Homeಮುಖಪುಟಪ್ಯಾಲೆಸ್ತೀನ್ : ಒಕ್ಕೂಟ ಸರ್ಕಾರ ರಚನೆಗೆ ಹಮಾಸ್, ಫತಾಹ್ ಸಮ್ಮತಿ

ಪ್ಯಾಲೆಸ್ತೀನ್ : ಒಕ್ಕೂಟ ಸರ್ಕಾರ ರಚನೆಗೆ ಹಮಾಸ್, ಫತಾಹ್ ಸಮ್ಮತಿ

ಗಾಝಾ ಮೇಲಿನ ಇಸ್ರೇಲ್ ಆಕ್ರಮಣದ ನಡುವೆ ಮಹತ್ವದ ಬೆಳವಣಿಗೆ

- Advertisement -
- Advertisement -

ಪ್ಯಾಲೆಸ್ತೀನ್‌ನ ಎರಡು ಬಣಗಳಾದ ಹಮಾಸ್ ಮತ್ತು ಫತಾಹ್ ‘ಒಕ್ಕೂಟ ಸರ್ಕಾರ’ ರಚಿಸುವ ಐತಿಹಾಸಿಕ ಘೋಷಣೆಗೆ ಸಹಿ ಹಾಕಿವೆ. ಗಾಝಾ ಮೇಲಿನ ಇಸ್ರೇಲ್ ಆಕ್ರಮಣ ನಡುವೆ ಇದು ಮಹತ್ವದ ಬೆಳವಣಿಗೆಯಾಗಿದೆ.

ವರದಿಗಳ ಪ್ರಕಾರ, ಚೀನಾದ ಮಧ್ಯಸ್ಥಿಕೆಯಲ್ಲಿ ಎರಡು ಬಣಗಳು ಒಕ್ಕೂಟ ಸರ್ಕಾರ ರಚಿಸುವ ನಿರ್ಧಾರಕ್ಕೆ ಬಂದಿವೆ. ಈ ಮೂಲಕ ಸುದೀರ್ಘ ಸಮಯದ ಪೈಪೋಟಿಯನ್ನು ಕೊನೆಗೊಳಿಸಲು ಮುಂದಾಗಿವೆ.

ಬೀಜಿಂಗ್‌ನಲ್ಲಿ ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ಅವರೊಂದಿಗಿನ ಮಾತುಕತೆಯ ನಂತರ ಎರಡು ಬಣಗಳು ತಮ್ಮ ನಡುವಿನ ವೈಷಮ್ಯ ಮರೆತು ದೇಶಕ್ಕಾಗಿ ಒಂದಾಗುವ ನಿರ್ಧಾರಕ್ಕೆ ಬಂದಿದೆ. ಈ ನಡೆಯನ್ನು ಇಸ್ರೇಲ್ ಖಂಡಿಸಿದೆ ಎಂದು ವರದಿಯಾಗಿದೆ.

ಈ ಹಿಂದೆ 2011ರಲ್ಲೂ ಇದೇ ರೀತಿಯ ಒಮ್ಮತ ನಿರ್ಧಾರಕ್ಕೆ ಬರಲಾಗಿತ್ತು. ಆದರೆ, ಕೊನೆಗೆ ಅದು ಯಶಸ್ವಿಯಾಗಿರಲಿಲ್ಲ. ಈ ಬಾರಿ ಫಲ ಕೊಡುತ್ತದಾ? ಎಂಬ ಪ್ರಶ್ನೆ ಉದ್ಬವಿಸಿದೆ.

“ವಿಭಜನೆಯನ್ನು ಕೊನೆಗೊಳಿಸಬೇಕು ಮತ್ತು ಪ್ಯಾಲೆಸ್ತೀನ್ ಏಕತೆಯನ್ನು ಬಲಪಡಿಸಬೇಕು” ಎಂಬ ಎರಡು ಬಣಗಳ ನಿರ್ಣಯಕ್ಕೆ ಇತರ 12 ರಾಜಕೀಯ ಗುಂಪುಗಳು ಸಹಿ ಹಾಕಿವೆ. ಎರಡು ಬಣಗಳ ಜಂಟಿ ಹೇಳಿಕೆಯು ಹೊಸ ಸರ್ಕಾರ ರಚನೆಯ ವಿವರಗಳು ಅಥವಾ ಸಮಯವನ್ನು ಸ್ಪಷ್ಟಪಡಿಸಿಲ್ಲ. ಆದರೆ 1967 ರ ಗಡಿ ನೀತಿಯ ಆಧಾರದ ಮೇಲೆ ಪ್ಯಾಲೆಸ್ತೀನ್ ಸ್ವತಂತ್ರ ದೇಶ ಸ್ಥಾಪಿಸುವ ಬದ್ಧತೆಯನ್ನು ದೃಢಪಡಿಸಿದೆ.

ವರದಿಗಳ ಪ್ರಕಾರ, ಪ್ಯಾಲೆಸ್ತೀನ್‌ನ ಗಾಝಾ ಪಟ್ಟಿಯ ಆಡಳಿತವನ್ನು ಕಳೆದ 17 ವರ್ಷಗಳಿಂದ ಹಮಾಸ್ ನೋಡಿಕೊಳ್ಳುತ್ತಿದೆ. ಇನ್ನುಳಿದ ಪ್ರದೇಶಗಳು ಮತ್ತು ಇಸ್ರೇಲ್ ಆಕ್ರಮಿತ ಪಶ್ಚಿಮ ದಂಡೆಯ ಕೆಲವು ಭಾಗಗಳನ್ನು ಅಮೆರಿಕ ಬೆಂಬಲಿತ ಪ್ಯಾಲೆಸ್ತೀನ್ ಪ್ರಾಧಿಕಾರ(ಪಿಎ)ದ ಪ್ರಮುಖ ಘಟಕವಾದ ಫತಾಹ್ ನಿಯಂತ್ರಿಸುತ್ತಿದೆ.

2007 ರಲ್ಲಿ ಹಮಾಸ್ ಗಾಝಾವನ್ನು ಬಲವಂತವಾಗಿ ಹಿಡಿತಕ್ಕೆ ತೆಗೆದುಕೊಂಡಾಗಿನಿಂದ ಫತಾಹ್ ಮತ್ತು ಹಮಾಸ್ ನಡುವೆ ಭಿನ್ನಾಭಿಪ್ರಾಯ ಇದೆ.

ಗಾಝಾ ಮೇಲಿನ ಇಸ್ರೇಲ್ ಆಕ್ರಮಣ 10 ತಿಂಗಳೂ ಕಳೆದರೂ ಮುಂದುವರೆದಿದೆ. ನಮ್ಮ ಗುರಿ ಸಾಧಿಸುವವರೆಗೆ ದಾಳಿ ಕೊನೆಗೊಳಿಸುವುದಿಲ್ಲ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿದ್ದಾರೆ. ಅಂತಾರಾಷ್ಟ್ರೀಯ ನ್ಯಾಯಾಲದ ಸರಣಿ ಆದೇಶಗಳು ಮತ್ತು ಯುದ್ದ ವಿರಾಮಕ್ಕೆ ಆಗ್ರಹಿಸಿದ ವಿಶ್ವ ಸಂಸ್ಥೆಯ ನಿರ್ಣಯಗಳನ್ನು ಇಸ್ರೇಲ್ ಕಡೆಗಣಿಸಿದೆ.

ಇದನ್ನೂ ಓದಿ : ಉತ್ತರ ಪ್ರದೇಶ: ಹಣ್ಣು ಕೀಳಲು ನಿರಾಕರಿಸಿದ ದಲಿತ ವಿದ್ಯಾರ್ಥಿಯನ್ನು ಥಳಿಸಿ, ತರಗತಿಯಲ್ಲಿ ಕೂಡಿಹಾಕಿದ ಶಿಕ್ಷಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: BLO ಮನೆ-ಮನೆ ಭೇಟಿ ಗಡುವು ಆಗಸ್ಟ್‌ 17ರವರೆಗೆ ವಿಸ್ತರಣೆ!

ರಾಜ್ಯದಲ್ಲಿ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗವು (ECI) ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮನೆ-ಮನೆ ಗಣತಿ ಪ್ರಕ್ರಿಯೆಯ ಗಡುವನ್ನು ಆಗಸ್ಟ್ 17ರವರೆಗೆ ವಿಸ್ತರಿಸಲಾಗಿದ್ದು,...

ಕಾವೇರಿ ವಿಚಾರದಲ್ಲಿ ಅಗ್ಗದ ರಾಜಕೀಯ ಮಾಡಲ್ಲ: ತಮಿಳುನಾಡು ಸಿಎಂ ವಿಜಯ್

ಕರ್ನಾಟಕ ಸರ್ಕಾರ ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಮುಂದಾಗಿರುವ ವಿಚಾರವಾಗಿ ತಮಿಳುನಾಡಿನಲ್ಲಿ ರಾಜಕೀಯ ಕಾವು ಏರುತ್ತಿರುವ ಬೆನ್ನಲ್ಲೇ, ಈ ಕುರಿತು ತಕ್ಷಣವೇ ಸರ್ವಪಕ್ಷಗಳ ಸಭೆಯನ್ನು ಆಯೋಜಿಸುವ ಯಾವುದೇ ಅಗತ್ಯವಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಸಿ....

ಬೆಂಗಳೂರಿನ ಜಕ್ಕೂರಿನಲ್ಲಿ 22-23 ವರ್ಷದ ಇಬ್ಬರು ನೇಪಾಳಿ ಯುವತಿಯರ ಶವಗಳು ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು: ಜಕ್ಕೂರು ಮುಖ್ಯ ರಸ್ತೆಯ ನಿರ್ಜನ ಪ್ರದೇಶವೊಂದರಲ್ಲಿ ನೇಪಾಳ ಮೂಲದ ಇಬ್ಬರು ಯುವತಿಯರು ಒಂದೇ ಸೀರೆಯಿಂದ ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿರುವ ಆಘಾತಕಾರಿ ಘಟನೆ ಗುರುವಾರ ಮುಂಜಾನೆ ಬೆಳಕಿಗೆ ಬಂದಿದೆ. ಮೃತರನ್ನು ನೇಪಾಳ...

NEET Paper Leak: ಒಂದೇ ಒಂದು CCTV ಇರಲಿಲ್ಲ, ಚೆಕಿಂಗ್ ಇರಲಿಲ್ಲ! ಪ್ರಶ್ನೆ ಪತ್ರಿಕೆ ಲೀಕ್ ಮಾಡಿದ್ದು ಹೇಗೆ? CBI ವರದಿ ಇಲ್ಲಿದೆ

ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ನೀಟ್ (NEET) ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ತನ್ನ ಅಂತಿಮ ಚಾರ್ಜ್‌ಶೀಟ್ ಸಲ್ಲಿಸಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ (NTA)...

ಉತ್ತರಾಖಂಡ : ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗೆ SIR ನೋಟಿಸ್

ಉತ್ತರಾಖಂಡದಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯು ಉನ್ನತ ಸರ್ಕಾರಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಮನೆ ಬಾಗಿಲಿಗೆ ತಲುಪಿದೆ. ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ),...

SIR: ಗಣತಿ ನಮೂನೆ ವಾಪಸ್‌ಗೆ ನಾಳೆಯೇ ಅಂತಿಮ ಗಡುವು, 1.10 ಕೋಟಿ ಮತದಾರರ ಹೆಸರು ಡಿಲೀಟ್‌!

ರಾಜ್ಯಾದ್ಯಂತ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯ ಮೊದಲ ಹಂತವಾದ ಗಣತಿ ನಮೂನೆಗಳನ್ನು ಭರ್ತಿ ಮಾಡಿ ವಾಪಸ್ ನೀಡಲು ನಾಳೆ (ಆಗಸ್ಟ್ 8) ಕೊನೆಯ ದಿನವಾಗಿದೆ. ಈ ನಡುವೆ...

ಕರ್ನಾಟಕ ಎಸ್ಐಆರ್: ಬೆಂಗಳೂರಿನ ಅರ್ಧದಷ್ಟು ಮತದಾರರು ‘ಹೊರಕ್ಕೆ’: ರಾಜ್ಯದಲ್ಲಿ 1.11 ಕೋಟಿ ಜನರು ಮತದಾನದ ಹಕ್ಕು ಕಳೆದುಕೊಳ್ಳುವ ಭೀತಿ

ಕರ್ನಾಟಕದಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಕೈಗೊಂಡಿರುವ ‘ವಿಶೇಷ ತೀವ್ರ ಪರಿಷ್ಕರಣೆ’ (Special Intensive Revision - SIR) ಪ್ರಕ್ರಿಯೆಯು ರಾಜ್ಯದ ಕೋಟ್ಯಂತರ ನಾಗರಿಕರ ಮತದಾನದ ಹಕ್ಕನ್ನೇ ಕಸಿದುಕೊಳ್ಳುವ ಭೀತಿಯನ್ನು ಹುಟ್ಟುಹಾಕಿದೆ. ಪ್ರಜಾಪ್ರಭುತ್ವ...

ಎರಡು ನ್ಯೂಸ್ ಚಾನೆಲ್‌ಗಳಿಗೆ ಉದಯನಿಧಿ ಲೀಗಲ್ ನೋಟಿಸ್ : ಸಾರ್ವಜನಿಕ ಕ್ಷಮೆಯಾಚನೆ, 100 ಕೋಟಿ ಪರಿಹಾರಕ್ಕೆ ಆಗ್ರಹ-ವರದಿ

ತಮಿಳುನಾಡಿನ ವಿರೋಧ ಪಕ್ಷದ ನಾಯಕ ಹಾಗೂ ಡಿಎಂಕೆ ಯುವ ಘಟಕದ ಕಾರ್ಯದರ್ಶಿ ಉದಯನಿಧಿ ಸ್ಟಾಲಿನ್ ಅವರು ತಮ್ಮ ಇತ್ತೀಚಿನ ಹೇಳಿಕೆಯ ಪ್ರಸಾರಕ್ಕೆ ಸಂಬಂಧಿಸಿದಂತೆ ಮಾನನಷ್ಟ ಆರೋಪ ಮಾಡಿ ಎರಡು ರಾಷ್ಟ್ರೀಯ ಸುದ್ದಿ ವಾಹಿನಿಗಳಿಗೆ...

CJP ರಾಷ್ಟ್ರೀಯ ಕಾರ್ಯಕಾರಿ ಸಮಿತಿ ರಚನೆ: ಅಭಿಜೀತ್ ದೀಪ್ಕೆಗೆ ‘ರಾಷ್ಟ್ರೀಯ ಸಂಚಾಲಕ’

ದೇಶಾದ್ಯಂತ ವಿದ್ಯಾರ್ಥಿ ಮತ್ತು ಯುವಜನರ ಬೃಹತ್ ಹೋರಾಟದ ಮೂಲಕ ಗಮನಸೆಳೆದಿರುವ ಕಾಕ್ರೋಚ್ ಜನತಾ ಪಾರ್ಟಿ (CJP) ಅಧಿಕೃತವಾಗಿ ತನ್ನ ಮೊದಲ 14 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯನ್ನು (National Working Committee) ಪ್ರಕಟಿಸಿದೆ....

ಕ್ಷೇತ್ರ ಪುನರ್ ವಿಂಗಡಣೆಗೆ ಡಿಎಂಕೆ ವಿರೋಧ: ‘ಮೃದು ಧೋರಣೆ’ ವದಂತಿಗೆ ಉದಯನಿಧಿ ಸ್ಟಾಲಿನ್ ಬ್ರೇಕ್

ಕ್ಷೇತ್ರ ಪುನರ್ ವಿಂಗಡಣೆ ಮಸೂದೆಯನ್ನು ಕೇಂದ್ರ ಸರ್ಕಾರ ಮರುಪರಿಚಯಿಸಲು ಮುಂದಾಗಿರುವುದು ತಮಿಳುನಾಡಿನಲ್ಲಿ ತೀವ್ರ ರಾಜಕೀಯ ಕಸರತ್ತಿಗೆ ಕಾರಣವಾಗಿದೆ. ಕ್ಷೇತ್ರ ಪುನರ್ ವಿಂಗಡಣೆ ವಿಷಯದಲ್ಲಿ ಡಿಎಂಕೆ (DMK) ತನ್ನ ಕಠಿಣ ನಿಲುವನ್ನು ಮೃದುಗೊಳಿಸಿದೆ ಎಂಬ...