Homeಅಂತರಾಷ್ಟ್ರೀಯಪ್ಯಾಲೆಸ್ಟೈನ್ v/s ಇಸ್ರೇಲ್ ಸಂಘರ್ಷ: ಸಾಮಾಜಿಕ ಜಾಲತಾಣಗಳಲ್ಲಿನ ಚರ್ಚೆ ಹೀಗಿದೆ..

ಪ್ಯಾಲೆಸ್ಟೈನ್ v/s ಇಸ್ರೇಲ್ ಸಂಘರ್ಷ: ಸಾಮಾಜಿಕ ಜಾಲತಾಣಗಳಲ್ಲಿನ ಚರ್ಚೆ ಹೀಗಿದೆ..

ಇಸ್ರೇಲ್ ಪ್ರಧಾನಿ ತಮ್ಮನ್ನು ಬೆಂಬಲಿಸಿದ ರಾಷ್ಟ್ರಗಳ ಧ್ವಜಗಳ ಚಿತ್ರಗಳನ್ನು ಟ್ವೀಟ್ ಮಾಡಿದ್ದಾರೆ. ಅದರಲ್ಲಿ ಭಾರತದ ಧ್ವಜ ಇಲ್ಲ....

- Advertisement -
- Advertisement -

ಇಸ್ರೇಲ್ ತನ್ನ ಮತ್ತೆ ಪ್ಯಾಲೆಸ್ಟೈನ್ ಅನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುತ್ತಿದೆ. ಭಾರತದ ಬಲಪಂಥೀಯರು ಇಸ್ರೇಲ್‌ನ ಕ್ರೂರತೆಯನ್ನು ಸಮರ್ಥಿಸಿಕೊಂಡು ಅದರ ಪರ ಹ್ಯಾಷ್‌ಟ್ಯಾಗ್ ಅಭಿಯಾನ ಮಾಡುತ್ತಾರೆ. (ಬಿಜೆಪಿ ಯುವ ವಿಭಾಗದ ಅಧ್ಯಕ್ಷ ತೇಜಸ್ವಿ ಸೂರ್ಯ ಇದರ ಮುಂಚೂಣಿಯಲ್ಲಿ ಇದ್ದಾರೆ). ಪ್ಯಾಲೆಸ್ಟೈನ್‌ ನಾಗರಿಕರ ಮೇಲಿನ ಕ್ರೂರ ದಾಳಿ, ಕಟ್ಟಡಗಳ ಧ್ವಂಸವನ್ನು ಸಂಭ್ರಮಿಸುತ್ತಿದ್ದಾರೆ.

ಅನಿವಾರ್ಯ ಎಂಬಂತೆ, ಸರ್ಕಾರ ಭಾರತದ ಪರಂಪರಾಗತ ಧೋರಣೆಯನ್ನು ಹೇಳಿ ಪ್ಯಾಲೆಸ್ಟೈನ್ ಪರ ನಿಲುವು ವ್ಯಕ್ತಪಡಿಸಿದೆ. ಇಸ್ರೇಲಿ ಆಡಳಿತ ತಮ್ಮ ಪರ ಹ್ಯಾಷ್‌ಟ್ಯಾಗ್ ಅಭಿಯಾನ ಮಾಡಿದವರಿಗೆ ಥ್ಯಾಂಕ್ಸ್ ಹೇಳುತ್ತದೆ. ಇಸ್ರೇಲ್ ಪ್ರಧಾನಿ ತಮ್ಮನ್ನು ಬೆಂಬಲಿಸಿದ ರಾಷ್ಟ್ರಗಳ ಧ್ವಜಗಳ ಚಿತ್ರಗಳನ್ನು ಟ್ವೀಟ್ ಮಾಡಿದ್ದಾರೆ. ಅದರಲ್ಲಿ ಭಾರತದ ಧ್ವಜ ಇಲ್ಲ. ಸದಾ ಇಸ್ರೇಲ್ ಪರವೇ ಅಮೆರಿಕ ಇದೆ. ಆದರೆ ಡೆಮೊಕ್ರಾಟ್ ಜೋ ಬೈಡನ್ ಇಸ್ರೇಲ್ ದಾಳಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.

ಯಹೂದಿಗಳ ಮೇಲೆ ಮಾರಣಹೋಮ ನಡೆಸಿದ ಜರ್ಮನಿಯ ಹಿಟ್ಲರ್ ಆರಾಧನೆ ಮಾಡುವ ಸಂಘ ಪರಿವಾರ, ಈಗ ಯಹೂದಿಗಳ ರಕ್ಷಣೆಯ ಹೆಸರಲ್ಲಿ ಇಸ್ರೇಲ್ ಆಡಳಿತ ಪ್ಯಾಲೆಸ್ಟಿಯನಿಯನ್ನರ ಮೇಲೆ ನಡೆಸುತ್ತಿರುವ ಭಯೋತ್ಪಾದಕ ಕೃತ್ಯದ ಪರ ನಿಲ್ಲುತ್ತದೆ.
ಈ ಸಾಂಕ್ರಾಮಿಕದ ಬಿಕ್ಕಟ್ಟಿನ ಸಂದರ್ಭದಲ್ಲೂ ದೇಶದ ಪರಿಸ್ಥಿತಿಗಿಂತ ಇಸ್ರೇಲ್ ರೀತಿಯ ಆಡಳಿತ ನಮ್ಮಲ್ಲಿಯೂ ಬರಬೇಕೆಂದು ಆಶಿಸುತ್ತಿದ್ದಾರೆ.

ಇಸ್ರೇಲ್ ಮತ್ತು ಗಾಜಾದಲ್ಲಿನ ಹಿಂಸಾಚಾರದ ಬಗ್ಗೆ ಅಮೆರಿಕ ಅಧ್ಯಕ್ಷ ಜೋ ಬಿಡನ್ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ಶನಿವಾರ ದೂರವಾಣಿ ಕರೆಯಲ್ಲಿ ಮಾತನಾಡಿ ಕಳವಳ ವ್ಯಕ್ತಪಡಿಸಿದ್ದಾರೆ. ಪ್ಯಾಲೇಸ್ಟಿನಿಯನ್ ಅಧ್ಯಕ್ಷ ಮಹಮ್ಮದ್ ಅಬ್ಬಾಸ್ ಜೊತೆಗೂ ಮಾತನಾಡಿ, ಎರಡು ರಾಷ್ಟ್ರದ ಸಿದ್ದಾಂತಕ್ಕೆ ಬದ್ಧರಾಗುವುದಾಗಿ ತಿಳಿಸಿದ್ದಾರೆ. ಹಮಾಸ್ “ರಾಕೆಟ್ ಹಾರಿಸುವುದನ್ನು ನಿಲ್ಲಿಸಬೇಕು” ಎಂದು ಪ್ರತ್ಯೇಕವಾಗಿ ಹೇಳಿದ್ದಾರೆ.

ಇದನ್ನೂ ಓದಿ; ಪ್ಯಾಲಿಸ್ಟೀನಿಯಲ್ಲಿ ನಡೆಯುತ್ತಿರುವುದೇನು? ನಿಮಗಿದು ತಿಳಿದಿರಬೇಕಾದ ವಿಷಯ

“ಹಮಾಸ್ ಮತ್ತು ಇತರ ಭಯೋತ್ಪಾದಕ ಗುಂಪುಗಳು” ನಡೆಸಿದ ರಾಕೆಟ್ ದಾಳಿಯಿಂದ ತಮ್ಮನ್ನು ರಕ್ಷಿಸಿಕೊಳ್ಳುವ ಇಸ್ರೇಲ್‌ನ ಹಕ್ಕಿಗೆ ಬಿಡೆನ್ ತಮ್ಮ “ಬಲವಾದ ಬೆಂಬಲ”ವನ್ನು ವ್ಯಕ್ತಪಡಿಸಿದ್ದಾರೆ ಎಂದು ವರದಿಯಾಗಿದೆ. ಆದರೆ ಅದೇ ಸಂದರ್ಭದಲ್ಲಿ ಎರಡೂ ಕಡೆಯ ಹಿಂಸಾಚಾರ ನಿಲ್ಲಬೇಕೆಂದು ಪ್ರತಿಪಾದಿಸಿದ್ದಾರೆ.

ಇಸ್ರೇಲ್ ನಡೆಸುತ್ತಿರುವ ಪತ್ರಿಕಾ ಕಚೇರಿಗಳು ಮತ್ತು ಪತ್ರಕರ್ತರ ಮೇಲಿನ ದಾಳಿಯನ್ನು ನಿಲ್ಲಿಸಬೇಕೆಂದು ಬೈಡನ್ ಒತ್ತಾಯಿಸಿದ್ದಾರೆ. ಅಸೋಷಿಯೆಟ್ ಪ್ರೆಸ್ ಮತ್ತು ಅಲ್‌ಜಜೀರಾ ಕಚೇರಿ ಮೇಲೆ ಬಾಂಬ್‌ ದಾಳಿ ನಡೆಸಲಾಗಿದೆ ಎನ್ನಲಾಗಿದೆ.

ಅಮೆರಿಕದ ಆರ್ಥಿಕತೆಯನ್ನು ಯಹೂದಿಗಳೇ ಬಹುಪಾಲು ನಿಯಂತ್ರಣ ಮಾಡುತ್ತಿರುಗವ ಕಾರಣಕ್ಕೆ ಅಮೆರಿಕ ಆಡಳಿತ ಇಸ್ರೇಲ್ ಪರವೇ ಇರಲಿದೆ. ತಮ್ಮ ತಾಯ್ನಾಡಿನ ರಕ್ಷಣೆಗೆ ಹೋರಾಡುವ ಎಲ್ಲ ಪ್ಯಾಲೆಸ್ಟಿಯನ್ ಸಮೂಹವನ್ನು ಬಹುಪಾಲು ಅಂತಾರಾಷ್ಟ್ರೀಯ ಮಾಧ್ಯಮಗಳು ಮತ್ತು ಈ ದೇಶದ ಮುಖ್ಯವಾಹಿನಿಗಳು ಟೆರರಿಸ್ಟ್ ಎಂದೇ ಹಣೆಪಟ್ಟಿ ಹಚ್ಚಲು ಯತ್ನಿಸುತ್ತ ಬಂದಿವೆ.

ಹಮಾಸ್ ಸಂಘಟನೆಯನ್ನು ಚೀನಾ, ರಷ್ಯಾ ಮತ್ತು ದಕ್ಷಿಣ ಕೊರಿಯಾಗಳೆಂದೂ ಟೆರರಿಸ್ಟ್ ಎಂದು ಪರಿಗಣಿಸಿಲ್ಲ. ಫ್ರಾನ್ಸ್ ಮತ್ತು ಇತರ ಕೆಲವು ಯುರೋಪಿಯನ್ ದೇಶಗಳು ಹಮಾಸ್‌ನ ಒಂದು ಅಂಗವನ್ನಷ್ಟೇ ಟೆರರಿಸ್ಟ್ ಎಂದು ಘೋಷಿಸಿವೆ.

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ: ಪ್ಯಾಲೆಸ್ತೀನ್ ಸಂಘರ್ಷ ಕೊನೆಗೊಳಿಸಲು ’ದ್ವಿರಾಷ್ಟ್ರ’ ಪರಿಹಾರವನ್ನು ಬೆಂಬಲಿಸಿದ ಭಾರತ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇಸ್ರೇಲ್ ಮತ್ತು ಪ್ಯಾಲಸ್ಟೀನ್ ವಿಲೀನವಾಗಿ, ಒಂದು ದೇಶವಾಗಿ ರೂಪುಗೊಂಡರೆ ಅನೇಕ ಅಮೂಲ್ಯ ಜೀವಿಗಳನ್ನು ಉಳಿಸಬಹುದು. ಇದಕ್ಕೆ ಮನುಷ್ಯ, ತನ್ನ ಮನಸ್ಸಿನಲ್ಲಿ ಇರುವ ದುರಾಸೆಯನ್ನು ಬಿಡಬೇಕು.

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...