Homeಕರ್ನಾಟಕಅರಮನೆ ಮೈದಾನ ವಿವಾದ: ಮೈಸೂರು ರಾಜವಂಶಸ್ಥರಿಗೆ 3,400 ಕೋಟಿ ರೂ. ಟಿಡಿಆರ್ ಹಸ್ತಾಂತರಿಸಲು ರಾಜ್ಯ ಸರ್ಕಾರಕ್ಕೆ...

ಅರಮನೆ ಮೈದಾನ ವಿವಾದ: ಮೈಸೂರು ರಾಜವಂಶಸ್ಥರಿಗೆ 3,400 ಕೋಟಿ ರೂ. ಟಿಡಿಆರ್ ಹಸ್ತಾಂತರಿಸಲು ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಆದೇಶ

- Advertisement -
- Advertisement -

ಬೆಂಗಳೂರಿನ ಬಳ್ಳಾರಿ ಮತ್ತು ಜಯಮಹಲ್ ರಸ್ತೆಗಳನ್ನು ಅಗಲೀಕರಣಗೊಳಿಸಲು ಸ್ವಾಧೀನಪಡಿಸಿಕೊಂಡಿರುವ ಬೆಂಗಳೂರು ಅರಮನೆ ಮೈದಾನದ 15 ಎಕರೆ 39 ಗುಂಟೆ ಭೂಮಿಗೆ 3,400 ಕೋಟಿ ರೂಪಾಯಿ ಮೌಲ್ಯದ ವರ್ಗಾವಣೆ ಮಾಡಬಹುದಾದ ಅಭಿವೃದ್ಧಿ ಹಕ್ಕು (ಟಿಡಿಆರ್) ಪ್ರಮಾಣಪತ್ರಗಳನ್ನು ಮೈಸೂರು ರಾಜಮನೆತನದ ಕಾನೂನುಬದ್ಧ ವಾರಿಸುದಾರರಿಗೆ ನೀಡುವಂತೆ ಸುಪ್ರೀಂ ಕೋರ್ಟ್ ಗುರುವಾರ (ಮೇ 22, 2025) ಕರ್ನಾಟಕ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ನ್ಯಾಯಮೂರ್ತಿಗಳಾದ ಎಂ.ಎಂ ಸುಂದರೇಶ್ ಮತ್ತು ಅರವಿಂದ್ ಕುಮಾರ್ ಅವರ ಪೀಠ ತೀರ್ಪು ಪ್ರಕಟಿಸಿದೆ. ರಾಜ್ಯ ಸರ್ಕಾರದ ಎಲ್ಲ ವಾದಗಳನ್ನು ತಿರಸ್ಕರಿಸಿದ ಪೀಠ, ಕರ್ನಾಟಕ ಸ್ಟ್ಯಾಂಪ್‌ ಕಾಯ್ದೆ ಹಾಗೂ ಹಿಂದಿನ ತೀರ್ಪುಗಳ ಅಡಿಯಲ್ಲಿ ಕಾನೂನು ಬಾಧ್ಯತೆಗಳನ್ನು ಗೌರವಿಸಬೇಕು ಎಂದು ಸೂಚಿಸಿದೆ.

ತೀರ್ಪು ಬರೆದ ನ್ಯಾಯಮೂರ್ತಿ ಅರವಿಂದ್ ಕುಮಾರ್ ಅವರು “ಸರ್ಕಾರ ಈಗಾಗಲೇ ಠೇವಣಿ ಇಟ್ಟಿರುವ ಟಿಡಿಆರ್‌ಗಳು/ಡಿಆರ್‌ಸಿಗಳನ್ನು ಆಯಾ ಅರ್ಜಿದಾರರು ಅಥವಾ ಅವರ ಅಧಿಕೃತ ಪ್ರತಿನಿಧಿಗೆ ಅಫಿಡವಿಟ್‌ ಆಧಾರದಲ್ಲಿ ತಕ್ಷಣವೇ ಹಸ್ತಾಂತರಿಸಲು ರಿಜಿಸ್ಟ್ರಿಗೆ ಆದೇಶಿಸಲಾಗಿದೆ” ಎಂದು ಎಂದು ತಿಳಿಸಿದ್ದಾರೆ.

ಬೆಂಗಳೂರು ಅರಮನೆ (ಭೂಮಿ ಬಳಕೆ ಮತ್ತು ನಿಯಂತ್ರಣ) ಸುಗ್ರೀವಾಜ್ಞೆ-2025 ಅನ್ನು ಉಲ್ಲೇಖಿಸಿದ ನ್ಯಾಯಾಲಯ “ಸುಗ್ರಿವಾಜ್ಞೆ ಆಸ್ತಿಯನ್ನು ಸ್ವಾಧೀನಪಡಿಸಿಕೊಳ್ಳುವ ಅಥವಾ ಸ್ವಾಧೀನಪಡಿಸಿಕೊಳ್ಳದಿರುವ ಹಕ್ಕನ್ನು ತನ್ನಲ್ಲೇ ಉಳಿಸಿಕೊಂಡಿದೆ. ಅಲ್ಲದೆ, 3,400 ಕೋಟಿ ರೂಪಾಯಿ ಟಿಡಿಆರ್‌ ಪಾವತಿಸುವ ಬದಲು ರಸ್ತೆ ಅಗಲೀಕರಣ ಯೋಜನೆಯನ್ನೇ ಕೈಬಿಡುವ ಸೂಚನೆ ನೀಡುತ್ತಿದೆ” ಎಂದು ಹೇಳಿದೆ.

ಕರ್ನಾಟಕ ಸ್ಟ್ಯಾಂಪ್‌ ಕಾಯ್ದೆಯ ಸೆಕ್ಷನ್‌ 45 ಬಿ ಗೆ ಅನುಗುಣವಾಗಿ ಅರಮನೆ ಮೈದಾನಕ್ಕೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಚಾಲ್ತಿಯಲ್ಲಿರುವ ಮಾರ್ಗಸೂಚಿ ಮೌಲ್ಯಕ್ಕೆ ಅನುಗುಣವಾಗಿ ರಸ್ತೆ ವಿಸ್ತರಣೆ ಉದ್ದೇಶಕ್ಕಾಗಿ ಅರಮನೆ ಜಾಗವನ್ನು ಮೌಲ್ಯೀಕರಿಸಿ, ವರ್ಗಾವಣೆ ಮಾಡಬಹುದಾದ ಟಿಡಿಆರ್‌ ನೀಡುವಂತೆ ಕಳೆದ ವರ್ಷದ ಡಿಸೆಂಬರ್‌ನಲ್ಲಿ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿತ್ತು.

ಆ ಬಳಿಕ ಸಣ್ಣ ಜಾಗಕ್ಕೆ ದೊಡ್ಡ ಮೊತ್ತ ಪಾವತಿಸುವುದರಿಂದ ತಪ್ಪಿಸಿಕೊಳ್ಳಲು ಸರ್ಕಾರ ಬೆಂಗಳೂರು ಅರಮನೆ (ಭೂ ಬಳಕೆ ಮತ್ತು ನಿಯಂತ್ರಣ) ಸುಗ್ರಿವಾಜ್ಞೆ ಹೊರಡಿಸಿತ್ತು. ನಂತರ ಸುಗ್ರೀವಾಜ್ಞೆ ರೂಪದಲ್ಲಿದ್ದ ಮಸೂದೆಗೆ ಕೆಲ ಸಣ್ಣ ತಿದ್ದುಪಡಿಗಳನ್ನು ತಂದು ವಿಧಾನಸಭೆಯಲ್ಲಿ ಮಂಡಿಸಿ ಅನುಮೋದನೆ ಪಡೆದಿತ್ತು.

ಅಲ್ಲದೆ, ಬೆಂಗಳೂರು ಅರಮನೆ (ಆರ್ಜನೆ ಮತ್ತು ವರ್ಗಾವಣೆ) ಕಾಯ್ದೆ–1996ಕ್ಕೆ ಸಂಬಂಧಪಟ್ಟ ಸಿವಿಲ್‌ ಮೇಲ್ಮನವಿಯನ್ನು ತುರ್ತಾಗಿ ವಿಚಾರಣೆಗೆ ಕೈಗೆತ್ತಿಕೊಳ್ಳಬೇಕು ಎಂದು ಸರ್ಕಾರವು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿತ್ತು. ಆ ಬಳಿಕ, 3,400 ಕೋಟಿ ರೂಪಾಯಿ ಟಿಡಿಆರ್ ಅನ್ನು ಸುಪ್ರೀಂ ಕೋರ್ಟ್‌ನಲ್ಲಿ ರಾಜ್ಯ ಸರ್ಕಾರ ಠೇವಣಿ ಇಟ್ಟಿತ್ತು. ಈ ಟಿಡಿಆರ್‌ಗಳನ್ನು ರಾಜವಂಶಸ್ಥರಿಗೆ ಹಸ್ತಾಂತರ ಮಾಡಬಾರದು ಎಂದು ಮಧ್ಯಂತರ ಅರ್ಜಿಯಲ್ಲಿ ಮನವಿ ಮಾಡಿತ್ತು. ಪ್ರಕರಣದ ವಿಚಾರಣೆ ನಡೆಸಿದ್ದ ಪೀಠವು ಮೇ 1ರಂದು ತೀರ್ಪು ಕಾಯ್ದಿರಿಸಿತ್ತು.

ಚಿನ್ನ ಕಳ್ಳಸಾಗಣೆ ಪ್ರಕರಣ | ಇಡಿ ಜೊತೆ ಸಹಕರಿಸುತ್ತೇವೆ ಎಂದ ಗೃಹ ಸಚಿವ ಜಿ ಪರಮೇಶ್ವರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....