದಾಬಾದ್' ಘೋಷಣೆ ರಾಷ್ಟ್ರದ್ರೋಹವಲ್ಲ: ಮಾಜಿ ಸಾಲಿಸಿಟರ್ ಜನರಲ್ ಸೋಲಿ ಸೊರಾಬ್ಜಿ

ಕೇವಲ ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ರಾಷ್ಟ್ರದ್ರೋಹವಲ್ಲ: ಮಾಜಿ ಸಾಲಿಸಿಟರ್ ಜನರಲ್ ಸೋಲಿ ಸೊರಾಬ್ಜಿ

- Advertisement -
- Advertisement -

2016ರಲ್ಲಿ ಕನ್ಹಯ್ಯ ಕುಮಾರ್ ವಿಚಾರದ ಕುರಿತು ರಾಹುಲ್ ಕುನ್ವಾಲ್ (ನಿರ್ವಾಹಕ ಸಂಪಾದಕ, ಟೈಮ್ಸ್ ಆಫ್ ಇಂಡಿಯಾ) ನಡೆಸಿದ ಸಂದರ್ಶನ

ಅನುವಾದ: ನಿಖಿಲ್ ಕೋಲ್ಪೆ

ಜವಾಹರಲಾಲ್ ನೆಹರೂ ಯುನಿವರ್ಸಿಟಿ (ಜೆಎನ್‌ಯು)ಲ್ಲಿ ಕೂಗಲಾದ ಕೆಲವು ಘೋಷಣೆಗಳು ‘ಸಮಸ್ಯಾತ್ಮಕ’ವಾಗಿದ್ದರೂ, ಈ ಘಟನೆ ನಡೆಯುವಾಗ ಸ್ಥಳದಲ್ಲಿದ್ದ ಕನ್ನಯ್ಯ ಕುಮಾರ್ ವಿರುದ್ಧ ಹೊರಿಸಲಾದ ರಾಷ್ಟ್ರದ್ರೋಹದ ಆರೋಪಕ್ಕೆ ಸಮವಲ್ಲ ಎಂದು ಹೇಳಿರುವ ಮಾಜಿ ಸಾಲಿಸಿಟರ್ ಜನರಲ್ ಸೋಲಿ ಸೊರಾಬ್ಜಿ ದೇಶದ್ರೋಹದ ಕಾನೂನನ್ನು ಸ್ಪಷ್ಟಪಡಿಸಿದ್ದಾರೆ.

ಪ್ರಶ್ನೆ: ನಿಮ್ಮೆಲ್ಲಾ ಖ್ಯಾತಿ ಮತ್ತು ಅನುಭವದ ಹಿನ್ನೆಲೆಯಲ್ಲಿ ಜೆಎನ್‌ಯು ವಿದ್ಯಾರ್ಥಿ ಸಂಘ (ಜೆಎನ್‌ಯುಎಸ್‌ಯು)ದ ಅಧ್ಯಕ್ಷರಾಗಿದ್ದ ಕನ್ನಯ್ಯ ಕುಮಾರ್ ವಿರುದ್ಧ ರಾಷ್ಟ್ರದ್ರೋಹ ಆರೋಪ ಹೊರಿಸಿದ್ದು ಸರಿಯೋ, ತಪ್ಪೋ ಎಂದು ವಿಶ್ಲೇಷಿಸುವಂತೆ ನಾವು ಕೋರುತ್ತೇವೆ.

ಸೊರಾಬ್ಜಿ: ಅವೆಲ್ಲವೂ ವಾಸ್ತವಾಂಶಗಳ ಮೇಲೆ ಅವಲಂಬಿಸಿವೆ. ಮೊತ್ತಮೊದಲಾಗಿ ರಾಷ್ಟ್ರದ್ರೋಹ ಎಂದರೆ ಏನು ಎಂಬುದನ್ನು ಅರ್ಥ ಮಾಡಿಕೊಳ್ಳೋಣ. ಸರಕಾರದ ಮೇಲಿನ ಯಾವುದೇ ಟೀಕೆ, ಸರಕಾರ ಕೈಗೊಂಡ ಕಾರ್ಯಗಳ ನಿರಾಕರಣೆ- ಅದೆಷ್ಟೇ ಬಲವಾಗಿ ಅಭಿವ್ಯಕ್ತಗೊಳಿಸಿದರೂ ಅದು ರಾಷ್ಟ್ರದ್ರೋಹವಾಗುವುದಿಲ್ಲ. ಕೇದಾರನಾಥ ಪ್ರಕರಣದಲ್ಲಿ ವಿಧಿ 124ಎಯ ಸಿಂಧುತ್ವವನ್ನು ಪರಿಗಣಿಸಿದಾಗ, ಈ ವಿಧಿಯು ಸಾರ್ವಜನಿಕ ಶಿಸ್ತನ್ನು ಭಂಗಗೊಳಿಸುವ ಅಥವಾ ಹಿಂಸೆಯನ್ನು ಪ್ರಚೋದಿಸುವ ಯಾವುದೇ ಮಾತು, ಶಬ್ದಗಳು ಅಥವಾ ಕೃತಿಗೆ ಸೀಮಿತವಾಗಿದೆ.

ಪ್ರಶ್ನೆ: ನಾವು 1962ರ ಕೇದಾರನಾಥ ಪ್ರಕರಣವನ್ನು ಉದಾಹರಣೆಯಾಗಿ ತೆಗೆದುಕೊಂಡು, ಅದೇ ಮಾನದಂಡವನ್ನು ಜೆಎನ್‌ಯು ಪ್ರಕರಣಕ್ಕೆ ಅನ್ವಯಿಸಿದರೆ, ರಾಷ್ಟ್ರದ್ರೋಹದ ಆರೋಪವನ್ನು ತಪ್ಪಾಗಿ ಅನ್ವಯಿಸಲಾಗಿದೆಯೇ?

ಸೊರಾಬ್ಜಿ: ಅದು ಬೇರೆಬೇರೆ ವಿಷಯಗಳ ಮೇಲೆ ಅವಲಂಬಿಸಿದೆ. ಅವರು ಕೇವಲ ‘ ಪಾಕಿಸ್ತಾನ್ ಜಿಂದಾಬಾದ್’ ಎಂದು ಹೇಳಿದ್ದರೆ, ನನ್ನ ಮಟ್ಟಿಗೆ ಅದು ತೀರಾ ಖಂಡನೀಯ. ಆದರೆ, ಅದು ರಾಷ್ಟ್ರದ್ರೋಹವಲ್ಲ. ಆದರೆ, ಅವರು ಈ ಸರಕಾರವೊಂದು ದಬ್ಬಾಳಿಕೆಯ ಸರಕಾರ, ಜನರಿಗೆ ಅವರ ಮೂಲಭೂತ ಹಕ್ಕುಗಳನ್ನು ತಿಳಿಯುವ ಅವಕಾಶವಿಲ್ಲ, ಅದರ ವಿರುದ್ಧ ಪ್ರತಿಭಟಿಸಿ ಪ್ರಯೋಜನವಿಲ್ಲ, ನಾವದನ್ನು ಕಿತ್ತೆಸೆಯಬೇಕು ಎಂದು ಹೇಳಿದ್ದರೆ, ಅದು ಹಿಂಸೆಗೆ ಪ್ರಚೋದನೆಯಾಗುತ್ತದೆ ಮತ್ತು ರಾಷ್ಟ್ರದ್ರೋಹದ ಪ್ರಕರಣವನ್ನು ಆಕರ್ಷಿಸುತ್ತದೆ. ಆದರೆ, ಎಲ್ಲವೂ ವಾಸ್ತವಾಂಶಗಳ ಮೇಲೆ ಅವಲಂಬಿಸಿದೆ.

ಪ್ರಶ್ನೆ: ವಾಸ್ತವಾಂಶಗಳು. ಜೆಎನ್‌ಯುನಲ್ಲಿ ಕೂಗಲಾದ ಕೆಲವು ಘೋಷಣೆಗಳೆಂದರೆ, ‘ಪಾಕಿಸ್ತಾನ್ ಜಿಂದಾಬಾದ್’, ‘ಭಾರತ್‌ಕೆ ಬರ್ಬಾದಿ ತಕ್ ಜಂಗ್ ರಹೇಗಿ’ (ಭಾರತದ ಸರ್ವನಾಶದ ತನಕ ಯುದ್ಧ), ‘ಕಾಶ್ಮೀರ್ ಕಿ ಆಜಾದಿ ತಕ್ ಜಂಗ್ ರಹೇಗಿ’ (ಕಾಶ್ಮೀರದ ಸ್ವಾತಂತ್ರ್ಯದ ತನಕ ಯುದ್ಧ), ‘ಅಫ್ಜಲ್ ಹಮ್ ಶರ್ಮಿಂದಾ ಹೈ. ತೇರೇ ಕಾತಿಲ್ ಜಿಂದಾ ಹೈ’ ( ಅಫ್ಜಲ್ ನಮಗೆ ನಾಚಿಕೆಯಾಗುತ್ತಿದೆ, ನಿನ್ನ ಹಂತಕರು ಜೀವಂತವಿದ್ದಾರೆ), ‘ತುಮ್ ಕಿತ್ನೇ ಅಫ್ಜಲ್ ಮಾರೋಗೆ, ಹರ್ ಘರ್‌ಮೇ ಅಫ್ಜಲ್ ನಿಕ್ಲೇಗಾ’ ( ನೀನೆಷ್ಟು ಅಫ್ಜಲ್‌ಗಳನ್ನು ಕೊಲ್ಲುವೆ, ಪ್ರತಿ ಮನೆಯಲ್ಲಿ ಅಫ್ಜಲ್ ಹುಟ್ಟುವನು), ‘ಅಫ್ಜಲ್ ತೇರೆ ಖೂನ್ ಸೆ ಇಂಕ್ವಿಲಾಬ್ ಆಯೇಗಾ’ (ಅಫ್ಜಲ್ ನಿನ್ನ ರಕ್ತದಿಂದ ಕ್ರಾಂತಿ ಬರುವುದು)

ಸೊರಾಬ್ಜಿ: ಕೇವಲ ಪಾಕಿಸ್ತಾನ್ ಜಿಂದಾಬಾದ್ ಎಂದು ಹೇಳುವುದು ರಾಷ್ಟ್ರದ್ರೋಹವಲ್ಲ. ಭಾರತ್ ಕೆ ಬರ್ಬಾದಿ… ಇದು ಸಮಸ್ಯಾತ್ಮಕ. ಆದರೆ, ರಾಷ್ಟ್ರದ್ರೋಹವೆಂದು ನಾನು ಹೇಳಲಾರೆ. ಈ ವಿಧಿ ಅತ್ಯಂತ ಗಂಭೀರವಾದ ದಂಡನಾ ವಿಧಿ. ಅದು ಅತ್ಯಂತ ಸುಸ್ಪಷ್ಟ ಪ್ರಕರಣಗಳಿಗೆ ಅನ್ವಯಿಸುತ್ತದೆ. ಉಳಿದವುಗಳು ಪ್ರಚೋದನೆ. ಆದರೆ, ಅದನ್ನು ಸಾಬೀತುಪಡಿಸಬೇಕಾಗುತ್ತದೆ.

ಪ್ರಶ್ನೆ: ಕನ್ನಯ್ಯ ಕುಮಾರ್ ಈ ಘೋಷಣೆ ಕೂಗಿಲ್ಲ. ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಯೂನಿಯನ್ ಎಂಬ ಸಂಘಟನೆಗೆ ಸೇರಿದ ವಿದ್ಯಾರ್ಥಿಗಳ ಗುಂಪೊಂದು ಈ ಘೋಷಣೆಗಳನ್ನು ಕೂಗಿತ್ತು. ಆದರೆ, ಅವರೆಲ್ಲರೂ ಸದ್ಯಕ್ಕೆ ತಲೆತಪ್ಪಿಸಿಕೊಂಡಿದ್ದಾರೆ. ಆದರೆ, ಈ ಘೋಷಣೆಗಳನ್ನು ಕೂಗದವರ ಮೇಲೆ ರಾಷ್ಟ್ರದ್ರೋಹದ ಆರೋಪ ಹೊರಿಸಲಾಗಿದೆ.

ಸೊರಾಬ್ಜಿ: ನೀವು ಹೇಳುವುದು ಸರಿಯಾಗಿದ್ದಲ್ಲಿ ಖಂಡಿತವಾಗಿಯೂ ಸಂಪೂರ್ಣ ತಪ್ಪಾಗಿ ರಾಷ್ಟ್ರದ್ರೋಹವನ್ನು ಅನ್ವಯಿಸಲಾಗಿದೆ. ಒಂದು ಸಭೆಯಲ್ಲಿ ಕೇವಲ ಹಾಜರಿರುವುದು ರಾಷ್ಟ್ರದ್ರೋಹವಾಗುವುದಿಲ್ಲ. ಆತ ಸಕ್ರಿಯವಾಗಿ ಅವರನ್ನು ಪ್ರಚೋದಿಸದೇ ಇದ್ದರೆ, (ಆತ ಈ ಘೋಷಣೆಗಳನ್ನು ಕೂಗಿಲ್ಲ ಎಂದು ಪೊಲೀಸರು ಒಪ್ಪಿಕೊಂಡಿದ್ದರೆ) ಹೇಗೆ ಆತನ ಮೇಲೆ ರಾಷ್ಟ್ರದ್ರೋಹದ ಆರೋಪ ಹೊರಿಸಲು ಸಾಧ್ಯ? ಅದು ಸಂಪೂರ್ಣ ಅನ್ಯಾಯ. ನೀವು ಹೇಳಿದ ವಾಸ್ತವಾಂಶಗಳು ನಿಜವಾಗಿದ್ದರೆ, ಆ ನಿರ್ಧಾರ ಒಂದು ಗಂಭೀರವಾದ ಪ್ರಮಾದ. ಇದನ್ನೆಲ್ಲಾ ಒಟ್ಟಿನಲ್ಲಿ ನೋಡೋಣ. ವಿದ್ಯಾರ್ಥಿಗಳಿಗೆ ಒಂದು ದೃಷ್ಟಿಕೋನವಿದೆ. ಅವರದನ್ನು ಅಭಿವ್ಯಕ್ತಗೊಳಿಸಲು ಬಯಸುತ್ತಾರೆ. ಹಿಂದೂಸ್ತಾನ್ ಕಿ ಬರ್ಬಾದಿ…ಸೇರಿದಂತೆ ಅವರು ಹಾಗೆ ಮಾಡುವಾಗ ಎಲ್ಲೆ ಮೀರಿ ಅಭಿವ್ಯಕ್ತಗೊಳಿಸಿರಬಹುದು. ಇದು ಬಹುವಾಗಿ ಅಭಿವ್ಯಕ್ತಿ ಸ್ವಾತಂತ್ರ್ಯದ ಪ್ರಶ್ನೆಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...