Homeಅಂತರಾಷ್ಟ್ರೀಯಪ್ಯಾಲೆಸ್ತೀನ್‌‌: ಗಾಝಾ ಮೇಲೆ ಮತ್ತೆ ವಾಯುದಾಳಿ ನಡೆಸಿದ ಇಸ್ರೇಲ್‌

ಪ್ಯಾಲೆಸ್ತೀನ್‌‌: ಗಾಝಾ ಮೇಲೆ ಮತ್ತೆ ವಾಯುದಾಳಿ ನಡೆಸಿದ ಇಸ್ರೇಲ್‌

- Advertisement -
- Advertisement -

ಹೊಸ ಸರ್ಕಾರ ರಚನೆಯಾದ ಕೆಲವೆ ದಿನಗಳ ಅಂತರದಲ್ಲಿ ಮಂಗಳವಾರ ಗಾಝಾದ ಮೇಲೆ ಇಸ್ರೇಲ್‌ ಮತ್ತೆ ವಾಯುದಾಳಿ ಪ್ರಾರಂಭಿಸಿದೆ. ಇಸ್ರೇಲ್‌ ಆಕ್ರಮಿಸಿದ ದಕ್ಷಿಣ ಇಸ್ರೇಲ್‌‌ ಗಡಿಗೆ ಪ್ಯಾಲೆಸ್ತೀನಿಯನ್‌ ಹೋರಾಟಗಾರರು ಬೆಂಕಿಯ ಬಲೂನ್‌ಗಳನ್ನು ಕಳುಹಿಸಿದ್ದರಿಂದ ಈ ವಾಯುದಾಳಿ ನಡೆಸಿದ್ದೇವೆ ಎಂದು ಇಸ್ರೇಲ್‌ ಹೇಳಿದೆ.

ಇಸ್ರೇಲ್ ಮತ್ತು ಹಮಾಸ್ ಕಳೆದ ತಿಂಗಳು ಕದನ ವಿರಾಮಕ್ಕೆ ಒಪ್ಪಿದ 11 ದಿನಗಳ ನಂತರ ಈ ವಾಯುದಾಳಿ ಪ್ರಾರಂಭವಾಗಿದೆ. ಕಳೆದ ಬಾರಿ ಇಸ್ರೇಲ್‌ ನಡೆಸಿದ ದಾಳಿಯಲ್ಲಿ ಪ್ಯಾಲೆಸ್ತೀನಿನ 250 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದರು.

ಇದನ್ನೂ ಓದಿ: ‘ಗಾಝಾದಲ್ಲಿ ಈದ್‌ ಪ್ರಾರಂಭ!’ – ಕದನ ವಿರಾಮ ಘೋಷಿಸಿದ ಇಸ್ರೇಲ್‌

ನಗರದ ಪೂರ್ವ ವಲಯವನ್ನು ಇಸ್ರೇಲ್ ಆಕ್ರಮಿಸಿಕೊಂಡ 1967 ರ ವಾರ್ಷಿಕೋತ್ಸವವನ್ನು ಆಚರಿಸಿ, ಜೆರುಸಲೆಮ್‌‌ನ ಓಲ್ಡ್ ಸಿಟಿ ಮೂಲಕ ಬಲಪಂಥೀಯ ಇಸ್ರೇಲಿಗಳು ನಡೆಸಿದ ಮೆರವಣಿಗೆಗೆ ಪ್ರತಿಕ್ರಿಯೆಯಾಗಿ ಬೆಂಕಿಯ ಬಲೂನ್‌ಗಳನ್ನು ಕಳುಹಿಸಲಾಗಿದೆ ಎಂದು ವರದಿಯಾಗಿದೆ.

ಇಸ್ರೇಲಿ ವಿಮಾನವು ಗಾಜಾದ ಪ್ಯಾಲೆಸ್ತೀನಿಯನ್ ತರಬೇತಿ ಶಿಬಿರವನ್ನು ಗುರಿಯಾಗಿಸಿಕೊಂಡಿದೆ ಎಂದು ಹಮಾಸ್ ರೇಡಿಯೊ ಕೇಂದ್ರ ಹೇಳಿದೆ ಎಂದು ವರದಿಯಾಗಿದೆ.

ಮಂಗಳವಾರ ತಡರಾತ್ರಿ ಗಾಜಾ ಪ್ರದೇಶದ ಹಮಾಸ್‌ಗೆ ಸೇರಿದ ಹಲವಾರು ಮಿಲಿಟರಿ ತಾಣಗಳಿಗೆ ದಾಳಿ ಮಾಡಲಾಗಿದೆ ಎಂದು ಇಸ್ರೇಲಿ ರಕ್ಷಣಾ ಪಡೆ ದೃಡಪಡಿಸಿದೆ. ವಾಯುದಾಳಿಯಲ್ಲಿ ಗಾಝಾದ ಯಾವುದೆ ನಾಗರಿಕರು ಗಾಯಗೊಂಡಿಲ್ಲ ಎಂದು ಹಮಾಸ್ ಅಂಗಸಂಸ್ಥೆ ಮಾಧ್ಯಮ ವರದಿ ಮಾಡಿದೆ ಎಂದು ಬಿಬಿಸಿ ವರದಿ ಮಾಡಿದೆ.

ಇಸ್ರೇಲ್‌‌‌‌‌ ಅತಿಕ್ರಮಣವನ್ನು ವಿರೋಧಿಸಿ ಹಮಾಸ್‌‌, ‘ಆಕ್ರೋಶ ದಿನ’ ಆಚರಿಸಲು ಕರೆ ನೀಡಿತ್ತು.

ಇದನ್ನೂ ಓದಿ: ಪ್ಯಾಲೆಸ್ಟೀನೀಯರ ಹೋರಾಟ; ದಬ್ಬಾಳಿಕೆಯ ವಿರೋಧ ಅದು ಜಗಳಗಂಟತನವಲ್ಲ

“ಮುಂದಿನ ಮಂಗಳವಾರ ಸಜ್ಜುಗೊಳ್ಳುವ ದಿನವಾಗಿರಲಿ, ಅಲ್-ಅಕ್ಸಾ ಮಸೀದಿಯ ಕಡೆಗಿನ ಪ್ರೀತಿಯಿಂದಾಗಿರಲಿ, ಆಕ್ರಮಣಕಾರನ್ನು ಧಿಕ್ಕರಿಸುವ ದಿನವಾಗಲಿ. ನೀವು ಏನು ಮಾಡಿದ್ದೀರಿ ಎಂದು ದೇವನಿಗೆ ಮತ್ತು ನಿಮ್ಮ ಜನರಿಗೆ ತೋರಿಸಿ. ಜೆರುಸಲೆಮ್ ಮತ್ತು ಅಲ್-ಅಕ್ಸಾಗೆ ಅತ್ಯುತ್ತಮ ಖಡ್ಗವಾಗಿರಿ” ಎಂದು ಹಮಾಸ್ ಕರೆ ನೀಡಿತ್ತು.

ಬಲಪಂಥೀಯ ಇಸ್ರೇಲಿಗರು ಮೆರವಣಿಗೆಯಲ್ಲಿ, “ಇದು ನಮ್ಮ ಮನೆ”, “ಜೆರುಸಲೆಮ್ ನಮ್ಮದು”, “ಅರಬ್ಬರ ಸಾವು” ಎಂಬ ಘೋಷಣೆಗಳನ್ನು ಕೂಗಿದ್ದರು ಎಂದು CNN ವರದಿ ಮಾಡಿದೆ. ಆದರೆ ಈ ಘೋಷಣೆಗಳನ್ನು ವಿರೋಧಿಸಿ ಸ್ವತಃ ಇಸ್ರೇಲ್‌ನ ಹೊಸ ವಿದೇಶಾಂಗ ಸಚಿವ ಯಾಯರ್ ಲ್ಯಾಪಿಡ್ ಹೇಳಿಕೆ ನೀಡಿದ್ದಾರೆ.

“ಇಸ್ರೇಲಿ ಧ್ವಜವನ್ನು ಕೈಯಲ್ಲಿ ಹಿಡಿದುಕೊಂಡು ‘ಅರಬ್ಬರ ಸಾವು’ ಎಂದು ಕೂಗುವುದು ಹೇಗೆ ಎಂದು ಊಹಿಸಲಾಗದು. ಇದು ಜುಡಾಯಿಸಂ ಅಥವಾ ಇಸ್ರೇಲ್ ಅಲ್ಲ. ಆ ಘೋಷಣೆಯು ಖಂಡಿತವಾಗಿಯೂ ನಮ್ಮ ಧ್ವಜವನ್ನು ಸಂಕೇತಿಸುವುದಿಲ್ಲ. ಈ ಜನರು ಇಸ್ರೇಲ್‌ನ ಜನತೆಗೆ ನಾಚಿಕೆಗೇಡು” ಎಂದು ಅವರು ಹೇಳಿದ್ದಾರೆ.

ಜೆರುಸಲೆಮ್‌‌ನಲ್ಲಿ ಮಂಗಳವಾರ ಕನಿಷ್ಠ 17 ಪ್ಯಾಲೆಸ್ತೀನಿಯನ್ನರನ್ನು ಭದ್ರತಾ ಪಡೆಗಳು ಬಂಧಿಸಿವೆ ಮತ್ತು ಘರ್ಷಣೆಯಲ್ಲಿ ಕನಿಷ್ಠ 33 ಮಂದಿ ಗಾಯಗೊಂಡಿದ್ದಾರೆ ಎಂದು ಅಲ್-ಜಝೀರಾ ವರದಿ ಮಾಡಿದೆ.

ಇದನ್ನೂ ಓದಿ: ಪ್ಯಾಲೆಸ್ತೀನ್ ಸಂಘರ್ಷ ಕೊನೆಗೊಳಿಸಲು ’ದ್ವಿರಾಷ್ಟ್ರ’ ಪರಿಹಾರವನ್ನು ಬೆಂಬಲಿಸಿದ ಭಾರತ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....