Homeಕರ್ನಾಟಕಪ್ಯಾಲೆಸ್ತೀನ್ ಪರ ಶಾಂತಿಯುತ ಪ್ರತಿಭಟನೆ | ಎಫ್‌ಐಆರ್‌ ದಾಖಲಿಸಿದ ಮಂಗಳೂರು ಪೊಲೀಸ್!

ಪ್ಯಾಲೆಸ್ತೀನ್ ಪರ ಶಾಂತಿಯುತ ಪ್ರತಿಭಟನೆ | ಎಫ್‌ಐಆರ್‌ ದಾಖಲಿಸಿದ ಮಂಗಳೂರು ಪೊಲೀಸ್!

- Advertisement -
- Advertisement -

ಮಂಗಳೂರಿನಲ್ಲಿ ಇತ್ತೀಚೆಗೆ ಪ್ಯಾಲೆಸ್ತೀನ್ ಪರ ಶಾಂತಿಯುತ ಪ್ರತಿಭಟನೆ ನಡೆಸಿದ ಎಡಪಕ್ಷಗಳು ಮತ್ತು ಸಮಾನ ಮನಸ್ಕ ಸಂಘಟನೆಯ ವಿರುದ್ಧ ಮಂಗಳೂರು ನಗರ ಪೊಲೀಸರು ಎಫ್‌ಐಆರ್‌ ದಾಖಲಿಸಿಕೊಂಡಿದ್ದು ತೀವ್ರ ವಿವಾದಕ್ಕೆ ಕಾರಣವಾಗಿದೆ. ಶಾಂತಿಯುತ ಪ್ರತಿಭಟನೆ ನಡೆಸಿದ ಬೆನ್ನಲ್ಲೆ ಮಂಗಳೂರು ದಕ್ಷಿಣ ಸಹಾಯಕ ಪೊಲೀಸ್ ಉಪ ನಿರೀಕ್ಷಕ ಪ್ರವೀಣ್ ಕೆ.  14 ಮಂದಿಯ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ.

ನವೆಂಬರ್‌ 4ರ ಸೋಮವಾರ ಪ್ಯಾಲೆಸ್ತೀನ್ ಮೇಲಿನ ದಾಳಿ ವಿರೋಧಿಸಿ ಮತ್ತು ಕದನ ವಿರಾಮಕ್ಕೆ ಒತ್ತಾಯಿಸಿ ಮಂಗಳೂರಿನಲ್ಲಿ ಎಡಪಕ್ಷಗಳ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಒಂದು ವಾರಕ್ಕೆ ಮುಂಚಿತವಾಗಿಯೆ ಪ್ರತಿಭಟನೆಯ ಮಾಹಿತಿ ನೀಡಿ, ಧ್ವನಿವರ್ಧಕ ಬಳಕೆಗೆ ಅನುಮತಿ ಕೋರಿ ಅರ್ಜಿ ಸಲ್ಲಿಸಲಾಗಿದ್ದರೂ, ಕಾನೂನು ಸುವ್ಯವಸ್ಥೆ ನೆಪವೊಡ್ಡಿ ಡಿಸಿಪಿ ಪ್ರತಿಭಟನೆಗೆ ಅನುಮತಿ ನಿರಾಕರಿಸಿ ಸಿಪಿಐಎಂ ಕಚೇರಿಗೆ ನೋಟಿಸ್ ಜಾರಿಗೊಳಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಆದರೆ, ಪ್ರತಿಭಟನೆ ರದ್ದುಗೊಳಿಸಲು ನಿರಾಕರಿಸಿದ್ದ ಎಡಪಕ್ಷಗಳ ನಾಯಕರು, ಧ್ವನಿ ವರ್ಧಕ ಬಳಸದೆ ಪ್ರತಿಭಟನೆ ನಡೆಸುವುದಾಗಿ ತಿಳಿಸಿದ್ದರು. ಅದಾಗ್ಯೂ, ‘ಅದಕ್ಕೂ ಅವಕಾಶ ಇಲ್ಲ, ಪ್ರತಿಭಟನೆ ನಡೆಸಿದರೆ ಕಾನೂನು ಕ್ರಮ ಕೈಗೊಳ್ಳುತ್ತೇವೆ’ ಎಂದು ಪೊಲೀಸ್ ಅಧಿಕಾರಿಗಳು ಎಚ್ಚರಿಸಿದ್ದರು. ಪೊಲೀಸರ ಈ ಎಚ್ಚರಿಕೆಗೆ ಮಣಿಯದ ಎಡಪಕ್ಷಗಳು ಪ್ರತಿಭಟನಾ ಸಭೆಯನ್ನು ತೀರ್ಮಾನದಂತೆ ನಡೆಸಿದ್ದರು.

ಅಷ್ಟೆ ಅಲ್ಲದೆ, ಪೊಲೀಸ್ ಇಲಾಖೆಯ ಈ ನಡೆಯನ್ನು, ಪ್ಯಾಲೆಸ್ತೀನ್ ನಾಗರಿಕರ ಮೇಲಿನ ಬರ್ಬರ ದಾಳಿಯ ವಿರುದ್ಧ ಪ್ರತಿಭಟಿಸುವ ಹಕ್ಕನ್ನು ನಿರಾಕರಿಸುವ ನಿಲುವನ್ನು ಪ್ರತಿಭಟನಾ ಸಭೆಯಲ್ಲಿ ಬಲವಾಗಿ ಖಂಡಿಸಿಸಲಾಗಿತ್ತು. ಪ್ರತಿಭಟನೆ ನಡೆಸಿದ ಬೆನ್ನಲ್ಲೇ ಮಂಗಳೂರು ದಕ್ಷಿಣ ಸಹಾಯಕ ಪೊಲೀಸ್ ಉಪ ನಿರೀಕ್ಷಕ ಪ್ರವೀಣ್ ಕೆ. 14 ಮಂದಿಯ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.

“ಅಕ್ರಮಕೂಟ ಕಟ್ಟಿಕೊಂಡು ಘೋಷಣೆಗಳನ್ನು ಕೂಗುತ್ತಾ ಪ್ರತಿಭಟನೆ ನಡೆಸಿದ್ದು, 11 ಮಂದಿಯ ಹೆಸರನ್ನು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ. ಎಲ್ಲರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ಅವರು ಉಲ್ಲೇಖಿಸಿದ್ದಾರೆ. ಎಫ್‌ಐಆರ್‌ನಲ್ಲಿ ಎಡಪಕ್ಷಗಳ ನಾಯಕರಾದ ನಾಗೇಶ್ ಕೋಟ್ಯಾನ್, ವಸಂತ ಆಚಾರಿ, ಯಾಧವ ಶೆಟ್ಟಿ, ಸಂತೋಷ್ ಬಜಾಲ್, ಸುಕುಮಾರ್ ರಾವ್, ಇಮ್ತಿಯಾಜ್, ಮುನೀರ್ ಕಾಟಿಪಳ್ಳ, ಸುನಿಲ್ ಕುಮಾರ್ ಬಜಾಲ್, ಯೋಗೀಶ್ ಜಪ್ಪಿನಮೊಗರು, ಹಯವದನ ರಾವ್, ಸೀತಾರಾಮ ಬೆರಿಂಜ ಹಾಗೂ ಇತರರ ಹೆಸರನ್ನು ಉಲ್ಲೇಖಿಸಲಾಗಿದೆ.

ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಸಿಪಿಐ(ಎಂ) ನಾಯಕರು, “ಒಂದು ಕಡೆ ಕಾಂಗ್ರೆಸ್ ಪಕ್ಷವು ಇಸ್ರೇಲ್ ನಡೆಯನ್ನು ಖಂಡಿಸಿ, ಹೇಳಿಕೆ ನೀಡುತ್ತಿದೆ. ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದೆ. ಪ್ಯಾಲೆಸ್ತೀನ್ ಪರವಾಗಿ ಶಾಂತಿಯುತವಾಗಿ ಪ್ರತಿಭಟನೆ ನಡೆಸಿದರೆ ಎಫ್‌ಐಆರ್ ದಾಖಲಾಗುತ್ತಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದೆಯೋ ಅಥವಾ ಬಿಜೆಪಿ ಸರ್ಕಾರ ಅಧಿಕಾರದಲ್ಲಿದೆಯೋ ಎಂಬ ಅನುಮಾನ ಕಾಡುತ್ತಿದೆ” ಎಂದು ಹೇಳಿದ್ದಾರೆ. ಮಂಗಳೂರು ಪೊಲೀಸರು ಕಾಂಗ್ರೆಸ್ ಸರ್ಕಾರದ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿಲ್ಲವೇ ಎಂದು ಜನರು ಮಾತನಾಡಿಕೊಳ್ಳುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಪ್ರಚೋದನಕಾರಿ ಭಾಷಣ: ನಟ-ರಾಜಕಾರಣಿ ಮಿಥುನ್ ಚಕ್ರವರ್ತಿ ವಿರುದ್ಧ ಪೊಲೀಸ್ ಕೇಸ್

ಪ್ರಚೋದನಕಾರಿ ಭಾಷಣ: ನಟ-ರಾಜಕಾರಣಿ ಮಿಥುನ್ ಚಕ್ರವರ್ತಿ ವಿರುದ್ಧ ಪೊಲೀಸ್ ಕೇಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...