Homeಮುಖಪುಟಕೇವಲ 'ಪಾಕಿಸ್ತಾನ್ ಜಿಂದಾಬಾದ್' ಘೋಷಣೆ ರಾಷ್ಟ್ರದ್ರೋಹವಲ್ಲ: ಮಾಜಿ ಸಾಲಿಸಿಟರ್ ಜನರಲ್ ಸೋಲಿ ಸೊರಾಬ್ಜಿ

ಕೇವಲ ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ರಾಷ್ಟ್ರದ್ರೋಹವಲ್ಲ: ಮಾಜಿ ಸಾಲಿಸಿಟರ್ ಜನರಲ್ ಸೋಲಿ ಸೊರಾಬ್ಜಿ

- Advertisement -
- Advertisement -

2016ರಲ್ಲಿ ಕನ್ಹಯ್ಯ ಕುಮಾರ್ ವಿಚಾರದ ಕುರಿತು ರಾಹುಲ್ ಕುನ್ವಾಲ್ (ನಿರ್ವಾಹಕ ಸಂಪಾದಕ, ಟೈಮ್ಸ್ ಆಫ್ ಇಂಡಿಯಾ) ನಡೆಸಿದ ಸಂದರ್ಶನ

ಅನುವಾದ: ನಿಖಿಲ್ ಕೋಲ್ಪೆ

ಜವಾಹರಲಾಲ್ ನೆಹರೂ ಯುನಿವರ್ಸಿಟಿ (ಜೆಎನ್‌ಯು)ಲ್ಲಿ ಕೂಗಲಾದ ಕೆಲವು ಘೋಷಣೆಗಳು ‘ಸಮಸ್ಯಾತ್ಮಕ’ವಾಗಿದ್ದರೂ, ಈ ಘಟನೆ ನಡೆಯುವಾಗ ಸ್ಥಳದಲ್ಲಿದ್ದ ಕನ್ನಯ್ಯ ಕುಮಾರ್ ವಿರುದ್ಧ ಹೊರಿಸಲಾದ ರಾಷ್ಟ್ರದ್ರೋಹದ ಆರೋಪಕ್ಕೆ ಸಮವಲ್ಲ ಎಂದು ಹೇಳಿರುವ ಮಾಜಿ ಸಾಲಿಸಿಟರ್ ಜನರಲ್ ಸೋಲಿ ಸೊರಾಬ್ಜಿ ದೇಶದ್ರೋಹದ ಕಾನೂನನ್ನು ಸ್ಪಷ್ಟಪಡಿಸಿದ್ದಾರೆ.

ಪ್ರಶ್ನೆ: ನಿಮ್ಮೆಲ್ಲಾ ಖ್ಯಾತಿ ಮತ್ತು ಅನುಭವದ ಹಿನ್ನೆಲೆಯಲ್ಲಿ ಜೆಎನ್‌ಯು ವಿದ್ಯಾರ್ಥಿ ಸಂಘ (ಜೆಎನ್‌ಯುಎಸ್‌ಯು)ದ ಅಧ್ಯಕ್ಷರಾಗಿದ್ದ ಕನ್ನಯ್ಯ ಕುಮಾರ್ ವಿರುದ್ಧ ರಾಷ್ಟ್ರದ್ರೋಹ ಆರೋಪ ಹೊರಿಸಿದ್ದು ಸರಿಯೋ, ತಪ್ಪೋ ಎಂದು ವಿಶ್ಲೇಷಿಸುವಂತೆ ನಾವು ಕೋರುತ್ತೇವೆ.

ಸೊರಾಬ್ಜಿ: ಅವೆಲ್ಲವೂ ವಾಸ್ತವಾಂಶಗಳ ಮೇಲೆ ಅವಲಂಬಿಸಿವೆ. ಮೊತ್ತಮೊದಲಾಗಿ ರಾಷ್ಟ್ರದ್ರೋಹ ಎಂದರೆ ಏನು ಎಂಬುದನ್ನು ಅರ್ಥ ಮಾಡಿಕೊಳ್ಳೋಣ. ಸರಕಾರದ ಮೇಲಿನ ಯಾವುದೇ ಟೀಕೆ, ಸರಕಾರ ಕೈಗೊಂಡ ಕಾರ್ಯಗಳ ನಿರಾಕರಣೆ- ಅದೆಷ್ಟೇ ಬಲವಾಗಿ ಅಭಿವ್ಯಕ್ತಗೊಳಿಸಿದರೂ ಅದು ರಾಷ್ಟ್ರದ್ರೋಹವಾಗುವುದಿಲ್ಲ. ಕೇದಾರನಾಥ ಪ್ರಕರಣದಲ್ಲಿ ವಿಧಿ 124ಎಯ ಸಿಂಧುತ್ವವನ್ನು ಪರಿಗಣಿಸಿದಾಗ, ಈ ವಿಧಿಯು ಸಾರ್ವಜನಿಕ ಶಿಸ್ತನ್ನು ಭಂಗಗೊಳಿಸುವ ಅಥವಾ ಹಿಂಸೆಯನ್ನು ಪ್ರಚೋದಿಸುವ ಯಾವುದೇ ಮಾತು, ಶಬ್ದಗಳು ಅಥವಾ ಕೃತಿಗೆ ಸೀಮಿತವಾಗಿದೆ.

ಪ್ರಶ್ನೆ: ನಾವು 1962ರ ಕೇದಾರನಾಥ ಪ್ರಕರಣವನ್ನು ಉದಾಹರಣೆಯಾಗಿ ತೆಗೆದುಕೊಂಡು, ಅದೇ ಮಾನದಂಡವನ್ನು ಜೆಎನ್‌ಯು ಪ್ರಕರಣಕ್ಕೆ ಅನ್ವಯಿಸಿದರೆ, ರಾಷ್ಟ್ರದ್ರೋಹದ ಆರೋಪವನ್ನು ತಪ್ಪಾಗಿ ಅನ್ವಯಿಸಲಾಗಿದೆಯೇ?

ಸೊರಾಬ್ಜಿ: ಅದು ಬೇರೆಬೇರೆ ವಿಷಯಗಳ ಮೇಲೆ ಅವಲಂಬಿಸಿದೆ. ಅವರು ಕೇವಲ ‘ ಪಾಕಿಸ್ತಾನ್ ಜಿಂದಾಬಾದ್’ ಎಂದು ಹೇಳಿದ್ದರೆ, ನನ್ನ ಮಟ್ಟಿಗೆ ಅದು ತೀರಾ ಖಂಡನೀಯ. ಆದರೆ, ಅದು ರಾಷ್ಟ್ರದ್ರೋಹವಲ್ಲ. ಆದರೆ, ಅವರು ಈ ಸರಕಾರವೊಂದು ದಬ್ಬಾಳಿಕೆಯ ಸರಕಾರ, ಜನರಿಗೆ ಅವರ ಮೂಲಭೂತ ಹಕ್ಕುಗಳನ್ನು ತಿಳಿಯುವ ಅವಕಾಶವಿಲ್ಲ, ಅದರ ವಿರುದ್ಧ ಪ್ರತಿಭಟಿಸಿ ಪ್ರಯೋಜನವಿಲ್ಲ, ನಾವದನ್ನು ಕಿತ್ತೆಸೆಯಬೇಕು ಎಂದು ಹೇಳಿದ್ದರೆ, ಅದು ಹಿಂಸೆಗೆ ಪ್ರಚೋದನೆಯಾಗುತ್ತದೆ ಮತ್ತು ರಾಷ್ಟ್ರದ್ರೋಹದ ಪ್ರಕರಣವನ್ನು ಆಕರ್ಷಿಸುತ್ತದೆ. ಆದರೆ, ಎಲ್ಲವೂ ವಾಸ್ತವಾಂಶಗಳ ಮೇಲೆ ಅವಲಂಬಿಸಿದೆ.

ಪ್ರಶ್ನೆ: ವಾಸ್ತವಾಂಶಗಳು. ಜೆಎನ್‌ಯುನಲ್ಲಿ ಕೂಗಲಾದ ಕೆಲವು ಘೋಷಣೆಗಳೆಂದರೆ, ‘ಪಾಕಿಸ್ತಾನ್ ಜಿಂದಾಬಾದ್’, ‘ಭಾರತ್‌ಕೆ ಬರ್ಬಾದಿ ತಕ್ ಜಂಗ್ ರಹೇಗಿ’ (ಭಾರತದ ಸರ್ವನಾಶದ ತನಕ ಯುದ್ಧ), ‘ಕಾಶ್ಮೀರ್ ಕಿ ಆಜಾದಿ ತಕ್ ಜಂಗ್ ರಹೇಗಿ’ (ಕಾಶ್ಮೀರದ ಸ್ವಾತಂತ್ರ್ಯದ ತನಕ ಯುದ್ಧ), ‘ಅಫ್ಜಲ್ ಹಮ್ ಶರ್ಮಿಂದಾ ಹೈ. ತೇರೇ ಕಾತಿಲ್ ಜಿಂದಾ ಹೈ’ ( ಅಫ್ಜಲ್ ನಮಗೆ ನಾಚಿಕೆಯಾಗುತ್ತಿದೆ, ನಿನ್ನ ಹಂತಕರು ಜೀವಂತವಿದ್ದಾರೆ), ‘ತುಮ್ ಕಿತ್ನೇ ಅಫ್ಜಲ್ ಮಾರೋಗೆ, ಹರ್ ಘರ್‌ಮೇ ಅಫ್ಜಲ್ ನಿಕ್ಲೇಗಾ’ ( ನೀನೆಷ್ಟು ಅಫ್ಜಲ್‌ಗಳನ್ನು ಕೊಲ್ಲುವೆ, ಪ್ರತಿ ಮನೆಯಲ್ಲಿ ಅಫ್ಜಲ್ ಹುಟ್ಟುವನು), ‘ಅಫ್ಜಲ್ ತೇರೆ ಖೂನ್ ಸೆ ಇಂಕ್ವಿಲಾಬ್ ಆಯೇಗಾ’ (ಅಫ್ಜಲ್ ನಿನ್ನ ರಕ್ತದಿಂದ ಕ್ರಾಂತಿ ಬರುವುದು)

ಸೊರಾಬ್ಜಿ: ಕೇವಲ ಪಾಕಿಸ್ತಾನ್ ಜಿಂದಾಬಾದ್ ಎಂದು ಹೇಳುವುದು ರಾಷ್ಟ್ರದ್ರೋಹವಲ್ಲ. ಭಾರತ್ ಕೆ ಬರ್ಬಾದಿ… ಇದು ಸಮಸ್ಯಾತ್ಮಕ. ಆದರೆ, ರಾಷ್ಟ್ರದ್ರೋಹವೆಂದು ನಾನು ಹೇಳಲಾರೆ. ಈ ವಿಧಿ ಅತ್ಯಂತ ಗಂಭೀರವಾದ ದಂಡನಾ ವಿಧಿ. ಅದು ಅತ್ಯಂತ ಸುಸ್ಪಷ್ಟ ಪ್ರಕರಣಗಳಿಗೆ ಅನ್ವಯಿಸುತ್ತದೆ. ಉಳಿದವುಗಳು ಪ್ರಚೋದನೆ. ಆದರೆ, ಅದನ್ನು ಸಾಬೀತುಪಡಿಸಬೇಕಾಗುತ್ತದೆ.

ಪ್ರಶ್ನೆ: ಕನ್ನಯ್ಯ ಕುಮಾರ್ ಈ ಘೋಷಣೆ ಕೂಗಿಲ್ಲ. ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಯೂನಿಯನ್ ಎಂಬ ಸಂಘಟನೆಗೆ ಸೇರಿದ ವಿದ್ಯಾರ್ಥಿಗಳ ಗುಂಪೊಂದು ಈ ಘೋಷಣೆಗಳನ್ನು ಕೂಗಿತ್ತು. ಆದರೆ, ಅವರೆಲ್ಲರೂ ಸದ್ಯಕ್ಕೆ ತಲೆತಪ್ಪಿಸಿಕೊಂಡಿದ್ದಾರೆ. ಆದರೆ, ಈ ಘೋಷಣೆಗಳನ್ನು ಕೂಗದವರ ಮೇಲೆ ರಾಷ್ಟ್ರದ್ರೋಹದ ಆರೋಪ ಹೊರಿಸಲಾಗಿದೆ.

ಸೊರಾಬ್ಜಿ: ನೀವು ಹೇಳುವುದು ಸರಿಯಾಗಿದ್ದಲ್ಲಿ ಖಂಡಿತವಾಗಿಯೂ ಸಂಪೂರ್ಣ ತಪ್ಪಾಗಿ ರಾಷ್ಟ್ರದ್ರೋಹವನ್ನು ಅನ್ವಯಿಸಲಾಗಿದೆ. ಒಂದು ಸಭೆಯಲ್ಲಿ ಕೇವಲ ಹಾಜರಿರುವುದು ರಾಷ್ಟ್ರದ್ರೋಹವಾಗುವುದಿಲ್ಲ. ಆತ ಸಕ್ರಿಯವಾಗಿ ಅವರನ್ನು ಪ್ರಚೋದಿಸದೇ ಇದ್ದರೆ, (ಆತ ಈ ಘೋಷಣೆಗಳನ್ನು ಕೂಗಿಲ್ಲ ಎಂದು ಪೊಲೀಸರು ಒಪ್ಪಿಕೊಂಡಿದ್ದರೆ) ಹೇಗೆ ಆತನ ಮೇಲೆ ರಾಷ್ಟ್ರದ್ರೋಹದ ಆರೋಪ ಹೊರಿಸಲು ಸಾಧ್ಯ? ಅದು ಸಂಪೂರ್ಣ ಅನ್ಯಾಯ. ನೀವು ಹೇಳಿದ ವಾಸ್ತವಾಂಶಗಳು ನಿಜವಾಗಿದ್ದರೆ, ಆ ನಿರ್ಧಾರ ಒಂದು ಗಂಭೀರವಾದ ಪ್ರಮಾದ. ಇದನ್ನೆಲ್ಲಾ ಒಟ್ಟಿನಲ್ಲಿ ನೋಡೋಣ. ವಿದ್ಯಾರ್ಥಿಗಳಿಗೆ ಒಂದು ದೃಷ್ಟಿಕೋನವಿದೆ. ಅವರದನ್ನು ಅಭಿವ್ಯಕ್ತಗೊಳಿಸಲು ಬಯಸುತ್ತಾರೆ. ಹಿಂದೂಸ್ತಾನ್ ಕಿ ಬರ್ಬಾದಿ…ಸೇರಿದಂತೆ ಅವರು ಹಾಗೆ ಮಾಡುವಾಗ ಎಲ್ಲೆ ಮೀರಿ ಅಭಿವ್ಯಕ್ತಗೊಳಿಸಿರಬಹುದು. ಇದು ಬಹುವಾಗಿ ಅಭಿವ್ಯಕ್ತಿ ಸ್ವಾತಂತ್ರ್ಯದ ಪ್ರಶ್ನೆಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...