Homeಅಂತರಾಷ್ಟ್ರೀಯಪ್ಯಾಲೆಸ್ಟೈನ್ v/s ಇಸ್ರೇಲ್ ಸಂಘರ್ಷ: ಸಾಮಾಜಿಕ ಜಾಲತಾಣಗಳಲ್ಲಿನ ಚರ್ಚೆ ಹೀಗಿದೆ..

ಪ್ಯಾಲೆಸ್ಟೈನ್ v/s ಇಸ್ರೇಲ್ ಸಂಘರ್ಷ: ಸಾಮಾಜಿಕ ಜಾಲತಾಣಗಳಲ್ಲಿನ ಚರ್ಚೆ ಹೀಗಿದೆ..

ಇಸ್ರೇಲ್ ಪ್ರಧಾನಿ ತಮ್ಮನ್ನು ಬೆಂಬಲಿಸಿದ ರಾಷ್ಟ್ರಗಳ ಧ್ವಜಗಳ ಚಿತ್ರಗಳನ್ನು ಟ್ವೀಟ್ ಮಾಡಿದ್ದಾರೆ. ಅದರಲ್ಲಿ ಭಾರತದ ಧ್ವಜ ಇಲ್ಲ....

- Advertisement -
- Advertisement -

ಇಸ್ರೇಲ್ ತನ್ನ ಮತ್ತೆ ಪ್ಯಾಲೆಸ್ಟೈನ್ ಅನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುತ್ತಿದೆ. ಭಾರತದ ಬಲಪಂಥೀಯರು ಇಸ್ರೇಲ್‌ನ ಕ್ರೂರತೆಯನ್ನು ಸಮರ್ಥಿಸಿಕೊಂಡು ಅದರ ಪರ ಹ್ಯಾಷ್‌ಟ್ಯಾಗ್ ಅಭಿಯಾನ ಮಾಡುತ್ತಾರೆ. (ಬಿಜೆಪಿ ಯುವ ವಿಭಾಗದ ಅಧ್ಯಕ್ಷ ತೇಜಸ್ವಿ ಸೂರ್ಯ ಇದರ ಮುಂಚೂಣಿಯಲ್ಲಿ ಇದ್ದಾರೆ). ಪ್ಯಾಲೆಸ್ಟೈನ್‌ ನಾಗರಿಕರ ಮೇಲಿನ ಕ್ರೂರ ದಾಳಿ, ಕಟ್ಟಡಗಳ ಧ್ವಂಸವನ್ನು ಸಂಭ್ರಮಿಸುತ್ತಿದ್ದಾರೆ.

ಅನಿವಾರ್ಯ ಎಂಬಂತೆ, ಸರ್ಕಾರ ಭಾರತದ ಪರಂಪರಾಗತ ಧೋರಣೆಯನ್ನು ಹೇಳಿ ಪ್ಯಾಲೆಸ್ಟೈನ್ ಪರ ನಿಲುವು ವ್ಯಕ್ತಪಡಿಸಿದೆ. ಇಸ್ರೇಲಿ ಆಡಳಿತ ತಮ್ಮ ಪರ ಹ್ಯಾಷ್‌ಟ್ಯಾಗ್ ಅಭಿಯಾನ ಮಾಡಿದವರಿಗೆ ಥ್ಯಾಂಕ್ಸ್ ಹೇಳುತ್ತದೆ. ಇಸ್ರೇಲ್ ಪ್ರಧಾನಿ ತಮ್ಮನ್ನು ಬೆಂಬಲಿಸಿದ ರಾಷ್ಟ್ರಗಳ ಧ್ವಜಗಳ ಚಿತ್ರಗಳನ್ನು ಟ್ವೀಟ್ ಮಾಡಿದ್ದಾರೆ. ಅದರಲ್ಲಿ ಭಾರತದ ಧ್ವಜ ಇಲ್ಲ. ಸದಾ ಇಸ್ರೇಲ್ ಪರವೇ ಅಮೆರಿಕ ಇದೆ. ಆದರೆ ಡೆಮೊಕ್ರಾಟ್ ಜೋ ಬೈಡನ್ ಇಸ್ರೇಲ್ ದಾಳಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.

ಯಹೂದಿಗಳ ಮೇಲೆ ಮಾರಣಹೋಮ ನಡೆಸಿದ ಜರ್ಮನಿಯ ಹಿಟ್ಲರ್ ಆರಾಧನೆ ಮಾಡುವ ಸಂಘ ಪರಿವಾರ, ಈಗ ಯಹೂದಿಗಳ ರಕ್ಷಣೆಯ ಹೆಸರಲ್ಲಿ ಇಸ್ರೇಲ್ ಆಡಳಿತ ಪ್ಯಾಲೆಸ್ಟಿಯನಿಯನ್ನರ ಮೇಲೆ ನಡೆಸುತ್ತಿರುವ ಭಯೋತ್ಪಾದಕ ಕೃತ್ಯದ ಪರ ನಿಲ್ಲುತ್ತದೆ.
ಈ ಸಾಂಕ್ರಾಮಿಕದ ಬಿಕ್ಕಟ್ಟಿನ ಸಂದರ್ಭದಲ್ಲೂ ದೇಶದ ಪರಿಸ್ಥಿತಿಗಿಂತ ಇಸ್ರೇಲ್ ರೀತಿಯ ಆಡಳಿತ ನಮ್ಮಲ್ಲಿಯೂ ಬರಬೇಕೆಂದು ಆಶಿಸುತ್ತಿದ್ದಾರೆ.

ಇಸ್ರೇಲ್ ಮತ್ತು ಗಾಜಾದಲ್ಲಿನ ಹಿಂಸಾಚಾರದ ಬಗ್ಗೆ ಅಮೆರಿಕ ಅಧ್ಯಕ್ಷ ಜೋ ಬಿಡನ್ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ಶನಿವಾರ ದೂರವಾಣಿ ಕರೆಯಲ್ಲಿ ಮಾತನಾಡಿ ಕಳವಳ ವ್ಯಕ್ತಪಡಿಸಿದ್ದಾರೆ. ಪ್ಯಾಲೇಸ್ಟಿನಿಯನ್ ಅಧ್ಯಕ್ಷ ಮಹಮ್ಮದ್ ಅಬ್ಬಾಸ್ ಜೊತೆಗೂ ಮಾತನಾಡಿ, ಎರಡು ರಾಷ್ಟ್ರದ ಸಿದ್ದಾಂತಕ್ಕೆ ಬದ್ಧರಾಗುವುದಾಗಿ ತಿಳಿಸಿದ್ದಾರೆ. ಹಮಾಸ್ “ರಾಕೆಟ್ ಹಾರಿಸುವುದನ್ನು ನಿಲ್ಲಿಸಬೇಕು” ಎಂದು ಪ್ರತ್ಯೇಕವಾಗಿ ಹೇಳಿದ್ದಾರೆ.

ಇದನ್ನೂ ಓದಿ; ಪ್ಯಾಲಿಸ್ಟೀನಿಯಲ್ಲಿ ನಡೆಯುತ್ತಿರುವುದೇನು? ನಿಮಗಿದು ತಿಳಿದಿರಬೇಕಾದ ವಿಷಯ

“ಹಮಾಸ್ ಮತ್ತು ಇತರ ಭಯೋತ್ಪಾದಕ ಗುಂಪುಗಳು” ನಡೆಸಿದ ರಾಕೆಟ್ ದಾಳಿಯಿಂದ ತಮ್ಮನ್ನು ರಕ್ಷಿಸಿಕೊಳ್ಳುವ ಇಸ್ರೇಲ್‌ನ ಹಕ್ಕಿಗೆ ಬಿಡೆನ್ ತಮ್ಮ “ಬಲವಾದ ಬೆಂಬಲ”ವನ್ನು ವ್ಯಕ್ತಪಡಿಸಿದ್ದಾರೆ ಎಂದು ವರದಿಯಾಗಿದೆ. ಆದರೆ ಅದೇ ಸಂದರ್ಭದಲ್ಲಿ ಎರಡೂ ಕಡೆಯ ಹಿಂಸಾಚಾರ ನಿಲ್ಲಬೇಕೆಂದು ಪ್ರತಿಪಾದಿಸಿದ್ದಾರೆ.

ಇಸ್ರೇಲ್ ನಡೆಸುತ್ತಿರುವ ಪತ್ರಿಕಾ ಕಚೇರಿಗಳು ಮತ್ತು ಪತ್ರಕರ್ತರ ಮೇಲಿನ ದಾಳಿಯನ್ನು ನಿಲ್ಲಿಸಬೇಕೆಂದು ಬೈಡನ್ ಒತ್ತಾಯಿಸಿದ್ದಾರೆ. ಅಸೋಷಿಯೆಟ್ ಪ್ರೆಸ್ ಮತ್ತು ಅಲ್‌ಜಜೀರಾ ಕಚೇರಿ ಮೇಲೆ ಬಾಂಬ್‌ ದಾಳಿ ನಡೆಸಲಾಗಿದೆ ಎನ್ನಲಾಗಿದೆ.

ಅಮೆರಿಕದ ಆರ್ಥಿಕತೆಯನ್ನು ಯಹೂದಿಗಳೇ ಬಹುಪಾಲು ನಿಯಂತ್ರಣ ಮಾಡುತ್ತಿರುಗವ ಕಾರಣಕ್ಕೆ ಅಮೆರಿಕ ಆಡಳಿತ ಇಸ್ರೇಲ್ ಪರವೇ ಇರಲಿದೆ. ತಮ್ಮ ತಾಯ್ನಾಡಿನ ರಕ್ಷಣೆಗೆ ಹೋರಾಡುವ ಎಲ್ಲ ಪ್ಯಾಲೆಸ್ಟಿಯನ್ ಸಮೂಹವನ್ನು ಬಹುಪಾಲು ಅಂತಾರಾಷ್ಟ್ರೀಯ ಮಾಧ್ಯಮಗಳು ಮತ್ತು ಈ ದೇಶದ ಮುಖ್ಯವಾಹಿನಿಗಳು ಟೆರರಿಸ್ಟ್ ಎಂದೇ ಹಣೆಪಟ್ಟಿ ಹಚ್ಚಲು ಯತ್ನಿಸುತ್ತ ಬಂದಿವೆ.

ಹಮಾಸ್ ಸಂಘಟನೆಯನ್ನು ಚೀನಾ, ರಷ್ಯಾ ಮತ್ತು ದಕ್ಷಿಣ ಕೊರಿಯಾಗಳೆಂದೂ ಟೆರರಿಸ್ಟ್ ಎಂದು ಪರಿಗಣಿಸಿಲ್ಲ. ಫ್ರಾನ್ಸ್ ಮತ್ತು ಇತರ ಕೆಲವು ಯುರೋಪಿಯನ್ ದೇಶಗಳು ಹಮಾಸ್‌ನ ಒಂದು ಅಂಗವನ್ನಷ್ಟೇ ಟೆರರಿಸ್ಟ್ ಎಂದು ಘೋಷಿಸಿವೆ.

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ: ಪ್ಯಾಲೆಸ್ತೀನ್ ಸಂಘರ್ಷ ಕೊನೆಗೊಳಿಸಲು ’ದ್ವಿರಾಷ್ಟ್ರ’ ಪರಿಹಾರವನ್ನು ಬೆಂಬಲಿಸಿದ ಭಾರತ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇಸ್ರೇಲ್ ಮತ್ತು ಪ್ಯಾಲಸ್ಟೀನ್ ವಿಲೀನವಾಗಿ, ಒಂದು ದೇಶವಾಗಿ ರೂಪುಗೊಂಡರೆ ಅನೇಕ ಅಮೂಲ್ಯ ಜೀವಿಗಳನ್ನು ಉಳಿಸಬಹುದು. ಇದಕ್ಕೆ ಮನುಷ್ಯ, ತನ್ನ ಮನಸ್ಸಿನಲ್ಲಿ ಇರುವ ದುರಾಸೆಯನ್ನು ಬಿಡಬೇಕು.

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...