Homeಅಂತರಾಷ್ಟ್ರೀಯಪ್ಯಾಲೆಸ್ತೀನ್‌‌: ಗಾಝಾ ಮೇಲೆ ಮತ್ತೆ ವಾಯುದಾಳಿ ನಡೆಸಿದ ಇಸ್ರೇಲ್‌

ಪ್ಯಾಲೆಸ್ತೀನ್‌‌: ಗಾಝಾ ಮೇಲೆ ಮತ್ತೆ ವಾಯುದಾಳಿ ನಡೆಸಿದ ಇಸ್ರೇಲ್‌

- Advertisement -
- Advertisement -

ಹೊಸ ಸರ್ಕಾರ ರಚನೆಯಾದ ಕೆಲವೆ ದಿನಗಳ ಅಂತರದಲ್ಲಿ ಮಂಗಳವಾರ ಗಾಝಾದ ಮೇಲೆ ಇಸ್ರೇಲ್‌ ಮತ್ತೆ ವಾಯುದಾಳಿ ಪ್ರಾರಂಭಿಸಿದೆ. ಇಸ್ರೇಲ್‌ ಆಕ್ರಮಿಸಿದ ದಕ್ಷಿಣ ಇಸ್ರೇಲ್‌‌ ಗಡಿಗೆ ಪ್ಯಾಲೆಸ್ತೀನಿಯನ್‌ ಹೋರಾಟಗಾರರು ಬೆಂಕಿಯ ಬಲೂನ್‌ಗಳನ್ನು ಕಳುಹಿಸಿದ್ದರಿಂದ ಈ ವಾಯುದಾಳಿ ನಡೆಸಿದ್ದೇವೆ ಎಂದು ಇಸ್ರೇಲ್‌ ಹೇಳಿದೆ.

ಇಸ್ರೇಲ್ ಮತ್ತು ಹಮಾಸ್ ಕಳೆದ ತಿಂಗಳು ಕದನ ವಿರಾಮಕ್ಕೆ ಒಪ್ಪಿದ 11 ದಿನಗಳ ನಂತರ ಈ ವಾಯುದಾಳಿ ಪ್ರಾರಂಭವಾಗಿದೆ. ಕಳೆದ ಬಾರಿ ಇಸ್ರೇಲ್‌ ನಡೆಸಿದ ದಾಳಿಯಲ್ಲಿ ಪ್ಯಾಲೆಸ್ತೀನಿನ 250 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದರು.

ಇದನ್ನೂ ಓದಿ: ‘ಗಾಝಾದಲ್ಲಿ ಈದ್‌ ಪ್ರಾರಂಭ!’ – ಕದನ ವಿರಾಮ ಘೋಷಿಸಿದ ಇಸ್ರೇಲ್‌

ನಗರದ ಪೂರ್ವ ವಲಯವನ್ನು ಇಸ್ರೇಲ್ ಆಕ್ರಮಿಸಿಕೊಂಡ 1967 ರ ವಾರ್ಷಿಕೋತ್ಸವವನ್ನು ಆಚರಿಸಿ, ಜೆರುಸಲೆಮ್‌‌ನ ಓಲ್ಡ್ ಸಿಟಿ ಮೂಲಕ ಬಲಪಂಥೀಯ ಇಸ್ರೇಲಿಗಳು ನಡೆಸಿದ ಮೆರವಣಿಗೆಗೆ ಪ್ರತಿಕ್ರಿಯೆಯಾಗಿ ಬೆಂಕಿಯ ಬಲೂನ್‌ಗಳನ್ನು ಕಳುಹಿಸಲಾಗಿದೆ ಎಂದು ವರದಿಯಾಗಿದೆ.

ಇಸ್ರೇಲಿ ವಿಮಾನವು ಗಾಜಾದ ಪ್ಯಾಲೆಸ್ತೀನಿಯನ್ ತರಬೇತಿ ಶಿಬಿರವನ್ನು ಗುರಿಯಾಗಿಸಿಕೊಂಡಿದೆ ಎಂದು ಹಮಾಸ್ ರೇಡಿಯೊ ಕೇಂದ್ರ ಹೇಳಿದೆ ಎಂದು ವರದಿಯಾಗಿದೆ.

ಮಂಗಳವಾರ ತಡರಾತ್ರಿ ಗಾಜಾ ಪ್ರದೇಶದ ಹಮಾಸ್‌ಗೆ ಸೇರಿದ ಹಲವಾರು ಮಿಲಿಟರಿ ತಾಣಗಳಿಗೆ ದಾಳಿ ಮಾಡಲಾಗಿದೆ ಎಂದು ಇಸ್ರೇಲಿ ರಕ್ಷಣಾ ಪಡೆ ದೃಡಪಡಿಸಿದೆ. ವಾಯುದಾಳಿಯಲ್ಲಿ ಗಾಝಾದ ಯಾವುದೆ ನಾಗರಿಕರು ಗಾಯಗೊಂಡಿಲ್ಲ ಎಂದು ಹಮಾಸ್ ಅಂಗಸಂಸ್ಥೆ ಮಾಧ್ಯಮ ವರದಿ ಮಾಡಿದೆ ಎಂದು ಬಿಬಿಸಿ ವರದಿ ಮಾಡಿದೆ.

ಇಸ್ರೇಲ್‌‌‌‌‌ ಅತಿಕ್ರಮಣವನ್ನು ವಿರೋಧಿಸಿ ಹಮಾಸ್‌‌, ‘ಆಕ್ರೋಶ ದಿನ’ ಆಚರಿಸಲು ಕರೆ ನೀಡಿತ್ತು.

ಇದನ್ನೂ ಓದಿ: ಪ್ಯಾಲೆಸ್ಟೀನೀಯರ ಹೋರಾಟ; ದಬ್ಬಾಳಿಕೆಯ ವಿರೋಧ ಅದು ಜಗಳಗಂಟತನವಲ್ಲ

“ಮುಂದಿನ ಮಂಗಳವಾರ ಸಜ್ಜುಗೊಳ್ಳುವ ದಿನವಾಗಿರಲಿ, ಅಲ್-ಅಕ್ಸಾ ಮಸೀದಿಯ ಕಡೆಗಿನ ಪ್ರೀತಿಯಿಂದಾಗಿರಲಿ, ಆಕ್ರಮಣಕಾರನ್ನು ಧಿಕ್ಕರಿಸುವ ದಿನವಾಗಲಿ. ನೀವು ಏನು ಮಾಡಿದ್ದೀರಿ ಎಂದು ದೇವನಿಗೆ ಮತ್ತು ನಿಮ್ಮ ಜನರಿಗೆ ತೋರಿಸಿ. ಜೆರುಸಲೆಮ್ ಮತ್ತು ಅಲ್-ಅಕ್ಸಾಗೆ ಅತ್ಯುತ್ತಮ ಖಡ್ಗವಾಗಿರಿ” ಎಂದು ಹಮಾಸ್ ಕರೆ ನೀಡಿತ್ತು.

ಬಲಪಂಥೀಯ ಇಸ್ರೇಲಿಗರು ಮೆರವಣಿಗೆಯಲ್ಲಿ, “ಇದು ನಮ್ಮ ಮನೆ”, “ಜೆರುಸಲೆಮ್ ನಮ್ಮದು”, “ಅರಬ್ಬರ ಸಾವು” ಎಂಬ ಘೋಷಣೆಗಳನ್ನು ಕೂಗಿದ್ದರು ಎಂದು CNN ವರದಿ ಮಾಡಿದೆ. ಆದರೆ ಈ ಘೋಷಣೆಗಳನ್ನು ವಿರೋಧಿಸಿ ಸ್ವತಃ ಇಸ್ರೇಲ್‌ನ ಹೊಸ ವಿದೇಶಾಂಗ ಸಚಿವ ಯಾಯರ್ ಲ್ಯಾಪಿಡ್ ಹೇಳಿಕೆ ನೀಡಿದ್ದಾರೆ.

“ಇಸ್ರೇಲಿ ಧ್ವಜವನ್ನು ಕೈಯಲ್ಲಿ ಹಿಡಿದುಕೊಂಡು ‘ಅರಬ್ಬರ ಸಾವು’ ಎಂದು ಕೂಗುವುದು ಹೇಗೆ ಎಂದು ಊಹಿಸಲಾಗದು. ಇದು ಜುಡಾಯಿಸಂ ಅಥವಾ ಇಸ್ರೇಲ್ ಅಲ್ಲ. ಆ ಘೋಷಣೆಯು ಖಂಡಿತವಾಗಿಯೂ ನಮ್ಮ ಧ್ವಜವನ್ನು ಸಂಕೇತಿಸುವುದಿಲ್ಲ. ಈ ಜನರು ಇಸ್ರೇಲ್‌ನ ಜನತೆಗೆ ನಾಚಿಕೆಗೇಡು” ಎಂದು ಅವರು ಹೇಳಿದ್ದಾರೆ.

ಜೆರುಸಲೆಮ್‌‌ನಲ್ಲಿ ಮಂಗಳವಾರ ಕನಿಷ್ಠ 17 ಪ್ಯಾಲೆಸ್ತೀನಿಯನ್ನರನ್ನು ಭದ್ರತಾ ಪಡೆಗಳು ಬಂಧಿಸಿವೆ ಮತ್ತು ಘರ್ಷಣೆಯಲ್ಲಿ ಕನಿಷ್ಠ 33 ಮಂದಿ ಗಾಯಗೊಂಡಿದ್ದಾರೆ ಎಂದು ಅಲ್-ಜಝೀರಾ ವರದಿ ಮಾಡಿದೆ.

ಇದನ್ನೂ ಓದಿ: ಪ್ಯಾಲೆಸ್ತೀನ್ ಸಂಘರ್ಷ ಕೊನೆಗೊಳಿಸಲು ’ದ್ವಿರಾಷ್ಟ್ರ’ ಪರಿಹಾರವನ್ನು ಬೆಂಬಲಿಸಿದ ಭಾರತ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....