Homeಅಂತರಾಷ್ಟ್ರೀಯಪ್ಯಾಲೆಸ್ತೀನ್‌‌: ಗಾಝಾ ಮೇಲೆ ಮತ್ತೆ ವಾಯುದಾಳಿ ನಡೆಸಿದ ಇಸ್ರೇಲ್‌

ಪ್ಯಾಲೆಸ್ತೀನ್‌‌: ಗಾಝಾ ಮೇಲೆ ಮತ್ತೆ ವಾಯುದಾಳಿ ನಡೆಸಿದ ಇಸ್ರೇಲ್‌

- Advertisement -
- Advertisement -

ಹೊಸ ಸರ್ಕಾರ ರಚನೆಯಾದ ಕೆಲವೆ ದಿನಗಳ ಅಂತರದಲ್ಲಿ ಮಂಗಳವಾರ ಗಾಝಾದ ಮೇಲೆ ಇಸ್ರೇಲ್‌ ಮತ್ತೆ ವಾಯುದಾಳಿ ಪ್ರಾರಂಭಿಸಿದೆ. ಇಸ್ರೇಲ್‌ ಆಕ್ರಮಿಸಿದ ದಕ್ಷಿಣ ಇಸ್ರೇಲ್‌‌ ಗಡಿಗೆ ಪ್ಯಾಲೆಸ್ತೀನಿಯನ್‌ ಹೋರಾಟಗಾರರು ಬೆಂಕಿಯ ಬಲೂನ್‌ಗಳನ್ನು ಕಳುಹಿಸಿದ್ದರಿಂದ ಈ ವಾಯುದಾಳಿ ನಡೆಸಿದ್ದೇವೆ ಎಂದು ಇಸ್ರೇಲ್‌ ಹೇಳಿದೆ.

ಇಸ್ರೇಲ್ ಮತ್ತು ಹಮಾಸ್ ಕಳೆದ ತಿಂಗಳು ಕದನ ವಿರಾಮಕ್ಕೆ ಒಪ್ಪಿದ 11 ದಿನಗಳ ನಂತರ ಈ ವಾಯುದಾಳಿ ಪ್ರಾರಂಭವಾಗಿದೆ. ಕಳೆದ ಬಾರಿ ಇಸ್ರೇಲ್‌ ನಡೆಸಿದ ದಾಳಿಯಲ್ಲಿ ಪ್ಯಾಲೆಸ್ತೀನಿನ 250 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದರು.

ಇದನ್ನೂ ಓದಿ: ‘ಗಾಝಾದಲ್ಲಿ ಈದ್‌ ಪ್ರಾರಂಭ!’ – ಕದನ ವಿರಾಮ ಘೋಷಿಸಿದ ಇಸ್ರೇಲ್‌

ನಗರದ ಪೂರ್ವ ವಲಯವನ್ನು ಇಸ್ರೇಲ್ ಆಕ್ರಮಿಸಿಕೊಂಡ 1967 ರ ವಾರ್ಷಿಕೋತ್ಸವವನ್ನು ಆಚರಿಸಿ, ಜೆರುಸಲೆಮ್‌‌ನ ಓಲ್ಡ್ ಸಿಟಿ ಮೂಲಕ ಬಲಪಂಥೀಯ ಇಸ್ರೇಲಿಗಳು ನಡೆಸಿದ ಮೆರವಣಿಗೆಗೆ ಪ್ರತಿಕ್ರಿಯೆಯಾಗಿ ಬೆಂಕಿಯ ಬಲೂನ್‌ಗಳನ್ನು ಕಳುಹಿಸಲಾಗಿದೆ ಎಂದು ವರದಿಯಾಗಿದೆ.

ಇಸ್ರೇಲಿ ವಿಮಾನವು ಗಾಜಾದ ಪ್ಯಾಲೆಸ್ತೀನಿಯನ್ ತರಬೇತಿ ಶಿಬಿರವನ್ನು ಗುರಿಯಾಗಿಸಿಕೊಂಡಿದೆ ಎಂದು ಹಮಾಸ್ ರೇಡಿಯೊ ಕೇಂದ್ರ ಹೇಳಿದೆ ಎಂದು ವರದಿಯಾಗಿದೆ.

ಮಂಗಳವಾರ ತಡರಾತ್ರಿ ಗಾಜಾ ಪ್ರದೇಶದ ಹಮಾಸ್‌ಗೆ ಸೇರಿದ ಹಲವಾರು ಮಿಲಿಟರಿ ತಾಣಗಳಿಗೆ ದಾಳಿ ಮಾಡಲಾಗಿದೆ ಎಂದು ಇಸ್ರೇಲಿ ರಕ್ಷಣಾ ಪಡೆ ದೃಡಪಡಿಸಿದೆ. ವಾಯುದಾಳಿಯಲ್ಲಿ ಗಾಝಾದ ಯಾವುದೆ ನಾಗರಿಕರು ಗಾಯಗೊಂಡಿಲ್ಲ ಎಂದು ಹಮಾಸ್ ಅಂಗಸಂಸ್ಥೆ ಮಾಧ್ಯಮ ವರದಿ ಮಾಡಿದೆ ಎಂದು ಬಿಬಿಸಿ ವರದಿ ಮಾಡಿದೆ.

ಇಸ್ರೇಲ್‌‌‌‌‌ ಅತಿಕ್ರಮಣವನ್ನು ವಿರೋಧಿಸಿ ಹಮಾಸ್‌‌, ‘ಆಕ್ರೋಶ ದಿನ’ ಆಚರಿಸಲು ಕರೆ ನೀಡಿತ್ತು.

ಇದನ್ನೂ ಓದಿ: ಪ್ಯಾಲೆಸ್ಟೀನೀಯರ ಹೋರಾಟ; ದಬ್ಬಾಳಿಕೆಯ ವಿರೋಧ ಅದು ಜಗಳಗಂಟತನವಲ್ಲ

“ಮುಂದಿನ ಮಂಗಳವಾರ ಸಜ್ಜುಗೊಳ್ಳುವ ದಿನವಾಗಿರಲಿ, ಅಲ್-ಅಕ್ಸಾ ಮಸೀದಿಯ ಕಡೆಗಿನ ಪ್ರೀತಿಯಿಂದಾಗಿರಲಿ, ಆಕ್ರಮಣಕಾರನ್ನು ಧಿಕ್ಕರಿಸುವ ದಿನವಾಗಲಿ. ನೀವು ಏನು ಮಾಡಿದ್ದೀರಿ ಎಂದು ದೇವನಿಗೆ ಮತ್ತು ನಿಮ್ಮ ಜನರಿಗೆ ತೋರಿಸಿ. ಜೆರುಸಲೆಮ್ ಮತ್ತು ಅಲ್-ಅಕ್ಸಾಗೆ ಅತ್ಯುತ್ತಮ ಖಡ್ಗವಾಗಿರಿ” ಎಂದು ಹಮಾಸ್ ಕರೆ ನೀಡಿತ್ತು.

ಬಲಪಂಥೀಯ ಇಸ್ರೇಲಿಗರು ಮೆರವಣಿಗೆಯಲ್ಲಿ, “ಇದು ನಮ್ಮ ಮನೆ”, “ಜೆರುಸಲೆಮ್ ನಮ್ಮದು”, “ಅರಬ್ಬರ ಸಾವು” ಎಂಬ ಘೋಷಣೆಗಳನ್ನು ಕೂಗಿದ್ದರು ಎಂದು CNN ವರದಿ ಮಾಡಿದೆ. ಆದರೆ ಈ ಘೋಷಣೆಗಳನ್ನು ವಿರೋಧಿಸಿ ಸ್ವತಃ ಇಸ್ರೇಲ್‌ನ ಹೊಸ ವಿದೇಶಾಂಗ ಸಚಿವ ಯಾಯರ್ ಲ್ಯಾಪಿಡ್ ಹೇಳಿಕೆ ನೀಡಿದ್ದಾರೆ.

“ಇಸ್ರೇಲಿ ಧ್ವಜವನ್ನು ಕೈಯಲ್ಲಿ ಹಿಡಿದುಕೊಂಡು ‘ಅರಬ್ಬರ ಸಾವು’ ಎಂದು ಕೂಗುವುದು ಹೇಗೆ ಎಂದು ಊಹಿಸಲಾಗದು. ಇದು ಜುಡಾಯಿಸಂ ಅಥವಾ ಇಸ್ರೇಲ್ ಅಲ್ಲ. ಆ ಘೋಷಣೆಯು ಖಂಡಿತವಾಗಿಯೂ ನಮ್ಮ ಧ್ವಜವನ್ನು ಸಂಕೇತಿಸುವುದಿಲ್ಲ. ಈ ಜನರು ಇಸ್ರೇಲ್‌ನ ಜನತೆಗೆ ನಾಚಿಕೆಗೇಡು” ಎಂದು ಅವರು ಹೇಳಿದ್ದಾರೆ.

ಜೆರುಸಲೆಮ್‌‌ನಲ್ಲಿ ಮಂಗಳವಾರ ಕನಿಷ್ಠ 17 ಪ್ಯಾಲೆಸ್ತೀನಿಯನ್ನರನ್ನು ಭದ್ರತಾ ಪಡೆಗಳು ಬಂಧಿಸಿವೆ ಮತ್ತು ಘರ್ಷಣೆಯಲ್ಲಿ ಕನಿಷ್ಠ 33 ಮಂದಿ ಗಾಯಗೊಂಡಿದ್ದಾರೆ ಎಂದು ಅಲ್-ಜಝೀರಾ ವರದಿ ಮಾಡಿದೆ.

ಇದನ್ನೂ ಓದಿ: ಪ್ಯಾಲೆಸ್ತೀನ್ ಸಂಘರ್ಷ ಕೊನೆಗೊಳಿಸಲು ’ದ್ವಿರಾಷ್ಟ್ರ’ ಪರಿಹಾರವನ್ನು ಬೆಂಬಲಿಸಿದ ಭಾರತ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...