Homeಮುಖಪುಟಪ್ಯಾಲೆಸ್ತೀನ್ : ಒಕ್ಕೂಟ ಸರ್ಕಾರ ರಚನೆಗೆ ಹಮಾಸ್, ಫತಾಹ್ ಸಮ್ಮತಿ

ಪ್ಯಾಲೆಸ್ತೀನ್ : ಒಕ್ಕೂಟ ಸರ್ಕಾರ ರಚನೆಗೆ ಹಮಾಸ್, ಫತಾಹ್ ಸಮ್ಮತಿ

ಗಾಝಾ ಮೇಲಿನ ಇಸ್ರೇಲ್ ಆಕ್ರಮಣದ ನಡುವೆ ಮಹತ್ವದ ಬೆಳವಣಿಗೆ

- Advertisement -
- Advertisement -

ಪ್ಯಾಲೆಸ್ತೀನ್‌ನ ಎರಡು ಬಣಗಳಾದ ಹಮಾಸ್ ಮತ್ತು ಫತಾಹ್ ‘ಒಕ್ಕೂಟ ಸರ್ಕಾರ’ ರಚಿಸುವ ಐತಿಹಾಸಿಕ ಘೋಷಣೆಗೆ ಸಹಿ ಹಾಕಿವೆ. ಗಾಝಾ ಮೇಲಿನ ಇಸ್ರೇಲ್ ಆಕ್ರಮಣ ನಡುವೆ ಇದು ಮಹತ್ವದ ಬೆಳವಣಿಗೆಯಾಗಿದೆ.

ವರದಿಗಳ ಪ್ರಕಾರ, ಚೀನಾದ ಮಧ್ಯಸ್ಥಿಕೆಯಲ್ಲಿ ಎರಡು ಬಣಗಳು ಒಕ್ಕೂಟ ಸರ್ಕಾರ ರಚಿಸುವ ನಿರ್ಧಾರಕ್ಕೆ ಬಂದಿವೆ. ಈ ಮೂಲಕ ಸುದೀರ್ಘ ಸಮಯದ ಪೈಪೋಟಿಯನ್ನು ಕೊನೆಗೊಳಿಸಲು ಮುಂದಾಗಿವೆ.

ಬೀಜಿಂಗ್‌ನಲ್ಲಿ ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ಅವರೊಂದಿಗಿನ ಮಾತುಕತೆಯ ನಂತರ ಎರಡು ಬಣಗಳು ತಮ್ಮ ನಡುವಿನ ವೈಷಮ್ಯ ಮರೆತು ದೇಶಕ್ಕಾಗಿ ಒಂದಾಗುವ ನಿರ್ಧಾರಕ್ಕೆ ಬಂದಿದೆ. ಈ ನಡೆಯನ್ನು ಇಸ್ರೇಲ್ ಖಂಡಿಸಿದೆ ಎಂದು ವರದಿಯಾಗಿದೆ.

ಈ ಹಿಂದೆ 2011ರಲ್ಲೂ ಇದೇ ರೀತಿಯ ಒಮ್ಮತ ನಿರ್ಧಾರಕ್ಕೆ ಬರಲಾಗಿತ್ತು. ಆದರೆ, ಕೊನೆಗೆ ಅದು ಯಶಸ್ವಿಯಾಗಿರಲಿಲ್ಲ. ಈ ಬಾರಿ ಫಲ ಕೊಡುತ್ತದಾ? ಎಂಬ ಪ್ರಶ್ನೆ ಉದ್ಬವಿಸಿದೆ.

“ವಿಭಜನೆಯನ್ನು ಕೊನೆಗೊಳಿಸಬೇಕು ಮತ್ತು ಪ್ಯಾಲೆಸ್ತೀನ್ ಏಕತೆಯನ್ನು ಬಲಪಡಿಸಬೇಕು” ಎಂಬ ಎರಡು ಬಣಗಳ ನಿರ್ಣಯಕ್ಕೆ ಇತರ 12 ರಾಜಕೀಯ ಗುಂಪುಗಳು ಸಹಿ ಹಾಕಿವೆ. ಎರಡು ಬಣಗಳ ಜಂಟಿ ಹೇಳಿಕೆಯು ಹೊಸ ಸರ್ಕಾರ ರಚನೆಯ ವಿವರಗಳು ಅಥವಾ ಸಮಯವನ್ನು ಸ್ಪಷ್ಟಪಡಿಸಿಲ್ಲ. ಆದರೆ 1967 ರ ಗಡಿ ನೀತಿಯ ಆಧಾರದ ಮೇಲೆ ಪ್ಯಾಲೆಸ್ತೀನ್ ಸ್ವತಂತ್ರ ದೇಶ ಸ್ಥಾಪಿಸುವ ಬದ್ಧತೆಯನ್ನು ದೃಢಪಡಿಸಿದೆ.

ವರದಿಗಳ ಪ್ರಕಾರ, ಪ್ಯಾಲೆಸ್ತೀನ್‌ನ ಗಾಝಾ ಪಟ್ಟಿಯ ಆಡಳಿತವನ್ನು ಕಳೆದ 17 ವರ್ಷಗಳಿಂದ ಹಮಾಸ್ ನೋಡಿಕೊಳ್ಳುತ್ತಿದೆ. ಇನ್ನುಳಿದ ಪ್ರದೇಶಗಳು ಮತ್ತು ಇಸ್ರೇಲ್ ಆಕ್ರಮಿತ ಪಶ್ಚಿಮ ದಂಡೆಯ ಕೆಲವು ಭಾಗಗಳನ್ನು ಅಮೆರಿಕ ಬೆಂಬಲಿತ ಪ್ಯಾಲೆಸ್ತೀನ್ ಪ್ರಾಧಿಕಾರ(ಪಿಎ)ದ ಪ್ರಮುಖ ಘಟಕವಾದ ಫತಾಹ್ ನಿಯಂತ್ರಿಸುತ್ತಿದೆ.

2007 ರಲ್ಲಿ ಹಮಾಸ್ ಗಾಝಾವನ್ನು ಬಲವಂತವಾಗಿ ಹಿಡಿತಕ್ಕೆ ತೆಗೆದುಕೊಂಡಾಗಿನಿಂದ ಫತಾಹ್ ಮತ್ತು ಹಮಾಸ್ ನಡುವೆ ಭಿನ್ನಾಭಿಪ್ರಾಯ ಇದೆ.

ಗಾಝಾ ಮೇಲಿನ ಇಸ್ರೇಲ್ ಆಕ್ರಮಣ 10 ತಿಂಗಳೂ ಕಳೆದರೂ ಮುಂದುವರೆದಿದೆ. ನಮ್ಮ ಗುರಿ ಸಾಧಿಸುವವರೆಗೆ ದಾಳಿ ಕೊನೆಗೊಳಿಸುವುದಿಲ್ಲ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿದ್ದಾರೆ. ಅಂತಾರಾಷ್ಟ್ರೀಯ ನ್ಯಾಯಾಲದ ಸರಣಿ ಆದೇಶಗಳು ಮತ್ತು ಯುದ್ದ ವಿರಾಮಕ್ಕೆ ಆಗ್ರಹಿಸಿದ ವಿಶ್ವ ಸಂಸ್ಥೆಯ ನಿರ್ಣಯಗಳನ್ನು ಇಸ್ರೇಲ್ ಕಡೆಗಣಿಸಿದೆ.

ಇದನ್ನೂ ಓದಿ : ಉತ್ತರ ಪ್ರದೇಶ: ಹಣ್ಣು ಕೀಳಲು ನಿರಾಕರಿಸಿದ ದಲಿತ ವಿದ್ಯಾರ್ಥಿಯನ್ನು ಥಳಿಸಿ, ತರಗತಿಯಲ್ಲಿ ಕೂಡಿಹಾಕಿದ ಶಿಕ್ಷಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿರಿಯಾದ ಐಸಿಸ್ ಅಡಗುತಾಣಗಳ ಮೇಲೆ ಅಮೆರಿಕ ವಾಯುದಾಳಿ

ಕಳೆದ ವಾರ ಅಮೆರಿಕದ ಸಿಬ್ಬಂದಿ ಮೇಲೆ ನಡೆದ ಮಾರಕ ದಾಳಿಗೆ ಪ್ರತೀಕಾರವಾಗಿ ಅಮೆರಿಕವು ಮಧ್ಯ ಸಿರಿಯಾದಾದ್ಯಂತ ಡಜನ್‌ಗಟ್ಟಲೆ ಇಸ್ಲಾಮಿಕ್ ಸ್ಟೇಟ್ (ಐಎಸ್) ನೆಲೆಗಳ ಮೇಲೆ ವಾಯುದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 'ಆಪರೇಷನ್ ಹಾಕೈ...

16 ಲಕ್ಷಕ್ಕೂ ಹೆಚ್ಚು ಕಾರ್ಮಿಕರನ್ನು ‘ಮನರೇಗಾ’ ಪಟ್ಟಿಯಿಂದ ಕೈಬಿಟ್ಟ ಕೇಂದ್ರ ಸರ್ಕಾರ: ವರದಿ

ಯುಪಿಎ ಸರ್ಕಾರದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಹೆಸರನ್ನು ಬದಲಿಸಲು ಪ್ರಯತ್ನಿಸುವ 'ವಿಕ್ಷಿತ್ ಭಾರತ್ - ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) (ವಿಬಿ–ಜಿ...

ಅಮೆರಿಕದ ಬಹು ನಿರೀಕ್ಷಿತ ‘ಎಪ್‌ಸ್ಟೀನ್ ಫೈಲ್ಸ್’ ಬಿಡುಗಡೆ : ಬಿಲ್ ಕ್ಲಿಂಟನ್, ಮೈಕಲ್ ಜಾಕ್ಸನ್ ಸೇರಿದಂತೆ ಪ್ರಮುಖರ ಫೋಟೋಗಳು ಬಹಿರಂಗ

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ(ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಕೆಲ ದಾಖಲೆಗಳನ್ನು...

ಕೋಮು ಸಾಮರಸ್ಯಕ್ಕಾಗಿ ಭಾರತದ ಮುಸ್ಲಿಮರು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು: ಜಮಾಅತ್ ಅಧ್ಯಕ್ಷ

'ಭಾರತದ ಮುಸ್ಲಿಮರು, ದೇಶದಲ್ಲಿ ಕೋಮು ಸಾಮರಸ್ಯಕ್ಕಾಗಿ ವೈಯಕ್ತಿಕ ಮತ್ತು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು' ಎಂದು ಜಮಾಅತೆ-ಇ-ಇಸ್ಲಾಮಿ ಹಿಂದ್ ಅಧ್ಯಕ್ಷ ಸೈಯದ್ ಸಾದತುಲ್ಲಾ ಹುಸೈನಿ ಅವರು ಒತ್ತಾಯಿಸಿದರು. ಕೋಮು ಸಾಮರಸ್ಯ ಇಲಾಖೆಯು ಆಯೋಜಿಸಿದ್ದ 'ಅಖಿಲ...

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...