Homeಮುಖಪುಟಪ್ಯಾಲೆಸ್ತೀನ್ : ಒಕ್ಕೂಟ ಸರ್ಕಾರ ರಚನೆಗೆ ಹಮಾಸ್, ಫತಾಹ್ ಸಮ್ಮತಿ

ಪ್ಯಾಲೆಸ್ತೀನ್ : ಒಕ್ಕೂಟ ಸರ್ಕಾರ ರಚನೆಗೆ ಹಮಾಸ್, ಫತಾಹ್ ಸಮ್ಮತಿ

ಗಾಝಾ ಮೇಲಿನ ಇಸ್ರೇಲ್ ಆಕ್ರಮಣದ ನಡುವೆ ಮಹತ್ವದ ಬೆಳವಣಿಗೆ

- Advertisement -
- Advertisement -

ಪ್ಯಾಲೆಸ್ತೀನ್‌ನ ಎರಡು ಬಣಗಳಾದ ಹಮಾಸ್ ಮತ್ತು ಫತಾಹ್ ‘ಒಕ್ಕೂಟ ಸರ್ಕಾರ’ ರಚಿಸುವ ಐತಿಹಾಸಿಕ ಘೋಷಣೆಗೆ ಸಹಿ ಹಾಕಿವೆ. ಗಾಝಾ ಮೇಲಿನ ಇಸ್ರೇಲ್ ಆಕ್ರಮಣ ನಡುವೆ ಇದು ಮಹತ್ವದ ಬೆಳವಣಿಗೆಯಾಗಿದೆ.

ವರದಿಗಳ ಪ್ರಕಾರ, ಚೀನಾದ ಮಧ್ಯಸ್ಥಿಕೆಯಲ್ಲಿ ಎರಡು ಬಣಗಳು ಒಕ್ಕೂಟ ಸರ್ಕಾರ ರಚಿಸುವ ನಿರ್ಧಾರಕ್ಕೆ ಬಂದಿವೆ. ಈ ಮೂಲಕ ಸುದೀರ್ಘ ಸಮಯದ ಪೈಪೋಟಿಯನ್ನು ಕೊನೆಗೊಳಿಸಲು ಮುಂದಾಗಿವೆ.

ಬೀಜಿಂಗ್‌ನಲ್ಲಿ ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ಅವರೊಂದಿಗಿನ ಮಾತುಕತೆಯ ನಂತರ ಎರಡು ಬಣಗಳು ತಮ್ಮ ನಡುವಿನ ವೈಷಮ್ಯ ಮರೆತು ದೇಶಕ್ಕಾಗಿ ಒಂದಾಗುವ ನಿರ್ಧಾರಕ್ಕೆ ಬಂದಿದೆ. ಈ ನಡೆಯನ್ನು ಇಸ್ರೇಲ್ ಖಂಡಿಸಿದೆ ಎಂದು ವರದಿಯಾಗಿದೆ.

ಈ ಹಿಂದೆ 2011ರಲ್ಲೂ ಇದೇ ರೀತಿಯ ಒಮ್ಮತ ನಿರ್ಧಾರಕ್ಕೆ ಬರಲಾಗಿತ್ತು. ಆದರೆ, ಕೊನೆಗೆ ಅದು ಯಶಸ್ವಿಯಾಗಿರಲಿಲ್ಲ. ಈ ಬಾರಿ ಫಲ ಕೊಡುತ್ತದಾ? ಎಂಬ ಪ್ರಶ್ನೆ ಉದ್ಬವಿಸಿದೆ.

“ವಿಭಜನೆಯನ್ನು ಕೊನೆಗೊಳಿಸಬೇಕು ಮತ್ತು ಪ್ಯಾಲೆಸ್ತೀನ್ ಏಕತೆಯನ್ನು ಬಲಪಡಿಸಬೇಕು” ಎಂಬ ಎರಡು ಬಣಗಳ ನಿರ್ಣಯಕ್ಕೆ ಇತರ 12 ರಾಜಕೀಯ ಗುಂಪುಗಳು ಸಹಿ ಹಾಕಿವೆ. ಎರಡು ಬಣಗಳ ಜಂಟಿ ಹೇಳಿಕೆಯು ಹೊಸ ಸರ್ಕಾರ ರಚನೆಯ ವಿವರಗಳು ಅಥವಾ ಸಮಯವನ್ನು ಸ್ಪಷ್ಟಪಡಿಸಿಲ್ಲ. ಆದರೆ 1967 ರ ಗಡಿ ನೀತಿಯ ಆಧಾರದ ಮೇಲೆ ಪ್ಯಾಲೆಸ್ತೀನ್ ಸ್ವತಂತ್ರ ದೇಶ ಸ್ಥಾಪಿಸುವ ಬದ್ಧತೆಯನ್ನು ದೃಢಪಡಿಸಿದೆ.

ವರದಿಗಳ ಪ್ರಕಾರ, ಪ್ಯಾಲೆಸ್ತೀನ್‌ನ ಗಾಝಾ ಪಟ್ಟಿಯ ಆಡಳಿತವನ್ನು ಕಳೆದ 17 ವರ್ಷಗಳಿಂದ ಹಮಾಸ್ ನೋಡಿಕೊಳ್ಳುತ್ತಿದೆ. ಇನ್ನುಳಿದ ಪ್ರದೇಶಗಳು ಮತ್ತು ಇಸ್ರೇಲ್ ಆಕ್ರಮಿತ ಪಶ್ಚಿಮ ದಂಡೆಯ ಕೆಲವು ಭಾಗಗಳನ್ನು ಅಮೆರಿಕ ಬೆಂಬಲಿತ ಪ್ಯಾಲೆಸ್ತೀನ್ ಪ್ರಾಧಿಕಾರ(ಪಿಎ)ದ ಪ್ರಮುಖ ಘಟಕವಾದ ಫತಾಹ್ ನಿಯಂತ್ರಿಸುತ್ತಿದೆ.

2007 ರಲ್ಲಿ ಹಮಾಸ್ ಗಾಝಾವನ್ನು ಬಲವಂತವಾಗಿ ಹಿಡಿತಕ್ಕೆ ತೆಗೆದುಕೊಂಡಾಗಿನಿಂದ ಫತಾಹ್ ಮತ್ತು ಹಮಾಸ್ ನಡುವೆ ಭಿನ್ನಾಭಿಪ್ರಾಯ ಇದೆ.

ಗಾಝಾ ಮೇಲಿನ ಇಸ್ರೇಲ್ ಆಕ್ರಮಣ 10 ತಿಂಗಳೂ ಕಳೆದರೂ ಮುಂದುವರೆದಿದೆ. ನಮ್ಮ ಗುರಿ ಸಾಧಿಸುವವರೆಗೆ ದಾಳಿ ಕೊನೆಗೊಳಿಸುವುದಿಲ್ಲ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿದ್ದಾರೆ. ಅಂತಾರಾಷ್ಟ್ರೀಯ ನ್ಯಾಯಾಲದ ಸರಣಿ ಆದೇಶಗಳು ಮತ್ತು ಯುದ್ದ ವಿರಾಮಕ್ಕೆ ಆಗ್ರಹಿಸಿದ ವಿಶ್ವ ಸಂಸ್ಥೆಯ ನಿರ್ಣಯಗಳನ್ನು ಇಸ್ರೇಲ್ ಕಡೆಗಣಿಸಿದೆ.

ಇದನ್ನೂ ಓದಿ : ಉತ್ತರ ಪ್ರದೇಶ: ಹಣ್ಣು ಕೀಳಲು ನಿರಾಕರಿಸಿದ ದಲಿತ ವಿದ್ಯಾರ್ಥಿಯನ್ನು ಥಳಿಸಿ, ತರಗತಿಯಲ್ಲಿ ಕೂಡಿಹಾಕಿದ ಶಿಕ್ಷಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...