Homeಅಂತರಾಷ್ಟ್ರೀಯಪ್ಯಾಲೆಸ್ಟೈನ್ v/s ಇಸ್ರೇಲ್ ಸಂಘರ್ಷ: ಸಾಮಾಜಿಕ ಜಾಲತಾಣಗಳಲ್ಲಿನ ಚರ್ಚೆ ಹೀಗಿದೆ..

ಪ್ಯಾಲೆಸ್ಟೈನ್ v/s ಇಸ್ರೇಲ್ ಸಂಘರ್ಷ: ಸಾಮಾಜಿಕ ಜಾಲತಾಣಗಳಲ್ಲಿನ ಚರ್ಚೆ ಹೀಗಿದೆ..

ಇಸ್ರೇಲ್ ಪ್ರಧಾನಿ ತಮ್ಮನ್ನು ಬೆಂಬಲಿಸಿದ ರಾಷ್ಟ್ರಗಳ ಧ್ವಜಗಳ ಚಿತ್ರಗಳನ್ನು ಟ್ವೀಟ್ ಮಾಡಿದ್ದಾರೆ. ಅದರಲ್ಲಿ ಭಾರತದ ಧ್ವಜ ಇಲ್ಲ....

- Advertisement -
- Advertisement -

ಇಸ್ರೇಲ್ ತನ್ನ ಮತ್ತೆ ಪ್ಯಾಲೆಸ್ಟೈನ್ ಅನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುತ್ತಿದೆ. ಭಾರತದ ಬಲಪಂಥೀಯರು ಇಸ್ರೇಲ್‌ನ ಕ್ರೂರತೆಯನ್ನು ಸಮರ್ಥಿಸಿಕೊಂಡು ಅದರ ಪರ ಹ್ಯಾಷ್‌ಟ್ಯಾಗ್ ಅಭಿಯಾನ ಮಾಡುತ್ತಾರೆ. (ಬಿಜೆಪಿ ಯುವ ವಿಭಾಗದ ಅಧ್ಯಕ್ಷ ತೇಜಸ್ವಿ ಸೂರ್ಯ ಇದರ ಮುಂಚೂಣಿಯಲ್ಲಿ ಇದ್ದಾರೆ). ಪ್ಯಾಲೆಸ್ಟೈನ್‌ ನಾಗರಿಕರ ಮೇಲಿನ ಕ್ರೂರ ದಾಳಿ, ಕಟ್ಟಡಗಳ ಧ್ವಂಸವನ್ನು ಸಂಭ್ರಮಿಸುತ್ತಿದ್ದಾರೆ.

ಅನಿವಾರ್ಯ ಎಂಬಂತೆ, ಸರ್ಕಾರ ಭಾರತದ ಪರಂಪರಾಗತ ಧೋರಣೆಯನ್ನು ಹೇಳಿ ಪ್ಯಾಲೆಸ್ಟೈನ್ ಪರ ನಿಲುವು ವ್ಯಕ್ತಪಡಿಸಿದೆ. ಇಸ್ರೇಲಿ ಆಡಳಿತ ತಮ್ಮ ಪರ ಹ್ಯಾಷ್‌ಟ್ಯಾಗ್ ಅಭಿಯಾನ ಮಾಡಿದವರಿಗೆ ಥ್ಯಾಂಕ್ಸ್ ಹೇಳುತ್ತದೆ. ಇಸ್ರೇಲ್ ಪ್ರಧಾನಿ ತಮ್ಮನ್ನು ಬೆಂಬಲಿಸಿದ ರಾಷ್ಟ್ರಗಳ ಧ್ವಜಗಳ ಚಿತ್ರಗಳನ್ನು ಟ್ವೀಟ್ ಮಾಡಿದ್ದಾರೆ. ಅದರಲ್ಲಿ ಭಾರತದ ಧ್ವಜ ಇಲ್ಲ. ಸದಾ ಇಸ್ರೇಲ್ ಪರವೇ ಅಮೆರಿಕ ಇದೆ. ಆದರೆ ಡೆಮೊಕ್ರಾಟ್ ಜೋ ಬೈಡನ್ ಇಸ್ರೇಲ್ ದಾಳಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.

ಯಹೂದಿಗಳ ಮೇಲೆ ಮಾರಣಹೋಮ ನಡೆಸಿದ ಜರ್ಮನಿಯ ಹಿಟ್ಲರ್ ಆರಾಧನೆ ಮಾಡುವ ಸಂಘ ಪರಿವಾರ, ಈಗ ಯಹೂದಿಗಳ ರಕ್ಷಣೆಯ ಹೆಸರಲ್ಲಿ ಇಸ್ರೇಲ್ ಆಡಳಿತ ಪ್ಯಾಲೆಸ್ಟಿಯನಿಯನ್ನರ ಮೇಲೆ ನಡೆಸುತ್ತಿರುವ ಭಯೋತ್ಪಾದಕ ಕೃತ್ಯದ ಪರ ನಿಲ್ಲುತ್ತದೆ.
ಈ ಸಾಂಕ್ರಾಮಿಕದ ಬಿಕ್ಕಟ್ಟಿನ ಸಂದರ್ಭದಲ್ಲೂ ದೇಶದ ಪರಿಸ್ಥಿತಿಗಿಂತ ಇಸ್ರೇಲ್ ರೀತಿಯ ಆಡಳಿತ ನಮ್ಮಲ್ಲಿಯೂ ಬರಬೇಕೆಂದು ಆಶಿಸುತ್ತಿದ್ದಾರೆ.

ಇಸ್ರೇಲ್ ಮತ್ತು ಗಾಜಾದಲ್ಲಿನ ಹಿಂಸಾಚಾರದ ಬಗ್ಗೆ ಅಮೆರಿಕ ಅಧ್ಯಕ್ಷ ಜೋ ಬಿಡನ್ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ಶನಿವಾರ ದೂರವಾಣಿ ಕರೆಯಲ್ಲಿ ಮಾತನಾಡಿ ಕಳವಳ ವ್ಯಕ್ತಪಡಿಸಿದ್ದಾರೆ. ಪ್ಯಾಲೇಸ್ಟಿನಿಯನ್ ಅಧ್ಯಕ್ಷ ಮಹಮ್ಮದ್ ಅಬ್ಬಾಸ್ ಜೊತೆಗೂ ಮಾತನಾಡಿ, ಎರಡು ರಾಷ್ಟ್ರದ ಸಿದ್ದಾಂತಕ್ಕೆ ಬದ್ಧರಾಗುವುದಾಗಿ ತಿಳಿಸಿದ್ದಾರೆ. ಹಮಾಸ್ “ರಾಕೆಟ್ ಹಾರಿಸುವುದನ್ನು ನಿಲ್ಲಿಸಬೇಕು” ಎಂದು ಪ್ರತ್ಯೇಕವಾಗಿ ಹೇಳಿದ್ದಾರೆ.

ಇದನ್ನೂ ಓದಿ; ಪ್ಯಾಲಿಸ್ಟೀನಿಯಲ್ಲಿ ನಡೆಯುತ್ತಿರುವುದೇನು? ನಿಮಗಿದು ತಿಳಿದಿರಬೇಕಾದ ವಿಷಯ

“ಹಮಾಸ್ ಮತ್ತು ಇತರ ಭಯೋತ್ಪಾದಕ ಗುಂಪುಗಳು” ನಡೆಸಿದ ರಾಕೆಟ್ ದಾಳಿಯಿಂದ ತಮ್ಮನ್ನು ರಕ್ಷಿಸಿಕೊಳ್ಳುವ ಇಸ್ರೇಲ್‌ನ ಹಕ್ಕಿಗೆ ಬಿಡೆನ್ ತಮ್ಮ “ಬಲವಾದ ಬೆಂಬಲ”ವನ್ನು ವ್ಯಕ್ತಪಡಿಸಿದ್ದಾರೆ ಎಂದು ವರದಿಯಾಗಿದೆ. ಆದರೆ ಅದೇ ಸಂದರ್ಭದಲ್ಲಿ ಎರಡೂ ಕಡೆಯ ಹಿಂಸಾಚಾರ ನಿಲ್ಲಬೇಕೆಂದು ಪ್ರತಿಪಾದಿಸಿದ್ದಾರೆ.

ಇಸ್ರೇಲ್ ನಡೆಸುತ್ತಿರುವ ಪತ್ರಿಕಾ ಕಚೇರಿಗಳು ಮತ್ತು ಪತ್ರಕರ್ತರ ಮೇಲಿನ ದಾಳಿಯನ್ನು ನಿಲ್ಲಿಸಬೇಕೆಂದು ಬೈಡನ್ ಒತ್ತಾಯಿಸಿದ್ದಾರೆ. ಅಸೋಷಿಯೆಟ್ ಪ್ರೆಸ್ ಮತ್ತು ಅಲ್‌ಜಜೀರಾ ಕಚೇರಿ ಮೇಲೆ ಬಾಂಬ್‌ ದಾಳಿ ನಡೆಸಲಾಗಿದೆ ಎನ್ನಲಾಗಿದೆ.

ಅಮೆರಿಕದ ಆರ್ಥಿಕತೆಯನ್ನು ಯಹೂದಿಗಳೇ ಬಹುಪಾಲು ನಿಯಂತ್ರಣ ಮಾಡುತ್ತಿರುಗವ ಕಾರಣಕ್ಕೆ ಅಮೆರಿಕ ಆಡಳಿತ ಇಸ್ರೇಲ್ ಪರವೇ ಇರಲಿದೆ. ತಮ್ಮ ತಾಯ್ನಾಡಿನ ರಕ್ಷಣೆಗೆ ಹೋರಾಡುವ ಎಲ್ಲ ಪ್ಯಾಲೆಸ್ಟಿಯನ್ ಸಮೂಹವನ್ನು ಬಹುಪಾಲು ಅಂತಾರಾಷ್ಟ್ರೀಯ ಮಾಧ್ಯಮಗಳು ಮತ್ತು ಈ ದೇಶದ ಮುಖ್ಯವಾಹಿನಿಗಳು ಟೆರರಿಸ್ಟ್ ಎಂದೇ ಹಣೆಪಟ್ಟಿ ಹಚ್ಚಲು ಯತ್ನಿಸುತ್ತ ಬಂದಿವೆ.

ಹಮಾಸ್ ಸಂಘಟನೆಯನ್ನು ಚೀನಾ, ರಷ್ಯಾ ಮತ್ತು ದಕ್ಷಿಣ ಕೊರಿಯಾಗಳೆಂದೂ ಟೆರರಿಸ್ಟ್ ಎಂದು ಪರಿಗಣಿಸಿಲ್ಲ. ಫ್ರಾನ್ಸ್ ಮತ್ತು ಇತರ ಕೆಲವು ಯುರೋಪಿಯನ್ ದೇಶಗಳು ಹಮಾಸ್‌ನ ಒಂದು ಅಂಗವನ್ನಷ್ಟೇ ಟೆರರಿಸ್ಟ್ ಎಂದು ಘೋಷಿಸಿವೆ.

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ: ಪ್ಯಾಲೆಸ್ತೀನ್ ಸಂಘರ್ಷ ಕೊನೆಗೊಳಿಸಲು ’ದ್ವಿರಾಷ್ಟ್ರ’ ಪರಿಹಾರವನ್ನು ಬೆಂಬಲಿಸಿದ ಭಾರತ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇಸ್ರೇಲ್ ಮತ್ತು ಪ್ಯಾಲಸ್ಟೀನ್ ವಿಲೀನವಾಗಿ, ಒಂದು ದೇಶವಾಗಿ ರೂಪುಗೊಂಡರೆ ಅನೇಕ ಅಮೂಲ್ಯ ಜೀವಿಗಳನ್ನು ಉಳಿಸಬಹುದು. ಇದಕ್ಕೆ ಮನುಷ್ಯ, ತನ್ನ ಮನಸ್ಸಿನಲ್ಲಿ ಇರುವ ದುರಾಸೆಯನ್ನು ಬಿಡಬೇಕು.

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...