Homeಅಂತರಾಷ್ಟ್ರೀಯಪ್ಯಾಲೆಸ್ಟೈನ್ v/s ಇಸ್ರೇಲ್ ಸಂಘರ್ಷ: ಸಾಮಾಜಿಕ ಜಾಲತಾಣಗಳಲ್ಲಿನ ಚರ್ಚೆ ಹೀಗಿದೆ..

ಪ್ಯಾಲೆಸ್ಟೈನ್ v/s ಇಸ್ರೇಲ್ ಸಂಘರ್ಷ: ಸಾಮಾಜಿಕ ಜಾಲತಾಣಗಳಲ್ಲಿನ ಚರ್ಚೆ ಹೀಗಿದೆ..

ಇಸ್ರೇಲ್ ಪ್ರಧಾನಿ ತಮ್ಮನ್ನು ಬೆಂಬಲಿಸಿದ ರಾಷ್ಟ್ರಗಳ ಧ್ವಜಗಳ ಚಿತ್ರಗಳನ್ನು ಟ್ವೀಟ್ ಮಾಡಿದ್ದಾರೆ. ಅದರಲ್ಲಿ ಭಾರತದ ಧ್ವಜ ಇಲ್ಲ....

- Advertisement -
- Advertisement -

ಇಸ್ರೇಲ್ ತನ್ನ ಮತ್ತೆ ಪ್ಯಾಲೆಸ್ಟೈನ್ ಅನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುತ್ತಿದೆ. ಭಾರತದ ಬಲಪಂಥೀಯರು ಇಸ್ರೇಲ್‌ನ ಕ್ರೂರತೆಯನ್ನು ಸಮರ್ಥಿಸಿಕೊಂಡು ಅದರ ಪರ ಹ್ಯಾಷ್‌ಟ್ಯಾಗ್ ಅಭಿಯಾನ ಮಾಡುತ್ತಾರೆ. (ಬಿಜೆಪಿ ಯುವ ವಿಭಾಗದ ಅಧ್ಯಕ್ಷ ತೇಜಸ್ವಿ ಸೂರ್ಯ ಇದರ ಮುಂಚೂಣಿಯಲ್ಲಿ ಇದ್ದಾರೆ). ಪ್ಯಾಲೆಸ್ಟೈನ್‌ ನಾಗರಿಕರ ಮೇಲಿನ ಕ್ರೂರ ದಾಳಿ, ಕಟ್ಟಡಗಳ ಧ್ವಂಸವನ್ನು ಸಂಭ್ರಮಿಸುತ್ತಿದ್ದಾರೆ.

ಅನಿವಾರ್ಯ ಎಂಬಂತೆ, ಸರ್ಕಾರ ಭಾರತದ ಪರಂಪರಾಗತ ಧೋರಣೆಯನ್ನು ಹೇಳಿ ಪ್ಯಾಲೆಸ್ಟೈನ್ ಪರ ನಿಲುವು ವ್ಯಕ್ತಪಡಿಸಿದೆ. ಇಸ್ರೇಲಿ ಆಡಳಿತ ತಮ್ಮ ಪರ ಹ್ಯಾಷ್‌ಟ್ಯಾಗ್ ಅಭಿಯಾನ ಮಾಡಿದವರಿಗೆ ಥ್ಯಾಂಕ್ಸ್ ಹೇಳುತ್ತದೆ. ಇಸ್ರೇಲ್ ಪ್ರಧಾನಿ ತಮ್ಮನ್ನು ಬೆಂಬಲಿಸಿದ ರಾಷ್ಟ್ರಗಳ ಧ್ವಜಗಳ ಚಿತ್ರಗಳನ್ನು ಟ್ವೀಟ್ ಮಾಡಿದ್ದಾರೆ. ಅದರಲ್ಲಿ ಭಾರತದ ಧ್ವಜ ಇಲ್ಲ. ಸದಾ ಇಸ್ರೇಲ್ ಪರವೇ ಅಮೆರಿಕ ಇದೆ. ಆದರೆ ಡೆಮೊಕ್ರಾಟ್ ಜೋ ಬೈಡನ್ ಇಸ್ರೇಲ್ ದಾಳಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.

ಯಹೂದಿಗಳ ಮೇಲೆ ಮಾರಣಹೋಮ ನಡೆಸಿದ ಜರ್ಮನಿಯ ಹಿಟ್ಲರ್ ಆರಾಧನೆ ಮಾಡುವ ಸಂಘ ಪರಿವಾರ, ಈಗ ಯಹೂದಿಗಳ ರಕ್ಷಣೆಯ ಹೆಸರಲ್ಲಿ ಇಸ್ರೇಲ್ ಆಡಳಿತ ಪ್ಯಾಲೆಸ್ಟಿಯನಿಯನ್ನರ ಮೇಲೆ ನಡೆಸುತ್ತಿರುವ ಭಯೋತ್ಪಾದಕ ಕೃತ್ಯದ ಪರ ನಿಲ್ಲುತ್ತದೆ.
ಈ ಸಾಂಕ್ರಾಮಿಕದ ಬಿಕ್ಕಟ್ಟಿನ ಸಂದರ್ಭದಲ್ಲೂ ದೇಶದ ಪರಿಸ್ಥಿತಿಗಿಂತ ಇಸ್ರೇಲ್ ರೀತಿಯ ಆಡಳಿತ ನಮ್ಮಲ್ಲಿಯೂ ಬರಬೇಕೆಂದು ಆಶಿಸುತ್ತಿದ್ದಾರೆ.

ಇಸ್ರೇಲ್ ಮತ್ತು ಗಾಜಾದಲ್ಲಿನ ಹಿಂಸಾಚಾರದ ಬಗ್ಗೆ ಅಮೆರಿಕ ಅಧ್ಯಕ್ಷ ಜೋ ಬಿಡನ್ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ಶನಿವಾರ ದೂರವಾಣಿ ಕರೆಯಲ್ಲಿ ಮಾತನಾಡಿ ಕಳವಳ ವ್ಯಕ್ತಪಡಿಸಿದ್ದಾರೆ. ಪ್ಯಾಲೇಸ್ಟಿನಿಯನ್ ಅಧ್ಯಕ್ಷ ಮಹಮ್ಮದ್ ಅಬ್ಬಾಸ್ ಜೊತೆಗೂ ಮಾತನಾಡಿ, ಎರಡು ರಾಷ್ಟ್ರದ ಸಿದ್ದಾಂತಕ್ಕೆ ಬದ್ಧರಾಗುವುದಾಗಿ ತಿಳಿಸಿದ್ದಾರೆ. ಹಮಾಸ್ “ರಾಕೆಟ್ ಹಾರಿಸುವುದನ್ನು ನಿಲ್ಲಿಸಬೇಕು” ಎಂದು ಪ್ರತ್ಯೇಕವಾಗಿ ಹೇಳಿದ್ದಾರೆ.

ಇದನ್ನೂ ಓದಿ; ಪ್ಯಾಲಿಸ್ಟೀನಿಯಲ್ಲಿ ನಡೆಯುತ್ತಿರುವುದೇನು? ನಿಮಗಿದು ತಿಳಿದಿರಬೇಕಾದ ವಿಷಯ

“ಹಮಾಸ್ ಮತ್ತು ಇತರ ಭಯೋತ್ಪಾದಕ ಗುಂಪುಗಳು” ನಡೆಸಿದ ರಾಕೆಟ್ ದಾಳಿಯಿಂದ ತಮ್ಮನ್ನು ರಕ್ಷಿಸಿಕೊಳ್ಳುವ ಇಸ್ರೇಲ್‌ನ ಹಕ್ಕಿಗೆ ಬಿಡೆನ್ ತಮ್ಮ “ಬಲವಾದ ಬೆಂಬಲ”ವನ್ನು ವ್ಯಕ್ತಪಡಿಸಿದ್ದಾರೆ ಎಂದು ವರದಿಯಾಗಿದೆ. ಆದರೆ ಅದೇ ಸಂದರ್ಭದಲ್ಲಿ ಎರಡೂ ಕಡೆಯ ಹಿಂಸಾಚಾರ ನಿಲ್ಲಬೇಕೆಂದು ಪ್ರತಿಪಾದಿಸಿದ್ದಾರೆ.

ಇಸ್ರೇಲ್ ನಡೆಸುತ್ತಿರುವ ಪತ್ರಿಕಾ ಕಚೇರಿಗಳು ಮತ್ತು ಪತ್ರಕರ್ತರ ಮೇಲಿನ ದಾಳಿಯನ್ನು ನಿಲ್ಲಿಸಬೇಕೆಂದು ಬೈಡನ್ ಒತ್ತಾಯಿಸಿದ್ದಾರೆ. ಅಸೋಷಿಯೆಟ್ ಪ್ರೆಸ್ ಮತ್ತು ಅಲ್‌ಜಜೀರಾ ಕಚೇರಿ ಮೇಲೆ ಬಾಂಬ್‌ ದಾಳಿ ನಡೆಸಲಾಗಿದೆ ಎನ್ನಲಾಗಿದೆ.

ಅಮೆರಿಕದ ಆರ್ಥಿಕತೆಯನ್ನು ಯಹೂದಿಗಳೇ ಬಹುಪಾಲು ನಿಯಂತ್ರಣ ಮಾಡುತ್ತಿರುಗವ ಕಾರಣಕ್ಕೆ ಅಮೆರಿಕ ಆಡಳಿತ ಇಸ್ರೇಲ್ ಪರವೇ ಇರಲಿದೆ. ತಮ್ಮ ತಾಯ್ನಾಡಿನ ರಕ್ಷಣೆಗೆ ಹೋರಾಡುವ ಎಲ್ಲ ಪ್ಯಾಲೆಸ್ಟಿಯನ್ ಸಮೂಹವನ್ನು ಬಹುಪಾಲು ಅಂತಾರಾಷ್ಟ್ರೀಯ ಮಾಧ್ಯಮಗಳು ಮತ್ತು ಈ ದೇಶದ ಮುಖ್ಯವಾಹಿನಿಗಳು ಟೆರರಿಸ್ಟ್ ಎಂದೇ ಹಣೆಪಟ್ಟಿ ಹಚ್ಚಲು ಯತ್ನಿಸುತ್ತ ಬಂದಿವೆ.

ಹಮಾಸ್ ಸಂಘಟನೆಯನ್ನು ಚೀನಾ, ರಷ್ಯಾ ಮತ್ತು ದಕ್ಷಿಣ ಕೊರಿಯಾಗಳೆಂದೂ ಟೆರರಿಸ್ಟ್ ಎಂದು ಪರಿಗಣಿಸಿಲ್ಲ. ಫ್ರಾನ್ಸ್ ಮತ್ತು ಇತರ ಕೆಲವು ಯುರೋಪಿಯನ್ ದೇಶಗಳು ಹಮಾಸ್‌ನ ಒಂದು ಅಂಗವನ್ನಷ್ಟೇ ಟೆರರಿಸ್ಟ್ ಎಂದು ಘೋಷಿಸಿವೆ.

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ: ಪ್ಯಾಲೆಸ್ತೀನ್ ಸಂಘರ್ಷ ಕೊನೆಗೊಳಿಸಲು ’ದ್ವಿರಾಷ್ಟ್ರ’ ಪರಿಹಾರವನ್ನು ಬೆಂಬಲಿಸಿದ ಭಾರತ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇಸ್ರೇಲ್ ಮತ್ತು ಪ್ಯಾಲಸ್ಟೀನ್ ವಿಲೀನವಾಗಿ, ಒಂದು ದೇಶವಾಗಿ ರೂಪುಗೊಂಡರೆ ಅನೇಕ ಅಮೂಲ್ಯ ಜೀವಿಗಳನ್ನು ಉಳಿಸಬಹುದು. ಇದಕ್ಕೆ ಮನುಷ್ಯ, ತನ್ನ ಮನಸ್ಸಿನಲ್ಲಿ ಇರುವ ದುರಾಸೆಯನ್ನು ಬಿಡಬೇಕು.

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...