Homeಅಂತರಾಷ್ಟ್ರೀಯಪ್ಯಾಲೆಸ್ತೀನ್‌‌: ಗಾಝಾ ಮೇಲೆ ಮತ್ತೆ ವಾಯುದಾಳಿ ನಡೆಸಿದ ಇಸ್ರೇಲ್‌

ಪ್ಯಾಲೆಸ್ತೀನ್‌‌: ಗಾಝಾ ಮೇಲೆ ಮತ್ತೆ ವಾಯುದಾಳಿ ನಡೆಸಿದ ಇಸ್ರೇಲ್‌

- Advertisement -
- Advertisement -

ಹೊಸ ಸರ್ಕಾರ ರಚನೆಯಾದ ಕೆಲವೆ ದಿನಗಳ ಅಂತರದಲ್ಲಿ ಮಂಗಳವಾರ ಗಾಝಾದ ಮೇಲೆ ಇಸ್ರೇಲ್‌ ಮತ್ತೆ ವಾಯುದಾಳಿ ಪ್ರಾರಂಭಿಸಿದೆ. ಇಸ್ರೇಲ್‌ ಆಕ್ರಮಿಸಿದ ದಕ್ಷಿಣ ಇಸ್ರೇಲ್‌‌ ಗಡಿಗೆ ಪ್ಯಾಲೆಸ್ತೀನಿಯನ್‌ ಹೋರಾಟಗಾರರು ಬೆಂಕಿಯ ಬಲೂನ್‌ಗಳನ್ನು ಕಳುಹಿಸಿದ್ದರಿಂದ ಈ ವಾಯುದಾಳಿ ನಡೆಸಿದ್ದೇವೆ ಎಂದು ಇಸ್ರೇಲ್‌ ಹೇಳಿದೆ.

ಇಸ್ರೇಲ್ ಮತ್ತು ಹಮಾಸ್ ಕಳೆದ ತಿಂಗಳು ಕದನ ವಿರಾಮಕ್ಕೆ ಒಪ್ಪಿದ 11 ದಿನಗಳ ನಂತರ ಈ ವಾಯುದಾಳಿ ಪ್ರಾರಂಭವಾಗಿದೆ. ಕಳೆದ ಬಾರಿ ಇಸ್ರೇಲ್‌ ನಡೆಸಿದ ದಾಳಿಯಲ್ಲಿ ಪ್ಯಾಲೆಸ್ತೀನಿನ 250 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದರು.

ಇದನ್ನೂ ಓದಿ: ‘ಗಾಝಾದಲ್ಲಿ ಈದ್‌ ಪ್ರಾರಂಭ!’ – ಕದನ ವಿರಾಮ ಘೋಷಿಸಿದ ಇಸ್ರೇಲ್‌

ನಗರದ ಪೂರ್ವ ವಲಯವನ್ನು ಇಸ್ರೇಲ್ ಆಕ್ರಮಿಸಿಕೊಂಡ 1967 ರ ವಾರ್ಷಿಕೋತ್ಸವವನ್ನು ಆಚರಿಸಿ, ಜೆರುಸಲೆಮ್‌‌ನ ಓಲ್ಡ್ ಸಿಟಿ ಮೂಲಕ ಬಲಪಂಥೀಯ ಇಸ್ರೇಲಿಗಳು ನಡೆಸಿದ ಮೆರವಣಿಗೆಗೆ ಪ್ರತಿಕ್ರಿಯೆಯಾಗಿ ಬೆಂಕಿಯ ಬಲೂನ್‌ಗಳನ್ನು ಕಳುಹಿಸಲಾಗಿದೆ ಎಂದು ವರದಿಯಾಗಿದೆ.

ಇಸ್ರೇಲಿ ವಿಮಾನವು ಗಾಜಾದ ಪ್ಯಾಲೆಸ್ತೀನಿಯನ್ ತರಬೇತಿ ಶಿಬಿರವನ್ನು ಗುರಿಯಾಗಿಸಿಕೊಂಡಿದೆ ಎಂದು ಹಮಾಸ್ ರೇಡಿಯೊ ಕೇಂದ್ರ ಹೇಳಿದೆ ಎಂದು ವರದಿಯಾಗಿದೆ.

ಮಂಗಳವಾರ ತಡರಾತ್ರಿ ಗಾಜಾ ಪ್ರದೇಶದ ಹಮಾಸ್‌ಗೆ ಸೇರಿದ ಹಲವಾರು ಮಿಲಿಟರಿ ತಾಣಗಳಿಗೆ ದಾಳಿ ಮಾಡಲಾಗಿದೆ ಎಂದು ಇಸ್ರೇಲಿ ರಕ್ಷಣಾ ಪಡೆ ದೃಡಪಡಿಸಿದೆ. ವಾಯುದಾಳಿಯಲ್ಲಿ ಗಾಝಾದ ಯಾವುದೆ ನಾಗರಿಕರು ಗಾಯಗೊಂಡಿಲ್ಲ ಎಂದು ಹಮಾಸ್ ಅಂಗಸಂಸ್ಥೆ ಮಾಧ್ಯಮ ವರದಿ ಮಾಡಿದೆ ಎಂದು ಬಿಬಿಸಿ ವರದಿ ಮಾಡಿದೆ.

ಇಸ್ರೇಲ್‌‌‌‌‌ ಅತಿಕ್ರಮಣವನ್ನು ವಿರೋಧಿಸಿ ಹಮಾಸ್‌‌, ‘ಆಕ್ರೋಶ ದಿನ’ ಆಚರಿಸಲು ಕರೆ ನೀಡಿತ್ತು.

ಇದನ್ನೂ ಓದಿ: ಪ್ಯಾಲೆಸ್ಟೀನೀಯರ ಹೋರಾಟ; ದಬ್ಬಾಳಿಕೆಯ ವಿರೋಧ ಅದು ಜಗಳಗಂಟತನವಲ್ಲ

“ಮುಂದಿನ ಮಂಗಳವಾರ ಸಜ್ಜುಗೊಳ್ಳುವ ದಿನವಾಗಿರಲಿ, ಅಲ್-ಅಕ್ಸಾ ಮಸೀದಿಯ ಕಡೆಗಿನ ಪ್ರೀತಿಯಿಂದಾಗಿರಲಿ, ಆಕ್ರಮಣಕಾರನ್ನು ಧಿಕ್ಕರಿಸುವ ದಿನವಾಗಲಿ. ನೀವು ಏನು ಮಾಡಿದ್ದೀರಿ ಎಂದು ದೇವನಿಗೆ ಮತ್ತು ನಿಮ್ಮ ಜನರಿಗೆ ತೋರಿಸಿ. ಜೆರುಸಲೆಮ್ ಮತ್ತು ಅಲ್-ಅಕ್ಸಾಗೆ ಅತ್ಯುತ್ತಮ ಖಡ್ಗವಾಗಿರಿ” ಎಂದು ಹಮಾಸ್ ಕರೆ ನೀಡಿತ್ತು.

ಬಲಪಂಥೀಯ ಇಸ್ರೇಲಿಗರು ಮೆರವಣಿಗೆಯಲ್ಲಿ, “ಇದು ನಮ್ಮ ಮನೆ”, “ಜೆರುಸಲೆಮ್ ನಮ್ಮದು”, “ಅರಬ್ಬರ ಸಾವು” ಎಂಬ ಘೋಷಣೆಗಳನ್ನು ಕೂಗಿದ್ದರು ಎಂದು CNN ವರದಿ ಮಾಡಿದೆ. ಆದರೆ ಈ ಘೋಷಣೆಗಳನ್ನು ವಿರೋಧಿಸಿ ಸ್ವತಃ ಇಸ್ರೇಲ್‌ನ ಹೊಸ ವಿದೇಶಾಂಗ ಸಚಿವ ಯಾಯರ್ ಲ್ಯಾಪಿಡ್ ಹೇಳಿಕೆ ನೀಡಿದ್ದಾರೆ.

“ಇಸ್ರೇಲಿ ಧ್ವಜವನ್ನು ಕೈಯಲ್ಲಿ ಹಿಡಿದುಕೊಂಡು ‘ಅರಬ್ಬರ ಸಾವು’ ಎಂದು ಕೂಗುವುದು ಹೇಗೆ ಎಂದು ಊಹಿಸಲಾಗದು. ಇದು ಜುಡಾಯಿಸಂ ಅಥವಾ ಇಸ್ರೇಲ್ ಅಲ್ಲ. ಆ ಘೋಷಣೆಯು ಖಂಡಿತವಾಗಿಯೂ ನಮ್ಮ ಧ್ವಜವನ್ನು ಸಂಕೇತಿಸುವುದಿಲ್ಲ. ಈ ಜನರು ಇಸ್ರೇಲ್‌ನ ಜನತೆಗೆ ನಾಚಿಕೆಗೇಡು” ಎಂದು ಅವರು ಹೇಳಿದ್ದಾರೆ.

ಜೆರುಸಲೆಮ್‌‌ನಲ್ಲಿ ಮಂಗಳವಾರ ಕನಿಷ್ಠ 17 ಪ್ಯಾಲೆಸ್ತೀನಿಯನ್ನರನ್ನು ಭದ್ರತಾ ಪಡೆಗಳು ಬಂಧಿಸಿವೆ ಮತ್ತು ಘರ್ಷಣೆಯಲ್ಲಿ ಕನಿಷ್ಠ 33 ಮಂದಿ ಗಾಯಗೊಂಡಿದ್ದಾರೆ ಎಂದು ಅಲ್-ಜಝೀರಾ ವರದಿ ಮಾಡಿದೆ.

ಇದನ್ನೂ ಓದಿ: ಪ್ಯಾಲೆಸ್ತೀನ್ ಸಂಘರ್ಷ ಕೊನೆಗೊಳಿಸಲು ’ದ್ವಿರಾಷ್ಟ್ರ’ ಪರಿಹಾರವನ್ನು ಬೆಂಬಲಿಸಿದ ಭಾರತ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...