Homeಅಂತರಾಷ್ಟ್ರೀಯಪ್ಯಾಲೆಸ್ಟೈನ್ v/s ಇಸ್ರೇಲ್ ಸಂಘರ್ಷ: ಸಾಮಾಜಿಕ ಜಾಲತಾಣಗಳಲ್ಲಿನ ಚರ್ಚೆ ಹೀಗಿದೆ..

ಪ್ಯಾಲೆಸ್ಟೈನ್ v/s ಇಸ್ರೇಲ್ ಸಂಘರ್ಷ: ಸಾಮಾಜಿಕ ಜಾಲತಾಣಗಳಲ್ಲಿನ ಚರ್ಚೆ ಹೀಗಿದೆ..

ಇಸ್ರೇಲ್ ಪ್ರಧಾನಿ ತಮ್ಮನ್ನು ಬೆಂಬಲಿಸಿದ ರಾಷ್ಟ್ರಗಳ ಧ್ವಜಗಳ ಚಿತ್ರಗಳನ್ನು ಟ್ವೀಟ್ ಮಾಡಿದ್ದಾರೆ. ಅದರಲ್ಲಿ ಭಾರತದ ಧ್ವಜ ಇಲ್ಲ....

- Advertisement -
- Advertisement -

ಇಸ್ರೇಲ್ ತನ್ನ ಮತ್ತೆ ಪ್ಯಾಲೆಸ್ಟೈನ್ ಅನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುತ್ತಿದೆ. ಭಾರತದ ಬಲಪಂಥೀಯರು ಇಸ್ರೇಲ್‌ನ ಕ್ರೂರತೆಯನ್ನು ಸಮರ್ಥಿಸಿಕೊಂಡು ಅದರ ಪರ ಹ್ಯಾಷ್‌ಟ್ಯಾಗ್ ಅಭಿಯಾನ ಮಾಡುತ್ತಾರೆ. (ಬಿಜೆಪಿ ಯುವ ವಿಭಾಗದ ಅಧ್ಯಕ್ಷ ತೇಜಸ್ವಿ ಸೂರ್ಯ ಇದರ ಮುಂಚೂಣಿಯಲ್ಲಿ ಇದ್ದಾರೆ). ಪ್ಯಾಲೆಸ್ಟೈನ್‌ ನಾಗರಿಕರ ಮೇಲಿನ ಕ್ರೂರ ದಾಳಿ, ಕಟ್ಟಡಗಳ ಧ್ವಂಸವನ್ನು ಸಂಭ್ರಮಿಸುತ್ತಿದ್ದಾರೆ.

ಅನಿವಾರ್ಯ ಎಂಬಂತೆ, ಸರ್ಕಾರ ಭಾರತದ ಪರಂಪರಾಗತ ಧೋರಣೆಯನ್ನು ಹೇಳಿ ಪ್ಯಾಲೆಸ್ಟೈನ್ ಪರ ನಿಲುವು ವ್ಯಕ್ತಪಡಿಸಿದೆ. ಇಸ್ರೇಲಿ ಆಡಳಿತ ತಮ್ಮ ಪರ ಹ್ಯಾಷ್‌ಟ್ಯಾಗ್ ಅಭಿಯಾನ ಮಾಡಿದವರಿಗೆ ಥ್ಯಾಂಕ್ಸ್ ಹೇಳುತ್ತದೆ. ಇಸ್ರೇಲ್ ಪ್ರಧಾನಿ ತಮ್ಮನ್ನು ಬೆಂಬಲಿಸಿದ ರಾಷ್ಟ್ರಗಳ ಧ್ವಜಗಳ ಚಿತ್ರಗಳನ್ನು ಟ್ವೀಟ್ ಮಾಡಿದ್ದಾರೆ. ಅದರಲ್ಲಿ ಭಾರತದ ಧ್ವಜ ಇಲ್ಲ. ಸದಾ ಇಸ್ರೇಲ್ ಪರವೇ ಅಮೆರಿಕ ಇದೆ. ಆದರೆ ಡೆಮೊಕ್ರಾಟ್ ಜೋ ಬೈಡನ್ ಇಸ್ರೇಲ್ ದಾಳಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.

ಯಹೂದಿಗಳ ಮೇಲೆ ಮಾರಣಹೋಮ ನಡೆಸಿದ ಜರ್ಮನಿಯ ಹಿಟ್ಲರ್ ಆರಾಧನೆ ಮಾಡುವ ಸಂಘ ಪರಿವಾರ, ಈಗ ಯಹೂದಿಗಳ ರಕ್ಷಣೆಯ ಹೆಸರಲ್ಲಿ ಇಸ್ರೇಲ್ ಆಡಳಿತ ಪ್ಯಾಲೆಸ್ಟಿಯನಿಯನ್ನರ ಮೇಲೆ ನಡೆಸುತ್ತಿರುವ ಭಯೋತ್ಪಾದಕ ಕೃತ್ಯದ ಪರ ನಿಲ್ಲುತ್ತದೆ.
ಈ ಸಾಂಕ್ರಾಮಿಕದ ಬಿಕ್ಕಟ್ಟಿನ ಸಂದರ್ಭದಲ್ಲೂ ದೇಶದ ಪರಿಸ್ಥಿತಿಗಿಂತ ಇಸ್ರೇಲ್ ರೀತಿಯ ಆಡಳಿತ ನಮ್ಮಲ್ಲಿಯೂ ಬರಬೇಕೆಂದು ಆಶಿಸುತ್ತಿದ್ದಾರೆ.

ಇಸ್ರೇಲ್ ಮತ್ತು ಗಾಜಾದಲ್ಲಿನ ಹಿಂಸಾಚಾರದ ಬಗ್ಗೆ ಅಮೆರಿಕ ಅಧ್ಯಕ್ಷ ಜೋ ಬಿಡನ್ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ಶನಿವಾರ ದೂರವಾಣಿ ಕರೆಯಲ್ಲಿ ಮಾತನಾಡಿ ಕಳವಳ ವ್ಯಕ್ತಪಡಿಸಿದ್ದಾರೆ. ಪ್ಯಾಲೇಸ್ಟಿನಿಯನ್ ಅಧ್ಯಕ್ಷ ಮಹಮ್ಮದ್ ಅಬ್ಬಾಸ್ ಜೊತೆಗೂ ಮಾತನಾಡಿ, ಎರಡು ರಾಷ್ಟ್ರದ ಸಿದ್ದಾಂತಕ್ಕೆ ಬದ್ಧರಾಗುವುದಾಗಿ ತಿಳಿಸಿದ್ದಾರೆ. ಹಮಾಸ್ “ರಾಕೆಟ್ ಹಾರಿಸುವುದನ್ನು ನಿಲ್ಲಿಸಬೇಕು” ಎಂದು ಪ್ರತ್ಯೇಕವಾಗಿ ಹೇಳಿದ್ದಾರೆ.

ಇದನ್ನೂ ಓದಿ; ಪ್ಯಾಲಿಸ್ಟೀನಿಯಲ್ಲಿ ನಡೆಯುತ್ತಿರುವುದೇನು? ನಿಮಗಿದು ತಿಳಿದಿರಬೇಕಾದ ವಿಷಯ

“ಹಮಾಸ್ ಮತ್ತು ಇತರ ಭಯೋತ್ಪಾದಕ ಗುಂಪುಗಳು” ನಡೆಸಿದ ರಾಕೆಟ್ ದಾಳಿಯಿಂದ ತಮ್ಮನ್ನು ರಕ್ಷಿಸಿಕೊಳ್ಳುವ ಇಸ್ರೇಲ್‌ನ ಹಕ್ಕಿಗೆ ಬಿಡೆನ್ ತಮ್ಮ “ಬಲವಾದ ಬೆಂಬಲ”ವನ್ನು ವ್ಯಕ್ತಪಡಿಸಿದ್ದಾರೆ ಎಂದು ವರದಿಯಾಗಿದೆ. ಆದರೆ ಅದೇ ಸಂದರ್ಭದಲ್ಲಿ ಎರಡೂ ಕಡೆಯ ಹಿಂಸಾಚಾರ ನಿಲ್ಲಬೇಕೆಂದು ಪ್ರತಿಪಾದಿಸಿದ್ದಾರೆ.

ಇಸ್ರೇಲ್ ನಡೆಸುತ್ತಿರುವ ಪತ್ರಿಕಾ ಕಚೇರಿಗಳು ಮತ್ತು ಪತ್ರಕರ್ತರ ಮೇಲಿನ ದಾಳಿಯನ್ನು ನಿಲ್ಲಿಸಬೇಕೆಂದು ಬೈಡನ್ ಒತ್ತಾಯಿಸಿದ್ದಾರೆ. ಅಸೋಷಿಯೆಟ್ ಪ್ರೆಸ್ ಮತ್ತು ಅಲ್‌ಜಜೀರಾ ಕಚೇರಿ ಮೇಲೆ ಬಾಂಬ್‌ ದಾಳಿ ನಡೆಸಲಾಗಿದೆ ಎನ್ನಲಾಗಿದೆ.

ಅಮೆರಿಕದ ಆರ್ಥಿಕತೆಯನ್ನು ಯಹೂದಿಗಳೇ ಬಹುಪಾಲು ನಿಯಂತ್ರಣ ಮಾಡುತ್ತಿರುಗವ ಕಾರಣಕ್ಕೆ ಅಮೆರಿಕ ಆಡಳಿತ ಇಸ್ರೇಲ್ ಪರವೇ ಇರಲಿದೆ. ತಮ್ಮ ತಾಯ್ನಾಡಿನ ರಕ್ಷಣೆಗೆ ಹೋರಾಡುವ ಎಲ್ಲ ಪ್ಯಾಲೆಸ್ಟಿಯನ್ ಸಮೂಹವನ್ನು ಬಹುಪಾಲು ಅಂತಾರಾಷ್ಟ್ರೀಯ ಮಾಧ್ಯಮಗಳು ಮತ್ತು ಈ ದೇಶದ ಮುಖ್ಯವಾಹಿನಿಗಳು ಟೆರರಿಸ್ಟ್ ಎಂದೇ ಹಣೆಪಟ್ಟಿ ಹಚ್ಚಲು ಯತ್ನಿಸುತ್ತ ಬಂದಿವೆ.

ಹಮಾಸ್ ಸಂಘಟನೆಯನ್ನು ಚೀನಾ, ರಷ್ಯಾ ಮತ್ತು ದಕ್ಷಿಣ ಕೊರಿಯಾಗಳೆಂದೂ ಟೆರರಿಸ್ಟ್ ಎಂದು ಪರಿಗಣಿಸಿಲ್ಲ. ಫ್ರಾನ್ಸ್ ಮತ್ತು ಇತರ ಕೆಲವು ಯುರೋಪಿಯನ್ ದೇಶಗಳು ಹಮಾಸ್‌ನ ಒಂದು ಅಂಗವನ್ನಷ್ಟೇ ಟೆರರಿಸ್ಟ್ ಎಂದು ಘೋಷಿಸಿವೆ.

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ: ಪ್ಯಾಲೆಸ್ತೀನ್ ಸಂಘರ್ಷ ಕೊನೆಗೊಳಿಸಲು ’ದ್ವಿರಾಷ್ಟ್ರ’ ಪರಿಹಾರವನ್ನು ಬೆಂಬಲಿಸಿದ ಭಾರತ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇಸ್ರೇಲ್ ಮತ್ತು ಪ್ಯಾಲಸ್ಟೀನ್ ವಿಲೀನವಾಗಿ, ಒಂದು ದೇಶವಾಗಿ ರೂಪುಗೊಂಡರೆ ಅನೇಕ ಅಮೂಲ್ಯ ಜೀವಿಗಳನ್ನು ಉಳಿಸಬಹುದು. ಇದಕ್ಕೆ ಮನುಷ್ಯ, ತನ್ನ ಮನಸ್ಸಿನಲ್ಲಿ ಇರುವ ದುರಾಸೆಯನ್ನು ಬಿಡಬೇಕು.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...