Homeಅಂತರಾಷ್ಟ್ರೀಯಪ್ಯಾಲೆಸ್ತೀನ್‌‌: ಗಾಝಾ ಮೇಲೆ ಮತ್ತೆ ವಾಯುದಾಳಿ ನಡೆಸಿದ ಇಸ್ರೇಲ್‌

ಪ್ಯಾಲೆಸ್ತೀನ್‌‌: ಗಾಝಾ ಮೇಲೆ ಮತ್ತೆ ವಾಯುದಾಳಿ ನಡೆಸಿದ ಇಸ್ರೇಲ್‌

- Advertisement -
- Advertisement -

ಹೊಸ ಸರ್ಕಾರ ರಚನೆಯಾದ ಕೆಲವೆ ದಿನಗಳ ಅಂತರದಲ್ಲಿ ಮಂಗಳವಾರ ಗಾಝಾದ ಮೇಲೆ ಇಸ್ರೇಲ್‌ ಮತ್ತೆ ವಾಯುದಾಳಿ ಪ್ರಾರಂಭಿಸಿದೆ. ಇಸ್ರೇಲ್‌ ಆಕ್ರಮಿಸಿದ ದಕ್ಷಿಣ ಇಸ್ರೇಲ್‌‌ ಗಡಿಗೆ ಪ್ಯಾಲೆಸ್ತೀನಿಯನ್‌ ಹೋರಾಟಗಾರರು ಬೆಂಕಿಯ ಬಲೂನ್‌ಗಳನ್ನು ಕಳುಹಿಸಿದ್ದರಿಂದ ಈ ವಾಯುದಾಳಿ ನಡೆಸಿದ್ದೇವೆ ಎಂದು ಇಸ್ರೇಲ್‌ ಹೇಳಿದೆ.

ಇಸ್ರೇಲ್ ಮತ್ತು ಹಮಾಸ್ ಕಳೆದ ತಿಂಗಳು ಕದನ ವಿರಾಮಕ್ಕೆ ಒಪ್ಪಿದ 11 ದಿನಗಳ ನಂತರ ಈ ವಾಯುದಾಳಿ ಪ್ರಾರಂಭವಾಗಿದೆ. ಕಳೆದ ಬಾರಿ ಇಸ್ರೇಲ್‌ ನಡೆಸಿದ ದಾಳಿಯಲ್ಲಿ ಪ್ಯಾಲೆಸ್ತೀನಿನ 250 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದರು.

ಇದನ್ನೂ ಓದಿ: ‘ಗಾಝಾದಲ್ಲಿ ಈದ್‌ ಪ್ರಾರಂಭ!’ – ಕದನ ವಿರಾಮ ಘೋಷಿಸಿದ ಇಸ್ರೇಲ್‌

ನಗರದ ಪೂರ್ವ ವಲಯವನ್ನು ಇಸ್ರೇಲ್ ಆಕ್ರಮಿಸಿಕೊಂಡ 1967 ರ ವಾರ್ಷಿಕೋತ್ಸವವನ್ನು ಆಚರಿಸಿ, ಜೆರುಸಲೆಮ್‌‌ನ ಓಲ್ಡ್ ಸಿಟಿ ಮೂಲಕ ಬಲಪಂಥೀಯ ಇಸ್ರೇಲಿಗಳು ನಡೆಸಿದ ಮೆರವಣಿಗೆಗೆ ಪ್ರತಿಕ್ರಿಯೆಯಾಗಿ ಬೆಂಕಿಯ ಬಲೂನ್‌ಗಳನ್ನು ಕಳುಹಿಸಲಾಗಿದೆ ಎಂದು ವರದಿಯಾಗಿದೆ.

ಇಸ್ರೇಲಿ ವಿಮಾನವು ಗಾಜಾದ ಪ್ಯಾಲೆಸ್ತೀನಿಯನ್ ತರಬೇತಿ ಶಿಬಿರವನ್ನು ಗುರಿಯಾಗಿಸಿಕೊಂಡಿದೆ ಎಂದು ಹಮಾಸ್ ರೇಡಿಯೊ ಕೇಂದ್ರ ಹೇಳಿದೆ ಎಂದು ವರದಿಯಾಗಿದೆ.

ಮಂಗಳವಾರ ತಡರಾತ್ರಿ ಗಾಜಾ ಪ್ರದೇಶದ ಹಮಾಸ್‌ಗೆ ಸೇರಿದ ಹಲವಾರು ಮಿಲಿಟರಿ ತಾಣಗಳಿಗೆ ದಾಳಿ ಮಾಡಲಾಗಿದೆ ಎಂದು ಇಸ್ರೇಲಿ ರಕ್ಷಣಾ ಪಡೆ ದೃಡಪಡಿಸಿದೆ. ವಾಯುದಾಳಿಯಲ್ಲಿ ಗಾಝಾದ ಯಾವುದೆ ನಾಗರಿಕರು ಗಾಯಗೊಂಡಿಲ್ಲ ಎಂದು ಹಮಾಸ್ ಅಂಗಸಂಸ್ಥೆ ಮಾಧ್ಯಮ ವರದಿ ಮಾಡಿದೆ ಎಂದು ಬಿಬಿಸಿ ವರದಿ ಮಾಡಿದೆ.

ಇಸ್ರೇಲ್‌‌‌‌‌ ಅತಿಕ್ರಮಣವನ್ನು ವಿರೋಧಿಸಿ ಹಮಾಸ್‌‌, ‘ಆಕ್ರೋಶ ದಿನ’ ಆಚರಿಸಲು ಕರೆ ನೀಡಿತ್ತು.

ಇದನ್ನೂ ಓದಿ: ಪ್ಯಾಲೆಸ್ಟೀನೀಯರ ಹೋರಾಟ; ದಬ್ಬಾಳಿಕೆಯ ವಿರೋಧ ಅದು ಜಗಳಗಂಟತನವಲ್ಲ

“ಮುಂದಿನ ಮಂಗಳವಾರ ಸಜ್ಜುಗೊಳ್ಳುವ ದಿನವಾಗಿರಲಿ, ಅಲ್-ಅಕ್ಸಾ ಮಸೀದಿಯ ಕಡೆಗಿನ ಪ್ರೀತಿಯಿಂದಾಗಿರಲಿ, ಆಕ್ರಮಣಕಾರನ್ನು ಧಿಕ್ಕರಿಸುವ ದಿನವಾಗಲಿ. ನೀವು ಏನು ಮಾಡಿದ್ದೀರಿ ಎಂದು ದೇವನಿಗೆ ಮತ್ತು ನಿಮ್ಮ ಜನರಿಗೆ ತೋರಿಸಿ. ಜೆರುಸಲೆಮ್ ಮತ್ತು ಅಲ್-ಅಕ್ಸಾಗೆ ಅತ್ಯುತ್ತಮ ಖಡ್ಗವಾಗಿರಿ” ಎಂದು ಹಮಾಸ್ ಕರೆ ನೀಡಿತ್ತು.

ಬಲಪಂಥೀಯ ಇಸ್ರೇಲಿಗರು ಮೆರವಣಿಗೆಯಲ್ಲಿ, “ಇದು ನಮ್ಮ ಮನೆ”, “ಜೆರುಸಲೆಮ್ ನಮ್ಮದು”, “ಅರಬ್ಬರ ಸಾವು” ಎಂಬ ಘೋಷಣೆಗಳನ್ನು ಕೂಗಿದ್ದರು ಎಂದು CNN ವರದಿ ಮಾಡಿದೆ. ಆದರೆ ಈ ಘೋಷಣೆಗಳನ್ನು ವಿರೋಧಿಸಿ ಸ್ವತಃ ಇಸ್ರೇಲ್‌ನ ಹೊಸ ವಿದೇಶಾಂಗ ಸಚಿವ ಯಾಯರ್ ಲ್ಯಾಪಿಡ್ ಹೇಳಿಕೆ ನೀಡಿದ್ದಾರೆ.

“ಇಸ್ರೇಲಿ ಧ್ವಜವನ್ನು ಕೈಯಲ್ಲಿ ಹಿಡಿದುಕೊಂಡು ‘ಅರಬ್ಬರ ಸಾವು’ ಎಂದು ಕೂಗುವುದು ಹೇಗೆ ಎಂದು ಊಹಿಸಲಾಗದು. ಇದು ಜುಡಾಯಿಸಂ ಅಥವಾ ಇಸ್ರೇಲ್ ಅಲ್ಲ. ಆ ಘೋಷಣೆಯು ಖಂಡಿತವಾಗಿಯೂ ನಮ್ಮ ಧ್ವಜವನ್ನು ಸಂಕೇತಿಸುವುದಿಲ್ಲ. ಈ ಜನರು ಇಸ್ರೇಲ್‌ನ ಜನತೆಗೆ ನಾಚಿಕೆಗೇಡು” ಎಂದು ಅವರು ಹೇಳಿದ್ದಾರೆ.

ಜೆರುಸಲೆಮ್‌‌ನಲ್ಲಿ ಮಂಗಳವಾರ ಕನಿಷ್ಠ 17 ಪ್ಯಾಲೆಸ್ತೀನಿಯನ್ನರನ್ನು ಭದ್ರತಾ ಪಡೆಗಳು ಬಂಧಿಸಿವೆ ಮತ್ತು ಘರ್ಷಣೆಯಲ್ಲಿ ಕನಿಷ್ಠ 33 ಮಂದಿ ಗಾಯಗೊಂಡಿದ್ದಾರೆ ಎಂದು ಅಲ್-ಜಝೀರಾ ವರದಿ ಮಾಡಿದೆ.

ಇದನ್ನೂ ಓದಿ: ಪ್ಯಾಲೆಸ್ತೀನ್ ಸಂಘರ್ಷ ಕೊನೆಗೊಳಿಸಲು ’ದ್ವಿರಾಷ್ಟ್ರ’ ಪರಿಹಾರವನ್ನು ಬೆಂಬಲಿಸಿದ ಭಾರತ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...