Homeಮುಖಪುಟಪ್ಯಾಲೆಸ್ತೀನ್ : ಒಕ್ಕೂಟ ಸರ್ಕಾರ ರಚನೆಗೆ ಹಮಾಸ್, ಫತಾಹ್ ಸಮ್ಮತಿ

ಪ್ಯಾಲೆಸ್ತೀನ್ : ಒಕ್ಕೂಟ ಸರ್ಕಾರ ರಚನೆಗೆ ಹಮಾಸ್, ಫತಾಹ್ ಸಮ್ಮತಿ

ಗಾಝಾ ಮೇಲಿನ ಇಸ್ರೇಲ್ ಆಕ್ರಮಣದ ನಡುವೆ ಮಹತ್ವದ ಬೆಳವಣಿಗೆ

- Advertisement -
- Advertisement -

ಪ್ಯಾಲೆಸ್ತೀನ್‌ನ ಎರಡು ಬಣಗಳಾದ ಹಮಾಸ್ ಮತ್ತು ಫತಾಹ್ ‘ಒಕ್ಕೂಟ ಸರ್ಕಾರ’ ರಚಿಸುವ ಐತಿಹಾಸಿಕ ಘೋಷಣೆಗೆ ಸಹಿ ಹಾಕಿವೆ. ಗಾಝಾ ಮೇಲಿನ ಇಸ್ರೇಲ್ ಆಕ್ರಮಣ ನಡುವೆ ಇದು ಮಹತ್ವದ ಬೆಳವಣಿಗೆಯಾಗಿದೆ.

ವರದಿಗಳ ಪ್ರಕಾರ, ಚೀನಾದ ಮಧ್ಯಸ್ಥಿಕೆಯಲ್ಲಿ ಎರಡು ಬಣಗಳು ಒಕ್ಕೂಟ ಸರ್ಕಾರ ರಚಿಸುವ ನಿರ್ಧಾರಕ್ಕೆ ಬಂದಿವೆ. ಈ ಮೂಲಕ ಸುದೀರ್ಘ ಸಮಯದ ಪೈಪೋಟಿಯನ್ನು ಕೊನೆಗೊಳಿಸಲು ಮುಂದಾಗಿವೆ.

ಬೀಜಿಂಗ್‌ನಲ್ಲಿ ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ಅವರೊಂದಿಗಿನ ಮಾತುಕತೆಯ ನಂತರ ಎರಡು ಬಣಗಳು ತಮ್ಮ ನಡುವಿನ ವೈಷಮ್ಯ ಮರೆತು ದೇಶಕ್ಕಾಗಿ ಒಂದಾಗುವ ನಿರ್ಧಾರಕ್ಕೆ ಬಂದಿದೆ. ಈ ನಡೆಯನ್ನು ಇಸ್ರೇಲ್ ಖಂಡಿಸಿದೆ ಎಂದು ವರದಿಯಾಗಿದೆ.

ಈ ಹಿಂದೆ 2011ರಲ್ಲೂ ಇದೇ ರೀತಿಯ ಒಮ್ಮತ ನಿರ್ಧಾರಕ್ಕೆ ಬರಲಾಗಿತ್ತು. ಆದರೆ, ಕೊನೆಗೆ ಅದು ಯಶಸ್ವಿಯಾಗಿರಲಿಲ್ಲ. ಈ ಬಾರಿ ಫಲ ಕೊಡುತ್ತದಾ? ಎಂಬ ಪ್ರಶ್ನೆ ಉದ್ಬವಿಸಿದೆ.

“ವಿಭಜನೆಯನ್ನು ಕೊನೆಗೊಳಿಸಬೇಕು ಮತ್ತು ಪ್ಯಾಲೆಸ್ತೀನ್ ಏಕತೆಯನ್ನು ಬಲಪಡಿಸಬೇಕು” ಎಂಬ ಎರಡು ಬಣಗಳ ನಿರ್ಣಯಕ್ಕೆ ಇತರ 12 ರಾಜಕೀಯ ಗುಂಪುಗಳು ಸಹಿ ಹಾಕಿವೆ. ಎರಡು ಬಣಗಳ ಜಂಟಿ ಹೇಳಿಕೆಯು ಹೊಸ ಸರ್ಕಾರ ರಚನೆಯ ವಿವರಗಳು ಅಥವಾ ಸಮಯವನ್ನು ಸ್ಪಷ್ಟಪಡಿಸಿಲ್ಲ. ಆದರೆ 1967 ರ ಗಡಿ ನೀತಿಯ ಆಧಾರದ ಮೇಲೆ ಪ್ಯಾಲೆಸ್ತೀನ್ ಸ್ವತಂತ್ರ ದೇಶ ಸ್ಥಾಪಿಸುವ ಬದ್ಧತೆಯನ್ನು ದೃಢಪಡಿಸಿದೆ.

ವರದಿಗಳ ಪ್ರಕಾರ, ಪ್ಯಾಲೆಸ್ತೀನ್‌ನ ಗಾಝಾ ಪಟ್ಟಿಯ ಆಡಳಿತವನ್ನು ಕಳೆದ 17 ವರ್ಷಗಳಿಂದ ಹಮಾಸ್ ನೋಡಿಕೊಳ್ಳುತ್ತಿದೆ. ಇನ್ನುಳಿದ ಪ್ರದೇಶಗಳು ಮತ್ತು ಇಸ್ರೇಲ್ ಆಕ್ರಮಿತ ಪಶ್ಚಿಮ ದಂಡೆಯ ಕೆಲವು ಭಾಗಗಳನ್ನು ಅಮೆರಿಕ ಬೆಂಬಲಿತ ಪ್ಯಾಲೆಸ್ತೀನ್ ಪ್ರಾಧಿಕಾರ(ಪಿಎ)ದ ಪ್ರಮುಖ ಘಟಕವಾದ ಫತಾಹ್ ನಿಯಂತ್ರಿಸುತ್ತಿದೆ.

2007 ರಲ್ಲಿ ಹಮಾಸ್ ಗಾಝಾವನ್ನು ಬಲವಂತವಾಗಿ ಹಿಡಿತಕ್ಕೆ ತೆಗೆದುಕೊಂಡಾಗಿನಿಂದ ಫತಾಹ್ ಮತ್ತು ಹಮಾಸ್ ನಡುವೆ ಭಿನ್ನಾಭಿಪ್ರಾಯ ಇದೆ.

ಗಾಝಾ ಮೇಲಿನ ಇಸ್ರೇಲ್ ಆಕ್ರಮಣ 10 ತಿಂಗಳೂ ಕಳೆದರೂ ಮುಂದುವರೆದಿದೆ. ನಮ್ಮ ಗುರಿ ಸಾಧಿಸುವವರೆಗೆ ದಾಳಿ ಕೊನೆಗೊಳಿಸುವುದಿಲ್ಲ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿದ್ದಾರೆ. ಅಂತಾರಾಷ್ಟ್ರೀಯ ನ್ಯಾಯಾಲದ ಸರಣಿ ಆದೇಶಗಳು ಮತ್ತು ಯುದ್ದ ವಿರಾಮಕ್ಕೆ ಆಗ್ರಹಿಸಿದ ವಿಶ್ವ ಸಂಸ್ಥೆಯ ನಿರ್ಣಯಗಳನ್ನು ಇಸ್ರೇಲ್ ಕಡೆಗಣಿಸಿದೆ.

ಇದನ್ನೂ ಓದಿ : ಉತ್ತರ ಪ್ರದೇಶ: ಹಣ್ಣು ಕೀಳಲು ನಿರಾಕರಿಸಿದ ದಲಿತ ವಿದ್ಯಾರ್ಥಿಯನ್ನು ಥಳಿಸಿ, ತರಗತಿಯಲ್ಲಿ ಕೂಡಿಹಾಕಿದ ಶಿಕ್ಷಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...

ನಾಲ್ಕು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ತಲುಪಿದ ಯುವಜನರ ನಿರುದ್ಯೋಗ ಪ್ರಮಾಣ

15–29 ವರ್ಷ ವಯಸ್ಸಿನ ಯುವಕರಲ್ಲಿ ನಿರುದ್ಯೋಗ ದರವು ಫೆಬ್ರವರಿಯಲ್ಲಿ ನಾಲ್ಕು ತಿಂಗಳಲ್ಲೇ ಗರಿಷ್ಠ ಶೇ. 14.8 ಕ್ಕೆ ಏರಿದೆ. ಇದು ಜನವರಿಯಲ್ಲಿ ಶೇ. 14.7 ರಷ್ಟು ಹೆಚ್ಚಾಗಿ, ಯುವಜನರಲ್ಲಿ ನಿರುದ್ಯೋಗ ಹೆಚ್ಚಳ ಉಂಟಾಗಿದೆ...

ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ; ಕಾಂಗ್ರೆಸ್ ಪ್ರತಿಕ್ರಿಯೆ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುನೈಟೆಡ್ ಸ್ಟೇಟ್ಸ್ ಆಯೋಗವು, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ಸಂಶೋಧನೆ, ವಿಶ್ಲೇಷಣಾ...

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...