Homeಮುಖಪುಟಕೇವಲ 'ಪಾಕಿಸ್ತಾನ್ ಜಿಂದಾಬಾದ್' ಘೋಷಣೆ ರಾಷ್ಟ್ರದ್ರೋಹವಲ್ಲ: ಮಾಜಿ ಸಾಲಿಸಿಟರ್ ಜನರಲ್ ಸೋಲಿ ಸೊರಾಬ್ಜಿ

ಕೇವಲ ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ರಾಷ್ಟ್ರದ್ರೋಹವಲ್ಲ: ಮಾಜಿ ಸಾಲಿಸಿಟರ್ ಜನರಲ್ ಸೋಲಿ ಸೊರಾಬ್ಜಿ

- Advertisement -
- Advertisement -

2016ರಲ್ಲಿ ಕನ್ಹಯ್ಯ ಕುಮಾರ್ ವಿಚಾರದ ಕುರಿತು ರಾಹುಲ್ ಕುನ್ವಾಲ್ (ನಿರ್ವಾಹಕ ಸಂಪಾದಕ, ಟೈಮ್ಸ್ ಆಫ್ ಇಂಡಿಯಾ) ನಡೆಸಿದ ಸಂದರ್ಶನ

ಅನುವಾದ: ನಿಖಿಲ್ ಕೋಲ್ಪೆ

ಜವಾಹರಲಾಲ್ ನೆಹರೂ ಯುನಿವರ್ಸಿಟಿ (ಜೆಎನ್‌ಯು)ಲ್ಲಿ ಕೂಗಲಾದ ಕೆಲವು ಘೋಷಣೆಗಳು ‘ಸಮಸ್ಯಾತ್ಮಕ’ವಾಗಿದ್ದರೂ, ಈ ಘಟನೆ ನಡೆಯುವಾಗ ಸ್ಥಳದಲ್ಲಿದ್ದ ಕನ್ನಯ್ಯ ಕುಮಾರ್ ವಿರುದ್ಧ ಹೊರಿಸಲಾದ ರಾಷ್ಟ್ರದ್ರೋಹದ ಆರೋಪಕ್ಕೆ ಸಮವಲ್ಲ ಎಂದು ಹೇಳಿರುವ ಮಾಜಿ ಸಾಲಿಸಿಟರ್ ಜನರಲ್ ಸೋಲಿ ಸೊರಾಬ್ಜಿ ದೇಶದ್ರೋಹದ ಕಾನೂನನ್ನು ಸ್ಪಷ್ಟಪಡಿಸಿದ್ದಾರೆ.

ಪ್ರಶ್ನೆ: ನಿಮ್ಮೆಲ್ಲಾ ಖ್ಯಾತಿ ಮತ್ತು ಅನುಭವದ ಹಿನ್ನೆಲೆಯಲ್ಲಿ ಜೆಎನ್‌ಯು ವಿದ್ಯಾರ್ಥಿ ಸಂಘ (ಜೆಎನ್‌ಯುಎಸ್‌ಯು)ದ ಅಧ್ಯಕ್ಷರಾಗಿದ್ದ ಕನ್ನಯ್ಯ ಕುಮಾರ್ ವಿರುದ್ಧ ರಾಷ್ಟ್ರದ್ರೋಹ ಆರೋಪ ಹೊರಿಸಿದ್ದು ಸರಿಯೋ, ತಪ್ಪೋ ಎಂದು ವಿಶ್ಲೇಷಿಸುವಂತೆ ನಾವು ಕೋರುತ್ತೇವೆ.

ಸೊರಾಬ್ಜಿ: ಅವೆಲ್ಲವೂ ವಾಸ್ತವಾಂಶಗಳ ಮೇಲೆ ಅವಲಂಬಿಸಿವೆ. ಮೊತ್ತಮೊದಲಾಗಿ ರಾಷ್ಟ್ರದ್ರೋಹ ಎಂದರೆ ಏನು ಎಂಬುದನ್ನು ಅರ್ಥ ಮಾಡಿಕೊಳ್ಳೋಣ. ಸರಕಾರದ ಮೇಲಿನ ಯಾವುದೇ ಟೀಕೆ, ಸರಕಾರ ಕೈಗೊಂಡ ಕಾರ್ಯಗಳ ನಿರಾಕರಣೆ- ಅದೆಷ್ಟೇ ಬಲವಾಗಿ ಅಭಿವ್ಯಕ್ತಗೊಳಿಸಿದರೂ ಅದು ರಾಷ್ಟ್ರದ್ರೋಹವಾಗುವುದಿಲ್ಲ. ಕೇದಾರನಾಥ ಪ್ರಕರಣದಲ್ಲಿ ವಿಧಿ 124ಎಯ ಸಿಂಧುತ್ವವನ್ನು ಪರಿಗಣಿಸಿದಾಗ, ಈ ವಿಧಿಯು ಸಾರ್ವಜನಿಕ ಶಿಸ್ತನ್ನು ಭಂಗಗೊಳಿಸುವ ಅಥವಾ ಹಿಂಸೆಯನ್ನು ಪ್ರಚೋದಿಸುವ ಯಾವುದೇ ಮಾತು, ಶಬ್ದಗಳು ಅಥವಾ ಕೃತಿಗೆ ಸೀಮಿತವಾಗಿದೆ.

ಪ್ರಶ್ನೆ: ನಾವು 1962ರ ಕೇದಾರನಾಥ ಪ್ರಕರಣವನ್ನು ಉದಾಹರಣೆಯಾಗಿ ತೆಗೆದುಕೊಂಡು, ಅದೇ ಮಾನದಂಡವನ್ನು ಜೆಎನ್‌ಯು ಪ್ರಕರಣಕ್ಕೆ ಅನ್ವಯಿಸಿದರೆ, ರಾಷ್ಟ್ರದ್ರೋಹದ ಆರೋಪವನ್ನು ತಪ್ಪಾಗಿ ಅನ್ವಯಿಸಲಾಗಿದೆಯೇ?

ಸೊರಾಬ್ಜಿ: ಅದು ಬೇರೆಬೇರೆ ವಿಷಯಗಳ ಮೇಲೆ ಅವಲಂಬಿಸಿದೆ. ಅವರು ಕೇವಲ ‘ ಪಾಕಿಸ್ತಾನ್ ಜಿಂದಾಬಾದ್’ ಎಂದು ಹೇಳಿದ್ದರೆ, ನನ್ನ ಮಟ್ಟಿಗೆ ಅದು ತೀರಾ ಖಂಡನೀಯ. ಆದರೆ, ಅದು ರಾಷ್ಟ್ರದ್ರೋಹವಲ್ಲ. ಆದರೆ, ಅವರು ಈ ಸರಕಾರವೊಂದು ದಬ್ಬಾಳಿಕೆಯ ಸರಕಾರ, ಜನರಿಗೆ ಅವರ ಮೂಲಭೂತ ಹಕ್ಕುಗಳನ್ನು ತಿಳಿಯುವ ಅವಕಾಶವಿಲ್ಲ, ಅದರ ವಿರುದ್ಧ ಪ್ರತಿಭಟಿಸಿ ಪ್ರಯೋಜನವಿಲ್ಲ, ನಾವದನ್ನು ಕಿತ್ತೆಸೆಯಬೇಕು ಎಂದು ಹೇಳಿದ್ದರೆ, ಅದು ಹಿಂಸೆಗೆ ಪ್ರಚೋದನೆಯಾಗುತ್ತದೆ ಮತ್ತು ರಾಷ್ಟ್ರದ್ರೋಹದ ಪ್ರಕರಣವನ್ನು ಆಕರ್ಷಿಸುತ್ತದೆ. ಆದರೆ, ಎಲ್ಲವೂ ವಾಸ್ತವಾಂಶಗಳ ಮೇಲೆ ಅವಲಂಬಿಸಿದೆ.

ಪ್ರಶ್ನೆ: ವಾಸ್ತವಾಂಶಗಳು. ಜೆಎನ್‌ಯುನಲ್ಲಿ ಕೂಗಲಾದ ಕೆಲವು ಘೋಷಣೆಗಳೆಂದರೆ, ‘ಪಾಕಿಸ್ತಾನ್ ಜಿಂದಾಬಾದ್’, ‘ಭಾರತ್‌ಕೆ ಬರ್ಬಾದಿ ತಕ್ ಜಂಗ್ ರಹೇಗಿ’ (ಭಾರತದ ಸರ್ವನಾಶದ ತನಕ ಯುದ್ಧ), ‘ಕಾಶ್ಮೀರ್ ಕಿ ಆಜಾದಿ ತಕ್ ಜಂಗ್ ರಹೇಗಿ’ (ಕಾಶ್ಮೀರದ ಸ್ವಾತಂತ್ರ್ಯದ ತನಕ ಯುದ್ಧ), ‘ಅಫ್ಜಲ್ ಹಮ್ ಶರ್ಮಿಂದಾ ಹೈ. ತೇರೇ ಕಾತಿಲ್ ಜಿಂದಾ ಹೈ’ ( ಅಫ್ಜಲ್ ನಮಗೆ ನಾಚಿಕೆಯಾಗುತ್ತಿದೆ, ನಿನ್ನ ಹಂತಕರು ಜೀವಂತವಿದ್ದಾರೆ), ‘ತುಮ್ ಕಿತ್ನೇ ಅಫ್ಜಲ್ ಮಾರೋಗೆ, ಹರ್ ಘರ್‌ಮೇ ಅಫ್ಜಲ್ ನಿಕ್ಲೇಗಾ’ ( ನೀನೆಷ್ಟು ಅಫ್ಜಲ್‌ಗಳನ್ನು ಕೊಲ್ಲುವೆ, ಪ್ರತಿ ಮನೆಯಲ್ಲಿ ಅಫ್ಜಲ್ ಹುಟ್ಟುವನು), ‘ಅಫ್ಜಲ್ ತೇರೆ ಖೂನ್ ಸೆ ಇಂಕ್ವಿಲಾಬ್ ಆಯೇಗಾ’ (ಅಫ್ಜಲ್ ನಿನ್ನ ರಕ್ತದಿಂದ ಕ್ರಾಂತಿ ಬರುವುದು)

ಸೊರಾಬ್ಜಿ: ಕೇವಲ ಪಾಕಿಸ್ತಾನ್ ಜಿಂದಾಬಾದ್ ಎಂದು ಹೇಳುವುದು ರಾಷ್ಟ್ರದ್ರೋಹವಲ್ಲ. ಭಾರತ್ ಕೆ ಬರ್ಬಾದಿ… ಇದು ಸಮಸ್ಯಾತ್ಮಕ. ಆದರೆ, ರಾಷ್ಟ್ರದ್ರೋಹವೆಂದು ನಾನು ಹೇಳಲಾರೆ. ಈ ವಿಧಿ ಅತ್ಯಂತ ಗಂಭೀರವಾದ ದಂಡನಾ ವಿಧಿ. ಅದು ಅತ್ಯಂತ ಸುಸ್ಪಷ್ಟ ಪ್ರಕರಣಗಳಿಗೆ ಅನ್ವಯಿಸುತ್ತದೆ. ಉಳಿದವುಗಳು ಪ್ರಚೋದನೆ. ಆದರೆ, ಅದನ್ನು ಸಾಬೀತುಪಡಿಸಬೇಕಾಗುತ್ತದೆ.

ಪ್ರಶ್ನೆ: ಕನ್ನಯ್ಯ ಕುಮಾರ್ ಈ ಘೋಷಣೆ ಕೂಗಿಲ್ಲ. ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಯೂನಿಯನ್ ಎಂಬ ಸಂಘಟನೆಗೆ ಸೇರಿದ ವಿದ್ಯಾರ್ಥಿಗಳ ಗುಂಪೊಂದು ಈ ಘೋಷಣೆಗಳನ್ನು ಕೂಗಿತ್ತು. ಆದರೆ, ಅವರೆಲ್ಲರೂ ಸದ್ಯಕ್ಕೆ ತಲೆತಪ್ಪಿಸಿಕೊಂಡಿದ್ದಾರೆ. ಆದರೆ, ಈ ಘೋಷಣೆಗಳನ್ನು ಕೂಗದವರ ಮೇಲೆ ರಾಷ್ಟ್ರದ್ರೋಹದ ಆರೋಪ ಹೊರಿಸಲಾಗಿದೆ.

ಸೊರಾಬ್ಜಿ: ನೀವು ಹೇಳುವುದು ಸರಿಯಾಗಿದ್ದಲ್ಲಿ ಖಂಡಿತವಾಗಿಯೂ ಸಂಪೂರ್ಣ ತಪ್ಪಾಗಿ ರಾಷ್ಟ್ರದ್ರೋಹವನ್ನು ಅನ್ವಯಿಸಲಾಗಿದೆ. ಒಂದು ಸಭೆಯಲ್ಲಿ ಕೇವಲ ಹಾಜರಿರುವುದು ರಾಷ್ಟ್ರದ್ರೋಹವಾಗುವುದಿಲ್ಲ. ಆತ ಸಕ್ರಿಯವಾಗಿ ಅವರನ್ನು ಪ್ರಚೋದಿಸದೇ ಇದ್ದರೆ, (ಆತ ಈ ಘೋಷಣೆಗಳನ್ನು ಕೂಗಿಲ್ಲ ಎಂದು ಪೊಲೀಸರು ಒಪ್ಪಿಕೊಂಡಿದ್ದರೆ) ಹೇಗೆ ಆತನ ಮೇಲೆ ರಾಷ್ಟ್ರದ್ರೋಹದ ಆರೋಪ ಹೊರಿಸಲು ಸಾಧ್ಯ? ಅದು ಸಂಪೂರ್ಣ ಅನ್ಯಾಯ. ನೀವು ಹೇಳಿದ ವಾಸ್ತವಾಂಶಗಳು ನಿಜವಾಗಿದ್ದರೆ, ಆ ನಿರ್ಧಾರ ಒಂದು ಗಂಭೀರವಾದ ಪ್ರಮಾದ. ಇದನ್ನೆಲ್ಲಾ ಒಟ್ಟಿನಲ್ಲಿ ನೋಡೋಣ. ವಿದ್ಯಾರ್ಥಿಗಳಿಗೆ ಒಂದು ದೃಷ್ಟಿಕೋನವಿದೆ. ಅವರದನ್ನು ಅಭಿವ್ಯಕ್ತಗೊಳಿಸಲು ಬಯಸುತ್ತಾರೆ. ಹಿಂದೂಸ್ತಾನ್ ಕಿ ಬರ್ಬಾದಿ…ಸೇರಿದಂತೆ ಅವರು ಹಾಗೆ ಮಾಡುವಾಗ ಎಲ್ಲೆ ಮೀರಿ ಅಭಿವ್ಯಕ್ತಗೊಳಿಸಿರಬಹುದು. ಇದು ಬಹುವಾಗಿ ಅಭಿವ್ಯಕ್ತಿ ಸ್ವಾತಂತ್ರ್ಯದ ಪ್ರಶ್ನೆಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...