Homeಮುಖಪುಟಪ್ಯಾಲೆಸ್ತೀನ್ : ಒಕ್ಕೂಟ ಸರ್ಕಾರ ರಚನೆಗೆ ಹಮಾಸ್, ಫತಾಹ್ ಸಮ್ಮತಿ

ಪ್ಯಾಲೆಸ್ತೀನ್ : ಒಕ್ಕೂಟ ಸರ್ಕಾರ ರಚನೆಗೆ ಹಮಾಸ್, ಫತಾಹ್ ಸಮ್ಮತಿ

ಗಾಝಾ ಮೇಲಿನ ಇಸ್ರೇಲ್ ಆಕ್ರಮಣದ ನಡುವೆ ಮಹತ್ವದ ಬೆಳವಣಿಗೆ

- Advertisement -
- Advertisement -

ಪ್ಯಾಲೆಸ್ತೀನ್‌ನ ಎರಡು ಬಣಗಳಾದ ಹಮಾಸ್ ಮತ್ತು ಫತಾಹ್ ‘ಒಕ್ಕೂಟ ಸರ್ಕಾರ’ ರಚಿಸುವ ಐತಿಹಾಸಿಕ ಘೋಷಣೆಗೆ ಸಹಿ ಹಾಕಿವೆ. ಗಾಝಾ ಮೇಲಿನ ಇಸ್ರೇಲ್ ಆಕ್ರಮಣ ನಡುವೆ ಇದು ಮಹತ್ವದ ಬೆಳವಣಿಗೆಯಾಗಿದೆ.

ವರದಿಗಳ ಪ್ರಕಾರ, ಚೀನಾದ ಮಧ್ಯಸ್ಥಿಕೆಯಲ್ಲಿ ಎರಡು ಬಣಗಳು ಒಕ್ಕೂಟ ಸರ್ಕಾರ ರಚಿಸುವ ನಿರ್ಧಾರಕ್ಕೆ ಬಂದಿವೆ. ಈ ಮೂಲಕ ಸುದೀರ್ಘ ಸಮಯದ ಪೈಪೋಟಿಯನ್ನು ಕೊನೆಗೊಳಿಸಲು ಮುಂದಾಗಿವೆ.

ಬೀಜಿಂಗ್‌ನಲ್ಲಿ ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ಅವರೊಂದಿಗಿನ ಮಾತುಕತೆಯ ನಂತರ ಎರಡು ಬಣಗಳು ತಮ್ಮ ನಡುವಿನ ವೈಷಮ್ಯ ಮರೆತು ದೇಶಕ್ಕಾಗಿ ಒಂದಾಗುವ ನಿರ್ಧಾರಕ್ಕೆ ಬಂದಿದೆ. ಈ ನಡೆಯನ್ನು ಇಸ್ರೇಲ್ ಖಂಡಿಸಿದೆ ಎಂದು ವರದಿಯಾಗಿದೆ.

ಈ ಹಿಂದೆ 2011ರಲ್ಲೂ ಇದೇ ರೀತಿಯ ಒಮ್ಮತ ನಿರ್ಧಾರಕ್ಕೆ ಬರಲಾಗಿತ್ತು. ಆದರೆ, ಕೊನೆಗೆ ಅದು ಯಶಸ್ವಿಯಾಗಿರಲಿಲ್ಲ. ಈ ಬಾರಿ ಫಲ ಕೊಡುತ್ತದಾ? ಎಂಬ ಪ್ರಶ್ನೆ ಉದ್ಬವಿಸಿದೆ.

“ವಿಭಜನೆಯನ್ನು ಕೊನೆಗೊಳಿಸಬೇಕು ಮತ್ತು ಪ್ಯಾಲೆಸ್ತೀನ್ ಏಕತೆಯನ್ನು ಬಲಪಡಿಸಬೇಕು” ಎಂಬ ಎರಡು ಬಣಗಳ ನಿರ್ಣಯಕ್ಕೆ ಇತರ 12 ರಾಜಕೀಯ ಗುಂಪುಗಳು ಸಹಿ ಹಾಕಿವೆ. ಎರಡು ಬಣಗಳ ಜಂಟಿ ಹೇಳಿಕೆಯು ಹೊಸ ಸರ್ಕಾರ ರಚನೆಯ ವಿವರಗಳು ಅಥವಾ ಸಮಯವನ್ನು ಸ್ಪಷ್ಟಪಡಿಸಿಲ್ಲ. ಆದರೆ 1967 ರ ಗಡಿ ನೀತಿಯ ಆಧಾರದ ಮೇಲೆ ಪ್ಯಾಲೆಸ್ತೀನ್ ಸ್ವತಂತ್ರ ದೇಶ ಸ್ಥಾಪಿಸುವ ಬದ್ಧತೆಯನ್ನು ದೃಢಪಡಿಸಿದೆ.

ವರದಿಗಳ ಪ್ರಕಾರ, ಪ್ಯಾಲೆಸ್ತೀನ್‌ನ ಗಾಝಾ ಪಟ್ಟಿಯ ಆಡಳಿತವನ್ನು ಕಳೆದ 17 ವರ್ಷಗಳಿಂದ ಹಮಾಸ್ ನೋಡಿಕೊಳ್ಳುತ್ತಿದೆ. ಇನ್ನುಳಿದ ಪ್ರದೇಶಗಳು ಮತ್ತು ಇಸ್ರೇಲ್ ಆಕ್ರಮಿತ ಪಶ್ಚಿಮ ದಂಡೆಯ ಕೆಲವು ಭಾಗಗಳನ್ನು ಅಮೆರಿಕ ಬೆಂಬಲಿತ ಪ್ಯಾಲೆಸ್ತೀನ್ ಪ್ರಾಧಿಕಾರ(ಪಿಎ)ದ ಪ್ರಮುಖ ಘಟಕವಾದ ಫತಾಹ್ ನಿಯಂತ್ರಿಸುತ್ತಿದೆ.

2007 ರಲ್ಲಿ ಹಮಾಸ್ ಗಾಝಾವನ್ನು ಬಲವಂತವಾಗಿ ಹಿಡಿತಕ್ಕೆ ತೆಗೆದುಕೊಂಡಾಗಿನಿಂದ ಫತಾಹ್ ಮತ್ತು ಹಮಾಸ್ ನಡುವೆ ಭಿನ್ನಾಭಿಪ್ರಾಯ ಇದೆ.

ಗಾಝಾ ಮೇಲಿನ ಇಸ್ರೇಲ್ ಆಕ್ರಮಣ 10 ತಿಂಗಳೂ ಕಳೆದರೂ ಮುಂದುವರೆದಿದೆ. ನಮ್ಮ ಗುರಿ ಸಾಧಿಸುವವರೆಗೆ ದಾಳಿ ಕೊನೆಗೊಳಿಸುವುದಿಲ್ಲ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿದ್ದಾರೆ. ಅಂತಾರಾಷ್ಟ್ರೀಯ ನ್ಯಾಯಾಲದ ಸರಣಿ ಆದೇಶಗಳು ಮತ್ತು ಯುದ್ದ ವಿರಾಮಕ್ಕೆ ಆಗ್ರಹಿಸಿದ ವಿಶ್ವ ಸಂಸ್ಥೆಯ ನಿರ್ಣಯಗಳನ್ನು ಇಸ್ರೇಲ್ ಕಡೆಗಣಿಸಿದೆ.

ಇದನ್ನೂ ಓದಿ : ಉತ್ತರ ಪ್ರದೇಶ: ಹಣ್ಣು ಕೀಳಲು ನಿರಾಕರಿಸಿದ ದಲಿತ ವಿದ್ಯಾರ್ಥಿಯನ್ನು ಥಳಿಸಿ, ತರಗತಿಯಲ್ಲಿ ಕೂಡಿಹಾಕಿದ ಶಿಕ್ಷಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...