Homeಅಂತರಾಷ್ಟ್ರೀಯಪ್ಯಾಲೆಸ್ಟೈನ್ v/s ಇಸ್ರೇಲ್ ಸಂಘರ್ಷ: ಸಾಮಾಜಿಕ ಜಾಲತಾಣಗಳಲ್ಲಿನ ಚರ್ಚೆ ಹೀಗಿದೆ..

ಪ್ಯಾಲೆಸ್ಟೈನ್ v/s ಇಸ್ರೇಲ್ ಸಂಘರ್ಷ: ಸಾಮಾಜಿಕ ಜಾಲತಾಣಗಳಲ್ಲಿನ ಚರ್ಚೆ ಹೀಗಿದೆ..

ಇಸ್ರೇಲ್ ಪ್ರಧಾನಿ ತಮ್ಮನ್ನು ಬೆಂಬಲಿಸಿದ ರಾಷ್ಟ್ರಗಳ ಧ್ವಜಗಳ ಚಿತ್ರಗಳನ್ನು ಟ್ವೀಟ್ ಮಾಡಿದ್ದಾರೆ. ಅದರಲ್ಲಿ ಭಾರತದ ಧ್ವಜ ಇಲ್ಲ....

- Advertisement -
- Advertisement -

ಇಸ್ರೇಲ್ ತನ್ನ ಮತ್ತೆ ಪ್ಯಾಲೆಸ್ಟೈನ್ ಅನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುತ್ತಿದೆ. ಭಾರತದ ಬಲಪಂಥೀಯರು ಇಸ್ರೇಲ್‌ನ ಕ್ರೂರತೆಯನ್ನು ಸಮರ್ಥಿಸಿಕೊಂಡು ಅದರ ಪರ ಹ್ಯಾಷ್‌ಟ್ಯಾಗ್ ಅಭಿಯಾನ ಮಾಡುತ್ತಾರೆ. (ಬಿಜೆಪಿ ಯುವ ವಿಭಾಗದ ಅಧ್ಯಕ್ಷ ತೇಜಸ್ವಿ ಸೂರ್ಯ ಇದರ ಮುಂಚೂಣಿಯಲ್ಲಿ ಇದ್ದಾರೆ). ಪ್ಯಾಲೆಸ್ಟೈನ್‌ ನಾಗರಿಕರ ಮೇಲಿನ ಕ್ರೂರ ದಾಳಿ, ಕಟ್ಟಡಗಳ ಧ್ವಂಸವನ್ನು ಸಂಭ್ರಮಿಸುತ್ತಿದ್ದಾರೆ.

ಅನಿವಾರ್ಯ ಎಂಬಂತೆ, ಸರ್ಕಾರ ಭಾರತದ ಪರಂಪರಾಗತ ಧೋರಣೆಯನ್ನು ಹೇಳಿ ಪ್ಯಾಲೆಸ್ಟೈನ್ ಪರ ನಿಲುವು ವ್ಯಕ್ತಪಡಿಸಿದೆ. ಇಸ್ರೇಲಿ ಆಡಳಿತ ತಮ್ಮ ಪರ ಹ್ಯಾಷ್‌ಟ್ಯಾಗ್ ಅಭಿಯಾನ ಮಾಡಿದವರಿಗೆ ಥ್ಯಾಂಕ್ಸ್ ಹೇಳುತ್ತದೆ. ಇಸ್ರೇಲ್ ಪ್ರಧಾನಿ ತಮ್ಮನ್ನು ಬೆಂಬಲಿಸಿದ ರಾಷ್ಟ್ರಗಳ ಧ್ವಜಗಳ ಚಿತ್ರಗಳನ್ನು ಟ್ವೀಟ್ ಮಾಡಿದ್ದಾರೆ. ಅದರಲ್ಲಿ ಭಾರತದ ಧ್ವಜ ಇಲ್ಲ. ಸದಾ ಇಸ್ರೇಲ್ ಪರವೇ ಅಮೆರಿಕ ಇದೆ. ಆದರೆ ಡೆಮೊಕ್ರಾಟ್ ಜೋ ಬೈಡನ್ ಇಸ್ರೇಲ್ ದಾಳಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.

ಯಹೂದಿಗಳ ಮೇಲೆ ಮಾರಣಹೋಮ ನಡೆಸಿದ ಜರ್ಮನಿಯ ಹಿಟ್ಲರ್ ಆರಾಧನೆ ಮಾಡುವ ಸಂಘ ಪರಿವಾರ, ಈಗ ಯಹೂದಿಗಳ ರಕ್ಷಣೆಯ ಹೆಸರಲ್ಲಿ ಇಸ್ರೇಲ್ ಆಡಳಿತ ಪ್ಯಾಲೆಸ್ಟಿಯನಿಯನ್ನರ ಮೇಲೆ ನಡೆಸುತ್ತಿರುವ ಭಯೋತ್ಪಾದಕ ಕೃತ್ಯದ ಪರ ನಿಲ್ಲುತ್ತದೆ.
ಈ ಸಾಂಕ್ರಾಮಿಕದ ಬಿಕ್ಕಟ್ಟಿನ ಸಂದರ್ಭದಲ್ಲೂ ದೇಶದ ಪರಿಸ್ಥಿತಿಗಿಂತ ಇಸ್ರೇಲ್ ರೀತಿಯ ಆಡಳಿತ ನಮ್ಮಲ್ಲಿಯೂ ಬರಬೇಕೆಂದು ಆಶಿಸುತ್ತಿದ್ದಾರೆ.

ಇಸ್ರೇಲ್ ಮತ್ತು ಗಾಜಾದಲ್ಲಿನ ಹಿಂಸಾಚಾರದ ಬಗ್ಗೆ ಅಮೆರಿಕ ಅಧ್ಯಕ್ಷ ಜೋ ಬಿಡನ್ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ಶನಿವಾರ ದೂರವಾಣಿ ಕರೆಯಲ್ಲಿ ಮಾತನಾಡಿ ಕಳವಳ ವ್ಯಕ್ತಪಡಿಸಿದ್ದಾರೆ. ಪ್ಯಾಲೇಸ್ಟಿನಿಯನ್ ಅಧ್ಯಕ್ಷ ಮಹಮ್ಮದ್ ಅಬ್ಬಾಸ್ ಜೊತೆಗೂ ಮಾತನಾಡಿ, ಎರಡು ರಾಷ್ಟ್ರದ ಸಿದ್ದಾಂತಕ್ಕೆ ಬದ್ಧರಾಗುವುದಾಗಿ ತಿಳಿಸಿದ್ದಾರೆ. ಹಮಾಸ್ “ರಾಕೆಟ್ ಹಾರಿಸುವುದನ್ನು ನಿಲ್ಲಿಸಬೇಕು” ಎಂದು ಪ್ರತ್ಯೇಕವಾಗಿ ಹೇಳಿದ್ದಾರೆ.

ಇದನ್ನೂ ಓದಿ; ಪ್ಯಾಲಿಸ್ಟೀನಿಯಲ್ಲಿ ನಡೆಯುತ್ತಿರುವುದೇನು? ನಿಮಗಿದು ತಿಳಿದಿರಬೇಕಾದ ವಿಷಯ

“ಹಮಾಸ್ ಮತ್ತು ಇತರ ಭಯೋತ್ಪಾದಕ ಗುಂಪುಗಳು” ನಡೆಸಿದ ರಾಕೆಟ್ ದಾಳಿಯಿಂದ ತಮ್ಮನ್ನು ರಕ್ಷಿಸಿಕೊಳ್ಳುವ ಇಸ್ರೇಲ್‌ನ ಹಕ್ಕಿಗೆ ಬಿಡೆನ್ ತಮ್ಮ “ಬಲವಾದ ಬೆಂಬಲ”ವನ್ನು ವ್ಯಕ್ತಪಡಿಸಿದ್ದಾರೆ ಎಂದು ವರದಿಯಾಗಿದೆ. ಆದರೆ ಅದೇ ಸಂದರ್ಭದಲ್ಲಿ ಎರಡೂ ಕಡೆಯ ಹಿಂಸಾಚಾರ ನಿಲ್ಲಬೇಕೆಂದು ಪ್ರತಿಪಾದಿಸಿದ್ದಾರೆ.

ಇಸ್ರೇಲ್ ನಡೆಸುತ್ತಿರುವ ಪತ್ರಿಕಾ ಕಚೇರಿಗಳು ಮತ್ತು ಪತ್ರಕರ್ತರ ಮೇಲಿನ ದಾಳಿಯನ್ನು ನಿಲ್ಲಿಸಬೇಕೆಂದು ಬೈಡನ್ ಒತ್ತಾಯಿಸಿದ್ದಾರೆ. ಅಸೋಷಿಯೆಟ್ ಪ್ರೆಸ್ ಮತ್ತು ಅಲ್‌ಜಜೀರಾ ಕಚೇರಿ ಮೇಲೆ ಬಾಂಬ್‌ ದಾಳಿ ನಡೆಸಲಾಗಿದೆ ಎನ್ನಲಾಗಿದೆ.

ಅಮೆರಿಕದ ಆರ್ಥಿಕತೆಯನ್ನು ಯಹೂದಿಗಳೇ ಬಹುಪಾಲು ನಿಯಂತ್ರಣ ಮಾಡುತ್ತಿರುಗವ ಕಾರಣಕ್ಕೆ ಅಮೆರಿಕ ಆಡಳಿತ ಇಸ್ರೇಲ್ ಪರವೇ ಇರಲಿದೆ. ತಮ್ಮ ತಾಯ್ನಾಡಿನ ರಕ್ಷಣೆಗೆ ಹೋರಾಡುವ ಎಲ್ಲ ಪ್ಯಾಲೆಸ್ಟಿಯನ್ ಸಮೂಹವನ್ನು ಬಹುಪಾಲು ಅಂತಾರಾಷ್ಟ್ರೀಯ ಮಾಧ್ಯಮಗಳು ಮತ್ತು ಈ ದೇಶದ ಮುಖ್ಯವಾಹಿನಿಗಳು ಟೆರರಿಸ್ಟ್ ಎಂದೇ ಹಣೆಪಟ್ಟಿ ಹಚ್ಚಲು ಯತ್ನಿಸುತ್ತ ಬಂದಿವೆ.

ಹಮಾಸ್ ಸಂಘಟನೆಯನ್ನು ಚೀನಾ, ರಷ್ಯಾ ಮತ್ತು ದಕ್ಷಿಣ ಕೊರಿಯಾಗಳೆಂದೂ ಟೆರರಿಸ್ಟ್ ಎಂದು ಪರಿಗಣಿಸಿಲ್ಲ. ಫ್ರಾನ್ಸ್ ಮತ್ತು ಇತರ ಕೆಲವು ಯುರೋಪಿಯನ್ ದೇಶಗಳು ಹಮಾಸ್‌ನ ಒಂದು ಅಂಗವನ್ನಷ್ಟೇ ಟೆರರಿಸ್ಟ್ ಎಂದು ಘೋಷಿಸಿವೆ.

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ: ಪ್ಯಾಲೆಸ್ತೀನ್ ಸಂಘರ್ಷ ಕೊನೆಗೊಳಿಸಲು ’ದ್ವಿರಾಷ್ಟ್ರ’ ಪರಿಹಾರವನ್ನು ಬೆಂಬಲಿಸಿದ ಭಾರತ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇಸ್ರೇಲ್ ಮತ್ತು ಪ್ಯಾಲಸ್ಟೀನ್ ವಿಲೀನವಾಗಿ, ಒಂದು ದೇಶವಾಗಿ ರೂಪುಗೊಂಡರೆ ಅನೇಕ ಅಮೂಲ್ಯ ಜೀವಿಗಳನ್ನು ಉಳಿಸಬಹುದು. ಇದಕ್ಕೆ ಮನುಷ್ಯ, ತನ್ನ ಮನಸ್ಸಿನಲ್ಲಿ ಇರುವ ದುರಾಸೆಯನ್ನು ಬಿಡಬೇಕು.

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...