Homeಮುಖಪುಟಪ್ಯಾಲೆಸ್ತೀನ್ : ಒಕ್ಕೂಟ ಸರ್ಕಾರ ರಚನೆಗೆ ಹಮಾಸ್, ಫತಾಹ್ ಸಮ್ಮತಿ

ಪ್ಯಾಲೆಸ್ತೀನ್ : ಒಕ್ಕೂಟ ಸರ್ಕಾರ ರಚನೆಗೆ ಹಮಾಸ್, ಫತಾಹ್ ಸಮ್ಮತಿ

ಗಾಝಾ ಮೇಲಿನ ಇಸ್ರೇಲ್ ಆಕ್ರಮಣದ ನಡುವೆ ಮಹತ್ವದ ಬೆಳವಣಿಗೆ

- Advertisement -
- Advertisement -

ಪ್ಯಾಲೆಸ್ತೀನ್‌ನ ಎರಡು ಬಣಗಳಾದ ಹಮಾಸ್ ಮತ್ತು ಫತಾಹ್ ‘ಒಕ್ಕೂಟ ಸರ್ಕಾರ’ ರಚಿಸುವ ಐತಿಹಾಸಿಕ ಘೋಷಣೆಗೆ ಸಹಿ ಹಾಕಿವೆ. ಗಾಝಾ ಮೇಲಿನ ಇಸ್ರೇಲ್ ಆಕ್ರಮಣ ನಡುವೆ ಇದು ಮಹತ್ವದ ಬೆಳವಣಿಗೆಯಾಗಿದೆ.

ವರದಿಗಳ ಪ್ರಕಾರ, ಚೀನಾದ ಮಧ್ಯಸ್ಥಿಕೆಯಲ್ಲಿ ಎರಡು ಬಣಗಳು ಒಕ್ಕೂಟ ಸರ್ಕಾರ ರಚಿಸುವ ನಿರ್ಧಾರಕ್ಕೆ ಬಂದಿವೆ. ಈ ಮೂಲಕ ಸುದೀರ್ಘ ಸಮಯದ ಪೈಪೋಟಿಯನ್ನು ಕೊನೆಗೊಳಿಸಲು ಮುಂದಾಗಿವೆ.

ಬೀಜಿಂಗ್‌ನಲ್ಲಿ ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ಅವರೊಂದಿಗಿನ ಮಾತುಕತೆಯ ನಂತರ ಎರಡು ಬಣಗಳು ತಮ್ಮ ನಡುವಿನ ವೈಷಮ್ಯ ಮರೆತು ದೇಶಕ್ಕಾಗಿ ಒಂದಾಗುವ ನಿರ್ಧಾರಕ್ಕೆ ಬಂದಿದೆ. ಈ ನಡೆಯನ್ನು ಇಸ್ರೇಲ್ ಖಂಡಿಸಿದೆ ಎಂದು ವರದಿಯಾಗಿದೆ.

ಈ ಹಿಂದೆ 2011ರಲ್ಲೂ ಇದೇ ರೀತಿಯ ಒಮ್ಮತ ನಿರ್ಧಾರಕ್ಕೆ ಬರಲಾಗಿತ್ತು. ಆದರೆ, ಕೊನೆಗೆ ಅದು ಯಶಸ್ವಿಯಾಗಿರಲಿಲ್ಲ. ಈ ಬಾರಿ ಫಲ ಕೊಡುತ್ತದಾ? ಎಂಬ ಪ್ರಶ್ನೆ ಉದ್ಬವಿಸಿದೆ.

“ವಿಭಜನೆಯನ್ನು ಕೊನೆಗೊಳಿಸಬೇಕು ಮತ್ತು ಪ್ಯಾಲೆಸ್ತೀನ್ ಏಕತೆಯನ್ನು ಬಲಪಡಿಸಬೇಕು” ಎಂಬ ಎರಡು ಬಣಗಳ ನಿರ್ಣಯಕ್ಕೆ ಇತರ 12 ರಾಜಕೀಯ ಗುಂಪುಗಳು ಸಹಿ ಹಾಕಿವೆ. ಎರಡು ಬಣಗಳ ಜಂಟಿ ಹೇಳಿಕೆಯು ಹೊಸ ಸರ್ಕಾರ ರಚನೆಯ ವಿವರಗಳು ಅಥವಾ ಸಮಯವನ್ನು ಸ್ಪಷ್ಟಪಡಿಸಿಲ್ಲ. ಆದರೆ 1967 ರ ಗಡಿ ನೀತಿಯ ಆಧಾರದ ಮೇಲೆ ಪ್ಯಾಲೆಸ್ತೀನ್ ಸ್ವತಂತ್ರ ದೇಶ ಸ್ಥಾಪಿಸುವ ಬದ್ಧತೆಯನ್ನು ದೃಢಪಡಿಸಿದೆ.

ವರದಿಗಳ ಪ್ರಕಾರ, ಪ್ಯಾಲೆಸ್ತೀನ್‌ನ ಗಾಝಾ ಪಟ್ಟಿಯ ಆಡಳಿತವನ್ನು ಕಳೆದ 17 ವರ್ಷಗಳಿಂದ ಹಮಾಸ್ ನೋಡಿಕೊಳ್ಳುತ್ತಿದೆ. ಇನ್ನುಳಿದ ಪ್ರದೇಶಗಳು ಮತ್ತು ಇಸ್ರೇಲ್ ಆಕ್ರಮಿತ ಪಶ್ಚಿಮ ದಂಡೆಯ ಕೆಲವು ಭಾಗಗಳನ್ನು ಅಮೆರಿಕ ಬೆಂಬಲಿತ ಪ್ಯಾಲೆಸ್ತೀನ್ ಪ್ರಾಧಿಕಾರ(ಪಿಎ)ದ ಪ್ರಮುಖ ಘಟಕವಾದ ಫತಾಹ್ ನಿಯಂತ್ರಿಸುತ್ತಿದೆ.

2007 ರಲ್ಲಿ ಹಮಾಸ್ ಗಾಝಾವನ್ನು ಬಲವಂತವಾಗಿ ಹಿಡಿತಕ್ಕೆ ತೆಗೆದುಕೊಂಡಾಗಿನಿಂದ ಫತಾಹ್ ಮತ್ತು ಹಮಾಸ್ ನಡುವೆ ಭಿನ್ನಾಭಿಪ್ರಾಯ ಇದೆ.

ಗಾಝಾ ಮೇಲಿನ ಇಸ್ರೇಲ್ ಆಕ್ರಮಣ 10 ತಿಂಗಳೂ ಕಳೆದರೂ ಮುಂದುವರೆದಿದೆ. ನಮ್ಮ ಗುರಿ ಸಾಧಿಸುವವರೆಗೆ ದಾಳಿ ಕೊನೆಗೊಳಿಸುವುದಿಲ್ಲ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿದ್ದಾರೆ. ಅಂತಾರಾಷ್ಟ್ರೀಯ ನ್ಯಾಯಾಲದ ಸರಣಿ ಆದೇಶಗಳು ಮತ್ತು ಯುದ್ದ ವಿರಾಮಕ್ಕೆ ಆಗ್ರಹಿಸಿದ ವಿಶ್ವ ಸಂಸ್ಥೆಯ ನಿರ್ಣಯಗಳನ್ನು ಇಸ್ರೇಲ್ ಕಡೆಗಣಿಸಿದೆ.

ಇದನ್ನೂ ಓದಿ : ಉತ್ತರ ಪ್ರದೇಶ: ಹಣ್ಣು ಕೀಳಲು ನಿರಾಕರಿಸಿದ ದಲಿತ ವಿದ್ಯಾರ್ಥಿಯನ್ನು ಥಳಿಸಿ, ತರಗತಿಯಲ್ಲಿ ಕೂಡಿಹಾಕಿದ ಶಿಕ್ಷಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...

ಬಿಹಾರ-ಬಂಗಾಳದ ಬಳಿಕ ಕರ್ನಾಟಕದ ಸರತಿ; ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

ಭಾಗ-1 ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತರಾತುರಿಯಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಜಾರಿ ಮಾಡಿದ ಹಿಂದಿನ ದುರುದ್ದೇಶ ಬಿಹಾರದ ಬಳಿಕ ಈಗ ಪಶ್ಚಿಮ ಬಂಗಾಳದಲ್ಲಿ ಸಾಬೀತಾಗಿದೆ. ಹಿಂದಿನ ಚುನಾವಣೆಗಳಲ್ಲಿ ಕಡಿಮೆ...

ವಿಜಯ್ ಪಕ್ಷದ ಗೆಲುವಿಗೆ ಕಾರಣವಾದ ಡಿಎಂಕೆ-ಎಐಎಡಿಎಂಕೆ ಪಕ್ಷದ ವಲಸೆ ನಾಯಕರು

50 ವರ್ಷಗಳಿಂದ ಡಿಎಂಕೆ (DMK) ಮತ್ತು ಎಐಎಡಿಎಂಕೆ (AIADMK) ಎಂಬ ಎರಡು ದ್ರಾವಿಡ ಪಕ್ಷಗಳ ಅಧಿಪತ್ಯದಲ್ಲಿದ್ದ ತಮಿಳು ಮಣ್ಣಿನಲ್ಲಿ ಈಗ ಮಹತ್ವದ ಬದಲಾವಣೆ ಗಾಳಿ ಬೀಸಿದೆ. ನಟ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ...

ಪಶ್ಚಿಮ ಬಂಗಾಳದ ಬಿಜೆಪಿ ಗೆಲುವು ಎಸ್‌ಐಆರ್‌ ಕುತಂತ್ರದ ಫಲ?

ಕಳೆದ 15 ವರ್ಷದಿಂದ ಪಶ್ಚಿಮ ಬಂಗಾಳದ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಮತಾ ಬ್ಯಾನರ್ಜಿ ಆಡಳಿತಕ್ಕೆ 2026ರ ಚುನಾವಣಾ ಫಲಿತಾಂಶ ಬ್ರೇಕ್ ನೀಡಿದೆ.  ಪಶ್ಚಿಮ ಬಂಗಾಳದ ಒಟ್ಟು 293 ಕ್ಷೇತ್ರಗಳ ಪೈಕಿ 200ರಲ್ಲಿ ಬಿಜಿಪಿ...

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...